LIVE NOW
Published : Aug 28, 2026, 07:48 AM ISTUpdated : Aug 28, 2026, 09:32 AM IST

Karnataka News Live: ನಮ್ಮ ಮೆಟ್ರೋದಲ್ಲಿ ಸಿಂಪಲ್‌ ಆಗಿ ಪ್ರಯಾಣ ಮಾಡಿದ ಮೈಸೂರು ಎಕ್ಸ್‌ಪ್ರೆಸ್‌ ಜಾವಗಲ್‌ ಶ್ರೀನಾಥ್‌

ಸಾರಾಂಶ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪಿ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪಾದಯಾತ್ರೆಗೆ ಸಜ್ಜಾಗುತ್ತಿರುವ ನಡುವೆಯೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಗುರುವಾರ ದೆಹಲಿಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಜೊತೆ ಮಹತ್ವದ ಮಾತುಕತೆ ನಡೆಸಿದರು. ಸುಮಾರು ಒಂದೂಕಾಲು ಗಂಟೆ ನಡೆದ ಮಾತುಕತೆ ವೇಳೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಪ್ರತಿಪಕ್ಷಗಳ ಪಟ್ಟು, ಖಾಲಿ ಇರುವ ಸಚಿವ ಸ್ಥಾನ ತುಂಬುವುದು ಹಾಗೂ ಸಂಪುಟದಲ್ಲಿ ಬದಲಾವಣೆ ಮಾಡುವ ವಿಚಾರಗಳ ಕುರಿತು ಸುದೀರ್ಘ ಮಾತುಕತೆ ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ.

ಮತ್ತೊಂದೆಡೆ ರಾಜ್ಯ ಸರ್ಕಾರದಲ್ಲಿ ಖಾಲಿಯಿರುವ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ಪಡೆಯಲುಲಾಬಿ ಮಾಡುವುದಕ್ಕೆ 10 ಶಾಸಕರು ಹಾಗೂ ಕಾಂಗ್ರೆಸ್ ನಾಯಕರು ದೆಹಲಿಗೆ ದಾಂಗುಡಿ ಇಟ್ಟಿದ್ದಾರೆ. ತಮಗೆ ನಿಗಮ ಮಂಡಳಿಗಳನ್ನಾದರೂ ದಯಪಾಲಿಸುವಂತೆ ಹೈಕಮಾಂಡ್ ಮುಂದೆ ಮೊರೆಯಿಟ್ಟಿದ್ದಾರೆ. ಆದರೆ, ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜ್ಯಕ್ಕೆ ವಾಪಸ್ ಬಂದಿದ್ದು, ಮುಂದೆ ಯಾವ ಬದಲಾವಣೆ ಆಗಲಿದೆ ನಿರೀಕ್ಷಿಸಲಾಗಿದೆ.

09:32 AM (IST) Aug 28

ನಮ್ಮ ಮೆಟ್ರೋದಲ್ಲಿ ಸಿಂಪಲ್‌ ಆಗಿ ಪ್ರಯಾಣ ಮಾಡಿದ ಮೈಸೂರು ಎಕ್ಸ್‌ಪ್ರೆಸ್‌ ಜಾವಗಲ್‌ ಶ್ರೀನಾಥ್‌

ಟೀಮ್ ಇಂಡಿಯಾ ಮಾಜಿ ವೇಗಿ ಜಾವಗಲ್‌ ಶ್ರೀನಾಥ್‌ ಬೆಂಗಳೂರಿನ 'ನಮ್ಮ ಮೆಟ್ರೋ'ದಲ್ಲಿ ಸಾಮಾನ್ಯರಂತೆ ಪ್ರಯಾಣಿಸುತ್ತಿರುವ ಫೋಟೋ ವೈರಲ್ ಆಗಿದೆ. ಈ ಹಿಂದೆ ಮೈಸೂರು ರೈಲ್ವೆ ನಿಲ್ದಾಣದಲ್ಲೂ ಇದೇ ರೀತಿ ಸರಳವಾಗಿ ಕಾಣಿಸಿಕೊಂಡಿದ್ದ ಅವರ ನಡೆಗೆ ಅಭಿಮಾನಿಗಳಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
Read Full Story

08:28 AM (IST) Aug 28

ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ₹8.40 ಕೋಟಿ ಲೂಟಿ - ಕಿಂಗ್‌ಪಿನ್ ರವೀಂದ್ರಕುಮಾರ್ ಅರೆಸ್ಟ್!

ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (KUDA) ಸೇರಿದ ₹8.40 ಕೋಟಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ರವೀಂದ್ರಕುಮಾರ್ ಹಾಗೂ ಆತನ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. 20 ದಿನಗಳಿಂದ ತಲೆಮರೆಸಿಕೊಂಡಿದ್ದ ದಂಪತಿಯನ್ನು ವಶಕ್ಕೆ ಪಡೆದು, ಹಗರಣದ ಕುರಿತು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.
Read Full Story

07:50 AM (IST) Aug 28

6 ವರ್ಷಗಳ ಬಳಿಕ ಧಾರವಾಡಕ್ಕೆ ಶಾಸಕ ವಿನಯ್ ಕುಲಕರ್ಣಿ ಎಂಟ್ರಿ, ಆದ್ರೆ ಮೊದಲ ಆಯ್ಕೆ ಮನೆಯಲ್ಲ!

ಧಾರವಾಡ (ಆ.28): ಕಳೆದ ಆರು ವರ್ಷಗಳಿಂದ ಸ್ವಕ್ಷೇತ್ರಕ್ಕೆ ಪ್ರವೇಶವಿಲ್ಲದೆ ದೂರವೇ ಉಳಿದಿದ್ದ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಅವರಿಗೆ ಕೊನೆಗೂ ರಿಲೀಫ್ ಸಿಕ್ಕಿದ್ದು, ಇಂದು (ದಿನಾಂಕ) ಅಧಿಕೃತವಾಗಿ ಧಾರವಾಡ ಜಿಲ್ಲೆಗೆ ಪ್ರವೇಶಿಸಿದ್ದಾರೆ. ಆದರೆ, ಧಾರವಾಡಕ್ಕೆ ಬಂದಿಳಿದ ತಕ್ಷಣ ಅವರು ತಮ್ಮ ಮನೆಗೆ ತೆರಳದೆ, ನೇರವಾಗಿ ದೇವರ ದರ್ಶನ ಹಾಗೂ ಮಠಾಧೀಶರ ಆಶೀರ್ವಾದ ಪಡೆಯಲು 'ಟೆಂಪಲ್ ರನ್' (Temple Run) ಆರಂಭಿಸಿದ್ದಾರೆ.

Read Full Story

07:49 AM (IST) Aug 28

ಎಲ್ಲಾ ತ್ಯಾಗಕ್ಕೆ ನಾಗೇಂದ್ರ ಸಿದ್ಧ, ಆತ ಪಕ್ಷನಿಷ್ಠ ನಾಯಕ: ಡಿಕೆಶಿ

ವಾಲ್ಮೀಕಿ ಹಗರಣದ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಡ ಹೆಚ್ಚಾಗಿದ್ದು, ಸಿಎಂ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿ ರಾಹುಲ್ ಗಾಂಧಿ ಜೊತೆ ಚರ್ಚಿಸಿದ್ದಾರೆ. ಸಂಪುಟ ಪುನಾರಚನೆ ಕುರಿತು ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಾಗಿದೆ.

ವಾಲ್ಮೀಕಿ ಹಗರಣದ ಆರೋಪಿ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪಾದಯಾತ್ರೆಗೆ ಸಜ್ಜಾಗುತ್ತಿರುವ ನಡುವೆಯೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಗುರುವಾರ ದೆಹಲಿಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಜೊತೆ ಮಹತ್ವದ ಮಾತುಕತೆ ನಡೆಸಿದರು.

ಸುಮಾರು ಒಂದೂಕಾಲು ಗಂಟೆ ನಡೆದ ಮಾತುಕತೆ ವೇಳೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಪ್ರತಿಪಕ್ಷಗಳ ಪಟ್ಟು, ಖಾಲಿ ಇರುವ ಸಚಿವ ಸ್ಥಾನ ತುಂಬುವುದು ಹಾಗೂ ಸಂಪುಟದಲ್ಲಿ ಬದಲಾವಣೆ ಮಾಡುವ ವಿಚಾರಗಳ ಕುರಿತು ಸುದೀರ್ಘ ಮಾತುಕತೆ ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ. ಬಳಿಕ, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಜೊತೆಗೂ ಅವರು ಮಾತುಕತೆ ನಡೆಸಿದರು. ಈ ಮಧ್ಯೆ, ಸಚಿವ ನಾಗೇಂದ್ರ ಕೂಡ ದೆಹಲಿಗೆ ಆಗಮಿಸಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

Read Full Story

More Trending News