LIVE NOW
Published : Jun 19, 2026, 07:29 AM ISTUpdated : Jun 19, 2026, 10:27 PM IST

State News Live: ಮ್ಯಾಟ್ರಿಮೋನಿ ಸೈಟ್​ನಲ್ಲಿ ಸಿಕ್ಕ 3 ಮದ್ವೆಯ ಸುಂದರಿ - ಬೆಂಗಳೂರು ಉದ್ಯಮಿಯ ವರಿಸಿ HIV ಬೆದರಿಕೆ ಹಾಕಿ ಲೂಟಿ

ಸಾರಾಂಶ

ಬೆಂಗಳೂರು (ಜೂ.19): ವಿಧಾನಪರಿಷತ್‌ ಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿಯ ಬರೋಬ್ಬರಿ 11 ಶಾಸಕರಿಂದ ಅಡ್ಡ ಮತದಾನವಾಗಿದೆ. ಇದರಿಂದಾಗಿ ಕಾಂಗ್ರೆಸ್‌ನ 7ನೇ ಅಭ್ಯರ್ಥಿ ವಿನಯ್‌ಗೆ ಹೆಚ್ಚುವೋಟ್‌ ಸಿಕ್ಕಿದೆ. ಅಡ್ಡ ಮತದಾನ ಮಾಡಿದ್ದು ಯಾರು ಅನ್ನೋದು ದೋಸ್ತಿ ಪಾಳಯದ ಚಿಂತೆಯಾಗಿದೆ. ಇದರೊಂದಿಗೆ ಕಾಂಗ್ರೆಸ್‌ ವಿಧಾನಪರಿಷತ್‌ ಚುನಾವಣೆಯಲ್ಲಿ 5ಕ್ಕೆ 5 ಸ್ಥಾನವನ್ನೂ ಗೆದ್ದುಕೊಂಡಿದ್ದರೆ,ಬಿಜೆಪಿ 2ಕ್ಕೆ 2 ಹಾಗೂ ಜೆಡಿಎಸ್‌ 1ಕ್ಕೆ 0 ಸೀಟು ಪಡೆದುಕೊಂಡಿದೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್‌ಡೇಟ್‌ ಇಲ್ಲಿದೆ.

 

10:27 PM (IST) Jun 19

ಮ್ಯಾಟ್ರಿಮೋನಿ ಸೈಟ್​ನಲ್ಲಿ ಸಿಕ್ಕ 3 ಮದ್ವೆಯ ಸುಂದರಿ - ಬೆಂಗಳೂರು ಉದ್ಯಮಿಯ ವರಿಸಿ HIV ಬೆದರಿಕೆ ಹಾಕಿ ಲೂಟಿ

ಮ್ಯಾಟ್ರಿಮೋನಿ ವೆಬ್‌ಸೈಟ್‌ನಲ್ಲಿ ಪರಿಚಯವಾದ ಮಹಿಳೆಯನ್ನು ಮದುವೆಯಾದ ಬೆಂಗಳೂರಿನ ಉದ್ಯಮಿಯೊಬ್ಬರು, ಆಕೆ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದು, ಈಗಾಗಲೇ ಮೂರು ಬಾರಿ ವಿವಾಹವಾಗಿದ್ದ ಸತ್ಯ ತಿಳಿದು ಆಘಾತಕ್ಕೊಳಗಾಗಿದ್ದಾರೆ. ಪತ್ನಿ ಮನೆಯಿಂದ 18 ಲಕ್ಷ ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದು, ಉದ್ಯಮಿ ಆಕೆಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ವಂಚನೆ, ಕಳ್ಳತನ ಮತ್ತು ಬೆದರಿಕೆ ಪ್ರಕರಣ ದಾಖಲಿಸಿದ್ದಾರೆ.
Read Full Story

10:17 PM (IST) Jun 19

ಪುರುಷ ಪ್ರಯಾಣಿಕರು ಏನಾದರು? ಶಕ್ತಿ ಯೋಜನೆಯ ಶಾಕಿಂಗ್ ಸತ್ಯ ಬಿಚ್ಚಿಟ್ಟ ಸಾರಿಗೆ ನಿಗಮ

ಶಕ್ತಿ ಯೋಜನೆ ಕುರಿತು ನಡೆದ ಮಹತ್ವದ ಸಭೆಯಲ್ಲಿ ಸಾರಿಗೆ ನಿಗಮಗಳು ಸ್ಫೋಟಕ ವರದಿ ನೀಡಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳು ವರದಿ ನೀಡಿದ್ದಾರೆ. ಅಷ್ಟಕ್ಕೂ ಈ ವರದಿಯಲ್ಲಿ ಏನಿದೆ?

 

Read Full Story

09:06 PM (IST) Jun 19

ಹೊಸಕೋಟೆಯಲ್ಲಿ ಭೀಕರ ಅಪಘಾತ - BMTC ಬಸ್ ಡಿಕ್ಕಿಗೆ ಒಂದೇ ಕುಟುಂಬದ ಮೂವರು ಸಾವು!

Hoskote ತಾಲ್ಲೂಕಿನ ಸೂಲಿಬೆಲೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬಿಎಂಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪ್ಪ, ಅಮ್ಮ ಹಾಗೂ ಮಗಳು ಸೇರಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Read Full Story

09:02 PM (IST) Jun 19

ಎಂಆರ್‌ಜಿ ಗ್ರೂಪ್ ಮಾಲೀಕ, ಮಂಗಳೂರು ಮೂಲದ ಉದ್ಯಮಿ ಪ್ರಕಾಶ್ ಶೆಟ್ಟಿಯಿಂದ ಐಷಾರಾಮಿ ಖಾಸಗಿ ಜೆಟ್ ಖರೀದಿ!

