ಬೆಂಗಳೂರು (ಜೂ.19): ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿಯ ಬರೋಬ್ಬರಿ 11 ಶಾಸಕರಿಂದ ಅಡ್ಡ ಮತದಾನವಾಗಿದೆ. ಇದರಿಂದಾಗಿ ಕಾಂಗ್ರೆಸ್ನ 7ನೇ ಅಭ್ಯರ್ಥಿ ವಿನಯ್ಗೆ ಹೆಚ್ಚುವೋಟ್ ಸಿಕ್ಕಿದೆ. ಅಡ್ಡ ಮತದಾನ ಮಾಡಿದ್ದು ಯಾರು ಅನ್ನೋದು ದೋಸ್ತಿ ಪಾಳಯದ ಚಿಂತೆಯಾಗಿದೆ. ಇದರೊಂದಿಗೆ ಕಾಂಗ್ರೆಸ್ ವಿಧಾನಪರಿಷತ್ ಚುನಾವಣೆಯಲ್ಲಿ 5ಕ್ಕೆ 5 ಸ್ಥಾನವನ್ನೂ ಗೆದ್ದುಕೊಂಡಿದ್ದರೆ,ಬಿಜೆಪಿ 2ಕ್ಕೆ 2 ಹಾಗೂ ಜೆಡಿಎಸ್ 1ಕ್ಕೆ 0 ಸೀಟು ಪಡೆದುಕೊಂಡಿದೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್ಡೇಟ್ ಇಲ್ಲಿದೆ.
11:29 AM (IST) Jun 19
ಕುಮಟಾದಿಂದ ತಿರುಪತಿ ಸಂಪರ್ಕಿಸುವ ಕಾಚಿಗುಡ ರೈಲು ಸೇವೆ ಜೂ. 20 ರಂದು ಉದ್ಘಾಟನೆಗೊಳ್ಳಲಿದೆ. ಈ ಹೊಸ ರೈಲು ವಾರದಲ್ಲಿ ಎರಡು ದಿನ ಸಂಚರಿಸಲಿದ್ದು, ಕುಮಟಾ ರೈಲು ನಿಲ್ದಾಣದ 2ನೇ ಪ್ಲಾಟ್ಫಾರ್ಮ್ ಹಾಗೂ ಇತರ ಪ್ರಯಾಣಿಕ ಸೌಲಭ್ಯಗಳೂ ಲೋಕಾರ್ಪಣೆಗೊಳ್ಳಲಿವೆ.
11:12 AM (IST) Jun 19
11:05 AM (IST) Jun 19
10:33 AM (IST) Jun 19
ಬೆಂಗಳೂರು-ಹೊನ್ನಾವರ ರಸ್ತೆ ಅಭಿವೃದ್ಧಿಗಾಗಿ ಸ್ವಾಧೀನಪಡಿಸಿಕೊಂಡಿದ್ದ 30 ಎಕರೆ ಭೂಮಿಗೆ ಸಂಬಂಧಿಸಿದಂತೆ 14 ವರ್ಷಗಳ ಹಿಂದೆ ಏಕಸದಸ್ಯ ಪೀಠ ನೀಡಿದ್ದ ರದ್ದತಿ ಆದೇಶವನ್ನು ಹೈಕೋರ್ಟ್ ವಿಭಾಗೀಯ ಪೀಠ ಇದೀಗ ವಜಾಗೊಳಿಸಿದೆ.
