ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ನಕಲಿ ಔಷಧಿ ಮಾರಾಟ ಜಾಲ ಪತ್ತೆ ಪ್ರಕರಣದ ತನಿಖೆಗೆ ಬೆಂಗಳೂರು ನಗರ ಜಂಟಿ ಪೊಲೀಸ್ ಆಯುಕ್ತ (ಪಶ್ಚಿಮ) ಸಿ.ವಂಶಿಕೃಷ್ಣ ಸಾರಥ್ಯದಲ್ಲಿ ‘ವಿಶೇಷ ತನಿಖಾ ತಂಡ (ಎಸ್ಐಟಿ)’ವನ್ನು ರಚಿಸಿ ರಾಜ್ಯ ಸರ್ಕಾರ ಗುರುವಾರ ಆದೇಶಿಸಿದೆ.
ರಾಜ್ಯದ ಜನರಿಗೆ ವಿಷವುಣ್ಣಿಸುತ್ತಿದ್ದ ನಕಲಿ ಔಷಧ ದಂಧೆಕೋರರ ವಿರುದ್ಧದ ರಚಿಸಲಾದ ಎಸ್ಐಟಿಗೆ ಸಿ.ವಂಶಕೃಷ್ಣ ಅವರು ಮುಖ್ಯಸ್ಥರಾಗಿದ್ದು, ಎಸ್ಪಿ ಶಿವಪ್ರಕಾಶ್ ದೇವರಾಜು, ಸಿಐಡಿ ಎಸ್ಪಿ ಲೋಕೇಶ್.ಬಿ.ಜಗಲಾಸರ್, ಸಹಾಯಕ ಔಷಧ ನಿಯಂತ್ರಕರಾದ ಮಂಜುನಾಥ್ ರೆಡ್ಡಿ, ನಮ್ರತಾ ಹಲ್ಲೂರು ಹಾಗೂ ಔಷಧ ನಿರೀಕ್ಷಕಿ ನೇಹಾ ಮುರ್ಗಿ ಸದಸ್ಯರಾಗಿದ್ದಾರೆ. ಈ ಎಸ್ಐಟಿಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಕಾನೂನು ಮತ್ತು ಸುವ್ಯವಸ್ಥೆ) ಮೇಲುಸ್ತುವಾರಿ ವಹಿಸಲಿದ್ದಾರೆ.
ಮತ್ತೊಂದೆಡೆ, ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಮುಂದುವರಿಸಿದ್ದು, ರಾಜ್ಯಾದ್ಯಂತ ರೈಲು ನಿಲ್ದಾಣಗಳ ಹೋಟೆಲ್, ಕ್ಯಾಂಟೀನ್ ಹಾಗೂ ಇತರೆ ಆಹಾರ ಉದ್ದಿಮೆಗಳ ಮೇಲೆ ಗುರುವಾರ ದಾಳಿ ನಡೆಸಿದ್ದಾರೆ. ಈ ವೇಳೆ ನಿಷೇಧಿತ ಬಣ್ಣ ಹಾಗೂ ಪ್ಲಾಸ್ಟಿಕ್ ಬಳಕೆ ಪತ್ತೆಯಾಗಿದೆ. ಜೊತೆಗೆ ಬಾಳೆಯನ್ನು ಹಣ್ಣಾಗಿಸಲು ರಾಸಾಯನಿಕ ಬಳಕೆ ಮಾಡುತ್ತಿರುವುದು ಕಂಡುಬಂದಿತ್ತು ಸರ್ಕಾರ ಎಚ್ಚರಿಕೆಯನ್ನು ರವಾನಿಸಿದೆ.
09:58 AM (IST) Aug 21
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೂಷ್, ಕ್ಷಮಾದಾನ ಕೋರಿ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿದ್ದಾನೆ. ಈ ಅರ್ಜಿಯನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಾಲಯ, ಪ್ರದೂಷ್ ಕುರಿತು ವರದಿ ಸಲ್ಲಿಸುವಂತೆ ಪ್ರೊಬೆಷನ್ ಅಧಿಕಾರಿಗೆ ನಿರ್ದೇಶನ ನೀಡಿ, ವಿಚಾರಣೆಯನ್ನು ಮುಂದೂಡಿದೆ.
09:18 AM (IST) Aug 21
09:02 AM (IST) Aug 21
08:26 AM (IST) Aug 21
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಿಮಾನಯಾನ ದಟ್ಟಣೆ ನಿವಾರಿಸಲು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಹಾಗಾದರೆ, ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಲ್ಲಿ ಬರಲಿದೆ? ಕನಕಪುರ, ನೆಲಮಂಗಲ ಬಳಿ ಗುರುತಿಸಲಾದ 3 ಸ್ಥಳಗಳ ಸಂಪೂರ್ಣ ಮಾಹಿತಿ ಮತ್ತು ಸರ್ಕಾರದ ಮುಂದಿನ ಯೋಜನೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.
07:27 AM (IST) Aug 21
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ಹಗರಣ(Valmiki corporation scam)ದ ಕಿಂಗ್ಪಿನ್ ನೆಕ್ಕುಂಟಿ ನಾಗರಾಜ್(Nekkunte Nagaraj) ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(DK Shivakumar) ಅವರು ಉಪಮುಖ್ಯಮಂತ್ರಿಯಾಗಿದ್ದ ವೇಳೆ ಜತೆಗಿದ್ದ ಫೋಟೋಗಳನ್ನು ಬಿಜೆಪಿ ಬಿಡುಗಡೆ ಮಾಡಿದೆ.
ವಾಲ್ಮೀಕಿ ಹಗರಣದ ಕಿಂಗ್ಪಿನ್ ಜೊತೆ ಡಿಕೆಶಿ ಫೋಟೋ ವೈರಲ್
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ(CT Ravi) ಮತ್ತಿತರರು ನೆಕ್ಕುಂಟಿ ನಾಗರಾಜ್ ಅವರು ಡಿ.ಕೆ.ಶಿವಕುಮಾರ್, ನೂತನ ಸಚಿವ ಬಿ.ನಾಗೇಂದ್ರ(B Nagendra) ಅವರ ಜತೆಗಿರುವ ಫೋಟೋಗಳನ್ನು ಬಿಡುಗಡೆ ಮಾಡಿದರು.
07:26 AM (IST) Aug 21
ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಮತ್ತು ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ಅಕ್ರಮವಾಗಿ ನೇಮಕವಾಗಲು ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಪುತ್ರಿ ಸುಮಾ ಸುಳ್ಳು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಿರುವ ಪ್ರಕರಣದ ತನಿಖೆಗೆ ಸಂಬಂಧಿಸಿದ ದಾಖಲೆ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಕೆಪಿಎಸ್ಸಿ ನೇಮಕಾತಿ ಅಕ್ರಮವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಡಾ.ಮಂಜುನಾಥ್ ಸಲ್ಲಿಸಿರುವ ಅರ್ಜಿ ಮತ್ತು ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದು ಕೋರಿ ಲೋಕೇಶ್ ಸೇರಿ ಹಲವು ಯಶಸ್ವಿ ಅಭ್ಯರ್ಥಿಗಳು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ವೇಳೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಸೂಚನೆ ನೀಡಿತು.