Asianet News   | ANI
Published : May 01, 2026, 07:16 AM ISTUpdated : May 01, 2026, 10:17 PM IST

State News Live: ಡಿಜಿಸಿಎ ನಿಯಮಗಳ ಬೆನ್ನಿಗೆ ಇಂಡಿಗೋ ಶಾಕ್ - ಶಿವಮೊಗ್ಗ-ಬೆಂಗಳೂರು ವಿಮಾನ ಕಾರ್ಯಾಚರಣೆ ಸ್ಥಗಿತ

ಸಾರಾಂಶ

ಬೆಂಗಳೂರು (ಮೇ.1): ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ. ನಾಯಕತ್ವ ಬದಲಾವಣೆಯ ಗೊಂದಲವನ್ನು ಶೀಘ್ರದಲ್ಲೇ ಬಗೆಹರಿಸಲಾಗುವುದು ಮತ್ತು ಸಮಯ ಬಂದಾಗ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್‌ಡೇಟ್‌ ಇಲ್ಲಿದೆ.

 

10:17 PM (IST) May 01

ಡಿಜಿಸಿಎ ನಿಯಮಗಳ ಬೆನ್ನಿಗೆ ಇಂಡಿಗೋ ಶಾಕ್ - ಶಿವಮೊಗ್ಗ-ಬೆಂಗಳೂರು ವಿಮಾನ ಕಾರ್ಯಾಚರಣೆ ಸ್ಥಗಿತ

ನಾಗರಿಕ ವಿಮಾನಯಾನ ನಿರ್ದೇಶನಾಲಯದ (ಡಿಜಿಸಿಎ) ಮಾರ್ಗಸೂಚಿ ಅನ್ವಯ ಕಾರ್ಯಾಚರಣೆಗೆ, ಪೈಲಟ್‌ಗಳ ಕೊರತೆ ಕಾರಣಕ್ಕೆ ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಸಂಚಾರ ಮೇ 1 ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

Read Full Story

09:46 PM (IST) May 01

ಮೇ.4ರ ಬಳಿಕ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತೋ ಗೊತ್ತಿಲ್ಲ - ಸಂಸದ ಬೊಮ್ಮಾಯಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ, ಮೇ 4ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ಲವೊ ಗೊತ್ತಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

Read Full Story

09:37 PM (IST) May 01

ಬೆಂಗಳೂರಿನ ಪೀಣ್ಯ ಫ್ಲೈಓವರ್ ಮೇಲೆ 4 ದಿನ ಎಲ್ಲಾ ವಾಹನ ಸಂಚಾರ ಬಂದ್, ಬದಲಿ ಮಾರ್ಗ ಪಟ್ಟಿ

ಬೆಂಗಳೂರಿನ ಪೀಣ್ಯ ಫ್ಲೈಓವರ್ ನಾಲ್ಕು ದಿನ ಎಲ್ಲಾ ವಾಹನ ಸಂಚಾರ ಬಂದ್, ಬದಲಿ ಮಾರ್ಗ ಪಟ್ಟಿ ಬಿಡುಗಡೆ ಮಾಡಲಾಗಿದೆ. ಯಾವ ದಿನದಿಂದ ಫ್ಲೈಓವರ್ ಬಂದ್ ಮಾಡಲಾಗುತ್ತಿದೆ. ಪರ್ಯಾಯ ಮಾರ್ಗ ವಿವರ ಇಲ್ಲಿದೆ. 

Read Full Story

08:13 PM (IST) May 01

ನಿಮ್ಮ ಹಿಂದೆ ನಾವು ಇದ್ದೇವೆ - ಕೊಲೆಯಾದ ವೆಂಕಟೇಶ ಕುರಬರ ಕುಟುಂಬಕ್ಕೆ ಪೊಲೀಸರ ಭರವಸೆ

ಗಂಗಾವತಿಯಲ್ಲಿ ವೆಂಕಟೇಶ ಕುರಬರ ಕೊಲೆ ಪ್ರಕರಣದಲ್ಲಿ 6 ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಿದ ಬಳಿಕ, ಪೊಲೀಸ್ ಅಧಿಕಾರಿಗಳು ಕುಟುಂಬಕ್ಕೆ ಭೇಟಿ ನೀಡಿ ಧೈರ್ಯ ತುಂಬಿದರು. ಕುಟುಂಬವು ನ್ಯಾಯ ದೊರೆತಿದೆ ಎಂದು ಪ್ರತಿಕ್ರಿಯಿಸಿದೆ.

