ರಾಜ್ಯದಲ್ಲಿ ಬರ ಪರಿಸ್ಥಿತಿ ನೆಲೆಸಿರುವುದರಿಂದ ಸರ್ಕಾರದಿಂದಲೇ ಭೂಮಿ ಉಳುಮೆ ಮಾಡುವುದಕ್ಕೆ ಚಿಂತನೆ ನಡೆಸುತ್ತಿರುವುದಾಗಿ ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬರದಿಂದಾಗಿ ರಾಜ್ಯದಲ್ಲಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಭೂಮಿ ಉಳುಮೆ ಮಾಡುವುದಕ್ಕೂ ಅವರಿಂದ ಸಾಧ್ಯವಾಗುತ್ತಿಲ್ಲ. ಅವರ ಸಂಕಷ್ಟದ ಪರಿಸ್ಥಿತಿಯನ್ನು ಮನಗಂಡು ಮೂರು ಎಕರೆವರೆಗೆ ಜಮೀನು ಹೊಂದಿರುವ ರೈತರ ಭೂಮಿಯನ್ನು ಸರ್ಕಾರದಿಂದಲೇ ಉಚಿತವಾಗಿ ಉಳುಮೆ ಮಾಡಿಕೊಡುವ ಕುರಿತು ಚರ್ಚಿಸಲಾಗುತ್ತಿದೆ ಎಂದು ಹೇಳಿದರು.
08:44 AM (IST) Sep 07
ಖಾಸಗಿ ಬಸ್ ಹೈವೇಯಲ್ಲಿ 90 ಕಿಮೀ ವೇಗದಲ್ಲಿದ್ದ ಚಲಿಸುತ್ತಿದ್ದಾಗಲೇ ಚಾಲಕ ಎದ್ದು ನಿಂತಿದ್ದರಿಂದ ನಿಯಂತ್ರಣ ತಪ್ಪಿ ಜಮೀನಿಗೆ ನುಗ್ಗಿದ ಭಯಾನಕ ಘಟನೆ ಕಲಬುರಗಿ-ವಿಜಯಪುರ ಮಾರ್ಗದ ರಸ್ತೆಯಲ್ಲಿ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದೆ.
08:15 AM (IST) Sep 07
ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿ ಅಬಕಾರಿ ಸಚಿವರಾಗಿದ್ದ ಶಾಸಕ ಆರ್.ಬಿ. ತಿಮ್ಮಾಪುರ ಅವರು, 2ನೇ ಅವಧಿಯ ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನ ವಂಚಿತರಾಗಿದ್ದಾರೆ. ಇದೀಗ ಶಿಕ್ಷಕರ ದಿನಾಚರಣೆ ವೇಳೆ ತಾವು ಶಾಲೆಯಲ್ಲಿ ಮುಖ್ಯಮಂತ್ರಿ ಆಗಿದ್ದೆ ಎಂದು ಶಾಲಾ ದಿನಗಳನ್ನು ನೆನಪು ಮಾಡಿಕೊಂಡಿದ್ದಾರೆ.
08:04 AM (IST) Sep 07
ನಾನು ಕ್ಷೇತ್ರದ ಶಾಸಕನಾಗಿ, ಸಚಿವನಾಗಿ ಜನರ ನಿರೀಕ್ಷೆ ಮೀರಿ ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಆದ್ರೂ ಚುನಾವಣೆ ಗೆಲ್ಲೋಕೆ ಕಷ್ಟ ಎಂದು ಸಚಿವ ಚಲುವರಾಯಸ್ವಾಮಿ ಬೇಸರ.ಐತಿಹಾಸಿಕ ಐಹೊಳೆ ಆಂಜನೇಸ್ವಾಮಿಗೆ ವಿಶೇಶ ಪೂಜೆ ಸಲ್ಲಿಸಿ ಹೇಳಿದ್ದೇನು?
07:22 AM (IST) Sep 07
ಸರ್ಕಾರವೇ ರೈತರ ಭೂಮಿ ಉಳುಮೆ ಮಾಡಿಕೊಡಲು ಚಿಂತನೆ
ಬರ ಪರಿಸ್ಥಿತಿಯಿಂದ ಬಿತ್ತನೆ ಚಟುವಟಿಕೆ ಕುಂಠಿತಗೊಂಡಿದೆ. ಆಗಸದಲ್ಲಿ ಮಳೆಯ ಮೋಡಗಳೇ ಮಾಯವಾಗಿವೆ. ರೈತರು ಭೂಮಿಯನ್ನು ಉಳುಮೆ ಮಾಡಲಾಗದೆ ತೆಕ್ಕಲು ಬಿಟ್ಟಿದ್ದಾರೆ. ಬರ ವೀಕ್ಷಣೆ ಸಮಯದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇವೆಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿದ್ದಾರೆ. ರೈತರ ಜಮೀನನ್ನು ಹದಗೊಳಿಸಿಕೊಟ್ಟರೆ ಅರೆಖುಷ್ಕಿ ಬೆಳೆಗಳನ್ನಾದರೂ ಬಿತ್ತನೆ ಮಾಡಿ ಬೆಳೆಯುವರೆಂಬ ಉದ್ದೇಶದಿಂದ ಮೂರು ಎಕರೆವರೆಗೆ ಜಮೀನು ಹೊಂದಿರುವವರಿಗೆ ಸರ್ಕಾರದಿಂದಲೇ ಭೂಮಿಯನ್ನು ಉಳುಮೆ ಮಾಡಿಕೊಡುವ ಚಿಂತನೆಯನ್ನು ಮಾಡಲಾಗುತ್ತಿದೆ ಎಂದು ಹೇಳಿದರು.