ರಾಜ್ಯದ ವಿವಿಧ ಜಿಲ್ಲಾಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಸಿಟಿ (CT) ಮತ್ತು ಎಂಆರ್ಐ (MRI) ಸ್ಕ್ಯಾನಿಂಗ್ ಸೇವೆಗಳನ್ನು ನೀಡುತ್ತಿದ್ದ ಖಾಸಗಿ ಸಂಸ್ಥೆಯೊಂದು ದಿಢೀರ್ ಸೇವೆ ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿ, ರೋಗಿಗಳಿಗೆ ತೊಂದರೆಯಾಗದಂತೆ ಕರ್ನಾಟಕ ಸರ್ಕಾರವು ತಕ್ಷಣದ ಪರ್ಯಾಯ ವ್ಯವಸ್ಥೆಗಳನ್ನು ಮಾಡಿದೆ.

11:07 PM (IST) Feb 20
ಅಮೃತಧಾರೆ ಧಾರಾವಾಹಿಯಲ್ಲಿ ಗೌತಮ್ ದಿವಾನ್ ತನ್ನ ತಂದೆ ಕಾರ್ಯ ಮಾಡಲು ರೆಡಿ ಆಗಿದ್ದನು. ಆಗ ಗೌತಮ್, ಜಯದೇವ್ ಇಬ್ಬರೂ ಸೇರಿಕೊಂಡು ಪಿಂಡ ಪ್ರಧಾನ ಮಾಡಲು ಬಂದಿದ್ದರು. ಆಗ ಜಯದೇವ್, ಗೌತಮ್ ಜೊತೆ ಸೇರಿ ಪಿಂಡ ಬಿಡೋದಿಲ್ಲ ಎಂದು ಹೇಳಿ ಹೋಗಿದ್ದನು. ಶಾಸ್ತ್ರದ ಪ್ರಕಾರ ಬೇರೆ ಬೇರೆ ಪಿಂಡ ಬಿಡೋ ಹಾಗಿಲ್ಲ.
10:51 PM (IST) Feb 20
ಕರ್ಣ ಧಾರಾವಾಹಿಯಲ್ಲಿ ರಮೇಶ್ ಮಾಡಿದ ಕುತಂತ್ರದಿಂದ ಮೂವರು ರೋಗಿಗಳು ನಿಧನರಾಗಿದ್ದರು. Expire Medicine ತಿಂದು, ರೋಗಿಗಳು ಸತ್ತಿದ್ದಾರೆ. ಇದಕ್ಕೆಲ್ಲ ಕಾರಣ ಏನು? ಏನಾಯ್ತು ಎಂದು ಕರ್ಣ ಚೆಕ್ ಮಾಡಲು ನೋಡಿದ್ದಾನೆ. ಆದರೂ ಕೂಡ ಸಂಜಯ್, ನಯನತಾರಾ, ರಮೇಶ್ ಅವಕಾಶ ಕೊಟ್ಟಿಲ್ಲ.
09:53 PM (IST) Feb 20
09:04 PM (IST) Feb 20
ಕಡಿಮೆ ಬಜೆಟ್ನಲ್ಲಿ ಸತತ ಹಿಟ್ ಚಿತ್ರಗಳನ್ನು ನೀಡುತ್ತಿರುವ ರಾಜ್ ಬಿ. ಶೆಟ್ಟಿ ಅವರ ಯಶಸ್ಸಿನ ರಹಸ್ಯವನ್ನು ಉಪೇಂದ್ರ ಮತ್ತು ಶಿವರಾಜ್ಕುಮಾರ್ ಅವರೇ ಕೇಳಿದ್ದಾರೆ. ರಾಜ್ ಶೆಟ್ಟಿ ತಮ್ಮ ಗುಟ್ಟನ್ನು ಬಿಚ್ಚಿಟ್ಟಿದ್ದಾರೆ.
