ಬೆಂಗಳೂರು (ಏ.14): ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆ ಬಳಿಕ ರಾಜ್ಯದಲ್ಲಿ ಸಂಪುಟ ಪುನರ್ರಚನೆ ಚರ್ಚೆ ಜೋರಾಗಿದ್ದು, ಸಚಿವ ಸ್ಥಾನ ಬಯಸಿ ದೆಹಲಿಗೆ ತೆರಳಿರುವ ಕಾಂಗ್ರೆಸ್ ಹಿರಿಯ ಶಾಸಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ತಮ್ಮ ಅಹವಾಲು ಮಂಡಿಸಿದ್ದಾರೆ. ರಾಷ್ಟ್ರ ರಾಜಧಾನಿಯ ರಾಜಾಜಿ ಮಾರ್ಗದಲ್ಲಿರುವ ಖರ್ಗೆ ಅವರ ಮನೆಗೆ ಸೋಮವಾರ 23 ಶಾಸಕರ ನಿಯೋಗ ತೆರಳಿದ್ದು, ರಾಜ್ಯ ರಾಜಕಾರಣದ ಕುರಿತು ಚರ್ಚೆ ನಡೆಸಿದ್ದಾರೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್ಡೇಟ್ ಇಲ್ಲಿದೆ.
11:48 AM (IST) Apr 14
11:43 AM (IST) Apr 14
ಮೈಸೂರಿನಲ್ಲಿ ಆಟೋ ಗ್ಯಾಸ್ ಕೊರತೆಯಿಂದ ಚಾಲಕರು ಗಂಟೆಗಟ್ಟಲೆ ಸಾಲುಗಟ್ಟಿ ನಿಂತು ಪರದಾಡುತ್ತಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ, ಕಿರಣ್ ಎಂಬ ಫೈನಾನ್ಷಿಯರ್ ನೂರಾರು ಚಾಲಕರಿಗೆ ತಲಾ 200 ರೂಪಾಯಿ ನೀಡಿ ಮಾನವೀಯತೆ ಮೆರೆದಿದ್ದಾರೆ.
11:41 AM (IST) Apr 14
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹಾವೇರಿ ವಿಭಾಗವು ಹಾವೇರಿ-ಬೆಂಗಳೂರು, ಹುಬ್ಬಳ್ಳಿ-ಹಾವೇರಿ-ಬೆಂಗಳೂರು ಹಾಗೂ ದಾವಣಗೆರೆ-ಹಾವೇರಿ-ಪಣಜಿ ಸೇರಿದಂತೆ ವಿವಿಧ ಮಾರ್ಗಗಳಲ್ಲಿ ಹೊಸ ಬಸ್ಸುಗಳ ಸಂಚಾರವನ್ನು ಆರಂಭಿಸಿದೆ. ಉಪ ಸಭಾಪತಿ ಹಾಗೂ ಶಾಸಕ ರುದ್ರಪ್ಪ ಲಮಾಣಿ ಅವರು ಈ ನೂತನ ಸಾರಿಗೆ ಸೇವೆಗೆ ಚಾಲನೆ ನೀಡಿದರು.
11:40 AM (IST) Apr 14
Actress Sanjana Burli: ಪುಟ್ಟಕ್ಕನ ಮಕ್ಕಳು, ಶ್ರೀಗಂಧದ ಗುಡಿ ಧಾರಾವಾಹಿ ನಟಿ ಸಂಜನಾ ಬುರ್ಲಿ ಅವರು ಡಾಕ್ಟರ್ ಸಮರ್ಥ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇವರ ಮದುವೆ ಸ್ಟೋರಿ, ಹೇಗೆ ಪರಿಚಯ ಆಯ್ತು ಎಂಬುದನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ ಡಿಜಿಟಲ್ ಜೊತೆ ಬಿಚ್ಚಿಟ್ಟಿದ್ದಾರೆ.
11:33 AM (IST) Apr 14
ಧಾರವಾಡದಲ್ಲಿ ಖಾಲಿ ಇರುವ 2.84 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆಗೆ ಮುಂದಾಗಿದ್ದಾರೆ. ಪ್ರತಿಭಟನೆಗೆ ಮುನ್ನವೇ ಪೊಲೀಸರು ವಿದ್ಯಾರ್ಥಿ ಮುಖಂಡರಿಗೆ ನೋಟಿಸ್ ನೀಡಿದ್ದು, ಕೆಲವರನ್ನು ವಶಕ್ಕೆ ಪಡೆದಿದ್ದರೂ ಹೋರಾಟ ಮುಂದುವರಿಸಲು ಯುವಕರು ಸಜ್ಜಾಗಿದ್ದಾರೆ.
