ಸಚಿವ ಸಂಪುಟ ನಿರ್ಧರಿಸಿದಂತೆ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯವು ಇನ್ನೊಂದು ವಾರದಲ್ಲಿ ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದೆ. ಕಲಬುರಗಿಯಲ್ಲಿ ಇದರ ಕಚೇರಿ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕಲಬುರಗಿಯ ಪರೇಡ್ ಮೈದಾನದಲ್ಲಿನ ಕಲ್ಯಾಣ ಕರ್ನಾಟಕ ಉತ್ಸವ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸಂವಿಧಾನದ ಕಲಂ 371(ಜೆ) ರಕ್ಷಣೆಯೊಂದಿಗೆ ಅಭಿವೃದ್ಧಿ ಪಥದಲ್ಲಿರುವ ಕಲ್ಯಾಣ ಕರ್ನಾಟಕದಲ್ಲಿ ಏನೆಲ್ಲಾ ಅಭಿವೃದ್ಧಿ ಕಾರ್ಯಗಳು ನಡೆಯಬೇಕು ಎಂಬುದರ ಜೊತೆಗೆ ಅವುಗಳ ವೇಗ ಹೆಚ್ಚಿಸುವುದರ ಮೇಲೆ ನಿಗಾ ವಹಿಸಲು ಪ್ರತ್ಯೇಕ ಸಚಿವಾಲಯ ಆರಂಭಿಸಲು ಮಂಗಳವಾರ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಂದಿನ ಒಂದು ವಾರದೊಳಗೆ ಸಿಬ್ಬಂದಿ ಸಹಿತ ಸಚಿವಾಲಯ ಕಲಬುರಗಿಯಲ್ಲಿ ಕಾರ್ಯಾರಂಭ ಮಾಡಲಿದೆ ಎಂದರು.

12:25 AM (IST) Sep 19
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬೆಂಗಳೂರಿನ ರಾಜರಾಜೇಶ್ವರಿನಗರದ ಯೋಗ ತರಬೇತುದಾರ ನಿರಂಜನ ಮೂರ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಯೋಗ ಸ್ಪರ್ಧೆ ಹಾಗೂ ಉದ್ಯೋಗದ ಆಮಿಷವೊಡ್ಡಿ ಥೈಲ್ಯಾಂಡ್ ಹಾಗೂ ಬೆಂಗಳೂರಿನಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.
12:02 AM (IST) Sep 19
ರಾಯಚೂರಿನ ಓಪೆಕ್ ಆಸ್ಪತ್ರೆಯಲ್ಲಿ ಸಿಬ್ಬಂದಿಯ ನಿರ್ಲಕ್ಷ್ಯದಿಂದ 35 ವರ್ಷದ ಕ್ಯಾನ್ಸರ್ ರೋಗಿ ಶ್ರೀನಿವಾಸ್ ಮೃತಪಟ್ಟಿದ್ದಾರೆ. ಸ್ಕ್ಯಾನಿಂಗ್ಗೆ ಕರೆದೊಯ್ಯುವಾಗ ಆಕ್ಸಿಜನ್ ಸಿಲಿಂಡರ್ ಖಾಲಿಯಾಗಿದ್ದೇ ಸಾವಿಗೆ ಕಾರಣವೆಂದು ಆರೋಪಿಸಲಾಗಿದೆ.
11:22 PM (IST) Sep 18
ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಒಂದೇ ದಿನ ಐದು ಬಾರಿ ಭೂಕಂಪನ ಸಂಭವಿಸಿದ್ದು, ಜನರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಜೋರಾದ ಶಬ್ದದೊಂದಿಗೆ ಭೂಮಿ ಕಂಪಿಸಿದ್ದರಿಂದ ಭಯಭೀತರಾದ ಜನರು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ.