08:08 PM (IST) Feb 20
ಕರ್ನಾಟಕದಲ್ಲಿ ಭೂಸ್ವಾಧೀನ ಪ್ರಕ್ರಿಯೆಯ ವಿಳಂಬದಿಂದಾಗಿ ಗದಗ-ವಾಡಿ, ತುಮಕೂರು-ದಾವಣಗೆರೆ ಸೇರಿದಂತೆ ಹಲವು ಪ್ರಮುಖ ರೈಲ್ವೆ ಯೋಜನೆಗಳು ದಶಕಗಳಿಂದ ನನೆಗುದಿಗೆ ಬಿದ್ದಿವೆ. 10 ಯೋಜನೆಗಳ ಪೈಕಿ 7 ಯೋಜನೆಗಳಿಗೆ ಇನ್ನೂ 3,338 ಎಕರೆ ಭೂಮಿ ಸ್ವಾಧೀನವಾಗಬೇಕಿದ್ದು, ಇದು ಕಾಮಗಾರಿಗೆ ದೊಡ್ಡ ಅಡ್ಡಿಯಾಗಿದೆ.
07:45 PM (IST) Feb 20
ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೆರವಣಿಗೆ ಮೇಲೆ ನಡೆದ ಕಲ್ಲು ತೂರಾಟವನ್ನು ಖಂಡಿಸಿರುವ ಪ್ರತಿಪಕ್ಷ ನಾಯಕ ಆರ್. ಅಶೋಕ, ದುಷ್ಕರ್ಮಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ಕೃತ್ಯದ ಹಿಂದೆ ಪಾಕಿಸ್ತಾನದ ನಂಟಿರುವ ಶಂಕೆ ವ್ಯಕ್ತಪಡಿಸಿದ್ದಾರೆ.
07:37 PM (IST) Feb 20
ಕೊಪ್ಪಳದ ಪ್ರಸಿದ್ಧ ಹುಲಿಗೆಮ್ಮ ದೇವಸ್ಥಾನವು ಕೋಟ್ಯಂತರ ರೂಪಾಯಿ ಆದಾಯ ಹೊಂದಿದ್ದರೂ, ಇಲ್ಲಿಗೆ ಬರುವ ಲಕ್ಷಾಂತರ ಭಕ್ತರಿಗೆ ಶೌಚಾಲಯ ಮತ್ತು ಸ್ನಾನಘಟ್ಟಗಳಂತಹ ಕನಿಷ್ಠ ಮೂಲಭೂತ ಸೌಕರ್ಯಗಳಿಲ್ಲ. ದಶಕಗಳಿಂದ ಅಭಿವೃದ್ಧಿ ಯೋಜನೆಗಳು ನನೆಗುದಿಗೆ ಬಿದ್ದಿದೆ.
06:46 PM (IST) Feb 20
ಮುಡಾ ಮಾಜಿ ಆಯುಕ್ತ ನಟೇಶ್ಗೆ ಸಂಬಂಧಿಸಿದ ಭ್ರಷ್ಟಾಚಾರ ಆರೋಪದ ಆಡಿಯೋ ಕ್ಲಿಪ್ಗಾಗಿ ಸಿಸಿಬಿ ಅಧಿಕಾರಿಗಳು ಸ್ನೇಹಮಯಿ ಕೃಷ್ಣ ಅವರ ಮೈಸೂರಿನ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ,ಪೆನ್ ಡ್ರೈವ್, ಹಾರ್ಡ್ ಡಿಸ್ಕ್ ಸೇರಿದಂತೆ ಹಲವು ಡಿಜಿಟಲ್ ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದಾರೆ.
05:48 PM (IST) Feb 20
05:16 PM (IST) Feb 20
ಮುಡಾ ಹಗರಣದ ಪ್ರಮುಖ ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ನ್ಯಾಯಾಲಯದ ಆವರಣದಿಂದ ಬಲವಂತವಾಗಿ ಕರೆದೊಯ್ದಿದ್ದಾರೆ. ಅವರ ಪುತ್ರ ವಿವೇಕ್, ತಂದೆಯ ಜೀವಕ್ಕೆ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದ್ದು, ಪ್ರಭಾವಿಗಳನ್ನು ರಕ್ಷಿಸಲು ಸರ್ಕಾರ ಈ ರೀತಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
05:03 PM (IST) Feb 20
ರಾಜ್ಯದ ಎಸ್ಕಾಂಗಳು ನಷ್ಟದ ಕಾರಣ ನೀಡಿ ವಿದ್ಯುತ್ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿವೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು (KERC) ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಿ ದರ ಪರಿಷ್ಕರಣೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಈ ಏರಿಕೆಯು ಗೃಹಜ್ಯೋತಿ ಯೋಜನೆಯ ನಡುವೆಯೂ ಜಾರಿಯಾಗುವ ಸಾಧ್ಯತೆಯಿದೆ.