11:16 AM (IST) Apr 14
ಕೊಪ್ಪಳದಲ್ಲಿ ಲವ್ ಜಿಹಾದ್ ಆರೋಪ ಎದುರಿಸುತ್ತಿರುವ ಮುಸ್ತಾಫಾ ಖಾದ್ರಿಗೆ ಅಂತರ ರಾಜ್ಯ ಸಂಪರ್ಕದ ಶಂಕೆ ವ್ಯಕ್ತವಾಗಿದೆ. ಯುವತಿಯರ ಖಾಸಗಿ ವೀಡಿಯೋ, ಫೋಟೋಗಳಿರುವ ಆತನ ಮೊಬೈಲ್ಗಳನ್ನು ಪೊಲೀಸರು ವಶಕ್ಕೆ ಪಡೆದು ಎಫ್ಎಸ್ಎಲ್ಗೆ ಕಳುಹಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ.
11:06 AM (IST) Apr 14
11:00 AM (IST) Apr 14
karna serial: ಕರ್ಣ ಧಾರಾವಾಹಿ ಆರಂಭವಾಗಿ 200 ಸಂಚಿಕೆಗಳು ಪ್ರಸಾರ ಆಗಿವೆ. ಕರ್ಣ, ನಿತ್ಯಾ, ನಿಧಿ ಪಾತ್ರದ ಸುತ್ತವೇ ಈ ಸೀರಿಯಲ್ ಕತೆ ಸಾಗುತ್ತಿದೆ. ನಿಧಿ ಪಾತ್ರದಲ್ಲಿ ಭವ್ಯಾ ಗೌಡ ಅವರು ನಟಿಸುತ್ತಿದ್ದಾರೆ. ಈಗ ಸೀರಿಯಲ್ ಬಗ್ಗೆ ಭವ್ಯಾ ಗೌಡ ಅವರು ಸೋಶಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿದ್ದಾರೆ.
10:56 AM (IST) Apr 14
10:42 AM (IST) Apr 14
10:26 AM (IST) Apr 14
ಮಧ್ಯಪ್ರಾಚ್ಯ ಯುದ್ಧದಿಂದಾಗಿ ವಾಣಿಜ್ಯ ಸಿಲಿಂಡರ್ಗಳ ಅಭಾವ ಎದುರಿಸುತ್ತಿರುವ ಹೋಟೆಲ್ ಉದ್ಯಮ, ಭವಿಷ್ಯದ ಸಂಕಷ್ಟವನ್ನು ತಪ್ಪಿಸಲು ಪರ್ಯಾಯ ಮಾರ್ಗ ಕಂಡುಕೊಂಡಿದೆ. ಯುದ್ಧದ ಕಾರ್ಮೋಡ ಕವಿದಿರುವುದರಿಂದ ಪರ್ಯಾಯ ಮೂಲದತ್ತ ಹೆಜ್ಜೆ ಇಡಲಿದೆ.
10:23 AM (IST) Apr 14
10:12 AM (IST) Apr 14
Ambedkar Jayanti 2026 ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ 'ಬೋಧಿಸತ್ವ' ಬಿರುದು ಹೇಗೆ ಬಂತು ಮತ್ತು ಅವರ ಚಿಂತನೆಗಳು, ಸಂವಿಧಾನ ರಚನೆಯಲ್ಲಿ ಗೌತಮ ಬುದ್ಧನ ಧಮ್ಮದ ಬೋಧನೆಗಳು ಹೇಗೆ ಆಳವಾಗಿ ಪ್ರಭಾವ ಬೀರಿದವು ಎಂಬುದನ್ನು ಈ ಲೇಖನ ವಿವರಿಸುತ್ತದೆ.