Read Full Story

07:58 PM (IST) May 01

ಬಿಎಸ್‌ವೈ ಅಭಿಮಾನೋತ್ಸವಕ್ಕೆ ಗಂಗಾವತಿಯ 10 ಸಾವಿರ ಕಾರ್ಯಕರ್ತರು - ಜನಾರ್ದನ ರೆಡ್ಡಿ

ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರ 50ನೇ ಅಭಿಮಾನೋತ್ಸವಕ್ಕೆ ಗಂಗಾವತಿ ವಿಧಾನ ಸಭಾ ಕ್ಷೇತ್ರದಿಂದ 10 ಸಾವಿರ ಕಾರ್ಯಕರ್ತರು ತೆರಳಲಿದ್ದಾರೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದರು.

Read Full Story

07:39 PM (IST) May 01

ದಕ್ಷಿಣ ಕನ್ನಡದ ಮಹಿಳೆಯರಿಗೆ ಸಿಹಿಸುದ್ದಿ, ವಿವಿಧ ತಾಲೂಕುಗಳ ಅಂಗನವಾಡಿಯಲ್ಲಿ ಖಾಲಿ ಇರೋ ಹುದ್ದೆಗಳಿಗೆ ಅರ್ಜಿ ಅಹ್ವಾನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಗೆ ಮೀಸಲಾದ ಈ ಉದ್ಯೋಗಾವಕಾಶಕ್ಕೆ ಅರ್ಜಿ ಸಲ್ಲಿಸಲು ಮೇ 16 ಕೊನೆಯ ದಿನವಾಗಿದೆ.
Read Full Story

07:24 PM (IST) May 01

ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ - ಕುಲದೇವತೆಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು

ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕುಲದೇವತೆ ಹಾಗೂ ಇತಿಹಾಸ ಪ್ರಸಿದ್ಧ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನಕ್ಕೆ ಪತ್ನಿ ಜತೆ ಆಗಮಿಸಿ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು.

Read Full Story

07:07 PM (IST) May 01

ಅಶೋಕ್‌ ಸಾರಿಗೆ ಸಚಿವರಾಗಿದ್ದಾಗಲೇ ನೌಕರರ ಮುಷ್ಕರ ಆರಂಭ - ಸಚಿವ ರಾಮಲಿಂಗಾರೆಡ್ಡಿ ಕಿಡಿ

ಹಾಲಿ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಅವರು ಸಾರಿಗೆ ಸಚಿವರಾಗಿದ್ದಾಗಲೇ 2012ರಲ್ಲಿ ವೇತನ ಪರಿಷ್ಕರಣೆಗಾಗಿ ಸಾರಿಗೆ ನೌಕರರ ಮುಷ್ಕರ ನಡೆಸುವ ಪದ್ಧತಿ ಆರಂಭವಾಯಿತು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

Read Full Story

06:53 PM (IST) May 01

ಶಿವಮೊಗ್ಗ ಏರ್‌ಪೋರ್ಟ್‌ ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸುವಂತೆ ಒತ್ತಾಯ, ರಾಜ್ಯ ಸರ್ಕಾರದ ಮುಂದೆ ಹಲವು ಬೇಡಿಕೆ

ಸಂಸದ ಬಿ.ವೈ. ರಾಘವೇಂದ್ರ ಅವರು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಲು ಮತ್ತು ಬಿರುಗಾಳಿ ಮಳೆಯಿಂದಾದ ಬೆಳೆ ಹಾನಿಗೆ ವಿಶೇಷ ಪ್ಯಾಕೇಜ್ ಘೋಷಿಸಲು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ವಿಮಾನ ನಿಲ್ದಾಣದ ಅನುದಾನ, ಸ್ಥಗಿತಗೊಂಡಿರುವ ವಿಮಾನ ಸೇವೆ ಮತ್ತು ನೈಟ್ ಲ್ಯಾಂಡಿಂಗ್ ವಿಳಂಬದ ಬಗ್ಗೆಯೂ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Read Full Story