ಮಂಗಳೂರು ಮೂಲದ ಉದ್ಯಮಿ ,ಎಂಆರ್‌ಜಿ ಗ್ರೂಪ್‌ನ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ  'ಎಂಬ್ರೇಯರ್ ಲೆಗಸಿ 650' ಬಿಸಿನೆಸ್ ಜೆಟ್ ಅನ್ನು ಖರೀದಿಸಿದ್ದಾರೆ. ಈ ಅತ್ಯಾಧುನಿಕ ವಿಮಾನವನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಾಂಪ್ರದಾಯಿಕ ಪೂಜೆಯೊಂದಿಗೆ ಸ್ವಾಗತಿಸಲಾಯಿತು. 

Read Full Story

08:22 PM (IST) Jun 19

Photos - ಕೋಟಿ ಬೆಲೆಬಾಳೋ ಕೊಡಗಿನಲ್ಲಿರುವ ರಶ್ಮಿಕಾ ಕನಸಿನ ಮನೆ ಒಳಗೆ ಹೇಗಿದೆ - ಫೋಟೋಸ್ ವೈರಲ್!

Rashmika Mandanna ಅವರ ಐಷಾರಾಮಿ ಜೀವನಶೈಲಿ ಯಾವಾಗಲೂ ಗಮನ ಸೆಳೆಯುತ್ತದೆ. ಅವರ ಬೆರಗುಗೊಳಿಸುವ ಕೊಡಗಿನ ಮನೆಯಿಂದ ಹಿಡಿದು ಅದರ ಸುಂದರವಾದ ಒಳಾಂಗಣದವರೆಗೆ, 'ಕಾಕ್‌ಟೇಲ್ 2' ನಟಿಯ ಕನಸಿನ ಮನೆ, ಅದರ ಮೌಲ್ಯ ಮತ್ತು ಸೊಗಸಾದ ವಾಸದ ಸ್ಥಳದ ಬಗ್ಗೆ ಇಲ್ಲಿದೆ ಮಾಹಿತಿ.

Read Full Story

08:07 PM (IST) Jun 19

Bengaluru - ಲಿಂಗ ತಾರತಮ್ಯದ ಗೋಡೆ ಮುರಿದ ಯುವಕರು - ನರ್ಸಿಂಗ್ ರಂಗಕ್ಕೆ ಪುರುಷರು, ಐದೇ ವರ್ಷದಲ್ಲಿ 450% ಏರಿಕೆ!

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ನರ್ಸಿಂಗ್ ಕ್ಷೇತ್ರದಲ್ಲಿ ಪುರುಷರ ಸಂಖ್ಯೆ ಐದು ವರ್ಷಗಳಲ್ಲಿ ಶೇ. 450ರಷ್ಟು ಹೆಚ್ಚಾಗಿದೆ. ಜಾಗತಿಕ ಬೇಡಿಕೆ, ಉದ್ಯೋಗ ಭದ್ರತೆ, ಆಕರ್ಷಕ ವೇತನ ಮತ್ತು ಸುಲಭ ಪ್ರವೇಶಾವಕಾಶಗಳು ಈ ಐತಿಹಾಸಿಕ ಬದಲಾವಣೆಗೆ ಪ್ರಮುಖ ಕಾರಣಗಳಾಗಿವೆ.
Read Full Story

07:38 PM (IST) Jun 19

'ಇದು ಚೆನ್ನಾಗಿದೆ ಅಂತ ಗ್ಯಾರಂಟಿ ಏನು?' - Darshanಗೆ ಅದನ್ನ ತಿನ್ನಿಸಿದ್ದ ಘಟನೆ ನೆನೆದ ಓಂ ಪ್ರಕಾಶ್ ರಾವ್!

Ayya Movie ಶೂಟಿಂಗ್ ವೇಳೆ ನಟ ದರ್ಶನ್‌ಗೆ ಉಪ್ಪಿಟ್ಟು ಮಾಡಿ ತಿನ್ನಿಸಿದ್ದ ಕುತೂಹಲಕರ ಘಟನೆಯನ್ನು ನಿರ್ದೇಶಕ ಓಂ ಪ್ರಕಾಶ್ ರಾವ್ ಹಂಚಿಕೊಂಡಿದ್ದಾರೆ. ತಮ್ಮ ಮೊದಲ ಅಡುಗೆ ಪ್ರಯೋಗದ ಹಿಂದಿನ ಮಜವಾದ ಕಥೆಯನ್ನೂ ಅವರು ಬಹಿರಂಗಪಡಿಸಿದ್ದಾರೆ.

Read Full Story

07:08 PM (IST) Jun 19

ಕರ್ನಾಟಕದ ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ, ವಿಧಾನಸಭೆಯಲ್ಲಿ ಸಿಎಂ ವಿಜಯ್ ನಿರ್ಣಯಕ್ಕೆ ಸರ್ವಾನುಮತದ ಅಂಗೀಕಾರ!

ಕರ್ನಾಟಕದ ಮಹತ್ವಾಕಾಂಕ್ಷೆಯ ಮೇಕೆದಾಟು ಅಣೆಕಟ್ಟು ಯೋಜನೆಗೆ ತಮಿಳುನಾಡು ವಿಧಾನಸಭೆಯು ಸರ್ವಾನುಮತದಿಂದ ವಿರೋಧದ ನಿರ್ಣಯವನ್ನು ಅಂಗೀಕರಿಸಿದೆ. ಈ ಯೋಜನೆಯು ಸುಪ್ರೀಂ ಕೋರ್ಟ್ ತೀರ್ಪಿನ ಉಲ್ಲಂಘನೆಯಾಗಿದ್ದು, ಇದಕ್ಕೆ ಯಾವುದೇ ಅನುಮತಿ ನೀಡದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ. ಕರ್ನಾಟಕ ಸಲ್ಲಿಸಿರುವ ವಿವರವಾದ ಯೋಜನಾ ವರದಿಯನ್ನು (DPR) ಪರಿಶೀಲಿಸದಂತೆ ಕೇಂದ್ರ ಜಲ ಆಯೋಗಕ್ಕೂ ಮನವಿ ಮಾಡಲಾಗಿದೆ.
Read Full Story

06:11 PM (IST) Jun 19

ಬೆಂಗಳೂರಿನಲ್ಲಿ ಐಎಚ್‌ಸಿಎಲ್ ಮಹತ್ವದ ಹೆಜ್ಜೆ - ಯಶವಂತಪುರದಲ್ಲಿ ಹೈ-ಫೈ ಗೇಟ್‌ವೇ ಹೋಟೆಲ್ ಸ್ಥಾಪನೆಗೆ ಒಪ್ಪಂದ!