10:32 AM (IST) Jun 19
ಭಟ್ಕಳದ ಸೂಪರ್ ಮಾರ್ಕೆಟ್ನಲ್ಲಿ ಕೆಲಸ ಮಾಡುತ್ತಿದ್ದ ಹಿಂದೂ ಯುವತಿಯನ್ನು ಒತ್ತಾಯಪೂರ್ವಕವಾಗಿ ಕಾರಿನಲ್ಲಿ ಕರೆದೊಯ್ದ ಆರೋಪದ ಮೇಲೆ ಸಹೋದ್ಯೋಗಿ ಮುಸ್ಲಿಂ ಯುವಕ ಶಾಹೀದ್ ಖಾನ್ನನ್ನು ಯುವತಿಯ ದೂರಿನ ಆಧಾರದ ಮೇಲೆ ಕ್ರಮ ಕೈಗೊಂಡಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
10:04 AM (IST) Jun 19
ರಾಜ್ಯ ಸರ್ಕಾರಗಳು 2.21 ಕೋಟಿ ಅನರ್ಹ ಪಡಿತರ ಚೀಟಿಗಳನ್ನು ತೆಗೆದುಹಾಕುತ್ತಿದ್ದು, ಇದರ ಬೆನ್ನಲ್ಲೇ ಕೇಂದ್ರ ಸರ್ಕಾರವು ಅರ್ಹ ಫಲಾನುಭವಿಗಳಿಗೆ ಸುಮಾರು 3 ಕೋಟಿ ಹೊಸ ಪಡಿತರ ಚೀಟಿಗಳನ್ನು ವಿತರಿಸಲು ಅನುಮತಿ ನೀಡಿದೆ. ಪಿಡಿಎಸ್ ವ್ಯವಸ್ಥೆಯ ಡಿಜಿಟಲೀಕರಣದಿಂದಾಗಿ ಈ ಕ್ರಮ ಸಾಧ್ಯವಾಗಿದೆ.
08:07 AM (IST) Jun 19
08:01 AM (IST) Jun 19
ಮೇಲುಕೋಟೆಯ ಯೋಗನರಸಿಂಹಸ್ವಾಮಿ ಬೆಟ್ಟದ ದೇಗುಲದಲ್ಲಿ ಕಳ್ಳತನ ಆರೋಪದ ಮೇಲೆ ಅರ್ಚಕ ಎಸ್. ನಾರಾಯಣಭಟ್ಟ ಸೇರಿದಂತೆ ಆರು ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಎಲ್ಲರನ್ನೂ ಅಮಾನತುಗೊಳಿಸಿ ಆದೇಶ.
07:33 AM (IST) Jun 19
ಮೈಸೂರಿನ ಮರಿಮಲ್ಲಪ್ಪ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿಗೆ ಕಾಲೇಜಿನ ಆವರಣದಲ್ಲೇ ಹೃದಯಾಘಾತ(heart attack) ಸಂಭವಿಸಿ ಎರಡು ಬಾರಿ ಕುಸಿದು ಬಿದ್ದು, ನಂತರ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಗುರುವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.
07:33 AM (IST) Jun 19
ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ನಕಲಿ ಸಾಕ್ಷಿ ಸೃಷ್ಟಿಸಿದ ಆರೋಪದ ಮೇಲೆ ಶಿಕ್ಷೆಗೊಳಗಾಗಿರುವ ಇನ್ಸ್ಪೆಕ್ಟರ್ ಚನ್ನಕೇಶವ ಟಿಂಗರೀಕರ್ ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಾಲಯವು ತನ್ನ ತೀರ್ಪನ್ನು ಕಾಯ್ದಿರಿಸಿದೆ.
07:33 AM (IST) Jun 19
ರಾಜ್ಯ ಬಿಜೆಪಿಯಲ್ಲಿನ ನಾಯಕತ್ವದ ಗೊಂದಲ, ನಿರ್ಧಾರ ವಿಳಂಬ ಮತ್ತು ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಮಾತನಾಡಿದ್ದಾರೆ. ರಾಜ್ಯಾಧ್ಯಕ್ಷರ ಕುರಿತು ಶೀಘ್ರದಲ್ಲೇ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ, ಪಕ್ಷದ ಆಂತರಿಕ ಕಾರ್ಯವೈಖರಿ ಸಮರ್ಥಿಸಿಕೊಂಡಿದ್ದಾರೆ.
