ಬೆಂಗಳೂರು (ಜು.19): ರಾಜ್ಯದಲ್ಲಿ ಶೇ.30ರಷ್ಟು ಮುಂಗಾರು ಮಳೆ ಕೊರತೆ ಕಾಣಿಸಿದ್ದು, ರಾಜ್ಯ ಭೀಕರ ಬರಗಾಲದತ್ತ ಹೆಜ್ಜೆ ಹಾಕಿದೆ. ಈ ಹಿನ್ನೆಲೆಯಲ್ಲಿ ಅಖಾಡಕ್ಕೆ ಇಳಿದಿರುವ ಸಿಎಂ ಡಿ.ಕೆ.ಶಿವಕುಮಾರ್ ಭಾನುವಾರ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಿಇಒಗಳ ಜೊತೆ ವಿಡಿಯೋ ಕಾನ್ಸರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಬಳಿಕ ಈ ವಿಷಯ ಸಂಪುಟ ಸಭೇಲಿ ಚರ್ಚಿಸಿ ಮುಂದಿನ ನಿರ್ಧಾರ ಪ್ರಕಟಿಸಲಿದ್ದಾರೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್ಡೇಟ್ ಇಲ್ಲಿದೆ.
09:40 PM (IST) Jul 19
ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮ, 72 ವರ್ಷಗಳ ದಾಂಪತ್ಯದ ನಂತರ ನಿಧನರಾದರು. ಹಾಸನ ಟು ದಿಲ್ಲಿವರೆಗೆ ಜತೆಯಾದ ಜೀವ ಕೊನೆಗೆ ಬಯಸಿದ ಆ ಆಸೆ ಏನಾಗಿತ್ತು? ಇಲ್ಲಿದೆ ಎಲ್ಲದರ ಸಂಪೂರ್ಣ ವಿವರ.
08:59 PM (IST) Jul 19
ಇಂಗ್ಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಭಾರತೀಯ ಬೌಲರ್ಗಳು ಸಂಪೂರ್ಣ ವಿಫಲರಾದರು, ಇದರಿಂದ ಇಂಗ್ಲೆಂಡ್ 387 ರನ್ಗಳ ಬೃಹತ್ ಮೊತ್ತ ಕಲೆಹಾಕಿತು. ಈ ಕಳಪೆ ಪ್ರದರ್ಶನವು ತಂಡದ ಆಯ್ಕೆಯ ಬಗ್ಗೆ, ವಿಶೇಷವಾಗಿ ಆ ಇಬ್ಬರು ಅನುಭವಿ ಆಟಗಾರರನ್ನು ಕೈಬಿಟ್ಟಿರುವ ಕುರಿತು ತೀವ್ರ ಚರ್ಚೆ ಹುಟ್ಟುಹಾಕಿದೆ.
08:14 PM (IST) Jul 19
ಆಗಸ್ಟ್ 26ರಂದು ವಿಶ್ವದಾದ್ಯಂತ ತೆರೆಗೆ ಬರಲಿರುವ ರಾಕಿಂಗ್ ಸ್ಟಾರ್ ಯಶ್ 'ಟಾಕ್ಸಿಕ್' ಚಿತ್ರದ ಟ್ರೇಲರ್ ಬಿಡುಗಡೆ ಕುರಿತು ಹೊಸ ಮಾಹಿತಿ ಹರಿದಾಡಿದ್ದು, ಅಭಿಮಾನಿಗಳ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.
08:08 PM (IST) Jul 19
ಕೇರಳದ ರಂಜೀಶ್ ಎಂಬುವವರು, ಪತ್ನಿ ತೊರೆದು ಹೋದ ನಂತರ ಮಗುವನ್ನು ಸಾಕಿ ಸಲಹಿದ್ದರು. ಆದರೆ, ಮುಂದೆ ಆಗಿದ್ದೇ ಬೇರೆ. ಹಾಗಾದರೆ ಆಗಿದ್ದಾದರೂ ಏನು? ಪ್ರಕರಣ ಸಂಪೂರ್ಣ ಮಾಹಿತಿ ಈ ಸ್ಟೋರಿಯಲ್ಲಿದೆ ನೋಡಿ.