10:59 PM (IST) Sep 18
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದ ಮೇಲೆ ಸುಂಕ ವಿಧಿಸಿದ ನಂತರ ತಮ್ಮ ನಿಲುವನ್ನು ಬದಲಾಯಿಸಿದ್ದು, ಪ್ರಧಾನಿ ಮೋದಿ ಜೊತೆಗಿನ ತಮ್ಮ ಸ್ನೇಹವನ್ನು ಶ್ಲಾಘಿಸಿದ್ದಾರೆ. ರಷ್ಯಾದಿಂದ ಭಾರತದ ತೈಲ ಖರೀದಿಯ ಬಗ್ಗೆ ಅಸಮಾಧಾನವಿದ್ದರೂ, ಮುಂಬರುವ ದಿನಗಳಲ್ಲಿ ಮೋದಿಯವರ ಬೇಟಿಗೆ ಎದುರು ನೋಡುತ್ತಿದ್ದಾರೆ.
10:30 PM (IST) Sep 18
ಪ್ರತಿಯೊಬ್ಬ ಮಹಿಳೆಯೂ ನೇಲ್ ಪಾಲಿಶ್ ಹಚ್ಚಲು ಇಷ್ಟಪಡುತ್ತಾರೆ, ಆದರೆ ನಾವು ಅದನ್ನು ತೆಗೆಯಲು ಮರೆಯುತ್ತೇವೆ. ದೀರ್ಘಕಾಲ ಹಾಗೆಯೇ ಬಿಟ್ಟರೆ, ಅದು ಉಗುರುಗಳ ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಹಾನಿ ಮಾಡುತ್ತದೆ. ನೇಲ್ ಪಾಲಿಶ್ ತೆಗೆಯಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂಬುದನ್ನು ತಿಳಿದುಕೊಳ್ಳೋಣ
10:05 PM (IST) Sep 18
10:04 PM (IST) Sep 18
ಅಮೆರಿಕದ ಕಾರ್ಯಕರ್ತ ಚಾರ್ಲಿ ಕಿರ್ಕ್ ಹತ್ಯೆಯಲ್ಲಿ ಇಸ್ರೇಲ್ ಪಾತ್ರವಿದೆ ಎಂಬ ಆರೋಪವನ್ನು ಪ್ರಧಾನಿ ಬೆಂಜಮಿನ್ ನೆತನ್ಯಾಹು ತೀವ್ರವಾಗಿ ಖಂಡಿಸಿದ್ದಾರೆ. ಇದೊಂದು "ದೈತ್ಯಾಕಾರದ ದೊಡ್ಡ ಸುಳ್ಳು" ಎಂದು ಹೇಳಿದ ಅವರು, ಕಿರ್ಕ್ ಇಸ್ರೇಲ್ನ ಸಮರ್ಪಿತ ಬೆಂಬಲಿಗ ಎಂದು ಶ್ಲಾಘಿಸಿದರು.
09:38 PM (IST) Sep 18
ಆಪಲ್ನ ಐಫೋನ್ ಉತ್ಪಾದನೆಯನ್ನು ಚೀನಾದಿಂದ ಭಾರತಕ್ಕೆ ಸ್ಥಳಾಂತರಿಸಿದ ನಂತರ, ಟಾಟಾ ಎಲೆಕ್ಟ್ರಾನಿಕ್ಸ್ ಪ್ರಮುಖ ಪಾಲುದಾರನಾಗಿ ಹೊರಹೊಮ್ಮಿದೆ. ಈ ಬೆಳವಣಿಗೆಯಿಂದ ಕಂಪನಿಯ ಆದಾಯ ಮತ್ತು ಲಾಭದಲ್ಲಿ ಭಾರೀ ಏರಿಕೆಯಾಗಿದ್ದು, ಸ್ಥಾವರಗಳ ಖರೀದಿಯು ಅದರ ಉತ್ಪಾದನಾ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಿದೆ.
09:34 PM (IST) Sep 18
09:14 PM (IST) Sep 18
ಬೆಂಗಳೂರಿಗೆ ಮುಂದಿನ ಮೂರು ಗಂಟೆ ಆರೇಂಜ್ ಅಲರ್ಟ್, ಭಾರಿ ಮಳೆ ಮುನ್ಸೂಚನೆ, ಇಂದು ಸಂಜೆ ಬೆಂಗಳೂರಿನಲ್ಲಿ ಭಾರಿ ಮಳೆಯಾಗಿದೆ. ಇದೀಗ ಹವಾಮಾನ ಇಲಾಖೆ ಆರೇಂಜ್ ಅಲರ್ಟ್ ಮುನ್ಸೂಚನೆ ನೀಡಿದೆ.
