ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಿಡಬ್ಲ್ಯುಸಿ ಸದಸ್ಯರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಹೈಕಮಾಂಡ್ ನಾಯಕರೊಂದಿಗೆ ಸೋಮವಾರ ಇಲ್ಲವೇ ಮಂಗಳವಾರ ಮಹತ್ವದ ಸಭೆ ನಡೆಸಲಿದ್ದಾರೆ. ಹೈಕಮಾಂಡ್ ನಾಯಕರೊಂದಿಗೆ ಸಭೆಗೆ ಇನ್ನೂ ನಿರ್ದಿಷ್ಟ ಸಮಯ ನಿಗದಿಯಾಗಿಲ್ಲ, ಸೋಮವಾರ ನಿಗದಿಯಾಗಲಿದೆ. ಒಂದು ವೇಳೆ ಸೋಮವಾರ ಸಮಯ ನಿಗದಿಯಾಗದಿದ್ದಲ್ಲಿ ಮಂಗಳವಾರ ಸಭೆ ನಡೆಯಲಿದೆ ಎಂದು ತಿಳಿದು ಬಂದಿದೆ. ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆಯೇ ಮೂವರೂ ನಾಯಕರು ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ರಾಜ್ಯ ಎಂಪಿಗಳ ಜತೆ ಸಿಎಂ ಸಭೆ
ಇನ್ನೊಂದೆಡೆ ಕೇಂದ್ರ ಸರ್ಕಾರದಲ್ಲಿ ಬಾಕಿ ಇರುವ ರಾಜ್ಯದ ಯೋಜನೆಗಳು ಸೇರಿ ರಾಜ್ಯದ ಒಟ್ಟಾರೆ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಕುರಿತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕದ ಎಲ್ಲಾ ಸಂಸದರು, ರಾಜ್ಯಸಭಾ ಸದಸ್ಯರೊಂದಿಗೆ ನವದೆಹಲಿಯಲ್ಲಿ ಸೋಮವಾರ ಸಂಜೆ ಸಭೆ ನಡೆಸಲಿದ್ದಾರೆ. ಸೋಮವಾರ ಬೆಳಗ್ಗೆಯೇ ಬೆಂಗಳೂರಿನಿಂದ ದೆಹಲಿಗೆ ತೆರಳುವ ಮುಖ್ಯಮಂತ್ರಿ ಅವರು, ಸಂಜೆ ಸಂಸದರೊಂದಿಗೆ ಸಭೆ ನಡೆಸಲಿದ್ದಾರೆ.
10:20 PM (IST) Jul 27
ಮೃತಪಟ್ಟಿದ್ದಾನೆಂದು ಕುಟುಂಬಸ್ಥರು ಅಂತ್ಯಸಂಸ್ಕಾರ ನಡೆಸಿ ವ್ಯಕ್ತಿಯೊಬ್ಬ ಮೂರು ದಿನಗಳ ನಂತರ ಜೀವಂತವಾಗಿ ಮನೆಗೆ ಮರಳಿದ್ದಾನೆ. ಈ ಅನಿರೀಕ್ಷಿತ ಘಟನೆಯಿಂದ ಕುಟುಂಬ ಮತ್ತು ಪೊಲೀಸರು ದಂಗಾಗಿದ್ದು, ಅಂತ್ಯಕ್ರಿಯೆ ನಡೆಸಿದ್ದು ಯಾರ ಶವಕ್ಕೆ ಎಂಬ ಪ್ರಶ್ನೆ ಉದ್ಭವಿಸಿದೆ.