04:46 PM (IST) Feb 20
04:41 PM (IST) Feb 20
04:41 PM (IST) Feb 20
ಧರ್ಮಸ್ಥಳದಲ್ಲಿ ನಡೆದ ಶ್ರೀಧರ್ ಎಂಬುವವರ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೈಕೋರ್ಟ್ ನಿರ್ದೇಶನದ ಮೇರೆಗೆ ರಾಜ್ಯ ಸರ್ಕಾರವು ಮರುತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (SIT) ರಚಿಸಿದೆ. ಐಜಿಪಿ ಲಭೂರಾಮ್ ನೇತೃತ್ವದ ಈ ತಂಡವು, ಕಳಪೆ ತನಿಖೆ ಎಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ.
04:39 PM (IST) Feb 20
04:01 PM (IST) Feb 20
ಮೊದಲು ಸಿನಿಮಾ ನೋಡಿ, ವಿಮರ್ಶೆ ಮಾಡಬೇಕು ಎಂದು ಹೋಗಬೇಡಿ. 100 ರೂಪಾಯಿ ಕೊಟ್ಟು ಸಿನಿಮಾ ನೋಡಿ, ನಿಮ್ಮ ಗಂಟು ಹೋಗಲ್ಲ, ಪ್ರೇಕ್ಷಕರು ಮೂರು ಗಂಟೆ ತಲ್ಲೀನವಾಗಿ ಸಿನಿಮಾ ನೋಡಬೇಕು, ಆ ಥರ ಸಿನಿಮಾ ಬೇಕು ಎಂದು ರವಿಚಂದ್ರನ್ ಅವರು ಹೇಳಿದ್ದರು. ಈ ಬಗ್ಗೆ ಬರಹಗಾರ ನಂದೀಶ್ ಅವರು ಪೋಸ್ಟ್ ಹಂಚಿಕೊಂಡಿದ್ದಾರೆ.
03:43 PM (IST) Feb 20
ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಅವರು ಹರ್ಕೂರು ಗ್ರಾಮದ ಹಿಂದುಳಿದ ಕೊರಗ ಸಮುದಾಯದ ಮನೆಯಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದಾರೆ. ಅವರೊಂದಿಗೆ ಭೋಜನ ಸವಿದು, ಸಮಸ್ಯೆಗಳನ್ನು ಆಲಿಸಿದ್ದಾರೆ.
03:39 PM (IST) Feb 20
Bhagyalakshmi Serial Episode: ಭಾಗ್ಯಲಕ್ಷ್ಮೀ ಧಾರಾವಾಹಿಯಲ್ಲಿ ನಾನು ಬದಲಾಗಿದ್ದೀನಿ, ಭಾಗ್ಯ ಜೊತೆ ಸಂಸಾರ ಮಾಡ್ತೀನಿ ಎಂದು ತಾಂಡವ್ ಹಠ ಹಿಡಿದು ಕೂತಿದ್ದಾನೆ. ಅತ್ತ ಆದಿ, ಭಾಗ್ಯ ಜೊತೆ ಬದುಕ್ತೀನಿ ಎಂದು ಪಣ ತೊಟ್ಟಿದ್ದಾಳೆ. ಈಗ ಈ ಕಥೆ ತ್ರಿಕೋನ ಪ್ರೇಮಕಥೆಯ ತಿರುವು ಪಡೆದಿದೆ.
03:33 PM (IST) Feb 20
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ವಿರುದ್ಧ ಸತತವಾಗಿ ಧ್ವನಿ ಎತ್ತುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ. ಕೋರ್ಟ್ ಬಳಿ ಕೃಷ್ಣ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಕರೆದೊಯ್ದಿದ್ದಾರೆ.
03:23 PM (IST) Feb 20
ಬೆಂಗಳೂರಿನಲ್ಲಿ ನಿವೃತ್ತ ನೇವಿ ಕ್ಯಾಪ್ಟನ್ ಮತ್ತು ಅವರ ಪತ್ನಿಯನ್ನು ಹತ್ಯೆಗೈದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಹಣಕಾಸಿನ ವಿಚಾರಕ್ಕೆ ಕೊಲೆ ನಡೆದಿದೆ ಎನ್ನಲಾಗಿದ್ದರೂ, ಆರೋಪಿ ಮಗನ ಮನೆಯಲ್ಲಿ ಕಾಂಡೋಮ್ ಪತ್ತೆಯಾಗಿದ್ದು, ಅನೈತಿಕ ಸಂಬಂಧದ ಶಂಕೆ ಮೂಡಿದೆ.
03:14 PM (IST) Feb 20
ಕರಾಚಿ: ಪಾಕಿಸ್ತಾನ ಹಾಕಿ ಫೆಡರೇಷನ್ನ ಅವ್ಯವಸ್ಥೆಯ ಬಗ್ಗೆ ಬಹಿರಂಗವಾಇ ಮಾತನಾಡಿದ್ದ ಪಾಕಿಸ್ತಾನದ ನಾಯಕನ ಮೇಲೆ ಪಾಕ್ ಹಾಕಿ ಫೆಡರೇಷನ್ ಎರಡು ವರ್ಷ ಬ್ಯಾನ್ ಮಾಡಿದೆ. ಇದರ ಬೆನ್ನಲ್ಲೇ ಪಾಕಿಸ್ತಾನ ಹಾಕಿ ಫೆಡರೇಷನ್ ಅಧ್ಯಕ್ಷ ಹುದ್ದೆಗೆ ತಾರಿಖ್ ಬುಗ್ತಿ ಕೂಡಾ ರಾಜೀನಾಮೆ ಸಲ್ಲಿಸಿದ್ದಾರೆ.
03:13 PM (IST) Feb 20
02:46 PM (IST) Feb 20
01:46 PM (IST) Feb 20
ಮೈಸೂರಿನಲ್ಲಿ ಪ್ರವಾಸಕ್ಕೆ ಪತಿ ಅನುಮತಿ ನಿರಾಕರಿಸಿದ್ದಕ್ಕೆ ಗೃಹಿಣಿಯೊಬ್ಬರು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ಇದು ಆತ್ಮ*ಹತ್ಯೆಯಲ್ಲ, ಕೊಲೆ ಎಂದು ಮಗಳು ಆರೋಪಿಸಿದರೆ, ಮಗ ತಂದೆಯ ಪರ ನಿಂತಿದ್ದಾನೆ. ಈ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
01:01 PM (IST) Feb 20
ನಿರ್ದೇಶಕ ತರುಣ್ ಸುಧೀರ್ ಮತ್ತು ನಟಿ ಸೋನಲ್ ಮೊಂಥೆರೋ ಮದುವೆಯಾಗಿ ಒಂದೂವರೆ ವರ್ಷವಾಗಿದೆ. ಸಂದರ್ಶನವೊಂದರಲ್ಲಿ ಮಾತನಾಡಿದ ತರುಣ್, ತಮಗಿಬ್ಬರಿಗೂ ಮೊದಲ ಪ್ರೀತಿ ಬೇರೆಯದ್ದೇ ಇದೆ ಎಂದಿದ್ದಾರೆ. ಈ ಸಮಾನ ಮನಸ್ಥಿತಿಯೇ ತಮ್ಮ ಸುಗಮ ದಾಂಪತ್ಯಕ್ಕೆ ಕಾರಣ ಎಂದಿದ್ದಾರೆ.