08:37 PM (IST) Sep 18
ಕನ್ನಡ ಭಾಷೆಗೆ ಅವಮಾನ ಮಾಡಿರುವುದನ್ನ ಖಂಡಿಸಿ ಕರವೇ ಕಾರ್ಯಕರ್ತರು ಅಧಿಕಾರಿಗಳ ಮುಖಕ್ಕೆ ಮಸಿ ಬಳಿದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
08:05 PM (IST) Sep 18
07:39 PM (IST) Sep 18
ಅ. 1 ರಿಂದ ಬೆಂಗಳೂರಿನ ಟ್ರಾಫಿಕ್ ಡಬಲ್, ಎಲ್ಲಾ ಕಂಪನಿಗಳ ಹೈಬ್ರಿಡ್, ವರ್ಕ್ ಫ್ರಮ್ ಹೋಮ್ ಅಂತ್ಯವಾಗುತ್ತಿದೆ. ರಸ್ತೆಯಲ್ಲೇ ಹೆಚ್ಚಿನ ಸಮಯ ಕಳೆಯಬೇಕಿದೆ. ಕಾರಣ ಬೆಂಗಳೂರಿನ ಎಲ್ಲಾ ಕಂಪನಿಗಳು ಅಕ್ಟೋಬರ್ 1 ರಿಂದ ಕಚೇರಿಯಿಂದ ಕೆಲಸ ಕಡ್ಡಾಯ ಮಾಡಿದೆ.
07:28 PM (IST) Sep 18
ಚಿಕನ್ ಬಿರಿಯಾನಿಯಲ್ಲಿ ಚಿಕನ್ ಸಿಗದಿದ್ದಕ್ಕೆ ಹೊಡೆದಾಟ. ಕೊಚ್ಚಿಯ ಪಲ್ಲೂರುತಿ ಟ್ರಾಫಿಕ್ ಸ್ಟೇಷನ್ನಲ್ಲಿ ಈ ಘಟನೆ ನಡೆದಿದೆ. ಬೀಳ್ಕೊಡುಗೆ ಸಮಾರಂಭದ ವೇಳೆ ಟ್ರಾಫಿಕ್ ಹೋಂ ಗಾರ್ಡ್ಗಳ ನಡುವೆ ಜಗಳವಾಗಿದೆ.
07:04 PM (IST) Sep 18
films in other languages by actress Shruthi ಸ್ಯಾಂಡಲ್ವುಡ್ ನಟಿ ಶ್ರುತಿ ತಮ್ಮ 50ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. 'ಶ್ರುತಿ' ಚಿತ್ರದಿಂದ ಖ್ಯಾತಿ ಪಡೆದ ಅವರು, ಕನ್ನಡ ಮಾತ್ರವಲ್ಲದೆ ತಮಿಳು, ತೆಲುಗು ಮತ್ತು ಮಲಯಾಳಂನ ತಲಾ ಮೂರು ಸಿನಿಮಾಗಳಲ್ಲಿ ನಟಿಸಿದ್ದಾರೆ.
07:04 PM (IST) Sep 18
ಸೌದಿ ಅರೇಬಿಯಾ ಮತ್ತು ಪಾಕಿಸ್ತಾನದ ನಡುವಿನ ಹೊಸ ರಕ್ಷಣಾ ಒಪ್ಪಂದವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಹುಟ್ಟುಹಾಕಿದೆ. ಈ ಒಪ್ಪಂದ ಇಸ್ರೇಲ್ಗೆ ಎಚ್ಚರಿಕೆ ಎಂದು ವಿಶ್ಲೇಷಿಸಲಾಗುತ್ತಿದೆಯಾದರೂ, ಇದೇ ವೇಳೆ ಭಾರತದಲ್ಲಿ ಸೌದಿ ಅರೇಬಿಯಾ ಬೃಹತ್ ಹೂಡಿಕೆ ಘೋಷಿಸಿರುವುದು ಹೊಸ ಸವಾಲುಗಳನ್ನು ಒಡ್ಡಿದೆ.
07:01 PM (IST) Sep 18
06:44 PM (IST) Sep 18
ʼವೋಟ್ ಚೋರಿʼ ಎಂದು ಆರೋಪಿಸುವ ರಾಹುಲ್ ಗಾಂಧಿ, ಕರ್ನಾಟಕದ ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕತ್ವವನ್ನು ಹೈಕೋರ್ಟ್ ಅನರ್ಹಗೊಳಿಸಿದ್ದರ ಬಗ್ಗೆ ಏಕೆ ಮೌನವಾಗಿದ್ದಾರೆ ಎಂದು ಸಚಿವ ಪ್ರಲ್ಹಾದ ಜೋಶಿ ಪ್ರಶ್ನಿಸಿದ್ದಾರೆ. ಇವಿಎಂ ದೋಷಾರೋಪ ಮಾಡುವ ಕಾಂಗ್ರೆಸ್ಸೇ ನಿಜವಾದ ʼಮತ ಚೋರಿʼ ಪಕ್ಷ ಎಂದಿದ್ದಾರೆ.
06:25 PM (IST) Sep 18
ಶಿವಣ್ಣ ಹಾಗೂ ಗೀತಾ ದಂಪತಿ ಇಂದು ನಟ, ಕರ್ನಾಟಕ ರತ್ನ ಡಾ ವಿಷ್ಣುವರ್ಧನ್ ಹುಟ್ಟುಹಬ್ಬದ ಆಚರಣೆಯಲ್ಲಿ ಪಾಲ್ಗೊಂಡು ಖುಷಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾ ಮೂಲಕ ಸಾಕಷ್ಟು ವೈರಲ್ ಆಗುತ್ತಿದೆ. ಶಿವಣ್ಣ-ಗೀತಾ ದಂಪತಿ ಇಂದು ನಟ ವಿಷ್ಣುವರ್ಧನ್ ಬರ್ತ್ಡೇ ಸೆಲೆಬ್ರೇಶನ್ನಲ್ಲಿ..
06:22 PM (IST) Sep 18
ಬೆಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಓಣಂ ಹಬ್ಬದ ನಂತರ ಕೇರಳ ಮೂಲದ ಜೂನಿಯರ್ ಮತ್ತು ಸೀನಿಯರ್ ವಿದ್ಯಾರ್ಥಿಗಳ ನಡುವೆ ಬೀದಿ ಕಾಳಗ ನಡೆದಿದೆ. ಇದರಲ್ಲಿ ನಿಮ್ಮ ಮಕ್ಕಳೂ ಇದ್ದಾರಾ ಒಮ್ಮೆ ನೋಡಿ..
06:16 PM (IST) Sep 18
ದಾವಣಗೆರೆಯ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ನಡೆದ ರಾಜ್ಯಮಟ್ಟದ ಸಭೆಯಲ್ಲಿ, ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸುವ ವಿಚಾರವು ಕಾಂಗ್ರೆಸ್ ಸಂಸದ ಇ. ತುಕಾರಾಂ ಮತ್ತು ಬಿಜೆಪಿ ನಾಯಕ ಬಂಗಾರು ಹನುಮಂತು ನಡುವೆ ತೀವ್ರ ಜಟಾಪಟಿಗೆ ಕಾರಣವಾಯಿತು.
05:29 PM (IST) Sep 18
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬೆಂಗಳೂರಿನ ರಾಜರಾಜೇಶ್ವರಿನಗರದ ಯೋಗ ತರಬೇತುದಾರ ನಿರಂಜನ ಮೂರ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಯೋಗ ಸ್ಪರ್ಧೆ ಹಾಗೂ ಉದ್ಯೋಗದ ಆಮಿಷವೊಡ್ಡಿ ಥೈಲ್ಯಾಂಡ್ ಹಾಗೂ ಬೆಂಗಳೂರಿನಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.
05:19 PM (IST) Sep 18
ದಕ್ಷಿಣ ಕನ್ನಡದ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ತಲೆಬುರುಡೆ ಮತ್ತು ಅಸ್ಥಿಪಂಜರವು ಹೊಸ ತಿರುವು ಪಡೆದಿದೆ. ಸ್ಥಳದಲ್ಲಿ ಸಿಕ್ಕ ಗುರುತಿನ ಚೀಟಿಯ ಆಧಾರದ ಮೇಲೆ, ಇದು ಏಳು ವರ್ಷಗಳ ಹಿಂದೆ ಕೊಡಗಿನಿಂದ ನಾಪತ್ತೆಯಾಗಿದ್ದ ಯು.ಬಿ. ಅಯ್ಯಪ್ಪ ಅವರದ್ದಾಗಿರಬಹುದು ಎಂದು ಶಂಕಿಸಲಾಗಿದೆ.
05:05 PM (IST) Sep 18
ಕರಣ್ ಬೂಲಾನಿ ನಿರ್ದೇಶನದ 'ಥ್ಯಾಂಕ್ ಯೂ ಫಾರ್ ಕಮಿಂಗ್' ಸಿನಿಮಾ ನೆಟ್ಫ್ಲಿಕ್ಸ್ನಲ್ಲಿ ಭಾರೀ ಸದ್ದು ಮಾಡುತ್ತಿದೆ. ನೈಟ್ ಪಾರ್ಟಿಯೊಂದರಲ್ಲಿ ನಿಗೂಢ ವ್ಯಕ್ತಿಯೊಂದಿಗೆ ವಿಶೇಷ ಅನುಭವ ರೊಮ್ಯಾಂಟಿಕ್ ದೃಶ್ಯಗಳ ಕಥನ ನೀವೇ ನೋಡಿ..
05:01 PM (IST) Sep 18
Rajasthan Honeytrap: Businessman, 64, Loses ₹13 Lakhs; Mastermind Renuka Chaudhary Arrested ರಾಜಸ್ಥಾನದಲ್ಲಿ 64 ವರ್ಷದ ಉದ್ಯಮಿಯೊಬ್ಬರು ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾದ ರೇಣುಕಾ ಚೌಧರಿ ಎಂಬಾಕೆಯಿಂದ ಹನಿಟ್ರ್ಯಾಪ್ಗೆ ಒಳಗಾಗಿದ್ದಾರೆ.
04:30 PM (IST) Sep 18
ಕರ್ನಾಟಕ ಸರ್ಕಾರದ ಜಾತಿಗಣತಿ ಯೋಜನೆಗೆ ಹೈಕೋರ್ಟ್ನಲ್ಲಿ ಕಾನೂನು ಸವಾಲು ಎದುರಾಗಿದೆ. ಹಿಂದುಳಿದ ವರ್ಗಗಳ ಆಯೋಗದ ಅಧಿಕಾರ ವ್ಯಾಪ್ತಿ ಮತ್ತು ಜಾತಿಗಳ ವರ್ಗೀಕರಣದಲ್ಲಿನ ದೋಷಗಳನ್ನು ಪ್ರಶ್ನಿಸಿ ಎರಡು ಪ್ರತ್ಯೇಕ ಅರ್ಜಿಗಳು ಸಲ್ಲಿಕೆಯಾಗಿವೆ. ಇದರ ಬೆನ್ನಲ್ಲೇ ಸರ್ಕಾರ ದಿಢೀರ್ ಸಭೆ ಕರೆದಿದೆ.
04:27 PM (IST) Sep 18
03:34 PM (IST) Sep 18
ಬೆಂಗಳೂರಿನ ಹೊರವರ್ತುಲ ರಸ್ತೆಯಲ್ಲಿ ಟ್ರಾಫಿಕ್ ದಟ್ಟಣೆ ನಿಯಂತ್ರಿಸಲು ಸೆಪ್ಟೆಂಬರ್ 19ರಿಂದ ಒಂದು ವಾರಗಳ ಕಾಲ ತಾತ್ಕಾಲಿಕ ಸಂಚಾರ ಬದಲಾವಣೆಗಳನ್ನು ಜಾರಿಗೊಳಿಸಲಾಗಿದೆ. ಮಾರತ್ತಹಳ್ಳಿ-ಕಾಡುಬೀಸನಹಳ್ಳಿ ಸರ್ವಿಸ್ ರಸ್ತೆ ಪ್ರವೇಶ ನಿರ್ಬಂಧಿಸಲಾಗಿದ್ದು, ವಾಹನ ಸವಾರರಿಗೆ ಪರ್ಯಾಯ ಮಾರ್ಗ ಸೂಚಿಸಲಾಗಿದೆ.
03:24 PM (IST) Sep 18
02:38 PM (IST) Sep 18
ಕೋಲಾರದ ರಾಜೇನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ದಂಪತಿಯೊಬ್ಬರು ವಿಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ್ದಾರೆ. ತಮ್ಮ ಮನೆಯನ್ನು ಅಕ್ರಮವಾಗಿ ಬೇರೆಯವರಿಗೆ ಖಾತೆ ಮಾಡಿಕೊಟ್ಟ ಪಿಡಿಒ ವಿರುದ್ಧ ಆರೋಪಿಸಿ, ನ್ಯಾಯಕ್ಕಾಗಿ ಆಗ್ರಹಿಸಿ ಈ ಕೃತ್ಯಕ್ಕೆ ಮುಂದಾಗಿದ್ದಾರೆ.
02:03 PM (IST) Sep 18
ಭವಿಷ್ಯದ ದೃಷ್ಟಿಯಿಂದ ನಗರ ಯೋಜನೆ ಅತ್ಯುತ್ತಮವಾಗಿರಲು ನಗರ ಯೋಜನೆ ಮತ್ತು ವಾಸ್ತುಶಿಲ್ಪದ ಶಿಕ್ಷಣ ನೀಡುವ ಪ್ಲಾನಿಂಗ್ ಆ್ಯಂಡ್ ಆರ್ಕಿಟೆಕ್ಚರ್ ಸ್ಕೂಲ್ ಆರಂಭಿಸಲು ಪ್ರಯತ್ನ ನಡೆಸಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
01:46 PM (IST) Sep 18
ಜಾತಿ ಸಮೀಕ್ಷೆ ಹೆಸರಿನಲ್ಲಿ ಸರ್ಕಾರ ವೀರಶೈವ ಲಿಂಗಾಯತ ಸಮಾಜ ಒಡೆಯುವ ಹುನ್ನಾರ ನಡೆಸಿದ್ದು, ಇದರ ವಿರುದ್ಧ ಒಗ್ಗಟ್ಟು ಪ್ರದರ್ಶಿಸಲು ಸ್ವಾಮೀಜಿಗಳ ಮುಂದಾಳತ್ವದಲ್ಲಿ ಸೆ.19 ರಂದು ಹುಬ್ಬಳ್ಳಿಯಲ್ಲಿ ಏಕತಾ ಸಮಾವೇಶ ನಡೆಯುತ್ತಿದೆ ಎಂದು ಸಂಸದ ಬೊಮ್ಮಾಯಿ ಹೇಳಿದರು.
01:36 PM (IST) Sep 18
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಬೆಂಗಳೂರು 'ಗುಂಡಿಗಳ ನಗರ'ವಾಗಿ ಮಾರ್ಪಟ್ಟಿರುವುದಕ್ಕೆ ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಮತ್ತು ಭ್ರಷ್ಟಾಚಾರವೇ ಕಾರಣವೆಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಂಪನಿಗಳು ವಲಸೆ ಹೋಗುತ್ತಿದ್ದು, ಬೆಂಗಳೂರು ಬಿಡದಂತೆ ಉದ್ಯಮಿಗಳಲ್ಲಿ ಮನವಿ ಮಾಡಿದ್ದಾರೆ.
01:27 PM (IST) Sep 18
ಮುಂದಿನ ವಿಧಾನಸಭೆ ಚುನಾವಣೆ ಬಳಿಕ ಬಿಜೆಪಿಯವರೇ ಮುಖ್ಯಮಂತ್ರಿಯಾಗುತ್ತಾರೆಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು. 2028ಕ್ಕೆ ನಾನೇ ಸಿಎಂ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಗೆ ನಗರದಲ್ಲಿ ಪ್ರತಿಕ್ರಿಯೆ ನೀಡಿದರು.