09:17 PM (IST) Jul 27
ಖಾನಾಪುರ ತಾಲೂಕಿನ ಗುಂಜಿ ಗ್ರಾಮದಲ್ಲಿ, ಮನೆಯೊಂದರ ಶೌಚಾಲಯದಲ್ಲಿ ರಾತ್ರಿಯಿಡೀ ಅಡಗಿದ್ದ ಚಿರತೆಯೊಂದು ಬೆಳಿಗ್ಗೆ ಮಹಿಳೆಯೊಬ್ಬರ ಮೇಲೆ ದಾಳಿಗೆ ಯತ್ನಿಸಿದೆ. ಅದೃಷ್ಟವಶಾತ್ ಮಹಿಳೆ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದು, ಈ ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
08:58 PM (IST) Jul 27
08:36 PM (IST) Jul 27
ರೋಟರಿ ಕ್ಲಬ್, ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಮತ್ತು ಭದ್ರಾ ಗ್ಯಾಸ್ ಏಜೆನ್ಸಿ ಸಹಯೋಗದಲ್ಲಿ 58 ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ರೋಟರಿ ಕ್ಲಬ್ನ 58ನೇ ಹಾಗೂ ಭದ್ರಾ ಗ್ಯಾಸ್ ಏಜೆನ್ಸಿಯ 40ನೇ ವರ್ಷದ ಅಂಗವಾಗಿ ಒಟ್ಟು 5 ಲಕ್ಷ ರೂಪಾಯಿ ಮೊತ್ತದ ಸ್ಕಾಲರ್ಶಿಪ್ ನೀಡಲಾಯಿತು.
08:14 PM (IST) Jul 27
08:02 PM (IST) Jul 27
ಗಂಭೀರ ವ್ಯಕ್ತಿತ್ವಕ್ಕೆ ಹೆಸರಾದ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಅವರ ಇನ್ಸ್ಟಾಗ್ರಾಮ್ ಖಾತೆಯ ಪೊಸ್ಟ್ನೊಂದಿಗೆ ಹೊಸ ವಿವಾದವೊಂದನ್ನು ತಳಕು ಹಾಕಿಕೊಂಡಿದ್ದಾರೆ. ಈ ಕುರಿತು ಸಂಪೂರ್ಣ ವಿವರ ಇಲ್ಲಿದೆ.
07:47 PM (IST) Jul 27
06:21 PM (IST) Jul 27
ಸಂಗೀತ ಪ್ರಿಯರ ಪಾಲಿಗೆ ಇಂದಿಗೂ ವಿಶೇಷ ಸ್ಥಾನ ಪಡೆದಿರುವ 'ಖುಷಿಯಾಗಿದೆ ಏಕೋ ನಿನ್ನಿಂದಲೆ' ಹಾಡು ಕೇಳಿದಾಗ ಪ್ರೇಮ, ಕಾಲೇಜು ದಿನಗಳು ಹಾಗೂ ಕೃಷ್ಣ ಅಜಯ್ ರಾವ್ ಅವರ ನೆನಪಿನ ಪಾತ್ರಗಳು ಕಣ್ಣ ಮುಂದೆ ಬರುತ್ತವೆ.
06:13 PM (IST) Jul 27
ರಾಜ್ಯ ಸರ್ಕಾರದ KSMCL ಸಂಸ್ಥೆಯು ₹136 ಕೋಟಿಗೂ ಅಧಿಕ ಅರಣ್ಯ ಅಭಿವೃದ್ಧಿ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದ್ದರೂ, ಬಳ್ಳಾರಿಯಲ್ಲಿ ಕನ್ವೇಯರ್ ಬೆಲ್ಟ್ ನಿರ್ಮಾಣಕ್ಕೆ 47 ಎಕರೆ ಅರಣ್ಯ ಭೂಮಿ ಬಳಸಲು ಕೇಂದ್ರ ಪರಿಸರ ಸಚಿವಾಲಯದಿಂದ ಅನುಮೋದನೆ ಪಡೆದಿದೆ.
05:45 PM (IST) Jul 27
ದೀರ್ಘ ವಿರಾಮದ ಬಳಿಕ ನಟಿ ಪಾರುಲ್ ಯಾದವ್ ಮತ್ತೆ ಕನ್ನಡ ಚಿತ್ರರಂಗಕ್ಕೆ ಮರಳುತ್ತಿದ್ದಾರೆ. ನಿರ್ದೇಶಕ ಪನ್ನಗಾಭರಣ ಅವರ ಹೊಸ ಕಾಮಿಡಿ ಎಂಟರ್ಟೈನರ್ ಚಿತ್ರದ ಮೂಲಕ ಪಾರುಲ್ ಕಂಬ್ಯಾಕ್ ಮಾಡುತ್ತಿದ್ದಾರೆ.