12:45 PM (IST) Feb 20
ಹಾಸನದಲ್ಲಿ ಮಹಿಳೆ ನಾಪತ್ತೆಯಾಗಿದ್ದ ಪ್ರಕರಣವು, ಕೊಲೆ ಶಂಕೆ ಹುಟ್ಟಿಸಿದ್ದ ಈ ಘಟನೆಯು, ಪೊಲೀಸರ ತನಿಖೆ ಹಾಗೂ ಸಾಂತ್ವಾನ ಕೇಂದ್ರದ ಸಮಾಲೋಚನೆಯ ನಂತರ, ಪ್ರಿಯಾಂಕ ತನ್ನ ತಪ್ಪನ್ನು ಅರಿತು ಪತಿ ಮತ್ತು ಕುಟುಂಬದೊಂದಿಗೆ ಒಂದಾಗುವುದರೊಂದಿಗೆ ಸುಖಾಂತ್ಯ ಕಂಡಿದೆ.
12:43 PM (IST) Feb 20
ಕೇವಲ 3 ತಿಂಗಳ ಸಾಲದ ಕಂತು ಬಾಕಿ, ಇಷ್ಟೇ ನೋಡಿ ಬರೋಬ್ಬರಿ 8 ವರ್ಷಗಳಿಂದ ನಿಯತ್ತಾಗಿ ಗೃಹ ಸಾಲ ಕಟ್ಟಿದ್ದರೂ ಬ್ಯಾಂಕ್ ಕೇಳಲಿಲ್ಲ. ಮನೆಯಲ್ಲಿ ಬ್ಯಾಂಕ್ 90 ಲಕ್ಷಕ್ಕೆ ಹರಾಜು ಹಾಕಿದ ಕಣ್ಣೀರಿನ ಘಟನೆ ಬೆಂಗಳೂರಲ್ಲಿ ನಡೆದಿದೆ.
12:40 PM (IST) Feb 20
ಬಾಗಲಕೋಟೆಯಲ್ಲಿ ನಡೆದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪಂಕಾ ಮಸೀದಿ ಬಳಿ ನಡೆದ ಈ ಘಟನೆಯಲ್ಲಿ ಎಸ್ಪಿ ಸಿದ್ಧಾರ್ಥ ಗೋಯಲ್ ಸೇರಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪೊಲೀಸರು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ.
12:23 PM (IST) Feb 20
ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದ್ದ ಸಾಫ್ಟ್ವೇರ್ ಇಂಜಿನಿಯರ್ ಶರ್ಮಿಳಾ ಅವರ ನಿಗೂಢ ಸಾವು ಪ್ರಕರಣಕ್ಕೆ ತಿರುವು ಸಿಕ್ಕಿದೆ. ಅತ್ಯಾಚಾರಕ್ಕೆ ಯತ್ನಿಸಿ ವಿಫಲನಾದ ನೆರೆಮನೆಯ 18 ವರ್ಷದ ಯುವಕನೇ ಆಕೆಯನ್ನು ಕೊಲೆ ಮಾಡಿರುವುದು ತನಿಖೆಯಲ್ಲಿ ಬಯಲಾಗಿದೆ.
12:20 PM (IST) Feb 20
Simple easy Kitchen Scraps for Garden: ನಿಮ್ಮ ಮನೆಯಲ್ಲಿ ಉಳಿದ ಆಹಾರ ಕೂಡ ಮಣ್ಣನ್ನು ಫಲವತ್ತಾಗಿಸಬಹುದು. ಬಾಳೆಹಣ್ಣಿನ ಸಿಪ್ಪೆ, ಕಾಫಿ, ಮೊಟ್ಟೆಯ ಚಿಪ್ಪು ಮತ್ತು ಹುಳಿ ಹಣ್ಣುಗಳ ಸಿಪ್ಪೆ ಬಳಸಿ ಮಣ್ಣಿನ ಫಲವತ್ತತೆ ಹೆಚ್ಚಿಸುವುದು, ಕೀಟಗಳನ್ನು ದೂರವಿಡುವ ಸುಲಭ ಮನೆಮದ್ದುಗಳ ಬಗ್ಗೆ ತಿಳಿಯಿರಿ.