06:44 PM (IST) Jul 19
ನಿರ್ದೇಶಕ ಪೂರ್ಣಚಂದ್ರ ಮೈಸೂರು, ನಟ ರಾಕ್ಷಸ ಡಾಲಿ ಧನಂಜಯ ಅವರ ಅಪರಾಧ ಹಾಸ್ಯ (ಕ್ರೈಂ ಕಾಮಿಡಿ) ಚಿತ್ರ 'ಮದರ್ ಪ್ರಾಮಿಸ್' ಬಿಡುಗಡೆಯಾದ ಎಂಟನೇ ದಿನವೂ ಚಿತ್ರಮಂದಿರಗಳಲ್ಲಿ ತನ್ನ ಪ್ರದರ್ಶನವನ್ನು ಮುಂದುವರಿಸಿದೆ.
06:35 PM (IST) Jul 19
ಭಾರತ ಮತ್ತು ಇಂಗ್ಲೆಂಡ್ ನಡುವಿನ ಲಾರ್ಡ್ಸ್ ಏಕದಿನ ಪಂದ್ಯದಲ್ಲಿ ದಾಖಲೆಗಳ ಸುರಿಮಳೆಯೇ ಪ್ರಾರಂಭವಾಗಿದೆ. ಅಷ್ಟಕ್ಕೂ ಆ ದಾಖಲೆಗಳು ಏನು? ಎನ್ನುವುದರ ಸಂಪೂರ್ಣ ವಿವರವನ್ನು ನೋಡಿ ಬರೋಣ ಬನ್ನಿ.
05:57 PM (IST) Jul 19
ಶಾಪಿಂಗ್ ಮಾಲ್ ಅಥವಾ ಹೋಟೆಲ್ಗಳ ಲಿಫ್ಟ್ನಲ್ಲಿ ಕನ್ನಡಿ ಇರುವುದು ಕೇವಲ ಸೌಂದರ್ಯ ವೀಕ್ಷಣೆಗಾಗಿ ಅಲ್ಲ. ಇದು ಬೇರೆಯದ್ದೆ ಉದ್ದೇಶ ಹೊಂದಿದೆ. ಅದು ಏನು ಎನ್ನುವುದನ್ನು ನೋಡೋಣ ಬನ್ನಿ.
05:10 PM (IST) Jul 19
05:07 PM (IST) Jul 19
Sharmiela Mandre Wedding Photos: ಸ್ಯಾಂಡಲ್ವುಡ್ನ ಖ್ಯಾತ ನಟಿ ಶರ್ಮಿಳಾ ಮಾಂಡ್ರೆ ಮತ್ತು ತಮಿಳು ಚಿತ್ರರಂಗದ ನಿರ್ಮಾಪಕ ಸುಧನ್ ಸುಂದರಂ ಇತ್ತೀಚೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
04:38 PM (IST) Jul 19
ರಾಮಾಯಣದಲ್ಲಿ ದೇವಿ ಸೀತೆಯ ಪಾತ್ರ ನಿರ್ವಹಿಸುತ್ತಿರುವ ಸಾಯಿ ಪಲ್ಲವಿ, ಕಾರ್ಯಕ್ರಮದಲ್ಲಿ ತಮ್ಮ ಸಾಂಪ್ರದಾಯಿಕ ಉಡುಗೆಯ ಮೂಲಕ ಎಲ್ಲರ ಗಮನ ಸೆಳೆದರು. ಅವರು ಗುಲಾಬಿ ಹಾಗೂ ಚಿನ್ನದ ಬಣ್ಣದ ಕಾಂಜೀವರಂ ಸೀರೆ ಧರಿಸಿದ್ದರು.
04:16 PM (IST) Jul 19
ಬಹುನಿರೀಕ್ಷಿತ ಪೌರಾಣಿಕ ಮಹಾಕಾವ್ಯ ‘ರಾಮಾಯಣ’ ಚಿತ್ರದಲ್ಲಿ ದೇವಿ ಸೀತೆಯ ಪಾತ್ರವನ್ನು ನಿರ್ವಹಿಸಿರುವ ನಟಿ ಸಾಯಿ ಪಲ್ಲವಿ, ಆ ಪಾತ್ರಕ್ಕಾಗಿ ತಾವು ಹೇಗೆ ಸಿದ್ಧತೆ ಮಾಡಿಕೊಂಡರು ಎಂಬುದನ್ನು ಹಂಚಿಕೊಂಡಿದ್ದಾರೆ.
