ಬೆಂಗಳೂರು (ಜು.13): ಸಚಿವ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ಜತೆ ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಿಡಬ್ಲ್ಯುಸಿ ಸದಸ್ಯರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಮಂಗಳವಾರ ಅವರು ದೆಹಲಿಗೆ ತೆರಳುವ ಸಾಧ್ಯತೆ ಇದೆ. ವಿದೇಶ ಪ್ರವಾಸದಲ್ಲಿರುವ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಭಾನುವಾರ ತಡ ರಾತ್ರಿ ದೆಹಲಿಗೆ ಮರಳಲಿದ್ದಾರೆ. ಸಹಜವಾಗಿ ಸೋಮವಾರ ವಿಶ್ರಾಂತಿ ಪಡೆಯುವ ಸಾಧ್ಯತೆ ಇದೆ. ಹೈಕಮಾಂಡ್ ಒಪ್ಪಿದರೆ ಜುಲೈ 15ರ ಮೊದಲೇ ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ಇದೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್ಡೇಟ್ ಇಲ್ಲಿದೆ.
10:29 AM (IST) Jul 13
10:20 AM (IST) Jul 13
ತಮ್ಮ ಪುತ್ರಿಯರಿಗೆ ಸರ್ಕಾರಿ ಉದ್ಯೋಗ ಕೊಡಿಸಲು ಸುಳ್ಳು ಆದಾಯ ಪ್ರಮಾಣ ಪತ್ರ ಸಲ್ಲಿಸಿ, ಅಧಿಕಾರ ದುರುಪಯೋಗ, ಪಕ್ಷಪಾತ, ಅಕ್ರಮ ಎಸಗಿದ ಆರೋಪ ಹೊತ್ತಿರುವ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)ದ ಅಧ್ಯಕ್ಷ ಶಿವಶಂಕರಪ್ಪ ಎಸ್.ಸಾಹುಕಾರ್ ಅವರನ್ನು ಕೊನೆಗೂ ಅಮಾನತು ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.
09:45 AM (IST) Jul 13
ನಾಲ್ಕು ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಶಿಕ್ಷಕಿಯೊಬ್ಬರು ಬೆಂಗಳೂರಿನಲ್ಲಿ ದುರಂತ ಅಂತ್ಯಕಂಡಿದ್ದಾರೆ. ಶಿಕ್ಷಕಿಯ ಸಾವಿನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಆಕೆಯ ತಾಯಿ ಗಂಭೀರ ಆರೋಪ ಮಾಡಿದ್ದಾರೆ.
09:10 AM (IST) Jul 13
ಬೆಂಗಳೂರಿನಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಪ್ರೀತಿಸಿ ಮದುವೆ ಆಗಿದ್ದ ನವವಿವಾಹಿತ ಶಿಕ್ಷಕಿಯೊಬ್ಬರು ಹಠಾತ್ ನಿಧನರಾಗಿದ್ದಾರೆ. ಸಾವಿಗೂ ಮುನ್ನ ಬರೆದಿರುವ ನೋಟ್ ಇದೀಗ ಸಂಚಲನ ಮೂಡಿಸಿದೆ.
