LIVE NOW
Published : Jun 19, 2026, 07:29 AM ISTUpdated : Jun 19, 2026, 11:29 AM IST

State News Live: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಕುಮಟಾದಿಂದಲೇ ಸಿಗಲಿದೆ ನೇರ ರೈಲು - ಜೂನ್ 20 ರಂದು ಕಾಚಿಗುಡ ಎಕ್ಸ್‌ಪ್ರೆಸ್‌ಗೆ ಅದ್ಧೂರಿ ಚಾಲನೆ!

ಸಾರಾಂಶ

ಬೆಂಗಳೂರು (ಜೂ.19): ವಿಧಾನಪರಿಷತ್‌ ಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿಯ ಬರೋಬ್ಬರಿ 11 ಶಾಸಕರಿಂದ ಅಡ್ಡ ಮತದಾನವಾಗಿದೆ. ಇದರಿಂದಾಗಿ ಕಾಂಗ್ರೆಸ್‌ನ 7ನೇ ಅಭ್ಯರ್ಥಿ ವಿನಯ್‌ಗೆ ಹೆಚ್ಚುವೋಟ್‌ ಸಿಕ್ಕಿದೆ. ಅಡ್ಡ ಮತದಾನ ಮಾಡಿದ್ದು ಯಾರು ಅನ್ನೋದು ದೋಸ್ತಿ ಪಾಳಯದ ಚಿಂತೆಯಾಗಿದೆ. ಇದರೊಂದಿಗೆ ಕಾಂಗ್ರೆಸ್‌ ವಿಧಾನಪರಿಷತ್‌ ಚುನಾವಣೆಯಲ್ಲಿ 5ಕ್ಕೆ 5 ಸ್ಥಾನವನ್ನೂ ಗೆದ್ದುಕೊಂಡಿದ್ದರೆ,ಬಿಜೆಪಿ 2ಕ್ಕೆ 2 ಹಾಗೂ ಜೆಡಿಎಸ್‌ 1ಕ್ಕೆ 0 ಸೀಟು ಪಡೆದುಕೊಂಡಿದೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್‌ಡೇಟ್‌ ಇಲ್ಲಿದೆ.

 

11:29 AM (IST) Jun 19

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಕುಮಟಾದಿಂದಲೇ ಸಿಗಲಿದೆ ನೇರ ರೈಲು - ಜೂನ್ 20 ರಂದು ಕಾಚಿಗುಡ ಎಕ್ಸ್‌ಪ್ರೆಸ್‌ಗೆ ಅದ್ಧೂರಿ ಚಾಲನೆ!

ಕುಮಟಾದಿಂದ ತಿರುಪತಿ ಸಂಪರ್ಕಿಸುವ ಕಾಚಿಗುಡ ರೈಲು ಸೇವೆ ಜೂ. 20 ರಂದು ಉದ್ಘಾಟನೆಗೊಳ್ಳಲಿದೆ. ಈ ಹೊಸ ರೈಲು ವಾರದಲ್ಲಿ ಎರಡು ದಿನ ಸಂಚರಿಸಲಿದ್ದು, ಕುಮಟಾ ರೈಲು ನಿಲ್ದಾಣದ 2ನೇ ಪ್ಲಾಟ್‌ಫಾರ್ಮ್‌ ಹಾಗೂ ಇತರ ಪ್ರಯಾಣಿಕ ಸೌಲಭ್ಯಗಳೂ ಲೋಕಾರ್ಪಣೆಗೊಳ್ಳಲಿವೆ. 

Read Full Story

11:12 AM (IST) Jun 19

ಬೆಂಗಳೂರು ಜಲಮಂಡಳಿಯ ಪ್ಲ್ಯಾಂಟ್ ಗೆ ಬಿದ್ದ ಇಂಜಿನಿಯರ್ ಸೇರಿ ಇಬ್ಬರ ಕಣ್ಮರೆ, ಮೃತದೇಹದ ಹುಡುಕಾಟ!

ಬೆಂಗಳೂರಿನ ವರ್ತೂರಿನಲ್ಲಿರುವ ಜಲಮಂಡಳಿ ತ್ಯಾಜ್ಯ ನೀರು ಸಂಸ್ಕರಣಾ ಘಟಕದಲ್ಲಿ (STP) ದುರಸ್ತಿ ಕಾರ್ಯದ ವೇಳೆ ಇಂಜಿನಿಯರ್ ಸೇರಿದಂತೆ ಇಬ್ಬರು ಆಯತಪ್ಪಿ ಟ್ಯಾಂಕ್‌ಗೆ ಬಿದ್ದು ನಾಪತ್ತೆಯಾಗಿದ್ದಾರೆ. ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎನ್ನಲಾಗಿದ್ದು, ಎನ್‌ಡಿಆರ್‌ಎಫ್ ತಂಡದಿಂದ ಶೋಧ ಕಾರ್ಯ ಮುಂದುವರೆದಿದೆ.
Read Full Story

11:05 AM (IST) Jun 19

ಬೆಳಗಾವಿ ಪರ ಗೊತ್ತುವಳಿ ನಿರ್ಧಾರದಿಂದ ದೂರುಳಿಯಿತೇ ಪಾಲಿಕೆ? ಹೊಸ ಚರ್ಚೆ ಹುಟ್ಟುಹಾಕಿದ ಮೇಯರ್ ಪತ್ರ !

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ನಿರ್ಣಯವನ್ನು ಪಾಲಿಕೆ ಸಭೆಯಲ್ಲಿ ಅಂಗೀಕರಿಸಲು ಕನ್ನಡಪರ ಸಂಘಟನೆಗಳು ಹೋರಾಟ ನಡೆಸುತ್ತಿವೆ. ಆದರೆ, ಮೇಯರ್ ಅವರು ಕಾನೂನು ಅಭಿಪ್ರಾಯ ಕೇಳಿ ಸರ್ಕಾರಕ್ಕೆ ಪತ್ರ ಬರೆದಿದ್ದು, ನ್ಯಾಯಾಲಯದ ಪ್ರಕರಣವನ್ನು ಉಲ್ಲೇಖಿಸಿರುವುದು ಹೊಸ ಚರ್ಚೆ ಮತ್ತು ವಿಳಂಬಕ್ಕೆ ಕಾರಣವಾಗಿದೆ.
Read Full Story

10:33 AM (IST) Jun 19

ಬೆಂಗಳೂರು-ಹೊನ್ನಾವರ ರಸ್ತೆಗಾಗಿ 30 ಎಕರೆ ಸ್ವಾಧೀನಕ್ಕೆ ಹೈಕೋರ್ಟ್‌ ಅಸ್ತು

ಬೆಂಗಳೂರು-ಹೊನ್ನಾವರ ರಸ್ತೆ ಅಭಿವೃದ್ಧಿಗಾಗಿ ಸ್ವಾಧೀನಪಡಿಸಿಕೊಂಡಿದ್ದ 30 ಎಕರೆ ಭೂಮಿಗೆ ಸಂಬಂಧಿಸಿದಂತೆ 14 ವರ್ಷಗಳ ಹಿಂದೆ ಏಕಸದಸ್ಯ ಪೀಠ ನೀಡಿದ್ದ ರದ್ದತಿ ಆದೇಶವನ್ನು ಹೈಕೋರ್ಟ್ ವಿಭಾಗೀಯ ಪೀಠ ಇದೀಗ ವಜಾಗೊಳಿಸಿದೆ. 

Read Full Story

10:32 AM (IST) Jun 19

ಭಟ್ಕಳ - 'ನಿನ್ನ ಬಳಿ ಮಾತಾಭಡೋದಿದೆ ಬಾ..' ಯುವತಿಗೆ ನಂಬಿಸಿ ಕಾರಿನಲ್ಲಿ ಕರೆದೊಯ್ದು ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ಭಟ್ಕಳದ ಸೂಪರ್ ಮಾರ್ಕೆಟ್‌ನಲ್ಲಿ ಕೆಲಸ ಮಾಡುತ್ತಿದ್ದ ಹಿಂದೂ ಯುವತಿಯನ್ನು ಒತ್ತಾಯಪೂರ್ವಕವಾಗಿ ಕಾರಿನಲ್ಲಿ ಕರೆದೊಯ್ದ ಆರೋಪದ ಮೇಲೆ ಸಹೋದ್ಯೋಗಿ ಮುಸ್ಲಿಂ ಯುವಕ ಶಾಹೀದ್ ಖಾನ್‌ನನ್ನು ಯುವತಿಯ ದೂರಿನ ಆಧಾರದ ಮೇಲೆ ಕ್ರಮ ಕೈಗೊಂಡಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Read Full Story

10:04 AM (IST) Jun 19

ಪಡಿತರ ಚೀಟಿದಾರರಿಗೆ ಭರ್ಜರಿ ಸಿಹಿ ಸುದ್ದಿ - 3 ಕೋಟಿ ಹೊಸ ರೇಷನ್ ಕಾರ್ಡ್ ನೀಡಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್!