05:12 PM (IST) Jul 27
'ಡಿವೈನ್ ಸ್ಟಾರ್' ರಿಷಬ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಐತಿಹಾಸಿಕ ಸಿನಿಮಾ 'ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್' ತಂಡಕ್ಕೆ ಬಾಲಿವುಡ್ ನಟಿ ಭೂಮಿ ಪೆಡ್ನೇಕರ್ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
04:49 PM (IST) Jul 27
ಬೆಂಗಳೂರಿನ ತೀವ್ರ ಸಂಚಾರ ದಟ್ಟಣೆಯನ್ನು ನಿವಾರಿಸಲು, ಬೆಂಗಳೂರು ನಗರ ಸಂಚಾರ ಪೊಲೀಸರು 'ನಿಯಂತ್ರಿತ ಕಾರ್ ಪೂಲಿಂಗ್' ವ್ಯವಸ್ಥೆಯನ್ನು ಜಾರಿಗೆ ತರಲು ಮುಂದಾಗಿದ್ದಾರೆ. ಒಟ್ಟು 5 ಪ್ರಮುಖ ಪ್ರಸ್ತಾವನೆಗಳನ್ನು ಒಳಗೊಂಡ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ಅನುಮೋದನೆಗಾಗಿ ಕಾಯುತ್ತಿದ್ದಾರೆ.
04:43 PM (IST) Jul 27
ಬೀದರ್ ಸಮೀಪದ, ಚಾಲಕನ ಮಗಳಾದ 21ರ ಹರೆಯದ ಇಶಾ, ಶೂಟಿಂಗ್ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ್ದಾರೆ. ISSF ವಿಶ್ವಕಪ್ನಲ್ಲಿ ಭಾರತದ ಸ್ಟಾರ್ ಶೂಟರ್ ಮನು ಭಾಕರ್ ಅವರನ್ನು ಹಿಂದಿಕ್ಕಿ ಚಿನ್ನ ಗೆದ್ದ ಇವರು, ಏಷ್ಯನ್ ಗೇಮ್ಸ್ನಲ್ಲೂ ನಾಲ್ಕು ಪದಕಗಳನ್ನು ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾರೆ.
04:40 PM (IST) Jul 27
Spider Man Brand New Day India: 'ಕಾಂತಾರ' ಚಿತ್ರದ ಮೂಲಕ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕನ್ನಡದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇದೀಗ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದಾರೆ.
04:39 PM (IST) Jul 27
ಹಾವು ನಾಗಸ್ವರಕ್ಕೆ ಕುಣಿಯುವುದು ಮಂತ್ರದ ಶಕ್ತಿಯೂ ಅಲ್ಲ ಅಥವಾ ಸಂಗೀತದ ಮಹಿಮೆಯೂ ಅಲ್ಲ. ಅದು ಕೇವಲ ಒಂದು ಜೀವಿಯ ರಕ್ಷಣಾತ್ಮಕ ನಡವಳಿಕೆ ಮಾತ್ರ. ಪ್ರಕೃತಿಯ ಈ ಅದ್ಭುತ ಜೀವಿಗಳನ್ನು ಅವುಗಳ ಪಾಡಿಗೆ ಕಾಡಿನಲ್ಲಿ ಬದುಕಲು ಬಿಡುವುದೇ ನಾವು ಅವಕ್ಕೆ ನೀಡುವ ಗೌರವ
04:22 PM (IST) Jul 27
ಕಿರುತೆರೆ ನಟ ಧ್ರುವಂತ್, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ನಿರಂತರವಾಗಿ ಅವಾಚ್ಯ, ಅಶ್ಲೀಲ ಹಾಗೂ ಮಾನಹಾನಿಕಾರಕ ಪೋಸ್ಟ್ಗಳನ್ನು ಪ್ರಕಟಿಸುತ್ತಿರುವ ಟ್ರೋಲರ್ಗಳ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.
03:49 PM (IST) Jul 27
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು,ಬಾಂಬೆ ಹೈಕೋರ್ಟ್ನಲ್ಲಿ ಮೆಟಾ, ಗೂಗಲ್, ಮತ್ತು ಎಕ್ಸ್ ವಿರುದ್ಧ ಮೊಕದ್ದಮೆ ಹೂಡಿದ್ದಾರೆ. ಸಾಮಾಜಿಕ ಜಾಲತಾಣ ದೈತ್ಯರ ಹೊಣೆಗಾರಿಕೆಯನ್ನು ಪ್ರಶ್ನಿಸಿದ್ದೇಕೆ ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ!
