ಬೆಂಗಳೂರು (ಏ.18): ಬೆಂಗಳೂರು ವಿದ್ಯುತ್ ಸರಬರಾಜುನಿಗಮ (ಬೆಸ್ಕಾಂ) ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮಗಳಿಗೆ (ಸೆಸ್ಟ್-ಮೈಸೂರು) 2024-25ನೇ ಸಾಲಿನಲ್ಲಿ ಉಂಟಾಗಿರುವ ಆದಾಯ ಕೊರತೆ ತುಂಬಿಕೊಳ್ಳಲು 2026-27ನೇ ಸಾಲಿನಲ್ಲಿ ಬೆಸ್ಕಾಂ ಗ್ರಾಹಕರಿಂದ ಪ್ರತಿ ಯುನಿಟ್ಗೆ 56 ಪೈಸೆ ಹಾಗೂ ಸೆಸ್ಕ್ ಗ್ರಾಹಕರಿಂದ ಪ್ರತಿ ಯುನಿಟ್ಗೆ 15 ಪೈಸೆಯಂತೆ ಹೆಚ್ಚುವರಿಯಾಗಿ ಸಂಗ್ರಹಿಸಲು ಕೆಇಆರ್ಸಿ ಆದೇಶ ಮಾಡಿದೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್ಡೇಟ್ ಇಲ್ಲಿದೆ.
11:04 AM (IST) Apr 18
10:47 AM (IST) Apr 18
ಕೇಂದ್ರ ಸರ್ಕಾರವು 2011ರ ಜನಗಣತಿ ಆಧರಿಸಿ ಲೋಕಸಭಾ ಕ್ಷೇತ್ರ ಪುನರ್ವಿಂಗಡಣೆ ಮಾಡಲು ಯೋಜಿಸುತ್ತಿದೆ. ಇದರಿಂದ ಉತ್ತರ ಭಾರತದ ಸ್ಥಾನಗಳು ಹೆಚ್ಚಾಗಿ, ಜನಸಂಖ್ಯೆ ನಿಯಂತ್ರಿಸಿದ ದಕ್ಷಿಣ ರಾಜ್ಯಗಳ ರಾಜಕೀಯ ಪ್ರಾತಿನಿಧ್ಯ ಕುಸಿಯಲಿದೆ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಆತಂಕ ವ್ಯಕ್ತವಾಗಿದೆ.
10:12 AM (IST) Apr 18
09:48 AM (IST) Apr 18
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಮರುವಿಂಗಡಣೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯನವರು ಜನರನ್ನು ದಾರಿ ತಪ್ಪಿಸುವ ವಿತಂಡವಾದ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ ಎಂಬ ಕಾಂಗ್ರೆಸ್ ವಾದ ಅಲ್ಲಗೆಳೆದಿದ್ದಾರೆ.
09:14 AM (IST) Apr 18
ದಾವಣಗೆರೆ ದಕ್ಷಿಣ ಕ್ಷೇತ್ರದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರ ತಲೆದಂಡವಾದರೆ, ಮುಸ್ಲಿಂ ಸಮುದಾಯ ಕಾಂಗ್ರೆಸ್ನಿಂದ ದೂರ ಸರಿದು ಹೊಸ ಪ್ರಾದೇಶಿಕ ಪಕ್ಷವನ್ನು ಕಟ್ಟಲಿದೆ ಎಂದು ವಿಶ್ವ ಮುಸ್ಲಿಂ ಪರಿಷತ್ ರಾಜ್ಯಾಧ್ಯಕ್ಷ ಸುಭಾನ್ ಖಾನ್ ಎಚ್ಚರಿಸಿದ್ದಾರೆ.
09:09 AM (IST) Apr 18
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ 'ಕಾಂತಾರ ಚಾಪ್ಟರ್ 1' ಚಿತ್ರಕ್ಕೆ ಐಎನ್ಸಿಎ ಪ್ರಶಸ್ತಿ ಲಭಿಸಿದೆ. ಆದರೆ, ಪ್ರಶಸ್ತಿ ಸ್ವೀಕಾರ ಸಮಾರಂಭದಲ್ಲಿ ರಿಷಬ್ ಅವರು ನಿರ್ಮಾಪಕರಾದ ಹೊಂಬಾಳೆ ಫಿಲಂಸ್ ಹೆಸರನ್ನು ಉಲ್ಲೇಖಿಸದೇ ಇರುವುದು, ಇಬ್ಬರ ನಡುವಿನ ಭಿನ್ನಾಭಿಪ್ರಾಯದ ವದಂತಿಗೆ ಮತ್ತಷ್ಟು ಪುಷ್ಟಿ ನೀಡಿದೆ.
08:54 AM (IST) Apr 18
ನಾರಿ ಶಕ್ತಿ ವಂದನಾ ಮಸೂದೆಗೆ ಉಂಟಾದ ಸೋಲು ಪ್ರಜಾಪ್ರಭುತ್ವದ ಕರಾಳ ದಿನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ. ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಮಹಿಳಾ ಕುಲಕ್ಕೆ ಅಪಮಾನ ಮಾಡಿವೆ ಎಂದು ಆರೋಪಿಸಿದ ಅವರು, ಭವಿಷ್ಯದಲ್ಲಿ ಮಹಿಳಾ ಮೀಸಲಾತಿ ಜಾರಿಯಾಗಲಿದೆ ಎಂದರು..