ಇಂಡಿಯನ್ ಹೋಟೆಲ್ಸ್ ಕಂಪನಿ ಲಿಮಿಟೆಡ್ (IHCL), ಬೆಂಗಳೂರಿನ ಯಶವಂತಪುರದಲ್ಲಿ ಹೊಸ 'ಗೇಟ್‌ವೇ' ಹೋಟೆಲ್ ಆರಂಭಿಸಲು ಆರ್.ಎನ್. ಶೆಟ್ಟಿ ಗ್ರೂಪ್‌ನ 'ನವೀನ್ ಹೋಟೆಲ್ಸ್' ಜೊತೆ ಒಪ್ಪಂದ ಮಾಡಿಕೊಂಡಿದೆ. ಈ ಬ್ರೌನ್‌ಫೀಲ್ಡ್ ಯೋಜನೆಯು 283 ಕೊಠಡಿಗಳು, ರೆಸ್ಟೋರೆಂಟ್‌ಗಳು, ಮತ್ತು ಬೃಹತ್ ಸಮಾವೇಶ ಸ್ಥಳವನ್ನು ಹೊಂದಿರಲಿದ್ದು, ಮುಂದಿನ ಎರಡು ವರ್ಷಗಳಲ್ಲಿ ಕಾರ್ಯಾರಂಭ ಮಾಡುವ ನಿರೀಕ್ಷೆಯಿದೆ.  

Read Full Story

05:21 PM (IST) Jun 19

ಸಾಕುಪ್ರಾಣಿಗಳಿಗೆ ರಾಜಾತಿಥ್ಯ - ಪ್ರಾಣಿಗಳ ಆರೈಕೆ, ಮುದ್ದಿಸುವಿಕೆಯಲ್ಲಿ ಬೆಂಗಳೂರಿಗರಿಗೇ ಪ್ರಥಮ ಸ್ಥಾನ!

ಸಾಕುಪ್ರಾಣಿಗಳ ಐಷಾರಾಮಿ ಆರೈಕೆ ಮತ್ತು ಸಂತೋಷಕ್ಕಾಗಿ ಅತಿ ಹೆಚ್ಚು ಖರ್ಚು ಮಾಡುವ ಮೂಲಕ ಬೆಂಗಳೂರು ಭಾರತದ 'ಪೆಟ್ ಕ್ಯಾಪಿಟಲ್' ಆಗಿ ಹೊರಹೊಮ್ಮಿದೆ. ದೇಶಾದ್ಯಂತ ಬೆಕ್ಕಿನ ಆಹಾರದ ಆರ್ಡರ್‌ಗಳು ಹೆಚ್ಚಿದ್ದರೂ, ಶ್ವಾನ ಪ್ರೇಮಿಗಳ ಸಂಖ್ಯೆಯಲ್ಲಿ ಬೆಂಗಳೂರು ಅಗ್ರಸ್ಥಾನದಲ್ಲಿದೆ 

Read Full Story

04:53 PM (IST) Jun 19

Rishab Shetty - 500 ಕೋಟಿ ಬಜೆಟ್‌, ಎರಡು ಭಾಗಗಳು - ರಿಷಬ್ ಚಿತ್ರದ ಬಗ್ಗೆ ಹೊರಬಿತ್ತು ಹೊಸ ಮಾಹಿತಿ!

Rishab Shetty ಅಭಿನಯದ ‘ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್’ ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ. ಸುಮಾರು 500 ಕೋಟಿ ರೂಪಾಯಿ ಬಜೆಟ್‌ನ ಈ ಐತಿಹಾಸಿಕ ಚಿತ್ರ 2028 ಮತ್ತು 2029ರಲ್ಲಿ ತೆರೆಗೆ ಬರಲಿದೆ ಎನ್ನಲಾಗಿದೆ.

Read Full Story

04:41 PM (IST) Jun 19

Bengaluru - ರಿಹ್ಯಾಬ್ ಸೆಂಟರ್ ಮಾಲೀಕನ ಭೀಕರ ಕೊಲೆ ಮಾಡಿದ ರೋಗಿಗಳು, ಕಾರು, ಬೈಕ್ ಕದ್ದು ಎಸ್ಕೇಪ್!

ಬೆಂಗಳೂರಿನ ಚಂದ್ರಾಲೇಔಟ್‌ನಲ್ಲಿರುವ 'ನ್ಯೂ ಲೈಫ್ ರಿಹ್ಯಾಬ್ ಸೆಂಟರ್' ಮಾಲೀಕ ಶಿವಲಿಂಗಯ್ಯ ಅವರನ್ನು, ಅಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಮಾಲೀಕರ ನಂಬಿಕೆ ಗಳಿಸಿ ಇನ್‌ಚಾರ್ಜ್ ಆಗಿದ್ದ ನಿತಿನ್ ಎಂಬಾತನೇ ಈ ಕೃತ್ಯದ ಪ್ರಮುಖ ಆರೋಪಿಯಾಗಿದ್ದು, ತನ್ನ ಗ್ಯಾಂಗ್ ಜೊತೆ ಸೇರಿ ಈ ಭೀಕರ ಹತ್ಯೆಗೈದು ಪರಾರಿಯಾಗಿದ್ದಾನೆ.
Read Full Story