02:38 PM (IST) Jul 27
"ಕಥೆ ಎಳೆಯೋ ಬದಲು, ಎಲ್ಲರೂ ಸುಖವಾಗಿದ್ದಾಗಲೇ ಮುಗಿಸಿಬಿಡಿ" ಎಂಬ ಕೂಗು ಒಂದೆಡೆಯಾದರೆ, "ಭೂಮಿಕಾ ಸಾವನ್ನಪ್ಪಬಾರದು, ಚಮತ್ಕಾರ ನಡೆಯಬೇಕು" ಎನ್ನುವ ಹಂಬಲ ಇನ್ನೊಂದೆಡೆ. ಮುಂದೇನಾಗುತ್ತೆ? ಈ ಸ್ಟೋರಿ ನೋಡಿ..
02:14 PM (IST) Jul 27
01:31 PM (IST) Jul 27
12:43 PM (IST) Jul 27
12:40 PM (IST) Jul 27
12 ವರ್ಷಗಳ ಕಾಲ ಕತ್ತಲೆಯನ್ನು ಉಂಡಿದ್ದ ಆ ಕಣ್ಣುಗಳು ಅಂದು ಬೆಳಕನ್ನು ನೋಡಿ ಬೆರಗಾದವು. ನಮ್ಮ ಪಾಲಿಗೆ ಸುವೇಂದು ಅಧಿಕಾರಿ ಅವರು ಸಾಕ್ಷಾತ್ ದೇವರಂತೆ ಬಂದರು ಎಂದು ಕೃಷ್ಣ ಬೌರಿ ಕೈಮುಗಿದು ಕೃತಜ್ಞತೆ ಸಲ್ಲಿಸಿದರು. ಅಷ್ಟಕ್ಕೂ ಏನಾಗಿತ್ತು? ಈ ಸ್ಟೋರಿ ಓದಿ..
12:27 PM (IST) Jul 27
ನಮ್ಮ ಪುರಾತನ ಆಯುರ್ವೇದ ಮತ್ತು ಮನೆಮದ್ದುಗಳಲ್ಲಿ ಅನೇಕ ರಹಸ್ಯಗಳಿವೆ. ಹಿರಿಯರು ಹೇಳುವ ಪ್ರಕಾರ ಮತ್ತು ಕೆಲವು ಜೀವನಶೈಲಿ ತಜ್ಞರ ಅಭಿಪ್ರಾಯದಂತೆ, ಹೃದಯಾಘಾತದ ಲಕ್ಷಣಗಳು ಕಂಡುಬಂದ ತಕ್ಷಣ ಈ ಎಲೆಯನ್ನು ಬಳಸಬಹುದು.
12:21 PM (IST) Jul 27
ಬೆಂಗಳೂರಿನ ಥಣಿಸಂದ್ರದಲ್ಲಿರುವ ಕಾರು ಗ್ಯಾರೇಜ್ವೊಂದರಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಜಾಗ್ವಾರ್, ಆಡಿ ಸೇರಿದಂತೆ 25ಕ್ಕೂ ಹೆಚ್ಚು ಐಷಾರಾಮಿ ಕಾರುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.
12:06 PM (IST) Jul 27
11:55 AM (IST) Jul 27
11:45 AM (IST) Jul 27
ಪ್ರಸಿದ್ಧ ಪ್ರವಾಸಿ ತಾಣವಾದ ಶಿವಗಂಗೆ ಬೆಟ್ಟದಲ್ಲಿ, ಯುವತಿಯೊಬ್ಬಳ ಮೊಬೈಲ್ ಫೋನ್ ಅನ್ನು ಮಂಗವೊಂದು ಕಸಿದುಕೊಂಡು ದೇವಾಲಯದ ಗೋಪುರದ ಮೇಲೆ ಕುಳಿತು ಸುಮಾರು ಒಂದು ಗಂಟೆ ಕಾಲ ಆಟವಾಡಿದೆ. ಬಹಳಷ್ಟು ಹರಸಾಹಸದ ನಂತರ ಮಂಗವು ಫೋನ್ ಅನ್ನು ಕೆಳಗೆ ಹಾಕಿದ್ದು, ಯುವತಿ ನಿಟ್ಟುಸಿರು ಬಿಟ್ಟರೂ ಫೋನ್ಗೆ ಸಣ್ಣಪುಟ್ಟ ಹಾನಿಯಾಗಿತ್ತು.