08:08 AM (IST) Apr 18
ಎಸ್ಎಸ್ಎಲ್ಸಿ ಪರೀಕ್ಷೆಯ ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕ ನೀಡಬೇಕೆಂಬ ಹೈಕೋರ್ಟ್ ಆದೇಶವನ್ನು ಮರುಪರಿಶೀಲಿಸುವಂತೆ ರಾಜ್ಯ ಸರ್ಕಾರವು ಅರ್ಜಿ ಸಲ್ಲಿಸಿದೆ. ಪರೀಕ್ಷಾ ಒತ್ತಡ ಕಡಿಮೆ ಮಾಡಲು ಗ್ರೇಡಿಂಗ್ ವ್ಯವಸ್ಥೆ ಸುಧಾರಣಾ ಕ್ರಮವಾಗಿದೆ.
08:06 AM (IST) Apr 18
ರಾಜಕಾರಣಿಗಳು ಶಕ್ತಿ ದೇವತೆಗಳ ಆರಾಧಿಸುವುದಕ್ಕೂ, ರಾಜಕೀಯದಲ್ಲಿ ಮಹಿಳೆಯರ ಪ್ರವೇಶಕ್ಕೆ ದಶಕಗಳ ಕಾಲ ಅಡ್ಡಿಪಡಿಸಿದ್ದಕ್ಕೂ ಇರುವ ವಿಪರ್ಯಾಸವನ್ನು ಈ ಲೇಖನ ಚರ್ಚಿಸುತ್ತದೆ. ಅಂಬೇಡ್ಕರ್ರಿಂದ ಹಿಡಿದು, ಪಿ.ವಿ.ನರಸಿಂಹ ರಾವ್ ಮತ್ತು ಮೋದಿಯವರ ಕಾಲದವರೆಗೆ ಮಹಿಳಾ ಮೀಸಲಾತಿಯ ಐತಿಹಾಸಿಕ ಹಾದಿ ವಿವರಿಸುತ್ತದೆ.
07:55 AM (IST) Apr 18
ಮೈಸೂರಿನ ಸಿದ್ದಾರ್ಥನಗರದ ಮನೆಯೊಂದಕ್ಕೆ ನುಗ್ಗಿದ ಚಿರತೆಯು, ವೃದ್ಧೆಯೊಬ್ಬರು ಮಲಗಿದ್ದ ಮಂಚದ ಕೆಳಗೆ ಎರಡು ಗಂಟೆಗಳ ಕಾಲ ಅವಿತುಕೊಂಡಿತ್ತು. ಯಾರಿಗೂ ಯಾವುದೇ ಹಾನಿ ಮಾಡದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಅರವಳಿಕೆ ಚುಚ್ಚುಮದ್ದು ನೀಡಿ ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ.
07:54 AM (IST) Apr 18
ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ಮತ್ತು ಓರ್ವ ಅಪರಾಧಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.
07:54 AM (IST) Apr 18
ಉದ್ಯಾನ ನಗರಿ ಬೆಂಗಳೂರು ತೀವ್ರ ಬಿಸಿಲಿನ ತಾಪಕ್ಕೆ ತುತ್ತಾಗಿದ್ದು, ಹೀಟ್ ಸ್ಟ್ರೋಕ್ ಶಂಕೆಯಿಂದ 10 ಮಂದಿ ಅಸ್ವಸ್ಥರಾಗಿದ್ದಾರೆ. ಈ ಹಿನ್ನೆಲೆ ಪಾಲಿಕೆಯ ಆರೋಗ್ಯ ಇಲಾಖೆಯು ಕಟ್ಟೆಚ್ಚರ ವಹಿಸಿದ್ದು, ಬಿಸಿಲಿನಿಂದ ರಕ್ಷಿಸಿಕೊಳ್ಳಲು ಸಾರ್ವಜನಿಕರಿಗೆ ಜಾಗೃತಿ ಮೂಡಿಸುತ್ತಿದೆ.
07:53 AM (IST) Apr 18
ಬೆಂಗಳೂರಿನ ಪಿಜಿಗಳನ್ನು ಗುರಿಯಾಗಿಸಿಕೊಂಡು ಮೊಬೈಲ್, ಲ್ಯಾಪ್ಟಾಪ್ ಮತ್ತು ಬೈಕ್ಗಳನ್ನು ಕದಿಯುತ್ತಿದ್ದ ತಮಿಳುನಾಡು ಮೂಲದ ಶಕ್ತಿವೇಲು ಎಂಬಾತನನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.6 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
07:49 AM (IST) Apr 18
2026-27ನೇ ಸಾಲಿನಲ್ಲಿ ಆದಾಯ ಕೊರತೆ ಸರಿದೂಗಿಸಲು ಬೆಸ್ಕಾಂ ಮತ್ತು ಸೆಸ್ಕ್ ಗ್ರಾಹಕರಿಗೆ ವಿದ್ಯುತ್ ದರ ಕ್ರಮವಾಗಿ 56 ಮತ್ತು 15 ಪೈಸೆ ಹೆಚ್ಚಳವಾಗಲಿದೆ. ಇದೇ ವೇಳೆ, ಹೆಸ್ಕಾಂ, ಜೆಸ್ಕಾಂ, ಮೆಸ್ಕಾಂ ಮತ್ತು ಹುಕ್ಕೇರಿ ಎಸ್ಕಾಂ ಗ್ರಾಹಕರಿಗೆ ಹೆಚ್ಚುವರಿ ಆದಾಯದ ಹಿನ್ನೆಲೆಯಲ್ಲಿ ದರ ಇಳಿಕೆಯಾಗಿದೆ.