ರಾಜ್ಯದಲ್ಲಿ ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ಪಕ್ಷಗಳ ಹೋರಾಟಕ್ಕೆ ದಾಳವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ದಕ್ಷಿಣ ಜಿಲ್ಲೆ ಅಭಿವೃದ್ಧಿಗೆ ಬಿಡದಿ ಟೌನ್ ಶಿಪ್ ಯೋಜನೆ ಮಾಡುವುದಾಗಿ ಟೊಂಕಕಟ್ಟಿ ನಿಂತಿದ್ದಾರೆ. ಆದರೆ, ಕೃಷಿ ಭೂಮಿಯನ್ನು ನಾಶ ಮಾಡಿ ಟೌನ್ಶಿಪ್ ಯೋಜನೆ ಮಾಡುವುದಕ್ಕೆ ಕೆಲವು ರೈತರು ವಿರೋಧ ವ್ಯಕ್ತಪಡಿಸಿದ್ದು, ಇದಕ್ಕೆ ಜೆಡಿಎಸ್ ಪಕ್ಷವೂ ಕೂಡ ರೈತರಿಗೆ ಬೆಂಬಲವನ್ನು ನೀಡಿದೆ. ಈನಿಟ್ಟಿನಲ್ಲಿ ಬಿಡದಿ ಟೌನ್ಶಿಪ್ ವಿರೋಧಿಸಿ ಜೆಡಿಎಸ್ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದು 2ನೇ ದಿನದ ಪಾದಯಾತ್ರೆಗೆ ಸ್ವತಃ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರೇ ಚಾಲನೆ ನೀಡಲಿದ್ದಾರೆ. ಇದಕ್ಕೆ ಬಿಜೆಪಿ ಕೂಡ ಬೆಂಬಲ ನೀಡಿದೆ. ಇಂದು ಬಿಡದಿಯ ಬಿಜಿಎಸ್ ವೃತ್ತದಿಂದ-ಮೈಸೂರು ರಸ್ತೆಯ ನೈಸ್ ರೋಡ್ ಜಂಕ್ಷನ್ವರೆಗೆ 16 ಕಿ.ಮೀ ಪಾದಯಾತ್ರೆ ಸಾಗಲಿದೆ.

09:14 AM (IST) Aug 10
ಕರ್ನಾಟಕದಲ್ಲಿ ಸರಣಿ ದರೋಡೆ ನಡೆಸುತ್ತಿದ್ದ ಕುಖ್ಯಾತ 'ಚಡ್ಡಿ ಗ್ಯಾಂಗ್' ಇದೀಗ ಬೆಂಗಳೂರಿನ ಆನೇಕಲ್ ತಾಲೂಕಿನಲ್ಲಿ ಪ್ರತ್ಯಕ್ಷವಾಗಿದೆ. ಲೇಔಟ್ ಒಂದರಲ್ಲಿ ದರೋಡೆಗೆ ಯತ್ನಿಸಿದಾಗ, ಮಹಿಳೆಯೊಬ್ಬರ ಜಾಗರೂಕತೆಯಿಂದ ಪ್ರಯತ್ನ ವಿಫಲವಾಗಿದೆ. ಈ ಹಿಂಸಾತ್ಮಕ ಗ್ಯಾಂಗ್ನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿ, ಜನರಿಗೆ ಜಾಗರೂಕರಾಗಿರಲು ಸೂಚಿಸಿದ್ದಾರೆ.
09:14 AM (IST) Aug 10
ಜಾರ್ಖಂಡ್ನ ರಾಂಚಿಯಲ್ಲಿ ಎಐಎಸ್ಎ ರಾಷ್ಟ್ರೀಯ ಅಧ್ಯಕ್ಷೆ ನೇಹಾ ಅವರ ಮೇಲೆ ನಡೆದ ದಾಳಿಯನ್ನು ಖಂಡಿಸಿ ಹರಪನಹಳ್ಳಿಯಲ್ಲಿ ಎಐಎಸ್ಎ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ಕೃತ್ಯದ ಹಿಂದೆ ಆರೆಸ್ಸೆಸ್ ಸಂಘ ಪರಿವಾರದ ಕೈವಾಡವಿದೆ. ದಾಳಿಕೋರರನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿದರು.