09:50 AM (IST) Apr 14
ತನ್ನ ಪತಿಯೊಂದಿಗೆ ಜೀವನ ನಡೆಸದೆ, ಪ್ರಿಯಕರನೊಂದಿಗೆ ಓಡಿಹೋಗಿ ಕುಟುಂಬದ ಮಾನವನ್ನು ಹರಾಜು ಹಾಕಿದಳು ಎಂಬ ಕಾರಣಕ್ಕೆ ಯುವತಿಯನ್ನು ಕುಟುಂಬಸ್ಥರೇ ಹತ್ಯೆ ಮಾಡಿ, ನಂತರ ಸಾಕ್ಷಿ ನಾಶಕ್ಕಾಗಿ ಶವ ಸುಟ್ಟುಹಾಕಿದ ಘಟನೆ ಮಾ.13ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
08:31 AM (IST) Apr 14
ಮಹಿಳಾ ಮೀಸಲಾತಿ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕ್ಷೇತ್ರ ಮರುವಿಂಗಡಣೆಗೆ ಮುಂದಾಗಿದ್ದು, ಇದು ರಾಜಕೀಯ ಪ್ರೇರಿತವಾಗಿದೆ. ಜನಸಂಖ್ಯೆ ಆಧಾರಿತ ಈ ಮರುವಿಂಗಡಣೆಯು, ಉತ್ತಮ ಪ್ರಗತಿ ಸಾಧಿಸಿರುವ ದಕ್ಷಿಣದ ರಾಜ್ಯಗಳ ಸಂಸದೀಯ ಪ್ರಾತಿನಿಧ್ಯವನ್ನು ಕುಗ್ಗಿಸಿ, ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರಲಿದೆ ಎಂದರು.
08:11 AM (IST) Apr 14
ಕ್ಷೇತ್ರ ಮರುವಿಂಗಡಣೆಯು 'ಒಂದು ಮತ-ಒಂದು ಮೌಲ್ಯ' ತತ್ವವನ್ನು ಖಚಿತಪಡಿಸಲು ಅಗತ್ಯವಾದ ಸಾಂವಿಧಾನಿಕ ಸುಧಾರಣೆಯಾಗಿದೆ. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಇದನ್ನು ಉತ್ತರ-ದಕ್ಷಿಣ ವಿವಾದವಾಗಿ ಬಿಂಬಿಸುತ್ತಿರುವುದು ರಾಜಕೀಯ ದ್ವಂದ್ವ ನಿಲುವು? ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದೇನು? ಮುಂದೆ ಓದಿ
07:54 AM (IST) Apr 14
ಪ್ರಧಾನಿ ನರೇಂದ್ರ ಮೋದಿಯವರು ಏ.15 ರಂದು ಆದಿಚುಂಚನಗಿರಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ದ್ರಾವಿಡ ಶೈಲಿಯ ಶ್ರೀಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ ಮಾಡಲಿದ್ದಾರೆ. ಈ ದೇಗುಲವು ಹೊಯ್ಸಳ, ಚೋಳ, ಚಾಲುಕ್ಯ ಹಾಗೂ ಗಂಗ ವಾಸ್ತುಶಿಲ್ಪದ ಸಮ್ಮಿಶ್ರಣವಾಗಿದ್ದು, ಇದೊಂದು ಜೀವಂತ ಆಧ್ಯಾತ್ಮ ಧಾಮವಾಗಿದೆ
07:31 AM (IST) Apr 14
ಸರ್ಕಾರದ ಗ್ಯಾರಂಟಿ ಯೋಜನೆಗಳೂ ಒಂದು ವಿಧದ ಅಭಿವೃದ್ಧಿಯಾಗಿದ್ದು, ಗ್ಯಾರಂಟಿ ನಡುವೆಯೂ ರಾಜ್ಯದ ಆರ್ಥಿಕ ಸ್ಥಿತಿ ಕೇಂದ್ರಕ್ಕಿಂತ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
07:31 AM (IST) Apr 14
ಸಚಿವ ಸ್ಥಾನದ ಆಕಾಂಕ್ಷೆಯಲ್ಲಿರುವ ಕಾಂಗ್ರೆಸ್ನ ಹಿರಿಯ ಶಾಸಕರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕार्जुन ಖರ್ಗೆ ಅವರನ್ನು ಭೇಟಿಯಾಗಿದ್ದಾರೆ. ರಾಜ್ಯದಲ್ಲಿ ಸಂಪುಟ ಪುನರ್ ರಚನೆ ಮಾಡುವಂತೆ ಆಗ್ರಹಿಸಿದ್ದು, ನಿಷ್ಕ್ರಿಯ ಸಚಿವರನ್ನು ಕೈಬಿಟ್ಟು ಹಿರಿಯರಿಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ.