ಬೆಂಗಳೂರು (ಜೂ.19): ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಶಾಸಕರ ಅಡ್ಡಮತದಾನ ಬಿಜೆಪಿ ಪಾಳೆಯದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ.ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಅಡ್ಡಮತದಾನದ ಸತ್ಯಾಸತ್ಯತೆ ಮತ್ತು ವಾಸ್ತವ ತಿಳಿಯಲು ಮೂವರು ಮುಖಂಡರನ್ನು ಒಳಗೊಂಡ ತಂಡವೊಂದನ್ನು ರಚಿಸಿದ್ದು, ಈ ತಿಂಗಳ 25ರೊಳಗಾಗಿ ಸಮಗ್ರ ನೀಡುವಂತೆ ಸೂಚಿಸಿದ್ದಾರೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್ಡೇಟ್ ಇಲ್ಲಿದೆ.
10:31 AM (IST) Jun 20
10:30 AM (IST) Jun 20
ಬೆಂಗಳೂರು ನಗರದಲ್ಲಿ ಚಿತಾಗಾರ ಶುಲ್ಕ ಹೆಚ್ಚು ವಸೂಲಿಯಾಗುತ್ತಿದ್ದ ಹಿನ್ನೆಲೆ ಜಿಬಿಎ ಹೊಸ ನಿಯಮಗಳನ್ನ ರೂಪಿಸಿದ್ದು ಶವ ಸಂಸ್ಕಾರ ಮಾಡುವವರು ಮಧ್ಯವರ್ತಿಗಳ ಸಹಾಯವಿಲ್ಲದೆ ನೇರವಾಗಿ ಅಧಿಕೃತ ವೆಬ್ಸೈಟ್ನಲ್ಲಿ ನೋಂದಣಿ ಮಾಡಬಹುದಾಗಿದೆ. ಶುಲ್ಕ ಎಷ್ಟು? ನಿಯಮಗಳೇನು ವಿವರಗಳಿಗೆ ಪೂರ್ಣವಾಗಿ ಓದಿ.
10:28 AM (IST) Jun 20
09:56 AM (IST) Jun 20
KPTCL ಮತ್ತು BESCOM ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಪವರ್ ಕಟ್ ಇರಲಿದ್ದು, ಮಧ್ಯ, ಪೂರ್ವ, ಈಶಾನ್ಯ ಮತ್ತು ಉತ್ತರ ಬೆಂಗಳೂರಿನ ಪ್ರಮುಖ ಪ್ರದೇಶಗಳ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ.
09:50 AM (IST) Jun 20
ಚಿತ್ರದುರ್ಗ: ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಕರಣದಲ್ಲಿ ಆರೋಪವಿರುವುದು ಎಸ್ಐ ಮೇಲೆ ಮಾತ್ರ. ಆದರೆ ಇಡೀ ಕುಟುಂಬದವರ ವಿರುದ್ಧ ದೂರು ನೀಡಲಾಗಿದೆ. ಮಹಿಳೆಯ ದೂರು ಆಧರಿಸಿ ಆರೋಪಿಯ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ವಿರುದ್ಧ ಹೈಕೋರ್ಟ್ ಕೆಂಡಾಮಂಡಲ! ಪ್ರಕರಣವೇನು?
09:42 AM (IST) Jun 20
ಬೆಂಗಳೂರು ಪಶ್ಚಿಮ ಮತ್ತು ಉತ್ತರ ಪಾಲಿಕೆ ವ್ಯಾಪ್ತಿಯ ವಿದ್ಯುತ್ ಚಿತಾಗಾರಗಳಲ್ಲಿ ಶವಸಂಸ್ಕಾರಕ್ಕೆ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. ಇನ್ನು ಮುಂದೆ ಅಧಿಕೃತ ಬಿಬಿಎಂಪಿ ಜಾಲತಾಣದಲ್ಲಿ ₹250 ಶುಲ್ಕ ಪಾವತಿಸಿ ಸ್ಲಾಟ್ ಕಾಯ್ದಿರಿಸಬೇಕಿದೆ.
09:27 AM (IST) Jun 20
09:03 AM (IST) Jun 20
08:56 AM (IST) Jun 20
Modern Commode in Bengaluru Home Balcony: ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ ಅಥವಾ ಮನೆಯೊಂದರ ಬಾಲ್ಕನಿಯಲ್ಲಿ ಮಾಡರ್ನ್ ಕಮೋಡ್ ಇಡಲಾಗಿದೆ. ಇದನ್ನು ಇಬ್ಬರು ಹುಡುಗಿಯರು ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ್ದಾರೆ.
08:26 AM (IST) Jun 20
ನಮ್ಮ ಮೆಟ್ರೋ ಮೂರನೇ ಹಂತದ ಹೊಸಹಳ್ಳಿ-ಕಡಬಗೆರೆ ಮಾರ್ಗ ನಿರ್ಮಾಣಕ್ಕಾಗಿ 3627 ಮರಗಳನ್ನು ತೆರವುಗೊಳಿಸಲು ಬಿಎಂಆರ್ಸಿಎಲ್ ಪ್ರಸ್ತಾವನೆ ಸಲ್ಲಿಸಿದೆ. ಈ ಯೋಜನೆಗಾಗಿ ಹೊಸಹಳ್ಳಿ, ಕಾಮಾಕ್ಷಿಪಾಳ್ಯ, ಬ್ಯಾಡರಹಳ್ಳಿ ಸೇರಿದಂತೆ ಹಲವೆಡೆ ಮರಗಳನ್ನು ಗುರುತಿಸಲಾಗಿದ್ದು, ಸಾರ್ವಜನಿಕರಿಂದ ಆಕ್ಷೇಪಣೆಗೆ ಆಹ್ವಾನ.