09:11 AM (IST) Aug 10
08:58 AM (IST) Aug 10
ಕರ್ನಾಟಕದ ಸಾಂಸ್ಕೃತಿಕ, ರಾಜಕೀಯ ಹಾಗೂ ಸಾಮಾಜಿಕ ಇತಿಹಾಸಕ್ಕೆ ಸಂಬಂಧಿಸಿದ ಬರೋಬ್ಬರಿ 2 ಲಕ್ಷಕ್ಕೂ ಹೆಚ್ಚು ಅಮೂಲ್ಯ ಐತಿಹಾಸಿಕ ದಾಖಲೆಗಳು ನೆರೆಯ ಮಹಾರಾಷ್ಟ್ರದ ದಾಖಲೆ ಭಂಡಾರಗಳಲ್ಲಿ ಬಂಧಿಯಾಗಿವೆ! ರಾಜ್ಯ ಸರ್ಕಾರಗಳ ದಶಕಗಳ ನಿರ್ಲಕ್ಷ್ಯದಿಂದಾಗಿ ಈ ಅಮೂಲ್ಯ ನಿಧಿಗಳು ಅಲ್ಲಿಯೇ ಉಳಿದಿದ್ದು, ದಿನಕಳೆದಂತೆ ಶಿಥಿಲಗೊಳ್ಳುತ್ತಿವೆ. ಇವುಗಳನ್ನು ಮರಳಿ ತರಲು ಇತಿಹಾಸಕಾರರು ಹಾಗೂ ಸಂಶೋಧಕರು ಒತ್ತಾಯಿಸುತ್ತಿದ್ದಾರೆ.
08:33 AM (IST) Aug 10
ವಿಜಯಪುರದಲ್ಲಿ ಖಾಸಗಿ ವ್ಯಕ್ತಿಗಳಿಂದ ನಡೆಯುತ್ತಿದ್ದ ಒಣದ್ರಾಕ್ಷಿ ವಹಿವಾಟಿನಿಂದ ರೈತರಿಗೆ ಆಗುತ್ತಿದ್ದ ವಂಚನೆಗೆ ಕಡಿವಾಣ ಹಾಕಲು ಆನ್ಲೈನ್ ಟ್ರೇಡಿಂಗ್ ಮಾರುಕಟ್ಟೆಗೆ ಆದ್ಯತೆ ನೀಡಲಾಗಿದೆ. ಇದರಿಂದ ₹5 ಕೋಟಿಯಿಂದ ₹12 ಕೋಟಿಗೆ ವಹಿವಾಟು ಏರಿಕೆಯಾಗಿದ್ದು, ರೈತರಿಗೆ ಉತ್ತಮ ಬೆಲೆ ಲಭ್ಯವಾಗಿದೆ.
07:59 AM (IST) Aug 10
07:45 AM (IST) Aug 10
07:27 AM (IST) Aug 10
ರಾಮನಗರ (ಆ.10) ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(DK Shivakumar) ಅವರೇ ಬಿಡದಿ ಟೌನ್ಶಿಪ್(Bidadi Township) ಜಾರಿ ಮಾಡುವುದಾಗಿ ದುರ್ಯೋಧನನ ರೀತಿ ಹಠ ಮಾಡಬೇಡಿ. ಇಲ್ಲದಿದ್ದರೆ ದುರ್ಯೋಧನನಿಗೆ ಆದ ಗತಿಯೇ ನಿಮಗೂ ಆಗುತ್ತದೆ. ಈ ಟೌನ್ಶಿಪ್ ವಿರುದ್ಧದ ಹೋರಾಟವೇ ಕಾಂಗ್ರೆಸ್ ಸರ್ಕಾರದ ಕೊನೆ ಮೊಳೆಯಾಗುತ್ತದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದರು.
ಬೈರಮಂಗಲ ವೃತ್ತದಲ್ಲಿ ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ನೇತೃತ್ವದಲ್ಲಿ ಪ್ರಾರಂಭವಾದ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಇದೊಂದು ದುಷ್ಟ ಸರ್ಕಾರ, ದುಷ್ಟ ಮುಖ್ಯಮಂತ್ರಿ. ಇವರ ವಿರುದ್ಧವೇ ಈ ಹೋರಾಟ ನಡೆಯುತ್ತಿದೆ ಎಂದರು.
ಬಿಡದಿ ಟೌನ್ಶಿಪ್ ಜಾರಿ ಮಾಡಿದರೆ ಉಳಿಗಾಲವಿಲ್ಲ:
ಬಿಡದಿ ಟೌನ್ಶಿಪ್ ಯೋಜನೆ ಜಾರಿ ವಿಚಾರದಲ್ಲಿ ಕಾಂಗ್ರೆಸ್ ರಚಿಸಿದ್ದ ಸತ್ಯ ಶೋಧನಾ ಸಮತಿ ವರದಿಯಲ್ಲಿ ಈ ಯೋಜನೆ ಮಾಡಿದರೆ ಉಳಿಗಾಲ ಇಲ್ಲವೆಂದು ತಿಳಿಸಿದೆ. ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಆ ವರದಿಯನ್ನು ಬಹಿರಂಗ ಪಡಿಸಬೇಕು. ಇಲ್ಲದಿದ್ದರೆ ನಿಮ್ಮ ಯೋಗ್ಯತೆ ರಾಜ್ಯದ ಜನರ ಮುಂದೆ ಹರಾಜಾಗುತ್ತದೆ ಎಂದು ಎಚ್ಚರಿಸಿದರು.