04:11 PM (IST) Jun 19

Rachita Ram - ಮದುವೆ, ಪ್ರೀತಿ, ಡೈವೋರ್ಸ್ ಬಗ್ಗೆ ರಚಿತಾ ನೇರ ಮಾತು - 14 ವರ್ಷದ ಸಿನಿ ಪಯಣದ ಅನುಭವ ಹಂಚಿಕೆ

Rachita Ram: ರಕ್ಷಿತಾ, ರಮ್ಯಾ, ರಾಧಿಕಾ ಬಳಿಕ ಸ್ಯಾಂಡಲ್‌ವುಡ್ ಪ್ರವೇಶಿಸಿದ್ದ ‘ರ’ ಹೆಸರಿನ ಪ್ರತಿಭಾವಂತ ನಟಿ. ಮೊದಲ ಮೂವರೂ ಒಂದು ದಶಕ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. 14 ವರ್ಷಗಳಾದರೂ ರಚಿತಾ ಓಟ ಮುಂದುವರಿಕೆ. ಈ ಹಿನ್ನೆಲೆಯಲ್ಲಿ ಅವರ ಜತೆ ಮಾತುಕತೆ.

Read Full Story

03:46 PM (IST) Jun 19

ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್ - ಇಡೀ ಪ್ರಕರಣದಿಂದ ಹಿಂದೆ ಸರಿಯಲು ನಿರ್ಧರಿಸಿದ ದರ್ಶನ್ ಪರ ವಕೀಲ!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪರ ವಾದಿಸುತ್ತಿದ್ದ ವಕೀಲ ಎಸ್. ಸುನಿಲ್ ಕುಮಾರ್, ಪ್ರಕರಣದಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ಆರೋಪಿಗಳಿಂದ ಸರಿಯಾದ ಸಹಕಾರ ಸಿಗದ ಕಾರಣ ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಲಾಗಿದ್ದು, ಹೈಕೋರ್ಟ್‌ನಲ್ಲಿ ಈ ವಿಷಯ ತಿಳಿಸಿರುವ ಅವರು, ವಿಚಾರಣಾ ನ್ಯಾಯಾಲಯಕ್ಕೂ ಮಾಹಿತಿ ನೀಡುವ ಸಾಧ್ಯತೆಯಿದೆ.
Read Full Story

02:51 PM (IST) Jun 19

ನಾಲ್ಕೂವರೆ ವರ್ಷದಿಂದ ಯಾವುದೇ ಕಾರಿಡಾರ್‌ಗೆ ಸಿಗದ ಒಪ್ಪಿಗೆ, ಬೆಂಗಳೂರು ಮೆಟ್ರೋಗೆ ಗ್ರಹಣ

ಬೆಂಗಳೂರಿನ 'ನಮ್ಮ ಮೆಟ್ರೋ' ವಿಸ್ತರಣೆ ಯೋಜನೆಗಳು ತೀವ್ರ ವಿಳಂಬ ಎದುರಿಸುತ್ತಿವೆ. ಹಂತ-3 ಮತ್ತು ಹಂತ-3ಎ ಯೋಜನೆಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುಮೋದನೆ ಪ್ರಕ್ರಿಯೆಯಲ್ಲಿ ಸಿಲುಕಿದ್ದು, ಡಬಲ್ ಡೆಕ್ಕರ್ ಕಾರಿಡಾರ್‌ನಂತಹ ಹೊಸ ಪ್ರಸ್ತಾಪಗಳು ವಿಳಂಬಕ್ಕೆ ಮತ್ತಷ್ಟು ಕಾರಣವಾಗಿವೆ. 

Read Full Story

01:28 PM (IST) Jun 19

Bengaluru CID Inspector Robbery - ಎಂಥಾ ಸ್ಥಿತಿಗೆ ಬಂತು ಕರ್ನಾಟಕ, ಬೆಂಗಳೂರಲ್ಲಿ ಕಳ್ಳರಾದ ಪೊಲೀಸ್‌!

ಬೆಂಗಳೂರಿನಲ್ಲಿ ಸಿಐಡಿ ಇನ್ಸ್‌ಪೆಕ್ಟರ್ ಒಬ್ಬರು ಖಾಸಗಿ ವ್ಯಕ್ತಿಗಳೊಂದಿಗೆ ಸೇರಿ ಕೇರಳದ ಯುವಕರಿಂದ ₹20 ಲಕ್ಷ ದರೋಡೆ ಮಾಡಿದ್ದಾರೆ. ಈ ಕೃತ್ಯಕ್ಕೆ ಅಧಿಕೃತ ಸಿಐಡಿ ಜೀಪ್ ಬಳಸಲಾಗಿದ್ದು, ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದ್ದು, ಆರೋಪಿ ಇನ್ಸ್‌ಪೆಕ್ಟರ್ ತಲೆಮರೆಸಿಕೊಂಡಿದ್ದಾನೆ.
Read Full Story

01:16 PM (IST) Jun 19

Chikkamagaluru - ನಡುರಸ್ತೆಯಲ್ಲೇ ತಲ್ವಾರ್‌ನಿಂದ ಕೇಕ್ ಕಟ್! ವೈರಲ್ ವಿಡಿಯೋ ಬೆನ್ನಲ್ಲೇ ಯುವಕನ ವಿರುದ್ಧ FIR

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆಯಾ? ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಪುಡಿರೌಡಿಗಳು ಪುಂಡರನ್ನ ಹದ್ದುಬಸ್ತಿನಲ್ಲಿಡುತ್ತಾರೆ ಎಂಬ ಭರವಸೆಯಿಂದ ರಾಜ್ಯದ ಜನರು ಕಾದಿರುವಾಗಲೇ ಮತ್ತೊಂದು ಪುಂಡರ ಕೃತ್ಯ ನಡೆದುಹೋಗಿದೆ.