ರಾಜ್ಯ ಸರ್ಕಾರಗಳು 2.21 ಕೋಟಿ ಅನರ್ಹ ಪಡಿತರ ಚೀಟಿಗಳನ್ನು ತೆಗೆದುಹಾಕುತ್ತಿದ್ದು, ಇದರ ಬೆನ್ನಲ್ಲೇ ಕೇಂದ್ರ ಸರ್ಕಾರವು ಅರ್ಹ ಫಲಾನುಭವಿಗಳಿಗೆ ಸುಮಾರು 3 ಕೋಟಿ ಹೊಸ ಪಡಿತರ ಚೀಟಿಗಳನ್ನು ವಿತರಿಸಲು ಅನುಮತಿ ನೀಡಿದೆ. ಪಿಡಿಎಸ್ ವ್ಯವಸ್ಥೆಯ ಡಿಜಿಟಲೀಕರಣದಿಂದಾಗಿ ಈ ಕ್ರಮ ಸಾಧ್ಯವಾಗಿದೆ.

Read Full Story

08:07 AM (IST) Jun 19

ವಿಧಾನಪರಿಷತ್‌ ಚುನಾವಣೆ - ಕೈಗೆ ಹೆಚ್ಚುವರಿ, ದೋಸ್ತಿಗೆ ಹೆಚ್ಚು 'ವರಿ'!

ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ, ಕಾಂಗ್ರೆಸ್ 5 ಸ್ಥಾನಗಳನ್ನು ಗೆದ್ದು ಭರ್ಜರಿ ಜಯ ಸಾಧಿಸಿದೆ. ವಿರೋಧ ಪಕ್ಷಗಳ 11 ಶಾಸಕರ ಅಡ್ಡ ಮತದಾನದಿಂದಾಗಿ ಬಿಜೆಪಿ-ಜೆಡಿಎಸ್‌ ತೀವ್ರ ಮುಖಭಂಗ ಅನುಭವಿಸಿದ್ದು, ಈ ಅಡ್ಡ ಮತಗಳ ಲಾಭದಿಂದ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
Read Full Story

08:01 AM (IST) Jun 19

ಮೇಲುಕೋಟೆ ದೇಗುಲದಲ್ಲಿ ಕಳ್ಳತನ - ಯೋಗನರಸಿಂಹಸ್ವಾಮಿ ಬೆಟ್ಟದ ಅರ್ಚಕ ಸೇರಿ 6 ಮಂದಿ ಅಮಾನತ್ತು

ಮೇಲುಕೋಟೆಯ ಯೋಗನರಸಿಂಹಸ್ವಾಮಿ ಬೆಟ್ಟದ ದೇಗುಲದಲ್ಲಿ ಕಳ್ಳತನ ಆರೋಪದ ಮೇಲೆ ಅರ್ಚಕ ಎಸ್. ನಾರಾಯಣಭಟ್ಟ ಸೇರಿದಂತೆ ಆರು ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಎಲ್ಲರನ್ನೂ ಅಮಾನತುಗೊಳಿಸಿ ಆದೇಶ.

Read Full Story

07:33 AM (IST) Jun 19

Heart attack: ಕಾಲೇಜಲ್ಲಿ ಎರಡು ಬಾರಿ ಕುಸಿದುಬಿದ್ದ ಪಿಯು ವಿದ್ಯಾರ್ಥಿ ಹೃದಯಾಘಾತದಿಂದ ಸಾವು!

ಮೈಸೂರಿನ ಮರಿಮಲ್ಲಪ್ಪ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿಗೆ ಕಾಲೇಜಿನ ಆವರಣದಲ್ಲೇ ಹೃದಯಾಘಾತ(heart attack) ಸಂಭವಿಸಿ ಎರಡು ಬಾರಿ ಕುಸಿದು ಬಿದ್ದು, ನಂತರ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಗುರುವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.

