ಬೆಂಗಳೂರು (ಮೇ.1): ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ. ನಾಯಕತ್ವ ಬದಲಾವಣೆಯ ಗೊಂದಲವನ್ನು ಶೀಘ್ರದಲ್ಲೇ ಬಗೆಹರಿಸಲಾಗುವುದು ಮತ್ತು ಸಮಯ ಬಂದಾಗ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್ಡೇಟ್ ಇಲ್ಲಿದೆ.
11:01 AM (IST) May 01
ಲೋಕಸಭಾ ಚುನಾವಣೆ ವೇಳೆ ಶಿವಮೊಗ್ಗದ ದೇವಸ್ಥಾನದಲ್ಲಿ ರಾಜಕೀಯ ಸಭೆ ನಡೆಸಿದ ಆರೋಪದ ಮೇಲೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಮತ್ತು ಇತರರ ವಿರುದ್ಧ ದಾಖಲಾದ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ರಾಜಕೀಯ ಉದ್ದೇಶಗಳಿಗೆ ಧಾರ್ಮಿಕ ಸ್ಥಳಗಳನ್ನು ಬಳಸಬಾರದು ಎಂದು ನ್ಯಾಯಾಲಯ ಅಭಿಪ್ರಾಯ
10:37 AM (IST) May 01
ಕಾಂಗ್ರೆಸ್ ಮುಖಂಡ ಮದನ್ ರಾಜ್ ಮದುವೆ ಆಮಿಷವೊಡ್ಡಿ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ನಂತರ ಬೇರೊಬ್ಬರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡು ವಂಚಿಸಿದ್ದಾರೆ. ಯುವತಿ ಪ್ರಶ್ನಿಸಿದಾಗ ವಿಷ ಕುಡಿಸಿ ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಸಂತ್ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
10:37 AM (IST) May 01
ಕೇಂದ್ರ ಸಚಿವ ವಿ. ಸೋಮಣ್ಣ ಅವರ ಪ್ರಕಾರ, ನಿಧಾನಗತಿಯ ಕಾಮಗಾರಿ ಮತ್ತು ದಾಖಲೆಗಳ ಕೊರತೆಯಿಂದಾಗಿ ಜಲ್ ಜೀವನ್ ಮಿಷನ್ ಅಡಿಯಲ್ಲಿ ಕರ್ನಾಟಕ ಸರ್ಕಾರವು ₹16,863.86 ಕೋಟಿ ಅನುದಾನವನ್ನು ಕಳೆದುಕೊಂಡಿದೆ. ಇದು ಕೇಂದ್ರದ ತಾರತಮ್ಯವಲ್ಲ ಎಂದು ಮಾಹಿತಿ ನೀಡಿದ್ದಾರೆ.
10:14 AM (IST) May 01
ಮೇ 1 ರಿಂದ, ಬೆಸ್ಕಾಂ ಗೃಹಬಳಕೆಯ ವಿದ್ಯುತ್ ದರವನ್ನು ಪ್ರತಿ ಯೂನಿಟ್ಗೆ 56 ಪೈಸೆ ಹೆಚ್ಚಿಸಿದೆ. ಕಳೆದ ವರ್ಷದ 2,068 ಕೋಟಿ ರೂ. ಆದಾಯ ಕೊರತೆಯನ್ನು ಸರಿದೂಗಿಸಲು ಕೆಇಆರ್ಸಿ ಅನುಮೋದನೆಯೊಂದಿಗೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
10:06 AM (IST) May 01
09:30 AM (IST) May 01
ಕೇಂದ್ರ ಹಣಕಾಸು ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ಆದಾಯ ಕೊರತೆ ಮತ್ತು ಹೆಚ್ಚುತ್ತಿರುವ ಸಾಲದ ಹೊರೆಯಿಂದಾಗಿ ಕರ್ನಾಟಕ ಸೇರಿದಂತೆ ಒಂಬತ್ತು ಪ್ರಮುಖ ರಾಜ್ಯಗಳು ಶೀಘ್ರದಲ್ಲೇ ತೀವ್ರ ಆರ್ಥಿಕ ಒತ್ತಡಕ್ಕೆ ಸಿಲುಕಲಿವೆ.