 

Read Full Story

12:49 PM (IST) Jun 19

ತವರು ಬಿಡ್ತಿದ್ದಾರೆ ಮಿಲಿಯನೇರ್, ಲಂಡನ್‌ - ಪ್ಯಾರಿಸ್ ಅಲ್ಲ ಈ ಎರಡು ದೇಶ ಎಲ್ಲರ ಫೆವರೆಟ್‌

ಈ ವರ್ಷ ವಿಶ್ವದಲ್ಲಿ ಮಿಲಿಯನೇರ್ಗಳು ಹೊಸ ದಾಖಲೆ ಸ್ಥಾಪಿಸಲಿದ್ದಾರೆ. ಹೆನ್ಲಿ ಖಾಸಗಿ ಸಂಪತ್ತು ವಲಸೆ ವರದಿ 2026 ರ ಪ್ರಕಾರ, ವಿಶ್ವದ ಸುಮಾರು 165,000 ಶ್ರೀಮಂತರು ತಮ್ಮ ತಾಯ್ನಾಡನ್ನು ತೊರೆದು ಇತರ ದೇಶಗಳಲ್ಲಿ ನೆಲೆಸುವ ಪ್ಲಾನ್ ಮಾಡಿದ್ದಾರೆ. ವಿಶೇಷ ಅಂದ್ರೆ ಮಿಲಿಯನೇರ್ ಗಳ ಫೆವರೆಟ್ ಜಾಗ ಬದಲಾಗಿದೆ. 

 

Read Full Story

12:44 PM (IST) Jun 19

ತಿರುಪತಿಗೆ ಹೋಗುವ ರಾಜ್ಯದ ಭಕ್ತರಿಗೆ ಗುಡ್‌ನ್ಯೂಸ್‌, KSTDC ಸುಪರ್ದಿಗೆ ಕರ್ನಾಟಕ ಭವನದ 350 ರೂಮ್‌!

ತಿರುಮಲದಲ್ಲಿರುವ ಕರ್ನಾಟಕ ಭವನದ 350 ಕೊಠಡಿಗಳ ನಿರ್ವಹಣೆಯನ್ನು ಮುಜರಾಯಿ ಇಲಾಖೆಯು ಕೆಎಸ್‌ಟಿಡಿಸಿಗೆ ಹಸ್ತಾಂತರಿಸಿದೆ. ಇದರಿಂದ ಕೆಎಸ್‌ಟಿಡಿಸಿ ಪ್ರವಾಸ ಪ್ಯಾಕೇಜ್ ಮೂಲಕ ಹೋಗುವ ಭಕ್ತರಿಗೆ ಉತ್ತಮ ವಸತಿ ಸೌಲಭ್ಯ ಸಿಗಲಿದ್ದು, ಬೆಂಗಳೂರಿನಿಂದ ವಿಶೇಷ ಪ್ಯಾಕೇಜ್ ಮೂಲಕ ಶೀಘ್ರ ದರ್ಶನವನ್ನೂ ಪಡೆಯಬಹುದು.

Read Full Story

12:20 PM (IST) Jun 19

ಬೆಂಗಳೂರು - ದಾರಿಹೋಕನ ಮೊಬೈಲ್ ಕದ್ದವರ ಗಾಡಿ ಮೇಲೆ ಮೂಟೆ ಹಾಕಿದ ಕಾರ್ಮಿಕ, ತಪ್ಪಿಸಿಕೊಳ್ಳಲು ಓಡಿ ಸುಸ್ತಾದ ಕಳ್ಳ ಸಾವು!

ಬೆಂಗಳೂರಿನ ಕಬ್ಬನ್‌ಪೇಟೆಯಲ್ಲಿ ಮೊಬೈಲ್ ಕಸಿದು ಪರಾರಿಯಾಗುತ್ತಿದ್ದ ಕಳ್ಳನಿಗೆ ಕಾರ್ಮಿಕನೊಬ್ಬ ಮೂಟೆ ಎಸೆದು ಅಡ್ಡಿಪಡಿಸಿದ್ದಾನೆ. ಇದರಿಂದ ಗಾಬರಿಗೊಂಡು ಓಡುವಾಗ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಕಳ್ಳ ಜುನೈದ್ ಹೃದಯಾಘಾತದಿಂದ ರಸ್ತೆಯಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಈ ವಿಲಕ್ಷಣ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Read Full Story

11:29 AM (IST) Jun 19

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಕುಮಟಾದಿಂದಲೇ ಸಿಗಲಿದೆ ನೇರ ರೈಲು - ಜೂನ್ 20 ರಂದು ಕಾಚಿಗುಡ ಎಕ್ಸ್‌ಪ್ರೆಸ್‌ಗೆ ಅದ್ಧೂರಿ ಚಾಲನೆ!

ಕುಮಟಾದಿಂದ ತಿರುಪತಿ ಸಂಪರ್ಕಿಸುವ ಕಾಚಿಗುಡ ರೈಲು ಸೇವೆ ಜೂ. 20 ರಂದು ಉದ್ಘಾಟನೆಗೊಳ್ಳಲಿದೆ. ಈ ಹೊಸ ರೈಲು ವಾರದಲ್ಲಿ ಎರಡು ದಿನ ಸಂಚರಿಸಲಿದ್ದು, ಕುಮಟಾ ರೈಲು ನಿಲ್ದಾಣದ 2ನೇ ಪ್ಲಾಟ್‌ಫಾರ್ಮ್‌ ಹಾಗೂ ಇತರ ಪ್ರಯಾಣಿಕ ಸೌಲಭ್ಯಗಳೂ ಲೋಕಾರ್ಪಣೆಗೊಳ್ಳಲಿವೆ. 

