ಬೆಂಗಳೂರು (ಜು.3): 'ತೀವ್ರ ಜಲಕ್ಷಾಮದ ಸಾಧ್ಯತೆ ಹಿನ್ನೆಲೆಯಲ್ಲಿ ದೇಶಾದ್ಯಂತ ನೀರು, ವಿದ್ಯುತ್ ಅಭಾವ ಸೃಷ್ಟಿಯಾಗಲಿದೆ. ರಾಜ್ಯಾದ್ಯಂತ ಬಹುತೇಕ ಜಲಾಶಯಗಳ ಒಳಹರಿವು ಶೂನ್ಯಕ್ಕೆ ಇಳಿದಿದ್ದು, ಜಲಾಶಯ ನಂಬಿಕೊಂಡು ಯಾವ ರೈತರೂ ಬೆಳೆ ಹಾಕಬೇಡಿ' ಎಂದು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಎಲ್ನಿನೊ ಪರಿ ಣಾಮದಿಂದ ಉಂಟಾಗಲಿರುವ ಬರದ ಸ್ಥಿತಿ ಹಾಗೂ ಪರಿಣಾಮಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಗಿದೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್ಡೇಟ್ ಇಲ್ಲಿದೆ.

10:28 AM (IST) Jul 03
10:23 AM (IST) Jul 03
Amruthadhaare Serial Episode: ಅಮೃತಧಾರೆ ಧಾರಾವಾಹಿಯಲ್ಲಿ ಶಾಕುಂತಲಾ ಮಾಡಿದ ಕೆಲಸ ನೋಡಿ ವೀಕ್ಷಕರು ಕಂಗಾಲಾಗಿದ್ದಾರೆ. ಶಕುಂತಲಾ ಮತ್ತೆ ತನ್ನ ಬುದ್ಧಿಯನ್ನು ಬಿಡದಿರೋದನ್ನು ನೋಡಿ ಏನಿದು ಹೀಗೆ ಆಗ್ತಿದೆಯಲ್ಲಾ ಎಂದು ಬೇಸರ ಮಾಡಿಕೊಂಡಿದ್ದಾರೆ.
10:14 AM (IST) Jul 03
09:59 AM (IST) Jul 03
09:52 AM (IST) Jul 03
09:30 AM (IST) Jul 03
ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಎರಡನೇ ದಿನವೂ ಮುಂದುವರಿದಿದ್ದು, ಕೋರಮಂಗಲ, ಜಯನಗರ ಸೇರಿದಂತೆ ಹಲವೆಡೆ ಜೆಸಿಬಿ ಬಳಸಿ ಅಕ್ರಮ ನಿರ್ಮಾಣಗಳನ್ನು ತೆರವುಗೊಳಿಸಲಾಗಿದೆ. ಬೀದಿ ಬದಿ ವ್ಯಾಪಾರಿಗಳನ್ನು ಸ್ಥಳಾಂತರಿಸಲಾಗುವುದು ಎಂದು ಸರ್ಕಾರ ಹೇಳಿದೆ.
09:03 AM (IST) Jul 03
ಮೇಕೆದಾಟು ಅಣೆಕಟ್ಟು ವಿಚಾರದಲ್ಲಿ ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ಕಾಂಗ್ರೆಸ್ ಘಟಕವೇ ತಿರುಗಿಬಿದ್ದಿದೆ. ತಮಿಳುನಾಡಿನ ಅನುಮತಿಯಿಲ್ಲದೆ ಒಂದೇ ಒಂದು ಇಟ್ಟಿಗೆಯನ್ನೂ ಹಾಕಲು ಬಿಡುವುದಿಲ್ಲವೆಂದು ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಮಾಣಿಕ್ಯಂ ಟ್ಯಾಗೋರ್ ಎಚ್ಚರಿಕೆ ನೀಡಿದ್ದಾರೆ.
08:48 AM (IST) Jul 03
08:30 AM (IST) Jul 03
ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಜು.5ರಂದು ದೆಹಲಿಗೆ ತೆರಳುವ ಸಾಧ್ಯತೆಯಿದೆ. ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಿದ ನಂತರ, ಜು.10 ರಿಂದ 12ರೊಳಗೆ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆಯಿದೆ.