 

Read Full Story

07:33 AM (IST) Jun 19

ಯೋಗೀಶ್ ಗೌಡ ಕೊಲೆ ಪ್ರಕರಣ: ನಕಲಿ ಸಾಕ್ಷ್ಯ ಸೃಷ್ಟಿಸಿ 7 ವರ್ಷ ಜೈಲು ಶಿಕ್ಷೆಗೊಳಗಾದ ಇನ್ಸ್‌ಪೆಕ್ಟರ್ ಟಿಂಗರೀಕರ್‌ಗೆ ಬೇಲ್ ಸಿಗುತ್ತಾ?

ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ನಕಲಿ ಸಾಕ್ಷಿ ಸೃಷ್ಟಿಸಿದ ಆರೋಪದ ಮೇಲೆ ಶಿಕ್ಷೆಗೊಳಗಾಗಿರುವ ಇನ್ಸ್‌ಪೆಕ್ಟರ್‌ ಚನ್ನಕೇಶವ ಟಿಂಗರೀಕರ್‌ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಾಲಯವು ತನ್ನ ತೀರ್ಪನ್ನು ಕಾಯ್ದಿರಿಸಿದೆ.

 

Read Full Story

07:33 AM (IST) Jun 19

Interview: ಬಿಜೆಪಿ ರಾಜ್ಯಾಧ್ಯಕ್ಷ ಗೊಂದಲಕ್ಕೆ ಯಾವುದೇ ಕ್ಷಣ ವರಿಷ್ಠರಿಂದ ಪರಿಹಾರ: ರಾಧಾಮೋಹನ

ರಾಜ್ಯ ಬಿಜೆಪಿಯಲ್ಲಿನ ನಾಯಕತ್ವದ ಗೊಂದಲ, ನಿರ್ಧಾರ ವಿಳಂಬ ಮತ್ತು ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್ ಮಾತನಾಡಿದ್ದಾರೆ. ರಾಜ್ಯಾಧ್ಯಕ್ಷರ ಕುರಿತು ಶೀಘ್ರದಲ್ಲೇ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ, ಪಕ್ಷದ ಆಂತರಿಕ ಕಾರ್ಯವೈಖರಿ ಸಮರ್ಥಿಸಿಕೊಂಡಿದ್ದಾರೆ.

 

Read Full Story

07:32 AM (IST) Jun 19

20 ವರ್ಷಗಳಿಂದ ಭೂ ಪರಿಹಾರ ನೀಡದ ನೌಕರನಿಗೆ ಚಪ್ಪಲಿ ಏಟು; ರೈತನ ಪರ ನಿಂತ ಲೋಕಾಯುಕ್ತ, ಸುಮೊಟೊ ಕೇಸ್ ದಾಖಲು

20 ವರ್ಷಗಳಿಂದ ಭೂ ಪರಿಹಾರ ಸಿಗದ ಕಾರಣ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ನೌಕರನಿಗೆ ಚಪ್ಪಲಿ ಏಟು ನೀಡಿದ್ದ ರೈತ ಬಸಪ್ಪ ದೊಡ್ಡಮನಿ ಪರವಾಗಿ ಲೋಕಾಯುಕ್ತರು ಸುಮೊಟೊ ಕೇಸ್ ದಾಖಲಿಸಿಕೊಂಡಿದ್ದಾರೆ. ಮಾಧ್ಯಮ ವರದಿ ಆಧರಿಸಿ ಈ ಕ್ರಮ ಕೈಗೊಂಡಿದ್ದು, ಸಂಬಂಧಿತ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.

 

07:32 AM (IST) Jun 19

Daily Horoscope: ಇಂದು ಮೃತ್ಯು ಯೋಗ, 12 ರಾಶಿಗಳ ಮೇಲೆ ಗ್ರಹಣ ಯೋಗದ ಪ್ರಭಾವ ಹೀಗಿದೆ

ಜೂನ್ 19ರಂದು ಯಾವೆಲ್ಲಾ ಶುಭ-ಅಶುಭ ಯೋಗಗಳು ರೂಪುಗೊಳ್ಳಲಿವೆ? ಅಂದು ಯಾವ ಗ್ರಹ ರಾಶಿ ಬದಲಿಸಲಿದೆ? ಜೂನ್ 19ರಂದು ಯಾವ ರಾಶಿಯಲ್ಲಿ 'ಗ್ರಹಣ' ಎಂಬ ಅಶುಭ ಯೋಗ ಉಂಟಾಗಲಿದೆ? ಇಲ್ಲಿದೆ ಮಾಹಿತಿ.