Read Full Story

11:12 AM (IST) Jun 19

ಬೆಂಗಳೂರು ಜಲಮಂಡಳಿಯ ಪ್ಲ್ಯಾಂಟ್ ಗೆ ಬಿದ್ದ ಇಂಜಿನಿಯರ್ ಸೇರಿ ಇಬ್ಬರ ಕಣ್ಮರೆ, ಮೃತದೇಹದ ಹುಡುಕಾಟ!

ಬೆಂಗಳೂರಿನ ವರ್ತೂರಿನಲ್ಲಿರುವ ಜಲಮಂಡಳಿ ತ್ಯಾಜ್ಯ ನೀರು ಸಂಸ್ಕರಣಾ ಘಟಕದಲ್ಲಿ (STP) ದುರಸ್ತಿ ಕಾರ್ಯದ ವೇಳೆ ಇಂಜಿನಿಯರ್ ಸೇರಿದಂತೆ ಇಬ್ಬರು ಆಯತಪ್ಪಿ ಟ್ಯಾಂಕ್‌ಗೆ ಬಿದ್ದು ನಾಪತ್ತೆಯಾಗಿದ್ದಾರೆ. ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎನ್ನಲಾಗಿದ್ದು, ಎನ್‌ಡಿಆರ್‌ಎಫ್ ತಂಡದಿಂದ ಶೋಧ ಕಾರ್ಯ ಮುಂದುವರೆದಿದೆ.
Read Full Story

11:05 AM (IST) Jun 19

ಬೆಳಗಾವಿ ಪರ ಗೊತ್ತುವಳಿ ನಿರ್ಧಾರದಿಂದ ದೂರುಳಿಯಿತೇ ಪಾಲಿಕೆ? ಹೊಸ ಚರ್ಚೆ ಹುಟ್ಟುಹಾಕಿದ ಮೇಯರ್ ಪತ್ರ !

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ನಿರ್ಣಯವನ್ನು ಪಾಲಿಕೆ ಸಭೆಯಲ್ಲಿ ಅಂಗೀಕರಿಸಲು ಕನ್ನಡಪರ ಸಂಘಟನೆಗಳು ಹೋರಾಟ ನಡೆಸುತ್ತಿವೆ. ಆದರೆ, ಮೇಯರ್ ಅವರು ಕಾನೂನು ಅಭಿಪ್ರಾಯ ಕೇಳಿ ಸರ್ಕಾರಕ್ಕೆ ಪತ್ರ ಬರೆದಿದ್ದು, ನ್ಯಾಯಾಲಯದ ಪ್ರಕರಣವನ್ನು ಉಲ್ಲೇಖಿಸಿರುವುದು ಹೊಸ ಚರ್ಚೆ ಮತ್ತು ವಿಳಂಬಕ್ಕೆ ಕಾರಣವಾಗಿದೆ.
Read Full Story

10:33 AM (IST) Jun 19

ಬೆಂಗಳೂರು-ಹೊನ್ನಾವರ ರಸ್ತೆಗಾಗಿ 30 ಎಕರೆ ಸ್ವಾಧೀನಕ್ಕೆ ಹೈಕೋರ್ಟ್‌ ಅಸ್ತು

ಬೆಂಗಳೂರು-ಹೊನ್ನಾವರ ರಸ್ತೆ ಅಭಿವೃದ್ಧಿಗಾಗಿ ಸ್ವಾಧೀನಪಡಿಸಿಕೊಂಡಿದ್ದ 30 ಎಕರೆ ಭೂಮಿಗೆ ಸಂಬಂಧಿಸಿದಂತೆ 14 ವರ್ಷಗಳ ಹಿಂದೆ ಏಕಸದಸ್ಯ ಪೀಠ ನೀಡಿದ್ದ ರದ್ದತಿ ಆದೇಶವನ್ನು ಹೈಕೋರ್ಟ್ ವಿಭಾಗೀಯ ಪೀಠ ಇದೀಗ ವಜಾಗೊಳಿಸಿದೆ. 

Read Full Story

10:32 AM (IST) Jun 19

ಭಟ್ಕಳ - 'ನಿನ್ನ ಬಳಿ ಮಾತಾಭಡೋದಿದೆ ಬಾ..' ಯುವತಿಗೆ ನಂಬಿಸಿ ಕಾರಿನಲ್ಲಿ ಕರೆದೊಯ್ದು ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ಭಟ್ಕಳದ ಸೂಪರ್ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದ ಹಿಂದೂ ಯುವತಿಯನ್ನು ಒತ್ತಾಯಪೂರ್ವಕವಾಗಿ ಕಾರಿನಲ್ಲಿ ಕರೆದೊಯ್ದ ಆರೋಪದ ಮೇಲೆ ಸಹೋದ್ಯೋಗಿ ಮುಸ್ಲಿಂ ಯುವಕ ಶಾಹೀದ್ ಖಾನ್‌ನನ್ನು ಯುವತಿಯ ದೂರಿನ ಆಧಾರದ ಮೇಲೆ ಕ್ರಮ ಕೈಗೊಂಡಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Read Full Story

10:04 AM (IST) Jun 19

ಪಡಿತರ ಚೀಟಿದಾರರಿಗೆ ಭರ್ಜರಿ ಸಿಹಿ ಸುದ್ದಿ - 3 ಕೋಟಿ ಹೊಸ ರೇಷನ್ ಕಾರ್ಡ್ ನೀಡಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್!

ರಾಜ್ಯ ಸರ್ಕಾರಗಳು 2.21 ಕೋಟಿ ಅನರ್ಹ ಪಡಿತರ ಚೀಟಿಗಳನ್ನು ತೆಗೆದುಹಾಕುತ್ತಿದ್ದು, ಇದರ ಬೆನ್ನಲ್ಲೇ ಕೇಂದ್ರ ಸರ್ಕಾರವು ಅರ್ಹ ಫಲಾನುಭವಿಗಳಿಗೆ ಸುಮಾರು 3 ಕೋಟಿ ಹೊಸ ಪಡಿತರ ಚೀಟಿಗಳನ್ನು ವಿತರಿಸಲು ಅನುಮತಿ ನೀಡಿದೆ. ಪಿಡಿಎಸ್ ವ್ಯವಸ್ಥೆಯ ಡಿಜಿಟಲೀಕರಣದಿಂದಾಗಿ ಈ ಕ್ರಮ ಸಾಧ್ಯವಾಗಿದೆ.

