LIVE NOW
Published : Apr 10, 2026, 07:04 AM ISTUpdated : Apr 10, 2026, 10:21 AM IST

Karnataka news live: ರಾಜ್ಯ ಸರ್ಕಾರದಿಂದ ಹೊಸ ಆದೇಶ, ಇನ್ನು ರೂಟ್‌ ಕೆನಾಲ್‌ಗೂ ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಚಿಕಿತ್ಸೆ!

ಸಾರಾಂಶ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವುದಿಲ್ಲ. ಬದಲಿಗೆ ಡಿಜಿಟಲ್ ಅಂಕಪಟ್ಟಿ ಮಾತ್ರವೇ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಇದೇ ಮೊದಲ ಸಲ ಈ ಬಾರಿ ಫಲಿತಾಂಶ ದಿನದಂದೇ ವಿದ್ಯಾರ್ಥಿಗಳಿಗೆ ಡಿಜಿ ಲಾಕರ್ ಮೂಲಕವೂ ಅವರ ದ್ವಿತೀಯ ಪಿಯುಸಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ ಎಂದರು.

 

10:21 AM (IST) Apr 10

ರಾಜ್ಯ ಸರ್ಕಾರದಿಂದ ಹೊಸ ಆದೇಶ, ಇನ್ನು ರೂಟ್‌ ಕೆನಾಲ್‌ಗೂ ಆಯುಷ್ಮಾನ್‌ ಭಾರತ್‌ ಯೋಜನೆಯಡಿ ಚಿಕಿತ್ಸೆ!

ರಾಜ್ಯ ಸರ್ಕಾರವು ‘ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ’ ಯೋಜನೆಯಡಿ ರೂಟ್ ಕೆನಾಲ್ ಚಿಕಿತ್ಸೆಯನ್ನು (ಆರ್‌ಸಿಟಿ) ಸೇರಿಸಲು ಅನುಮೋದನೆ ನೀಡಿದೆ. ಈ ನಿರ್ಧಾರದಿಂದಾಗಿ, ಬಡ ರೋಗಿಗಳು ದುಬಾರಿ ವೆಚ್ಚದ ಬದಲು ನಿಗದಿತ ದರದಲ್ಲಿ ಚಿಕಿತ್ಸೆ ಪಡೆದು ಹಲ್ಲುಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿದೆ.

Read Full Story

09:53 AM (IST) Apr 10

ಜೀವಾವಧಿ ಶಿಕ್ಷೆಗೊಳಗಾದ ಕೈದಿಗೆ ಪಿಯುಸಿ ಪರೀಕ್ಷೆಯಲ್ಲಿ 80.16% ಅಂಕ!

ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ಎಸ್. ಅಶೋಕ್‌ ಕುಮಾರ್‌ ಎಂಬ ಕೈದಿ, ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಶೇ. 80.16 ಅಂಕ ಗಳಿಸಿ ಗಮನ ಸೆಳೆದಿದ್ದಾರೆ. ಜೈಲಿನ ಅಧಿಕಾರಿಗಳ ಸಹಕಾರದಿಂದ ದೂರ ಶಿಕ್ಷಣದ ಮೂಲಕ ಈ ಸಾಧನೆ ಮಾಡಿರುವ ವಿದ್ಯಾರ್ಥಿ

Read Full Story

09:17 AM (IST) Apr 10

ತ್ರಿಭಾಷಾ ಸೂತ್ರ ಮಕ್ಕಳ ಮೇಲೆ ಅನಗತ್ಯ ಹೊರೆ? ಕರ್ನಾಟಕ, ಕೆಲ ರಾಜ್ಯಗಳಲ್ಲಷ್ಟೇ ತೃತಿಯ ಭಾಷೆ ಕಡ್ಡಾಯ

Third language mandatory: ಕರ್ನಾಟಕದಲ್ಲಿ 70ರ ದಶಕದಿಂದ ಜಾರಿಯಲ್ಲಿರುವ ತ್ರಿಭಾಷಾ ಸೂತ್ರವು ವಿದ್ಯಾರ್ಥಿಗಳ ಮೇಲೆ ಅನಗತ್ಯ ಹೊರೆಯಾಗಿದೆ. ದೇಶದ ಬಹುತೇಕ ರಾಜ್ಯಗಳಲ್ಲಿ ದ್ವಿಭಾಷಾ ಸೂತ್ರವಿದ್ದು, ಹಿಂದಿ ಕಲಿಕೆಯಿಂದ ಉದ್ಯೋಗ ಸಿಗುತ್ತದೆ ಎಂಬುದು ಸುಳ್ಳೆಂದು ಲೇಖನವು ಪ್ರತಿಪಾದಿಸುತ್ತದೆ. 