07:51 AM (IST) Jun 20
ಟೆಸ್ಟ್ ಡ್ರೈವ್ ವೇಳೆ ಪೊರ್ಶೆ ಕಾರಿನಲ್ಲಿ ಸಿಗರೇಟ್ ಸೇದಲು ಸಿಬ್ಬಂದಿ ಆಕ್ಷೇಪಿಸಿದ್ದಕ್ಕೆ, ಹ್ಯಾಕರ್ ಶ್ರೀಕಿ ಬಿಟ್ ಕಾಯಿನ್ ಬಳಸಿ ತಕ್ಷಣವೇ ಆ ಕಾರನ್ನು ಖರೀದಿಸಿದ್ದ ಕಾರಿನಲ್ಲಿ ಕುಳಿತು ಸಿಗರೇಟ್ ಸೇದಿ ಸಿಬ್ಬಂದಿಗೆ ಕಿಚಾಯಿಸಿದ್ದನು. ಈ ಘಟನೆಯು ಬಿಟ್ ಕಾಯಿನ್ ಹಗರಣದ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
07:29 AM (IST) Jun 20
ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್ಎಸ್ ನೋಂದಣಿ ಕುರಿತು ಪ್ರಶ್ನಿಸಿದ್ದು, ಸಂಘಟನೆಯೇ ನೇರವಾಗಿ ಉತ್ತರಿಸಬೇಕೆಂದು ಆಗ್ರಹಿಸಿದ್ದಾರೆ. ವಕೀಲರು ಅಥವಾ ಇತರರ ಅಭಿಪ್ರಾಯಗಳಿಗೆ ನಾನು ಉತ್ತರ ನೀಡುವುದಿಲ್ಲ, ಸಂಘದ ಲೆಟರ್ಹೆಡ್ನಲ್ಲೇ ಉತ್ತರ ಬರಲಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
07:28 AM (IST) Jun 20
ಶನಿವಾರದ ಸಚಿವ ಸಂಪುಟ ಸಭೆಯಲ್ಲಿ 'ಮುಖ್ಯಮಂತ್ರಿಗಳ ಜನಸ್ಪಂದನ' ಮತ್ತು 'ಅನಿವಾಸಿ ಭಾರತೀಯ ವ್ಯವಹಾರ' ಎಂಬ ಎರಡು ಹೊಸ ಇಲಾಖೆಗಳ ರಚನೆ, ವಿಧಾನಪರಿಷತ್ನ ಐದು ಸ್ಥಾನಗಳಿಗೆ ನಾಮನಿರ್ದೇಶನ ಹಾಗೂ ಸರ್ಕಾರಿ ಹುದ್ದೆಗಳ ನೇರ ನೇಮಕಾತಿ ಕುರಿತು ಮಹತ್ವದ ಚರ್ಚೆ ನಡೆಯಲಿದೆ.
07:28 AM (IST) Jun 20
ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆದ ಚುನಾವಣೇಲಿ ಬಿಜೆಪಿ-ಜೆಡಿಎಸ್ನ 11 ಶಾಸಕರು ಅಡ್ಡ ಮತದಾನ ಮಾಡಿದ್ದು, ಯಾರು ಆ ಶಾಸಕರು ಎಂಬುದು ನಿಗೂಢವಾಗಿದೆ. ಹಲವರು ಮಾಡಿಲ್ಲವೆಂದು ಸ್ಪಷ್ಟನೆ ನೀಡುತ್ತಿದ್ದರೆ, ಜೆಡಿಎಸ್ನ ನಾಲ್ವರು ಶಾಸಕರು ಅಡ್ಡಮತ ಚಲಾಯಿಸಿದ್ದಾರೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
07:28 AM (IST) Jun 20
ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಕುರಿತು ವಿವರಣೆ ನೀಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಶಾಸಕಾಂಗ ಪಕ್ಷದ ನಾಯಕ ಆರ್.ಅಶೋಕ್ ದೆಹಲಿಗೆ ತೆರಳಲಿದ್ದಾರೆ. ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರನ್ನು ಭೇಟಿಯಾಗಿ ಈ ಬಗ್ಗೆ ಚರ್ಚಿಸಲಿದ್ದಾರೆ.
07:27 AM (IST) Jun 20
ಬಾಗಲಕೋಟೆ, ದಾವಣಗೆರೆ ಸೇರಿದಂತೆ ರಾಜ್ಯದ ಐದು ಜಿಲ್ಲಾ ನ್ಯಾಯಾಲಯಗಳಿಗೆ ಇ-ಮೇಲ್ ಮೂಲಕ ಹುಸಿ ಬಾಂಬ್ ಬೆದರಿಕೆ ಬಂದಿದೆ. ತಮಿಳುನಾಡಿನ ಘಟನೆಗೆ ಪ್ರತೀಕಾರವೆಂದು ಹೇಳಲಾದ ಈ ಬೆದರಿಕೆಯಿಂದಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿ, ತಪಾಸಣೆ ನಂತರ ಕಲಾಪಗಳು ಪುನಾರಂಭಗೊಂಡವು.