09:22 AM (IST) May 01
Simple green chutney recipe: ಕಬಾಬ್ ಅಥವಾ ವಡಾಪಾವ್, ಸ್ಯಾಂಡ್ವಿಚ್ಗಳಿಗೆ ಹಾಕುವ ಗ್ರೀನ್ ಚಟ್ನಿಯನ್ನು ಹೇಗೆ ಮಾಡೋದು ಎಂದು ಅನೇಕರಿಗೆ ಡೌಟ್ ಇರಬಹುದು. ಹೌದು, ಹೋಟೆಲ್ ಶೈಲಿಯಲ್ಲಿ ಗ್ರೀನ್ ಚಟ್ನಿ (Green Chutney) ಮಾಡುವುದು ಹೇಗೆ ಎಂದು ನೋಡೋಣ
09:21 AM (IST) May 01
08:47 AM (IST) May 01
08:45 AM (IST) May 01
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹೈದರಾಬಾದ್-ಬೆಂಗಳೂರು ಮತ್ತು ಬೆಂಗಳೂರು-ಚೆನ್ನೈ ಹೈಸ್ಪೀಡ್ ರೈಲು ಯೋಜನೆಗಳಿಗೆ ಆಡಳಿತಾತ್ಮಕ ಅಂಗೀಕಾರ ನೀಡಲಾಗಿದೆ. ಇದರೊಂದಿಗೆ, ನವಜಾತ ಶಿಶುಗಳ ತಪಾಸಣಾ ಯೋಜನೆ, ಸೆಮಿಕಂಡಕ್ಟರ್ ಕಂಪನಿಗೆ ಜಮೀನು ಹಂಚಿಕೆಗೂ ಸಂಪುಟ ಒಪ್ಪಿಗೆ ನೀಡಿದೆ.
08:11 AM (IST) May 01
KD Kannada Movie Box Office Collection Report: ಜೋಗಿ ಪ್ರೇಮ್ ನಿರ್ದೇಶನದ ಕೆಡಿ ಸಿನಿಮಾ ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಧ್ರುವ ಸರ್ಜಾ, ಕಿಚ್ಚ ಸುದೀಪ್, ಶಿಲ್ಪಾ ಶೆಟ್ಟಿ, ರೀಷ್ಮಾ ನಾಣಯ್ಯ, ಸೂರಜ್, ರವಿಶಂಕರ್ ಅವರು ನಟಿಸಿದ್ದಾರೆ. ಈ ಸಿನಿಮಾ ಮೊದಲ ದಿನ ಎಷ್ಟು ಕಲೆಕ್ಷನ್ ಮಾಡಿದೆ?
07:17 AM (IST) May 01
ಎಸ್ಎಸ್ಎಲ್ಸಿ ಕನ್ನಡ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅನುತ್ತೀರ್ಣರಾಗುತ್ತಿರುವ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಶಿಕ್ಷಣ ಸಚಿವರಿಗೆ ಸಂಶೋಧನಾ ವರದಿಯೊಂದನ್ನು ಸಲ್ಲಿಸಿದೆ.
07:17 AM (IST) May 01
ರಾಜ್ಯದಲ್ಲಿ 56,432 ಸರ್ಕಾರಿ ಹುದ್ದೆಗಳ ನೇಮಕಾತಿಗೆ, 100ರ ಬದಲು 400 ರೋಸ್ಟರ್ ಬಿಂದುಗಳನ್ನು ಅಳವಡಿಸಲು ಸಚಿವ ಸಂಪುಟ ನಿರ್ಧರಿಸಿದೆ. ಈ ಬದಲಾವಣೆಯು ಪರಿಶಿಷ್ಟ ಜಾತಿಯ ಒಳ ಮೀಸಲಾತಿಯನ್ನು ಸಮರ್ಪಕವಾಗಿ ಜಾರಿಗೊಳಿಸುವ ಗುರಿ ಹೊಂದಿದ್ದು, ಹಳೆಯ ಅಧಿಸೂಚನೆಗಳನ್ನು ಹಿಂಪಡೆಯಲಾಗಿದೆ.
07:16 AM (IST) May 01
ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ. ನಾಯಕತ್ವ ಬದಲಾವಣೆಯ ಗೊಂದಲವನ್ನು ಶೀಘ್ರದಲ್ಲೇ ಬಗೆಹರಿಸಲಾಗುವುದು ಮತ್ತು ಸಮಯ ಬಂದಾಗ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.