 

Read Full Story

07:32 AM (IST) Jun 19

RBI: ಗೋಕಾಕ ಮಹಾಲಕ್ಷ್ಮಿ ಬ್ಯಾಂಕ್‌ ಲೈಸೆನ್ಸ್‌ ರದ್ದು, ದಿವಾಳಿಗೆ ಕಾರಣವೇನು? ನಿಮ್ಮ ಹಣ ಮರಳಿ ಬರುತ್ತಾ?

ಆರ್ಥಿಕ ಸ್ಥಿತಿ ಹದಗೆಟ್ಟ ಕಾರಣ ಆರ್‌ಬಿಐ, ಬೆಳಗಾವಿ ಜಿಲ್ಲೆಯ ಗೋಕಾಕ ಮೂಲದ ಶ್ರೀ ಮಹಾಲಕ್ಷ್ಮಿ ಅರ್ಬನ್ ಕೋ-ಆಪರೇಟಿವ್ ಕ್ರೆಡಿಟ್ ಬ್ಯಾಂಕಿನ ಪರವಾನಗಿಯನ್ನು ರದ್ದುಗೊಳಿಸಿದೆ. ಬ್ಯಾಂಕಿನ ವ್ಯವಹಾರವನ್ನು ನಿಷೇಧಿಸಲಾಗಿದೆ

 

Read Full Story

07:31 AM (IST) Jun 19

ಟ್ರಾಫಿಕ್ ಫೈನ್ ಕಟ್ಟಲು ಸುವರ್ಣಾವಕಾಶ!12 ಕಡೆ ವಿಶೇಷ ಕೌಂಟರ್‌ಗಳು ಆರಂಭ; ಎಲ್ಲೆಲ್ಲಿ ತೆರೆಯಲಿವೆ? ಕೊನೆಯ ದಿನಾಂಕ ಯಾವಾಗ?

ಬೆಂಗಳೂರಿನಲ್ಲಿ ಹಳೆಯ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಸರ್ಕಾರವು ಶೇ.50ರಷ್ಟು ರಿಯಾಯಿತಿ ಘೋಷಿಸಿದೆ. ಈ ಅವಕಾಶ ಜೂ.21 ರಿಂದ ಜು.10 ರವರೆಗೆ ಲಭ್ಯವಿದ್ದು, ನಗರದ 12 ಕಡೆ ವಿಶೇಷ ಕೌಂಟರ್‌ಗಳನ್ನು ತೆರೆಯಲಾಗಿದೆ ಹಾಗೂ ವಿವಿಧ ಆ್ಯಪ್‌ಗಳ ಮೂಲಕವೂ ದಂಡ ಪಾವತಿಸಬಹುದು.

 

Read Full Story

07:31 AM (IST) Jun 19

ಡಿಕೆ ಸರ್ಕಾರದಲ್ಲಿ ಮಹತ್ವದ ಬದಲಾವಣೆ: 13 ಮಂದಿ ಐಎಎಸ್‌ ಅಧಿಕಾರಿಗಳ ವರ್ಗ, ಕೆಲವರಿಗೆ ಹೆಚ್ಚುವರಿ ಹೊಣೆ

ಕರ್ನಾಟಕ ಸರ್ಕಾರವು ಡಿ.ರಂದೀಪ್‌, ತುಳಸಿ ಮದ್ದಿನೇನಿ ಸೇರಿದಂತೆ ಹದಿಮೂರು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ವರ್ಗಾವಣೆಯಲ್ಲಿ ಹಲವು ಅಧಿಕಾರಿಗಳಿಗೆ ಹೊಸ ಹುದ್ದೆಗಳನ್ನು ನೀಡಲಾಗಿದ್ದು, ಕೆಲವರಿಗೆ ಹೆಚ್ಚುವರಿ ಜವಾಬ್ದಾರಿಗಳನ್ನು ವಹಿಸಲಾಗಿದೆ.

 

Read Full Story

More Trending News