Read Full Story

08:07 AM (IST) Jun 19

ವಿಧಾನಪರಿಷತ್‌ ಚುನಾವಣೆ - ಕೈಗೆ ಹೆಚ್ಚುವರಿ, ದೋಸ್ತಿಗೆ ಹೆಚ್ಚು 'ವರಿ'!

ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ, ಕಾಂಗ್ರೆಸ್ 5 ಸ್ಥಾನಗಳನ್ನು ಗೆದ್ದು ಭರ್ಜರಿ ಜಯ ಸಾಧಿಸಿದೆ. ವಿರೋಧ ಪಕ್ಷಗಳ 11 ಶಾಸಕರ ಅಡ್ಡ ಮತದಾನದಿಂದಾಗಿ ಬಿಜೆಪಿ-ಜೆಡಿಎಸ್‌ ತೀವ್ರ ಮುಖಭಂಗ ಅನುಭವಿಸಿದ್ದು, ಈ ಅಡ್ಡ ಮತಗಳ ಲಾಭದಿಂದ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
Read Full Story

08:01 AM (IST) Jun 19

ಮೇಲುಕೋಟೆ ದೇಗುಲದಲ್ಲಿ ಕಳ್ಳತನ - ಯೋಗನರಸಿಂಹಸ್ವಾಮಿ ಬೆಟ್ಟದ ಅರ್ಚಕ ಸೇರಿ 6 ಮಂದಿ ಅಮಾನತ್ತು

ಮೇಲುಕೋಟೆಯ ಯೋಗನರಸಿಂಹಸ್ವಾಮಿ ಬೆಟ್ಟದ ದೇಗುಲದಲ್ಲಿ ಕಳ್ಳತನ ಆರೋಪದ ಮೇಲೆ ಅರ್ಚಕ ಎಸ್. ನಾರಾಯಣಭಟ್ಟ ಸೇರಿದಂತೆ ಆರು ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಎಲ್ಲರನ್ನೂ ಅಮಾನತುಗೊಳಿಸಿ ಆದೇಶ.

Read Full Story

07:33 AM (IST) Jun 19

Heart attack: ಕಾಲೇಜಲ್ಲಿ ಎರಡು ಬಾರಿ ಕುಸಿದುಬಿದ್ದ ಪಿಯು ವಿದ್ಯಾರ್ಥಿ ಹೃದಯಾಘಾತದಿಂದ ಸಾವು!

ಮೈಸೂರಿನ ಮರಿಮಲ್ಲಪ್ಪ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿಗೆ ಕಾಲೇಜಿನ ಆವರಣದಲ್ಲೇ ಹೃದಯಾಘಾತ(heart attack) ಸಂಭವಿಸಿ ಎರಡು ಬಾರಿ ಕುಸಿದು ಬಿದ್ದು, ನಂತರ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಗುರುವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.

 

Read Full Story

07:33 AM (IST) Jun 19

ಯೋಗೀಶ್ ಗೌಡ ಕೊಲೆ ಪ್ರಕರಣ: ನಕಲಿ ಸಾಕ್ಷ್ಯ ಸೃಷ್ಟಿಸಿ 7 ವರ್ಷ ಜೈಲು ಶಿಕ್ಷೆಗೊಳಗಾದ ಇನ್ಸ್‌ಪೆಕ್ಟರ್ ಟಿಂಗರೀಕರ್‌ಗೆ ಬೇಲ್ ಸಿಗುತ್ತಾ?

ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ನಕಲಿ ಸಾಕ್ಷಿ ಸೃಷ್ಟಿಸಿದ ಆರೋಪದ ಮೇಲೆ ಶಿಕ್ಷೆಗೊಳಗಾಗಿರುವ ಇನ್ಸ್‌ಪೆಕ್ಟರ್‌ ಚನ್ನಕೇಶವ ಟಿಂಗರೀಕರ್‌ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಾಲಯವು ತನ್ನ ತೀರ್ಪನ್ನು ಕಾಯ್ದಿರಿಸಿದೆ.

 

Read Full Story

07:33 AM (IST) Jun 19

Interview: ಬಿಜೆಪಿ ರಾಜ್ಯಾಧ್ಯಕ್ಷ ಗೊಂದಲಕ್ಕೆ ಯಾವುದೇ ಕ್ಷಣ ವರಿಷ್ಠರಿಂದ ಪರಿಹಾರ: ರಾಧಾಮೋಹನ

ರಾಜ್ಯ ಬಿಜೆಪಿಯಲ್ಲಿನ ನಾಯಕತ್ವದ ಗೊಂದಲ, ನಿರ್ಧಾರ ವಿಳಂಬ ಮತ್ತು ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್ ಮಾತನಾಡಿದ್ದಾರೆ. ರಾಜ್ಯಾಧ್ಯಕ್ಷರ ಕುರಿತು ಶೀಘ್ರದಲ್ಲೇ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ, ಪಕ್ಷದ ಆಂತರಿಕ ಕಾರ್ಯವೈಖರಿ ಸಮರ್ಥಿಸಿಕೊಂಡಿದ್ದಾರೆ.