08:57 AM (IST) Jul 13
08:30 AM (IST) Jul 13
07:57 AM (IST) Jul 13
ವಿದೇಶ ಪ್ರವಾಸದಿಂದ ರಾಹುಲ್ ಗಾಂಧಿ ಹಿಂತಿರುಗಿದ ಬೆನ್ನಲ್ಲೇ, ರಾಜ್ಯ ಕಾಂಗ್ರೆಸ್ನಲ್ಲಿ ಸಂಪುಟ ವಿಸ್ತರಣೆ ಚಟುವಟಿಕೆಗಳು ಗರಿಗೆದರಿವೆ. ಸಿಎಂ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಸೇರಿ ಹಲವು ನಾಯಕರು ಹೈಕಮಾಂಡ್ ಅನುಮೋದನೆಗೆ ದೆಹಲಿಗೆ ತೆರಳಲು ಸಜ್ಜು, ಜುಲೈ 15ರೊಳಗೆ ವಿಸ್ತರಣೆ ನಡೆಯುವ ಸಾಧ್ಯತೆ
07:26 AM (IST) Jul 13
ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ ತಡೆಯಲು ಮೈಸೂರಿನ ಕನ್ನಡಿ ತಂತ್ರದಂತೆ, ಅಸ್ಸಾಂನ ಟಿನ್ಸುಕಿಯಾ ಪುರಸಭೆಯು 'ಹಾಲ್ ಆಫ್ ಶೇಮ್' ಅಭಿಯಾನ ಆರಂಭಿಸಿದೆ. ಈ ಅಭಿಯಾನದಡಿ, ನಿಯಮ ಉಲ್ಲಂಘಿಸುವವರ ದೃಶ್ಯವನ್ನು ಸಿಸಿಟಿವಿಯಲ್ಲಿ ಸೆರೆಹಿಡಿದು, ಬೃಹತ್ ಎಲ್ಇಡಿ ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.
07:26 AM (IST) Jul 13
ಗದಗದ ಐತಿಹಾಸಿಕ ತ್ರಿಕೂಟೇಶ್ವರ ದೇವಸ್ಥಾನದ ಆವರಣದಲ್ಲಿರುವ ಪುರಾತನ ಸರಸ್ವತಿ ದೇವಿಯ ಮೂರ್ತಿಯನ್ನು ದುಷ್ಕರ್ಮಿಗಳು ಭಗ್ನಗೊಳಿಸಿದ್ದಾರೆ. 8ನೇ ಶತಮಾನಕ್ಕೆ ಸೇರಿದ ಈ ದೇವಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ರಕ್ಷಣೆಯಲ್ಲಿದ್ದು, ಪೊಲೀಸರು ಘಟನೆಯ ತನಿಖೆ ನಡೆಸುತ್ತಿದ್ದಾರೆ.
07:25 AM (IST) Jul 13
ಭ್ರಷ್ಟಾಚಾರ ಪ್ರಕರಣಗಳಲ್ಲಿ ಲೋಕಾಯುಕ್ತ ಸಂಸ್ಥೆ ತಪ್ಪು ಮಾಡಿದ ದೊಡ್ಡ ಮೀನುಗಳನ್ನು ಬಿಟ್ಟು, ಸಣ್ಣ ಮೀನುಗಳನ್ನು ಹಿಡಿದರೆ ಪ್ರಯೋಜನವಿಲ್ಲ ಎಂದಿರುವ ಹೈಕೋರ್ಟ್ ದೊಡ್ಡ ಮೀನುಗಳನ್ನು ಕೈಬಿಟ್ಟರೆ, ಸಣ್ಣ ಮೀನುಗಳು ನರಳುವುದಕ್ಕೆ ಹೈಕೋರ್ಟ್ ಅನುಮತಿಸುವುದಿಲ್ಲ ಎಂದು ಮಾರ್ಮಿಕವಾಗಿ ಹೇಳಿದೆ.
07:25 AM (IST) Jul 13
ಯಾದಗಿರಿ ಜಿಲ್ಲೆಯಲ್ಲಿ ಕಳೆದ ಐದು ವರ್ಷಗಳಲ್ಲಿ ನೋಂದಣಿಯಾದ 53,595 ಗರ್ಭಗಳಲ್ಲಿ 16,116 ಗರ್ಭಗಳ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ. ಈ ನಾಪತ್ತೆಯಾದ ಗರ್ಭಗಳಲ್ಲಿ ಬಹುತೇಕವು ಅಕ್ರಮ ಲಿಂಗ ಪತ್ತೆ ನಂತರ ನಡೆದ ಹೆಣ್ಣು ಭ್ರೂಣ ಹತ್ಯೆಗೆ ಬಲಿಯಾಗಿವೆ ಎಂದು ಸರ್ಕಾರದ ತನಿಖಾ ವರದಿಯು ಬಹಿರಂಗಪಡಿಸಿದೆ.