11:33 AM (IST) Jul 27
11:27 AM (IST) Jul 27
11:16 AM (IST) Jul 27
ಬಿಗ್ ಬಾಸ್ ಗೆದ್ದ ಖುಷಿಯಲ್ಲಿರುವ ರಕ್ಷಿತಾ ಶೆಟ್ಟಿಗೆ ಅವರ ಹಳೆಯ ‘ಗೆಳೆಯರ’ ವರ್ತನೆ ಸ್ವಲ್ಪ ಬೇಸರ ತರಿಸಿರಬಹುದು. ಆದರೂ ರಕ್ಷಿತಾ ಒಬ್ಬ ಅದ್ಭುತ ಆಟಗಾರ್ತಿ ಎಂಬುದನ್ನು ಒಪ್ಪಿಕೊಂಡಿರುವ ಜಾಹ್ನವಿ, ಶೋ ಯಶಸ್ಸಿಗೆ ತಾವೆಲ್ಲರೂ ಕೊಟ್ಟ ‘ಮಸಾಲಾ’ ಕೂಡ ಕಾರಣ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.
11:03 AM (IST) Jul 27
10:49 AM (IST) Jul 27
ದೇಶಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ನಡೆಯುವ ನೀಟ್ (NEET) ಪರೀಕ್ಷೆಯ ಫಲಿತಾಂಶದ ಒತ್ತಡ ಮತ್ತೊಂದು ಬಲಿಯನ್ನು ಪಡೆದಿದೆ.
10:19 AM (IST) Jul 27
10:08 AM (IST) Jul 27
ವರದಿ: ರಂಗೂಪುರ ಶಿವಕುಮಾರ್
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವಲಯದ ಅಂಚಿನಲ್ಲಿ, ರಿಯಲ್ ಎಸ್ಟೇಟ್ ಉದ್ಯಮಿಗಳು ಕೃಷಿ ಭೂಮಿಯನ್ನು ಅಕ್ರಮವಾಗಿ 'ಫಾರ್ಮ್ ಫ್ಲಾಟ್'ಗಳಾಗಿ ಪರಿವರ್ತಿಸಿ ಮಿನಿ ಟೌನ್ಶಿಪ್ ನಿರ್ಮಿಸುತ್ತಿದ್ದಾರೆ.
09:37 AM (IST) Jul 27
ಕಾಡುಹಂದಿ ಬೇಟೆಗಾಗಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ, ಕೊಲೆ ಪ್ರಕರಣದ ಮಾದರಿಯಲ್ಲೇ ತಿರುವು ಪಡೆದುಕೊಂಡಿದೆ. ಸಿಕ್ಕಿಬೀಳುವ ಭೀತಿಯಿಂದ ಬೇಟೆಗಾರರು ಶವವನ್ನೇ ಹೂತು ಹಾಕಿ, ಕೇಸ್ ಮುಚ್ಚಿ ಹಾಕಲು ನಡೆಸಿದ್ದ ಮಾಸ್ಟರ್ ಪ್ಲಾನ್ ಸಿಸಿ ಕ್ಯಾಮೆರಾದ ಒಂದು ದೃಶ್ಯದಿಂದ ವಿಫಲವಾಗಿದೆ
09:34 AM (IST) Jul 27
08:33 AM (IST) Jul 27
ದಾವಣಗೆರೆಯ ದುರ್ಗಾಂಬಿಕಾ ದೇವಸ್ಥಾನದ ಪೂಜಾರಿ ಆಕಾಶ್, ದೇವಿಯ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕದ್ದು, ಕರಗಿಸಿ ಮಾರಾಟ ಮಾಡಿದ್ದಾನೆ. ಈ ವಂಚನೆ ಬೆಳಕಿಗೆ ಬಂದ ನಂತರ, ಎಸ್.ಎಸ್. ಮಲ್ಲಿಕಾರ್ಜುನ್ ನೇತೃತ್ವದ ದೇವಸ್ಥಾನ ಟ್ರಸ್ಟ್, ಕಳುವಾದ ಸಂಪೂರ್ಣ ಚಿನ್ನವನ್ನು ವಾಪಸ್ ನೀಡುವಂತೆ ಆರೋಪಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಸದ್ಯ ಯಾವುದೇ ಪೊಲೀಸ್ ಪ್ರಕರಣ ದಾಖಲಾಗಿಲ್ಲ.