03:35 PM (IST) Jul 19
03:14 PM (IST) Jul 19
ಕುಷ್ಟಗಿಯಿಂದ ಬೆಂಗಳೂರಿಗೆ ನಿತ್ಯ ರೈಲು ಸಂಚಾರ ಆರಂಭಿಸುವಂತೆ ಕುಷ್ಟಗಿ ರೈಲ್ವೆ ಹೋರಾಟ ಸಮಿತಿಯು ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದೆ. ಶಾಸಕ ದೊಡ್ಡನಗೌಡ ಪಾಟೀಲರ ಒತ್ತಡವನ್ನೂ ಉಲ್ಲೇಖಿಸಿ, ಆದ್ಯತೆ ಮೇರೆಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
02:54 PM (IST) Jul 19
ಕ್ರಿ.ಶ. 750ರ ಕಾಲದ, ಅಪರೂಪದ ಮಿಶ್ರಲಿಪಿ ಕನ್ನಡ ಶಾಸನವೊಂದು ಪತ್ತೆಯಾಗಿದೆ. 8 ಶತಮಾನಗಳ ಲಿಪಿ ವೈವಿಧ್ಯತೆಯನ್ನು ಹೊಂದಿರುವ ಈ ಶಾಸನವು, ಅಂದಿನ ಕೃಷಿ, ನೀರಾವರಿ ಮತ್ತು ಗ್ರಾಮೀಣ ಆಡಳಿತದ ಬಗ್ಗೆ ಮಹತ್ವದ ಮಾಹಿತಿ ನೀಡುತ್ತದೆ. ಇತಿಹಾಸ ಸಂಶೋಧಕ ಶ್ಯಾಮಸುಂದರ ಗೌಡ ಅವರು ಈ ಶಾಸನದ ಅಧ್ಯಯನ ನಡೆಸಿ, ಇಂದಿನ ಗ್ರಾಮದ ಹೆಸರುಗಳೊಂದಿಗೆ ಇರುವ ಐತಿಹಾಸಿಕ ಸಂಬಂಧವನ್ನು ಗುರುತಿಸಿದ್ದಾರೆ.
02:40 PM (IST) Jul 19
ಮನೆಯ ಮುಂದಿನ ಹೂದೋಟದಲ್ಲಿ ವರ್ಷವಿಡೀ ಹೂವು ತುಂಬಿಕೊಂಡಿರಲು ನೀವು ಈ ಮೂರು ಗಿಡಗಳನ್ನು ನೆಟ್ಟು, ಇಲ್ಲಿ ಹೇಳಿದಂತೆ ತಕ್ಕಮಟ್ಟಿಗೆ ಆರೈಕೆ ಮಾಡಿದರೆ ಸಾಕು.. ನಿಮ್ಮ ಕೈದೋಟದಲ್ಲಿ ಬಣ್ಣಬಣ್ಣದ ಹೂವು ಅರಳಿ, ನಿಮ್ಮ ಮನೆಯ ಸೌಂದರ್ಯದ ಜೊತೆಗೆ ನಿಮ್ಮ ಮನಸ್ಸಿನ ನೆಮ್ಮದಿಗೂ ಕಾರಣವಾಗುತ್ತವೆ.
02:38 PM (IST) Jul 19
02:23 PM (IST) Jul 19
02:12 PM (IST) Jul 19
ತಾಯಿಯ ಸಾವಿಗೆ ನ್ಯಾಯ ಸಿಗುತ್ತಿಲ್ಲ ಎಂಬ ಆಕ್ರೋಶ.. ಪೊಲೀಸರು ಪ್ರಕರಣ ಮುಚ್ಚಿ ಹಾಕುತ್ತಿದ್ದಾರೆ ಎಂಬ ಸಂಶಯ.. ಕೊನೆಗೆ ನ್ಯಾಯಕ್ಕಾಗಿ ಹಂಬಲಿಸಿದ ಮಕ್ಕಳು ಇಡೀ ದಾವಣಗೆರೆ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ್ದಾರೆ. ಏನದು ಸ್ಟೋರಿ? ಓದಿ..