 

Read Full Story

07:32 AM (IST) Jun 19

20 ವರ್ಷಗಳಿಂದ ಭೂ ಪರಿಹಾರ ನೀಡದ ನೌಕರನಿಗೆ ಚಪ್ಪಲಿ ಏಟು; ರೈತನ ಪರ ನಿಂತ ಲೋಕಾಯುಕ್ತ, ಸುಮೊಟೊ ಕೇಸ್ ದಾಖಲು

20 ವರ್ಷಗಳಿಂದ ಭೂ ಪರಿಹಾರ ಸಿಗದ ಕಾರಣ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ನೌಕರನಿಗೆ ಚಪ್ಪಲಿ ಏಟು ನೀಡಿದ್ದ ರೈತ ಬಸಪ್ಪ ದೊಡ್ಡಮನಿ ಪರವಾಗಿ ಲೋಕಾಯುಕ್ತರು ಸುಮೊಟೊ ಕೇಸ್ ದಾಖಲಿಸಿಕೊಂಡಿದ್ದಾರೆ. ಮಾಧ್ಯಮ ವರದಿ ಆಧರಿಸಿ ಈ ಕ್ರಮ ಕೈಗೊಂಡಿದ್ದು, ಸಂಬಂಧಿತ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.

 

07:32 AM (IST) Jun 19

Daily Horoscope: ಇಂದು ಮೃತ್ಯು ಯೋಗ, 12 ರಾಶಿಗಳ ಮೇಲೆ ಗ್ರಹಣ ಯೋಗದ ಪ್ರಭಾವ ಹೀಗಿದೆ

ಜೂನ್ 19ರಂದು ಯಾವೆಲ್ಲಾ ಶುಭ-ಅಶುಭ ಯೋಗಗಳು ರೂಪುಗೊಳ್ಳಲಿವೆ? ಅಂದು ಯಾವ ಗ್ರಹ ರಾಶಿ ಬದಲಿಸಲಿದೆ? ಜೂನ್ 19ರಂದು ಯಾವ ರಾಶಿಯಲ್ಲಿ 'ಗ್ರಹಣ' ಎಂಬ ಅಶುಭ ಯೋಗ ಉಂಟಾಗಲಿದೆ? ಇಲ್ಲಿದೆ ಮಾಹಿತಿ.

 

Read Full Story

07:32 AM (IST) Jun 19

RBI: ಗೋಕಾಕ ಮಹಾಲಕ್ಷ್ಮಿ ಬ್ಯಾಂಕ್‌ ಲೈಸೆನ್ಸ್‌ ರದ್ದು, ದಿವಾಳಿಗೆ ಕಾರಣವೇನು? ನಿಮ್ಮ ಹಣ ಮರಳಿ ಬರುತ್ತಾ?

ಆರ್ಥಿಕ ಸ್ಥಿತಿ ಹದಗೆಟ್ಟ ಕಾರಣ ಆರ್‌ಬಿಐ, ಬೆಳಗಾವಿ ಜಿಲ್ಲೆಯ ಗೋಕಾಕ ಮೂಲದ ಶ್ರೀ ಮಹಾಲಕ್ಷ್ಮಿ ಅರ್ಬನ್ ಕೋ-ಆಪರೇಟಿವ್ ಕ್ರೆಡಿಟ್ ಬ್ಯಾಂಕಿನ ಪರವಾನಗಿಯನ್ನು ರದ್ದುಗೊಳಿಸಿದೆ. ಬ್ಯಾಂಕಿನ ವ್ಯವಹಾರವನ್ನು ನಿಷೇಧಿಸಲಾಗಿದೆ

 

Read Full Story

07:31 AM (IST) Jun 19

ಟ್ರಾಫಿಕ್ ಫೈನ್ ಕಟ್ಟಲು ಸುವರ್ಣಾವಕಾಶ!12 ಕಡೆ ವಿಶೇಷ ಕೌಂಟರ್‌ಗಳು ಆರಂಭ; ಎಲ್ಲೆಲ್ಲಿ ತೆರೆಯಲಿವೆ? ಕೊನೆಯ ದಿನಾಂಕ ಯಾವಾಗ?

ಬೆಂಗಳೂರಿನಲ್ಲಿ ಹಳೆಯ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಸರ್ಕಾರವು ಶೇ.50ರಷ್ಟು ರಿಯಾಯಿತಿ ಘೋಷಿಸಿದೆ. ಈ ಅವಕಾಶ ಜೂ.21 ರಿಂದ ಜು.10 ರವರೆಗೆ ಲಭ್ಯವಿದ್ದು, ನಗರದ 12 ಕಡೆ ವಿಶೇಷ ಕೌಂಟರ್‌ಗಳನ್ನು ತೆರೆಯಲಾಗಿದೆ ಹಾಗೂ ವಿವಿಧ ಆ್ಯಪ್‌ಗಳ ಮೂಲಕವೂ ದಂಡ ಪಾವತಿಸಬಹುದು.

 

Read Full Story

07:31 AM (IST) Jun 19

ಡಿಕೆ ಸರ್ಕಾರದಲ್ಲಿ ಮಹತ್ವದ ಬದಲಾವಣೆ: 13 ಮಂದಿ ಐಎಎಸ್‌ ಅಧಿಕಾರಿಗಳ ವರ್ಗ, ಕೆಲವರಿಗೆ ಹೆಚ್ಚುವರಿ ಹೊಣೆ

ಕರ್ನಾಟಕ ಸರ್ಕಾರವು ಡಿ.ರಂದೀಪ್‌, ತುಳಸಿ ಮದ್ದಿನೇನಿ ಸೇರಿದಂತೆ ಹದಿಮೂರು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ವರ್ಗಾವಣೆಯಲ್ಲಿ ಹಲವು ಅಧಿಕಾರಿಗಳಿಗೆ ಹೊಸ ಹುದ್ದೆಗಳನ್ನು ನೀಡಲಾಗಿದ್ದು, ಕೆಲವರಿಗೆ ಹೆಚ್ಚುವರಿ ಜವಾಬ್ದಾರಿಗಳನ್ನು ವಹಿಸಲಾಗಿದೆ.

 

Read Full Story

More Trending News