07:32 AM (IST) Jun 19
20 ವರ್ಷಗಳಿಂದ ಭೂ ಪರಿಹಾರ ಸಿಗದ ಕಾರಣ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ನೌಕರನಿಗೆ ಚಪ್ಪಲಿ ಏಟು ನೀಡಿದ್ದ ರೈತ ಬಸಪ್ಪ ದೊಡ್ಡಮನಿ ಪರವಾಗಿ ಲೋಕಾಯುಕ್ತರು ಸುಮೊಟೊ ಕೇಸ್ ದಾಖಲಿಸಿಕೊಂಡಿದ್ದಾರೆ. ಮಾಧ್ಯಮ ವರದಿ ಆಧರಿಸಿ ಈ ಕ್ರಮ ಕೈಗೊಂಡಿದ್ದು, ಸಂಬಂಧಿತ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.
07:32 AM (IST) Jun 19
ಜೂನ್ 19ರಂದು ಯಾವೆಲ್ಲಾ ಶುಭ-ಅಶುಭ ಯೋಗಗಳು ರೂಪುಗೊಳ್ಳಲಿವೆ? ಅಂದು ಯಾವ ಗ್ರಹ ರಾಶಿ ಬದಲಿಸಲಿದೆ? ಜೂನ್ 19ರಂದು ಯಾವ ರಾಶಿಯಲ್ಲಿ 'ಗ್ರಹಣ' ಎಂಬ ಅಶುಭ ಯೋಗ ಉಂಟಾಗಲಿದೆ? ಇಲ್ಲಿದೆ ಮಾಹಿತಿ.
07:32 AM (IST) Jun 19
ಆರ್ಥಿಕ ಸ್ಥಿತಿ ಹದಗೆಟ್ಟ ಕಾರಣ ಆರ್ಬಿಐ, ಬೆಳಗಾವಿ ಜಿಲ್ಲೆಯ ಗೋಕಾಕ ಮೂಲದ ಶ್ರೀ ಮಹಾಲಕ್ಷ್ಮಿ ಅರ್ಬನ್ ಕೋ-ಆಪರೇಟಿವ್ ಕ್ರೆಡಿಟ್ ಬ್ಯಾಂಕಿನ ಪರವಾನಗಿಯನ್ನು ರದ್ದುಗೊಳಿಸಿದೆ. ಬ್ಯಾಂಕಿನ ವ್ಯವಹಾರವನ್ನು ನಿಷೇಧಿಸಲಾಗಿದೆ
07:31 AM (IST) Jun 19
ಬೆಂಗಳೂರಿನಲ್ಲಿ ಹಳೆಯ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಸರ್ಕಾರವು ಶೇ.50ರಷ್ಟು ರಿಯಾಯಿತಿ ಘೋಷಿಸಿದೆ. ಈ ಅವಕಾಶ ಜೂ.21 ರಿಂದ ಜು.10 ರವರೆಗೆ ಲಭ್ಯವಿದ್ದು, ನಗರದ 12 ಕಡೆ ವಿಶೇಷ ಕೌಂಟರ್ಗಳನ್ನು ತೆರೆಯಲಾಗಿದೆ ಹಾಗೂ ವಿವಿಧ ಆ್ಯಪ್ಗಳ ಮೂಲಕವೂ ದಂಡ ಪಾವತಿಸಬಹುದು.
07:31 AM (IST) Jun 19
ಕರ್ನಾಟಕ ಸರ್ಕಾರವು ಡಿ.ರಂದೀಪ್, ತುಳಸಿ ಮದ್ದಿನೇನಿ ಸೇರಿದಂತೆ ಹದಿಮೂರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ವರ್ಗಾವಣೆಯಲ್ಲಿ ಹಲವು ಅಧಿಕಾರಿಗಳಿಗೆ ಹೊಸ ಹುದ್ದೆಗಳನ್ನು ನೀಡಲಾಗಿದ್ದು, ಕೆಲವರಿಗೆ ಹೆಚ್ಚುವರಿ ಜವಾಬ್ದಾರಿಗಳನ್ನು ವಹಿಸಲಾಗಿದೆ.