01:46 PM (IST) Jul 19
2027ರ ವಿಶ್ವಕಪ್ ವೇಳೆಗೆ ರೋಹಿತ್ ಶರ್ಮಾಗೆ 40 ವರ್ಷ ತುಂಬುವುದರಿಂದ ಅವರ ಆಯ್ಕೆ ಬಗ್ಗೆ ಚರ್ಚೆ ಶುರುವಾಗಿದೆ. ಆದರೆ ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು 7 ಶತಕಗಳು, 2019ರ ಟೂರ್ನಿಯೊಂದರಲ್ಲೇ 5 ಶತಕಗಳು ಹಾಗೂ 7 ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಗೆದ್ದಿರುವ ಅವರ ಅಸಾಧಾರಣ ದಾಖಲೆಗಳು ಮತ್ತು ಮೂರು ಆವೃತ್ತಿಗಳಲ್ಲಿನ ನಿರಂತರ ಸ್ಥಿರತೆಯನ್ನು ವಯಸ್ಸಿನ ಕಾರಣಕ್ಕೆ ಕಡೆಗಣಿಸುವುದು ಭಾರತ ತಂಡಕ್ಕೆ ಸುಲಭವಲ್ಲ.
12:47 PM (IST) Jul 19
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನದ ಬೆನ್ನಲ್ಲೇ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಚೆನ್ನಮ್ಮ ಆಸ್ಪತ್ರೆ ಸೇರುವ ಮೂರು ದಿನಗಳ ಹಿಂದಿನ ವಿಡಿಯೋ ಅದಾಗಿದ್ದು, ನೋಡುಗರ ಕಣ್ಣಾಲೆಗಳನ್ನ ಒದ್ದೆ ಮಾಡುತ್ತಿದೆ...
11:56 AM (IST) Jul 19
11:21 AM (IST) Jul 19
ಜಮ್ಶೆಡ್ಪುರದ ಎಂಜಿಎಂ ಆಸ್ಪತ್ರೆಯ ಮಹಿಳಾ ಹೋಂಗಾರ್ಡ್ ಸಿಬ್ಬಂದಿಯೊಬ್ಬರು ಕಳೆದ ಐದು ತಿಂಗಳಿಂದ ಸಂಬಳವಿಲ್ಲದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅನಾರೋಗ್ಯ ಮತ್ತು ಸಾಲದ ಬಾಧೆಯಿಂದ ಕಂಗೆಟ್ಟು, ಆಸ್ಪತ್ರೆಯ ಆವರಣದಲ್ಲೇ ಕಣ್ಣೀರು ಹಾಕುತ್ತಿರುವ ಅವರ ವಿಡಿಯೋ ವೈರಲ್ ಆಗಿದೆ.
10:45 AM (IST) Jul 19
ನಾವು ಅನಾಥರಾದೇವು ಅಂತಾ ಮುತ್ತಿಗೆ ಹಿರೇಹಳ್ಳಿ ಗ್ರಾಮದ ಜನರು ಚೆನ್ನಮ್ಮ ಅವರನ್ನು ಕಳೆದುಕೊಂಡು ಕಣ್ಣೀರು ಇಡುತ್ತಿದ್ದಾರೆ. ಗ್ರಾಮದ ಜನರ ಈ ಕಣ್ಣೀರಿಗೆ ಚೆನ್ನಮ್ಮ ಜೊತೆಗಿನ ಭಾವನಾತ್ಮಕ ಸಂಬಂಧ ಇದೆ. ಅದೇ ಕಾರಣಕ್ಕೆ ಇಡೀ ಗ್ರಾಮವೇ ಶೋಕದಲ್ಲಿ ಮುಳುಗಿದೆ.. ಈ ಕುರಿತ ಸ್ಟೋರಿ ಇಲ್ಲಿದೆ.