12:18 PM (IST) Feb 20
12:00 PM (IST) Feb 20
ರಾಜ್ಯದ ದೇವಾಲಯಗಳಲ್ಲಿ ಹೆಚ್ಚುತ್ತಿರುವ ರೀಲ್ಸ್ ಮತ್ತು ವೀಡಿಯೋ ಚಿತ್ರೀಕರಣಕ್ಕೆ ಕಡಿವಾಣ ಹಾಕಲು, ಮುಜರಾಯಿ ಇಲಾಖೆಯು ನಿಯಮಗಳನ್ನು ಕಟ್ಟುನಿಟ್ಟುಗೊಳಿಸಿದೆ. ಇನ್ನುಮುಂದೆ ಸಿನಿಮಾ, ಧಾರಾವಾಹಿ, ಅಥವಾ ಯಾವುದೇ ವೃತ್ತಿಪರ ಚಿತ್ರೀಕರಣಕ್ಕೆ ಪೂರ್ವಾನುಮತಿ ಹಾಗೂ ನಿಗದಿತ ಶುಲ್ಕ ಪಾವತಿಸುವುದು ಕಡ್ಡಾಯವಾಗಿದೆ.
11:57 AM (IST) Feb 20
ನಿಮ್ಮ ಪರ್ಸ್ನ ಬಣ್ಣ ನಿಮ್ಮ ಆರ್ಥಿಕ ಸ್ಥಿತಿ ಮೇಲೆ ಪರಿಣಾಮ ಬೀರಬಹುದು ಅನ್ನೋದು ನಿಮಗೆ ಗೊತ್ತಾ? ನೀಲಿಯಿಂದ ಕೆಂಪು ಬಣ್ಣದವರೆಗೆ, ಯಾವ ಬಣ್ಣದ ಪರ್ಸ್ ನಿಮಗೆ ಹಣ ಮತ್ತು ಯಶಸ್ಸನ್ನು ತಂದುಕೊಡುತ್ತೆ ಅಂತ ತಿಳಿಯಿರಿ!
11:43 AM (IST) Feb 20
ಚೈತ್ರಾ ಕುಂದಾಪುರ ಅವರು ಪತಿ ಶ್ರೀಕಾಂತ್ ಕಶ್ಯಪ್ಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸಿದ್ದಾರೆ. ಶ್ರೀಕಾಂತ್ ಕಶ್ಯಪ್ ಅವರ ಪರಿಚಯ ಆದ ದಿನದಿಂದ ಹಿಡಿದು, ಇಲ್ಲಿಯವರೆಗಿನ ಫೋಟೋಗಳನ್ನು ಹಂಚಿಕೊಂಡು ಜೊತೆಯಾಗಿ ಬಂದ ಸ್ನೇಹ, ಪ್ರೀತಿ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದಾರೆ.
11:29 AM (IST) Feb 20
ಇಂದು ಕರ್ನಾಟಕದಾದ್ಯಂತ ಒಣಹವೆ ಮುಂದುವರಿದಿದೆ. ಆಕಾಶವು ಶುಭ್ರವಾಗಿದ್ದು, ರಾತ್ರಿಗಳು ತಂಪಾಗಿರಲಿವೆ. ಕರಾವಳಿ, ಉತ್ತರ ಮತ್ತು ದಕ್ಷಿಣ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ವಿಜಯಪುರದಲ್ಲಿ ಕನಿಷ್ಠ ತಾಪಮಾನ 15°C ನಷ್ಟು ಕಡಿಮೆ ದಾಖಲಾಗಿದೆ.
10:47 AM (IST) Feb 20
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ಆಪ್ತನೆಂದು ಹೇಳಿಕೊಂಡು ಅಮ್ರಪಾಲಿ ಸುರೇಶ್ ಎಂಬಾತ, ಅದಾನಿ ಗ್ರೂಪ್ನಿಂದ 100 ಕೋಟಿ ಸಿಎಸ್ಆರ್ ಫಂಡ್ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ 35 ಲಕ್ಷ ರೂ. ವಂಚಿಸಿದ್ದಾನೆ. ಈ ಸಂಬಂಧ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.