ಪುತ್ರನ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಮರಳಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಪಸ್ಥಿತಿ ಹೊರತಾಗಿಯೂ ಕಾಂಗ್ರೆಸ್ ಹೈಕಮಾಂಡ್ ಸಂಪುಟ ವಿಸ್ತರಣೆ ಕುರಿತು ರಾಜ್ಯ ನಾಯಕರೊಂದಿಗೆ ಗುರುವಾರ ಗಂಭೀರ ಚರ್ಚೆ ನಡೆಸಿದ್ದು, ರಾಜ್ಯ ನಾಯಕರ ಅಭಿಪ್ರಾಯವನ್ನು ಸಂಪೂರ್ಣವಾಗಿ ಸಂಗ್ರಹಿಸಿದೆ.
ಮೂಲಗಳ ಪ್ರಕಾರ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಂಪುಟ ಸೇರಬೇಕಾದವರ ಬಗ್ಗೆ ತಮ್ಮ ಅಭಿಪ್ರಾಯ ಹಾಗೂ ಪಟ್ಟಿಯನ್ನು ಹೈಕಮಾಂಡ್ಗೆ ನೀಡಿದ್ದಾರೆ.
ಈ ಪಟ್ಟಿಯ ಬಗ್ಗೆ ಖರ್ಗೆ ಅವರು ದೆಹಲಿಗೆ ಹಿಂತಿರುಗಿದ ನಂತರ ಹೈಕಮಾಂಡ್ ಮತ್ತೊಮ್ಮೆ ಚರ್ಚೆ ನಡೆಸಲಿದೆ. ಈ ವೇಳೆ ಅಗತ್ಯಬಿದ್ದರೆ ರಾಜ್ಯ ನಾಯಕರನ್ನು ಮತ್ತೊಮ್ಮೆ ದೆಹಲಿಗೆ ಕರೆಸಬಹುದು. ಒಂದು ವೇಳೆ ತೀವ್ರ ಭಿನ್ನಾಭಿಪ್ರಾಯವಿಲ್ಲದ ಪಕ್ಷದಲ್ಲಿ ಹೈಕಮಾಂಡ್ ತಾನೇ ಪಟ್ಟಿ ಅಂತಿಮಗೊಳಿಸಿ ಒಪ್ಪಿಗೆ ಮುದ್ರೆ ನೀಡಿ ರಾಜ್ಯಕ್ಕೆ ರವಾನಿಸಬಹುದು. ಒಟ್ಟಾರೆ ವಿಧಾನಮಂಡಲ ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆ ಮಾಡುವ ಬಗ್ಗೆ ಹೈಕಮಾಂಡ್ ದೃಢ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ.
11:33 AM (IST) Jul 17
10:57 AM (IST) Jul 17
ದೇಶದಲ್ಲೇ ಮೊದಲ ಬಾರಿಗೆ ಶತಾಯುಷಿಗೆ ಅಪರೂಪದ ರೀತಿಯ ಸೊಂಟದ ಕೀಲು (Hip Joint) ಮುರಿತಕ್ಕೆ ಹುಬ್ಬಳ್ಳಿಯ ಎಲುಬು ಕೀಲು ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.
10:18 AM (IST) Jul 17