ಬೆಂಗಳೂರು (ಸೆ.4): ಬಿಜೆಪಿಯ ಬಳ್ಳಾರಿ ಚಲೋ ಪಾದಯಾತ್ರೆಗೆ ಮೂರನೇ ದಿನವೂ ಭರ್ಜರಿ ಸ್ಪಂದನೆ ವ್ಯಕ್ತವಾಗಿದೆ. ರೈತರ 5 ಲಕ್ಷ ರೂಪಾಯಿವರೆಗಿನ ಸಾಲಮನ್ನಾ ಮಾಡುವಂತೆ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಬಿಗಿಪಟ್ಟು ಹಿಡಿದಿದ್ದಾರೆ. ರಾಜ್ಯದ 190 ತಾಲೂಕುಗಳಲ್ಲಿ ಬರ ತಾಂಡವವಾಡುತ್ತಿದೆ. ಹೀಗಾಗಿ ರೈತರರಿಗೆ ವಿಶೇಷ ನೆರವು ಅಗತ್ಯವಾಗಿದೆ.ಕೃಷಿಕರ ಸಮಸ್ಯೆ ಚರ್ಚೆಗೆ ಅಧಿವೇಶನ ಕರೆಯಿರಿ ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್ಡೇಟ್ ಇಲ್ಲಿದೆ.
08:24 AM (IST) Sep 04
ಪಶುವೈದ್ಯಾಧಿಕಾರಿಗಳ ಹುದ್ದೆ ಮಾರಾಟ ಸಂಬಂಧ ಕೆಪಿಎಸ್ಸಿ ಕಚೇರಿಯಲ್ಲೇ ಐಎಎಸ್ ಅಧಿಕಾರಿ ಜ್ಞಾನೇಂದ್ರ ಅವರಿಗೆ ಒಂದು ಕೋಟಿ ರೂ. ಸಂದಾಯವಾಗಿದೆ ಎಂದು ಹೇಳಲಾಗಿದೆ. ಈ ಪ್ರಕರಣದಲ್ಲಿ ಬಂಧಿತರಾಗಿರುವ ಜ್ಞಾನೇಂದ್ರ ಕುಮಾರ್ ಅವರನ್ನು ಸರ್ಕಾರ ಅಮಾನತು ಮಾಡಿದೆ.
08:09 AM (IST) Sep 04
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಭೆಯಲ್ಲಿ ನಗರದ 103 ಬಸ್ ನಿಲುಗಡೆ ತಾಣಗಳ ಸ್ಥಳಾಂತರ, ಬಿಎಂಟಿಸಿ-ಮೆಟ್ರೋಗೆ ಏಕೀಕೃತ ಮೊಬಿಲಿಟಿ ಕಾರ್ಡ್ ಜಾರಿ ಮತ್ತು ಅಗ್ನಿಶಾಮಕ ಇಲಾಖೆಗೆ ಹೆಚ್ಚಿನ ಸೌಲಭ್ಯ ಒದಗಿಸುವ ಕುರಿತು ಚರ್ಚಿಸಲಾಗಿದೆ.
08:07 AM (IST) Sep 04
07:52 AM (IST) Sep 04
ಮಂಗಳೂರು ಮತ್ತು ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ನ ಪರೀಕ್ಷಾರ್ಥ ಸಂಚಾರಕ್ಕೆ ದಿನಾಂಕ ನಿಗದಿಯಾಗಿದೆ. ಯಶವಂತಪುರ ಜಂಕ್ಷನ್ನಿಂದ ಮಂಗಳೂರು ಸೆಂಟ್ರಲ್ವರೆಗೆ ನಡೆಯಲಿರುವ ಈ ಪ್ರಾಯೋಗಿಕ ಓಟದ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
07:38 AM (IST) Sep 04
ವಿಪ್ರೋ-ಕವಾಸಕಿ ಪ್ರಿಸಿಷನ್ ಮಷಿನರಿ ಸಂಸ್ಥೆಯು ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಒಂದು ಸಾವಿರ ಕೋಟಿ ರು. ಹೂಡಿಕೆಯೊಂದಿಗೆ ಹೊಸ ಹೈಡ್ರಾಲಿಕ್ ಪಂಪ್ ಉತ್ಪಾದನಾ ಘಟಕವನ್ನು ಸ್ಥಾಪಿಸಲಿದೆ. ಈ ಯೋಜನೆಯಿಂದಾಗಿ ಸುಮಾರು 1200 ಹೊಸ ಉದ್ಯೋಗಗಳು ಸೃಷ್ಟಿಯಾಗಲಿದೆ.
07:28 AM (IST) Sep 04
ನಟ ದುನಿಯಾ ವಿಜಯ್ ಪುತ್ರ ಸಾಮ್ರಾಟ್ ಮತ್ತು ಆತನ ಸ್ನೇಹಿತರ ಮೇಲೆ ಕಾಲೇಜು ಕ್ಯಾಂಪಸ್ ಗಲಾಟೆ ಸಂಬಂಧ ಎಫ್ಐಆರ್ ದಾಖಲಾಗಿದೆ. ಇದಕ್ಕೆ ಪ್ರತಿಯಾಗಿ, ಸಾಮ್ರಾಟ್ ಸ್ನೇಹಿತ ಸಮೃದ್ ಕೂಡ ಮನೀಷ್ ಗೌಡ ಮತ್ತು ಆತನ ಸ್ನೇಹಿತರ ವಿರುದ್ಧ ಪ್ರತಿ ದೂರು ದಾಖಲಿಸಲಾಗಿದೆ.
07:18 AM (IST) Sep 04
ಕೆ.ಆರ್. ಮಾರುಕಟ್ಟೆಯಲ್ಲಿ ಆದಾಯ ಸೋರಿಕೆ ತಡೆಯಲು ಪಾಲಿಕೆಯು ಹೊಸ ಟೋಲ್ ಗೇಟ್ ವ್ಯವಸ್ಥೆಯನ್ನು ಜಾರಿಗೆ ತರುತ್ತಿದೆ. ಈ ಮೂಲಕ ಸರಕು ಸಾಗಣೆ ವಾಹನಗಳಿಗೆ ಲೋಡ್ ಆಧಾರದ ಮೇಲೆ ನಿಗದಿತ ಶುಲ್ಕ ವಿಧಿಸಲಾಗುತ್ತಿದ್ದು, ಆರ್ಟಿಸಿ ದಾಖಲೆ ಹಾಜರುಪಡಿಸುವ ರೈತರಿಗೆ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ.
06:53 AM (IST) Sep 04
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ 'ಬಳ್ಳಾರಿ ಚಲೋ' ಪಾದಯಾತ್ರೆ ನಡೆದಿದ್ದು, ಬರಪೀಡಿತ ರೈತರ ₹5 ಲಕ್ಷದವರೆಗಿನ ಬೆಳೆ ಸಾಲ ಮನ್ನಾಕ್ಕೆ ಆಗ್ರಹಿಸಲಾಗಿದೆ. ವಾಲ್ಮೀಕಿ ನಿಗಮದ ಹಗರಣ ಸೇರಿದಂತೆ ಸರ್ಕಾರದ ವೈಫಲ್ಯಗಳನ್ನು ಖಂಡಿಸಲಾಯಿತು.