Read Full Story

08:23 AM (IST) Apr 10

ಇರಾನ್ ಇಸ್ರೇಲ್ ಯುದ್ಧದಿಂದಾಗಿ ಔಷಧೀಯ ಡ್ರಗ್ಸ್‌ ಬರುವುದು ತಡವಾಗ್ತಿದೆ - ಆರೋಗ್ಯ ಸಚಿವ

ಇರಾನ್‌-ಇಸ್ರೇಲ್‌ ಯುದ್ಧದಿಂದಾಗಿ ಔಷಧ ತಯಾರಿಕೆಗೆ ಬೇಕಾದ ಕಚ್ಚಾ ವಸ್ತುಗಳ ಪೂರೈಕೆ ತಡವಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಆತಂಕ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ಔಷಧಗಳ ಕೊರತೆ ಬೆಲೆ ಏರಿಕೆ ಸಾಧ್ಯತೆಯಿದ್ದು, ಇದರ ಜವಾಬ್ದಾರಿ ಕೇಂದ್ರ ಸರ್ಕಾರದ ಮೇಲಿದೆ ಎಂದು ಅವರು ಹೇಳಿದ್ದಾರೆ.

Read Full Story

08:11 AM (IST) Apr 10

PUC results 2026 - ಜಿಬಿಎ ಪಿಯು ಕಾಲೇಜುಗಳಲ್ಲಿ ಶೆ.74 ಪಿಯು ಫಲಿತಾಂಶ!

PUC results 2026 ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಪದವಿ ಪೂರ್ವ ಕಾಲೇಜುಗಳು 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.74.16 ರಷ್ಟು ಫಲಿತಾಂಶ ದಾಖಲಿಸಿದ್ದು, ಕಳೆದ ವರ್ಷಕ್ಕಿಂತ ಶೇ.4ರಷ್ಟು ಸುಧಾರಣೆ ಕಂಡಿವೆ. 

Read Full Story

07:59 AM (IST) Apr 10

ಬಾಗಲಕೋಟೆ, ದಾವಣಗೆರೆ ಶೇ.68.43ರಷ್ಟು ಮತದಾನ - ಟಗರಿನೊಂದಿಗೆ ಬಂದ ಕೈ ಅಭ್ಯರ್ಥಿ, ಹಣ ಹಂಚಿಕೆ ವಿಡಿಯೋ ವೈರಲ್

ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಶೇ.68ಕ್ಕೂ ಹೆಚ್ಚು ಮತದಾನವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಟಗರಿನೊಂದಿಗೆ ಬಂದು ಮತ ಚಲಾಯಿಸಿದ್ದು, ಹಣ ಹಂಚಿಕೆ ಆರೋಪದ ಮೇಲೆ ಎಫ್‌ಐಆರ್‌ ದಾಖಲಾಗಿದೆ.
Read Full Story

07:27 AM (IST) Apr 10

ಪ್ರತ್ಯೇಕವಾಗಿ ವಾಸವಿದ್ದ ಪತ್ನಿಯ ಮೇಲೆ ಬಲವಂತದ ಸಂಭೋಗ, ಕಾನೂನು ಸಂಕಷ್ಟಕ್ಕೆ ಸಿಲುಕಿದ ಪತಿ! ಏನಿದು ಪ್ರಕರಣ?

ಪ್ರತ್ಯೇಕವಾಗಿ ವಾಸಿಸುತ್ತಿದ್ದ ಪತ್ನಿಯ ಮೇಲೆ ಬಲವಂತದ ಸಂಭೋಗ ನಡೆಸಿದ ಆರೋಪ ಎದುರಿಸುತ್ತಿರುವ ಪತಿಯ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಪ್ರತ್ಯೇಕಗೊಂಡ ಪತ್ನಿಯೊಂದಿಗೆ ಬಲವಂತದ ಸಂಭೋಗವು ಐಪಿಸಿ 376(ಬಿ) ಅಡಿಯಲ್ಲಿ ಅಪರಾಧವಾಗುತ್ತದೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

Read Full Story

More Trending News