10:06 AM (IST) Jul 19
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟೋಲ್ ತಪ್ಪಿಸುವುದನ್ನು ತಡೆಯಲು ಎನ್ಎಚ್ಎಐ ಹಲವು ಪ್ರವೇಶ-ನಿರ್ಗಮನ ದ್ವಾರಗಳನ್ನು ಮುಚ್ಚಿದೆ. ಈ ನಿರ್ಧಾರದಿಂದ ಸ್ಥಳೀಯ ನಿವಾಸಿಗಳು ಮತ್ತು ದೈನಂದಿನ ಪ್ರಯಾಣಿಕರಿಗೆ ತೀವ್ರ ಅನಾನುಕೂಲವಾಗಿದೆ.
10:00 AM (IST) Jul 19
09:29 AM (IST) Jul 19
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಈ ಸುದ್ದಿ ಕೇಳಿ ಜೈಲಿನಲ್ಲಿರುವ ಮೊಮ್ಮಗ ಪ್ರಜ್ವಲ್ ರೇವಣ್ಣ ಭಾವುಕರಾಗಿದ್ದಾರೆ. ಅಜ್ಜಿಯ ಅಂತಿಮ ದರ್ಶನ ಮತ್ತು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕೋರಿ ಅವರು ತುರ್ತು ಪೆರೋಲ್ಗಾಗಿ ಅರ್ಜಿ ಸಲ್ಲಿಸಿದ್ದು, ಜೈಲು ಅಧಿಕಾರಿಗಳ ನಿರ್ಧಾರಕ್ಕಾಗಿ ಕಾಯುತ್ತಿದ್ದಾರೆ.
09:13 AM (IST) Jul 19
08:43 AM (IST) Jul 19
08:30 AM (IST) Jul 19
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟದ ಎರಡನೇ ಹಂತದ ವಿಸ್ತರಣೆಯು ಹಲವು ನಾಯಕರು ಪ್ರತ್ಯೇಕ ಪಟ್ಟಿಗಳನ್ನು ಸಲ್ಲಿಸಿರುವುದರಿಂದ ವಿಳಂಬವಾಗಿದೆ. ರಾಜ್ಯ ನಾಯಕರು ಮತ್ತು ಹೈಕಮಾಂಡ್ ನಡುವೆ ಹೆಸರುಗಳ ಬಗ್ಗೆ ಒಮ್ಮತ ಮೂಡದ ಕಾರಣ, ಪರಿಷ್ಕೃತ ಪಟ್ಟಿ ಸಲ್ಲಿಸುವಂತೆ ಹೈಕಮಾಂಡ್ ಸೂಚಿಸಿದೆ.
08:18 AM (IST) Jul 19
ತಾನು ಮಾಡಿಕೊಂಡಿದ್ದ ಸಾಲ ತೀರಿಸಲು ಆಸ್ತಿ ಕೊಡುವಂತೆ ಪೀಡಿಸುತ್ತಿದ್ದ ಮಗನೊಬ್ಬ ತನ್ನ ತಂದೆಯನ್ನೇ ಕೊಂದು ಕಡೆಗೆ ತಾನೂ ಕೂಡ ನೇಣು ಬಿಗಿದುಕೊಂಡು ಸಾವನ್ನಪ್ಪಿದ ಘಟನೆ ಪಟ್ಟಣದ ಗುರನಹಳ್ಳಿಯಲ್ಲಿ ಶನಿವಾರ ನಡೆದಿದೆ.
08:16 AM (IST) Jul 19
ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ, ಸುಮಂತ್ ಭಟ್ ನಿರ್ದೇಶನದ ಮತ್ತು ರಕ್ಷಿತ್ ಶೆಟ್ಟಿ ನಿರ್ಮಾಣದ 'ಮಿಥ್ಯ' 3 ಪ್ರಶಸ್ತಿ ಗೆದ್ದುಕೊಂಡಿದೆ. ಈ ಪೈಕಿ, ರೂಪಶ್ರೀ ವರ್ಕಾಡಿ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದು, ಕನ್ನಡ ಚಿತ್ರರಂಗದಲ್ಲಿ ಈ ಗೌರವ ಪಡೆದ ಮೊದಲ ನಟಿ ಎಂಬ ಇತಿಹಾಸ ನಿರ್ಮಿಸಿದ್ದಾರೆ.
07:44 AM (IST) Jul 19
ರಾಜ್ಯದ ಬರ ಪರಿಸ್ಥಿತಿ ಸಂಬಂಧ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿ ಪಂ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಭಾನುವಾರ ಸಭೆ ನಡೆಸಲಾಗುತ್ತಿದ್ದು, ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ದೇಶನ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು.