01:22 PM (IST) Sep 18
bengaluru RTO Challan Scam ಬೆಂಗಳೂರಿನಲ್ಲಿ, ಆರ್ಟಿಒ ಚಲನ್ ಹೆಸರಿನಲ್ಲಿ ವಾಟ್ಸಾಪ್ನಲ್ಲಿ ಬಂದ ನಕಲಿ ಲಿಂಕ್ ಕ್ಲಿಕ್ ಮಾಡಿ ಉದ್ಯಮಿ ಮತ್ತು ರೈತ ಸೇರಿದಂತೆ ಹಲವರು ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದಾರೆ. ಈ ಎಪಿಕೆ ಫೈಲ್ ಮೂಲಕ ವಂಚಕರು ಫೋನ್ಗಳನ್ನು ಹ್ಯಾಕ್ ಮಾಡಿ ದೋಚಿದ್ದಾರೆ.
01:09 PM (IST) Sep 18
Bigg Boss Ranjith Family Files Complaint ಕಿರುತೆರೆ ನಟ ರಂಜಿತ್ ವಿರುದ್ಧ ಅವರ ಬಾವ ಜಗದೀಶ್ ಜೀವ ಬೆದರಿಕೆ ಆರೋಪದ ಮೇಲೆ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಫ್ಲ್ಯಾಟ್ಗೆ ಸಂಬಂಧಿಸಿದ ಈ ಜಗಳದಲ್ಲಿ ಅಕ್ಕ-ತಮ್ಮನ ನಡುವೆ ಗಲಾಟೆಯಾಗಿದೆ.
01:00 PM (IST) Sep 18
ನಮ್ಮ ಕುಟುಂಬದ ಮೇಲೆ ಯಾರು ಏನೇ ಮಾತನಾಡಿದರು ಅವರ ಬಗ್ಗೆ ತಲೆಕಡಿಸಿಕೊಳ್ಳಬೇಡಿ. ಯಾರೋ ಏನೋ ಹೇಳಿದ್ರು ಅಂಥ ತಪ್ಪಾಗಿ ತಿಳಿದುಕೊಳ್ಳಬೇಡಿ ಎಂದು ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಎಚ್ಚರಿಕೆ ಕೊಟ್ಟರು.
12:59 PM (IST) Sep 18
ಸ್ನೇಹಿತನ ಹೆಂಡತಿಯೊಂದಿಗೆ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಖಾಸಗಿ ಕಾಲೇಜು ಕ್ಲರ್ಕ್ ಮಹಾಂತೇಶ್ ಬುಕನಟ್ಟಿ ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾತ್ರಿ ಮನೆಗೆ ಹಿಂದಿರುಗುತ್ತಿದ್ದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆ ಮಾಡಿದ್ದಾನೆ.
12:18 PM (IST) Sep 18
ಹಿಂದೂ ಮಹಿಳೆಯೊಂದಿಗೆ ಲಾಡ್ಜ್ಗೆ ಹೋಗಿದ್ದ ಅಬ್ದುಲ್ ಸಮದ್ ಎಂಬ ಮುಸ್ಲಿಂ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತ 'ರಮೇಶ್' ಎಂಬ ಹಿಂದೂ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಬಳಸಿರುವುದು ತನಿಖೆಯ ವೇಳೆ ಬಯಲಾಗಿದೆ. ಈ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
12:06 PM (IST) Sep 18
ಗೆಳೆಯನೊಂದಿಗೆ ಹೊಡೆದಾಡಿಕೊಂಡ ASI ಪುತ್ರ: ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿಯ ವಿಚಾರವಾಗಿ ಎಎಸ್ಐ ಪುತ್ರ ಅರ್ಮಾನ್ ಮತ್ತು ಸೈಯದ್ ಅಜರುದ್ದೀನ್ ನಡುವೆ ನಡೆದ ಈ ಗಲಾಟೆಯಲ್ಲಿ ಇಬ್ಬರೂ ಗಾಯಗೊಂಡಿದ್ದು, ಈ ಸಂಬಂಧ ದೂರು ಪ್ರತಿದೂರು ದಾಖಲಾಗಿದೆ.