08:08 AM (IST) Jul 03
ಶಾಲಾ ಬಸ್ನಲ್ಲಿ ವಿದ್ಯಾರ್ಥಿಯೊಬ್ಬ ಕಣ್ಣು ಕಳೆದುಕೊಂಡ ಪ್ರಕರಣದಲ್ಲಿ, ಮಗು ಬಸ್ ಹತ್ತಿದಾಗಿನಿಂದ ಮನೆಗೆ ಸುರಕ್ಷಿತವಾಗಿ ತಲುಪುವವರೆಗೂ ಶಾಲಾ ಆಡಳಿತ ಮಂಡಳಿಯೇ ಜವಾಬ್ದಾರಿ ಎಂದು ಕೋರ್ಟ್ ಸ್ಪಷ್ಟಪನೆ. ಮದ್ದೂರಿನ ದಿವ್ಯಜ್ಯೋತಿ ಶಾಲೆ ವಿರುದ್ಧದ ಎಫ್ಐಆರ್ ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.
07:42 AM (IST) Jul 03
ಜೂನ್ ತಿಂಗಳು ಕಳೆದರೂ ಈ ಬಾರಿ ರಾಜ್ಯಾದ್ಯಂತ ಮಳೆ ಕೊರತೆ ಹಿನ್ನೆಲೆ ಕೃಷಿ ಚಟುವಟಿಕೆ ಇಲ್ಲದೆ ರೈತರು ಆತಂಕದಲ್ಲಿದ್ದಾರೆ. ಈ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದ 'ಡ್ಯಾಂ ತುಂಬುವವರೆಗೆ ಯಾವ ರೈತರೂ ಬೆಳೆಹಾಕಲೇಬೇಬಾರದು ಎಂದು ರಾಜ್ಯದ ರೈತರಿಗೆ ಸಿಎಂ ಕಿವಿಮಾತು ಹೇಳಿದ್ದಾರೆ.
07:21 AM (IST) Jul 03
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೆಐಎಡಿಬಿ ಕೈಗಾರಿಕಾ ನಿವೇಶನ ಹಂಚಿಕೆಯಲ್ಲಿ ಅಂಗವಿಕಲರಿಗೆ ಭೂಮಿ ಮೌಲ್ಯದ ಶೇ.10 ಅಥವಾ ಗರಿಷ್ಠ 20 ಲಕ್ಷ ರೂ. ರಿಯಾಯಿತಿ ನೀಡಲು ಅನುಮೋದನೆ ನೀಡಲಾಗಿದೆ.
07:21 AM (IST) Jul 03
ಭೂ ವ್ಯಾಜ್ಯ ಪ್ರಕರಣದ ಠೇವಣಿ ಹಣ ಬಿಡುಗಡೆ ಮಾಡಲು ₹13 ಸಾವಿರ ಲಂಚ ಸ್ವೀಕರಿಸುತ್ತಿದ್ದ ಮಹಾಲೆಕ್ಕ ಪರಿಶೋಧಕ ಕಚೇರಿಯ ಲೆಕ್ಕಾಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಇದು ಕೇಂದ್ರ ಸರ್ಕಾರಿ ಕಚೇರಿಯಲ್ಲೇ ಸಿಬ್ಬಂದಿಯನ್ನು ಲೋಕಾಯುಕ್ತರು ಬಂಧಿಸಿದ ಮೊದಲ ಪ್ರಕರಣವಾಗಿದೆ.
07:21 AM (IST) Jul 03
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ 'ಪ್ರಜಾಸೇವೆ' ಅಭಿಯಾನದ ಅಡಿಯಲ್ಲಿ, ಜಿಲ್ಲಾ ಸಚಿವರು ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರದಂದು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಬೇಕು. ಜನರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರವೇ ಅವರ ಮನೆ ಬಾಗಿಲಿಗೆ ಹೋಗುವ ಈ ಯೋಜನೆಗಾಗಿ ಪ್ರತ್ಯೇಕ ಸಚಿವಾಲ ಸಹ ರಚಿಸಿದೆ