07:28 AM (IST) Jul 19
ಬಿಡದಿ ಟೌನ್ ಶಿಪ್) ಯೋಜನೆ ಪರವಾಗಿ ಮತ್ತು ವಿರೋಧಿಸಿ ರೈತರು ನಡೆಸುತ್ತಿರುವ ಚಳವಳಿ ತಾರಕಕ್ಕೇರಿದೆ. ಮತ್ತೊಂದೆಡೆ ಜೆಡಿಎಸ್ ಮತ್ತು ಬಿಜೆಪಿ ನಡುವೆ ಕ್ರೆಡಿಟ್ ವಾರ್ ಶುರುವಾಗಿದೆ.
07:26 AM (IST) Jul 19
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಸ್ಪಷ್ಟಪಡಿಸಿದರು.
07:26 AM (IST) Jul 19
ರಾಜ್ಯದ ಎಲ್ಲ ಆಸ್ಪತ್ರೆ ಹಾಗೂ ಶಾಲೆಗಳ ಆವರಣದಲ್ಲಿರುವ ಕ್ಯಾಂಟೀನ್ಗಳಲ್ಲಿ ಆರೋಗ್ಯಕರ ಆಹಾರಗಳನ್ನು ಮಾತ್ರ ಕನಿಷ್ಠ ದರದಲ್ಲಿ ಮಾರಾಟ ಮಾಡಬೇಕು. ಇದನ್ನು ಹೊರತುಪಡಿಸಿ ಯಾವುದೇ ರೀತಿಯ ಜಂಕ್ ಫುಡ್ಗಳನ್ನು ಮಾರಾಟ ಮಾಡುವಂತಿಲ್ಲ. ರಾಜ್ಯಾದ್ಯಂತ ಈ ನಿಯಮ ಜಾರಿಗೆ ತರಲು ಸಿದ್ಧತೆ ನಡೆಸಲಾಗಿದೆ.
07:25 AM (IST) Jul 19
ಬಿಡದಿ ಟೌನ್ಶಿಪ್ ಯೋಜನೆ(Bidadi township project) ವಿರೋಧಿಸಿ ಬಿಜೆಪಿ ಬಿಡದಿಯಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸುವ ಘೋಷಣೆ ಮಾಡಿದ ಮರುದಿನವೇ ಜೆಡಿಎಸ್ ಒಂದು ಹೆಜ್ಜೆ ಮುಂದೆ ಹೋಗಿ ದಿನಾಂಕ ಸಮೇತ ತನ್ನ ಪಾದಯಾತ್ರೆಯನ್ನು ಪ್ರಕಟಿಸಿದೆ.
07:25 AM (IST) Jul 19
Channamma final rites ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮ ಶಿವೈಕ್ಯರಾಗಿದ್ದಾರೆ .ಅವರ ಅಂತ್ಯಕ್ರಿಯೆ ಇಂದು ಭಾನುವಾರ ಮಾವಿನಕೆರೆ ಹರದನಹಳ್ಳಿಯಲ್ಲಿ ನಡೆಸಲಾಗುವುದು ಎಂದು ಪುತ್ರ ಹೆಚ್ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ಮುಂದೆ ಓದಿ.
07:24 AM (IST) Jul 19
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(DK Shivakumar) ಅವರ ಎರಡನೇ ಹಂತದ ಸಚಿವ ಸಂಪುಟವೆಂಬ ಖಾದ್ಯ ಸಿದ್ಧಪಡಿಸಲು ಹಲವು ಬಾಣಸಿಗರು ಅತ್ಯುತ್ಸಾಹ ತೋರುತ್ತಿರುವ ಪರಿಣಾಮ ಇಡೀ ಪ್ರಕ್ರಿಯೆಗೆ ಸೋಮವಾರದಿಂದ ಮತ್ತೊಂದು ಹಂತದ ಚಾಲನೆ ನೀಡಬೇಕಾದ ಪರಿಸ್ಥಿತಿ ಕಾಂಗ್ರೆಸ್ನಲ್ಲಿ ಉಂಟಾಗಿದೆ.