LIVE NOW
Published : Jul 17, 2026, 09:51 AM ISTUpdated : Jul 17, 2026, 11:33 AM IST

Karnataka News Live Today: ತಪ್ಪು ಮಾಡದಿದ್ದರೆ ಜೈಲಿಗೆ ಹೋಗುವ ಭಯವೇಕೆ? 'ಜೈಲಿಗೆ ಕಳಿಸುವ ಸಂಕಲ್ಪ' ಎಂಬ ಸಿಎಂ ಡಿಕೆಶಿ ಹೇಳಿಕೆಗೆ ಜೋಶಿ ಹೇಳಿದ್ದೇನು?

ಸಾರಾಂಶ

ಪುತ್ರನ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಮರಳಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಪಸ್ಥಿತಿ ಹೊರತಾಗಿಯೂ ಕಾಂಗ್ರೆಸ್‌ ಹೈಕಮಾಂಡ್‌ ಸಂಪುಟ ವಿಸ್ತರಣೆ ಕುರಿತು ರಾಜ್ಯ ನಾಯಕರೊಂದಿಗೆ ಗುರುವಾರ ಗಂಭೀರ ಚರ್ಚೆ ನಡೆಸಿದ್ದು, ರಾಜ್ಯ ನಾಯಕರ ಅಭಿಪ್ರಾಯವನ್ನು ಸಂಪೂರ್ಣವಾಗಿ ಸಂಗ್ರಹಿಸಿದೆ.

ಮೂಲಗಳ ಪ್ರಕಾರ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಂಪುಟ ಸೇರಬೇಕಾದವರ ಬಗ್ಗೆ ತಮ್ಮ ಅಭಿಪ್ರಾಯ ಹಾಗೂ ಪಟ್ಟಿಯನ್ನು ಹೈಕಮಾಂಡ್‌ಗೆ ನೀಡಿದ್ದಾರೆ.

ಈ ಪಟ್ಟಿಯ ಬಗ್ಗೆ ಖರ್ಗೆ ಅವರು ದೆಹಲಿಗೆ ಹಿಂತಿರುಗಿದ ನಂತರ ಹೈಕಮಾಂಡ್‌ ಮತ್ತೊಮ್ಮೆ ಚರ್ಚೆ ನಡೆಸಲಿದೆ. ಈ ವೇಳೆ ಅಗತ್ಯಬಿದ್ದರೆ ರಾಜ್ಯ ನಾಯಕರನ್ನು ಮತ್ತೊಮ್ಮೆ ದೆಹಲಿಗೆ ಕರೆಸಬಹುದು. ಒಂದು ವೇಳೆ ತೀವ್ರ ಭಿನ್ನಾಭಿಪ್ರಾಯವಿಲ್ಲದ ಪಕ್ಷದಲ್ಲಿ ಹೈಕಮಾಂಡ್‌ ತಾನೇ ಪಟ್ಟಿ ಅಂತಿಮಗೊಳಿಸಿ ಒಪ್ಪಿಗೆ ಮುದ್ರೆ ನೀಡಿ ರಾಜ್ಯಕ್ಕೆ ರವಾನಿಸಬಹುದು. ಒಟ್ಟಾರೆ ವಿಧಾನಮಂಡಲ ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆ ಮಾಡುವ ಬಗ್ಗೆ ಹೈಕಮಾಂಡ್‌ ದೃಢ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.

11:33 AM (IST) Jul 17

ತಪ್ಪು ಮಾಡದಿದ್ದರೆ ಜೈಲಿಗೆ ಹೋಗುವ ಭಯವೇಕೆ? 'ಜೈಲಿಗೆ ಕಳಿಸುವ ಸಂಕಲ್ಪ' ಎಂಬ ಸಿಎಂ ಡಿಕೆಶಿ ಹೇಳಿಕೆಗೆ ಜೋಶಿ ಹೇಳಿದ್ದೇನು?

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಜೈಲು ಭಯದ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ. ಪ್ರಾಮಾಣಿಕರಾಗಿದ್ದರೆ ಜೈಲಿನ ಭಯವೇಕೆ ಎಂದು ಪ್ರಶ್ನಿಸಿರುವ ಅವರು, ಬಿಡದಿ ಟೌನ್‌ಶಿಪ್ ಯೋಜನೆಯಲ್ಲಿ ಡಿಕೆಶಿಗಿರುವ ವಿಶೇಷ ಆಸಕ್ತಿಯ ಬಗ್ಗೆಯೂ ಸಂಶಯ ವ್ಯಕ್ತಪಡಿಸಿದ್ದಾರೆ.
Read Full Story

10:57 AM (IST) Jul 17

ಹುಬ್ಬಳ್ಳಿ - 101 ವರ್ಷ ವಯಸ್ಸು, 40 ನಿಮಿಷದ ಸರ್ಜರಿ, ಮರುದಿನ ಡಿಸ್ಚಾರ್ಜ್! ದೇಶದ ಮೊದಲ ಯಶಸ್ವಿ ಕೀಲು ಚಿಕಿತ್ಸೆ!

ದೇಶದಲ್ಲೇ ಮೊದಲ ಬಾರಿಗೆ ಶತಾಯುಷಿಗೆ ಅಪರೂಪದ ರೀತಿಯ ಸೊಂಟದ ಕೀಲು (Hip Joint) ಮುರಿತಕ್ಕೆ ಹುಬ್ಬಳ್ಳಿಯ ಎಲುಬು ಕೀಲು ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.

Read Full Story

10:18 AM (IST) Jul 17

ಶಿವಮೊಗ್ಗ - ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಯೋಜನೆಗಳಿಗೆ ವೇಗ ನೀಡಿ - ಅಧಿಕಾರಿಗಳಿಗೆ ಸಂಸದ ಬಿವೈ ರಾಘವೇಂದ್ರ ಸೂಚನೆ

ಶಿವಮೊಗ್ಗದಲ್ಲಿ ಕೇಂದ್ರ ಸರ್ಕಾರದ ನೆರವಿನ ರೈಲ್ವೆ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳ್ಳದ ಬಗ್ಗೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭೂಸ್ವಾಧೀನ ಮತ್ತು ಅರಣ್ಯ ಇಲಾಖೆ ಸಮಸ್ಯೆಗಳಿಂದ ಉಂಟಾದ ವಿಳಂಬವನ್ನು ಸರಿಪಡಿಸಿ, ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಕಾಮಗಾರಿಗಳಿಗೆ ವೇಗ ನೀಡುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.
Read Full Story

More Trending News