04:39 PM (IST) May 01

ಬೀದರ್‌ನ ಬಾನಿಗೆ ಮರಳಿದ ಲೋಹದ ಹಕ್ಕಿ! ಬೀದರ್‌-ಬೆಂಗಳೂರು ವಿಮಾನ ಸೇವೆ ಪುನರಾರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ಸ್ಥಗಿತಗೊಂಡಿದ್ದ ಬೀದರ್‌-ಬೆಂಗಳೂರು ವಿಮಾನಯಾನ ಸೇವೆಯನ್ನು ಪುನರಾರಂಭಿಸಲು ರಾಜ್ಯ ಸರ್ಕಾರವು ಅನುಮೋದನೆ ನೀಡಿದೆ. ಈ ಸೇವೆಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (KKRDB) ಮೂಲಕ ವಯಬಿಲಿಟಿ ಗ್ಯಾಪ್ ಫಂಡಿಂಗ್ (VGF) ಅನುದಾನ ಒದಗಿಸಲಾಗುತ್ತಿದ್ದು, ಇದು ಜಿಲ್ಲೆಯ ಸಂಪರ್ಕ ಮತ್ತು ಆರ್ಥಿಕತೆಗೆ ಉತ್ತೇಜನ ನೀಡಲಿದೆ.
Read Full Story

04:23 PM (IST) May 01

ಬೆಂಗಳೂರು ಜಲಮಂಡಳಿಯಿಂದ ನಿವಾಸಿಗಳಿಗೆ ಕಾವೇರಿ ನೀರಿನ ದರ ಏರಿಕೆ ಶಾಕ್, ಮತ್ತೆ ಶೇ.3ರಷ್ಟು ಹೆಚ್ಚಳ!

ಬೆಂಗಳೂರು ಜಲಮಂಡಳಿ (BWSSB) ಏಪ್ರಿಲ್ 1 ರಿಂದ ಕಾವೇರಿ ನೀರಿನ ದರವನ್ನು ಶೇ 3 ರಷ್ಟು ಹೆಚ್ಚಿಸಿದೆ. ಹೆಚ್ಚುತ್ತಿರುವ ನಿರ್ವಹಣಾ ಮತ್ತು ವಿದ್ಯುತ್‌ ವೆಚ್ಚವನ್ನು ಸರಿದೂಗಿಸಲು ಈ ನಿರ್ಧಾರ ಕೈಗೊಂಡಿದ್ದು, ಇನ್ನು ಮುಂದೆ ಪ್ರತಿ ವರ್ಷವೂ ದರ ಏರಿಕೆಯಾಗಲಿದೆ. ಈ ಏರಿಕೆಯಿಂದಾಗಿ ಗೃಹ ಮತ್ತು ವಾಣಿಜ್ಯ ಬಳಕೆದಾರರ ಮಾಸಿಕ ನೀರಿನ ಬಿಲ್‌ನಲ್ಲಿ ಹೆಚ್ಚಳವಾಗಲಿದೆ.
Read Full Story

04:04 PM (IST) May 01

ಹನಿಯೂರು ಚಂದ್ರೇಗೌಡನ ಅಶ್ಲೀಲ ವಿಡಿಯೋ ಪ್ರಕರಣ, ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸಿ ನಾಯಿಯಂತೆ ಬಿಂಬಿಸಿಕೊಂಡಿದ್ದ ಆಸಾಮಿ!

ಬೆಂಗಳೂರಿನಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಬ್ಲ್ಯಾಕ್‌ಮೇಲ್ ಆರೋಪದ ಮೇಲೆ, ಈ ಹಿಂದೆ ಪ್ರೊಫೆಸರ್ ಹಾಗೂ ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಎಂದು ಗುರುತಿಸಿಕೊಂಡಿದ್ದ ಹನಿಯೂರು ಚಂದ್ರೇಗೌಡನನ್ನು ಬಂಧಿಸಲಾಗಿದೆ. ಆತ ಆರ್‌ಟಿಐ ಕಾಯ್ದೆಯನ್ನು ದುರುಪಯೋಗಪಡಿಸಿಕೊಂಡು ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿದ್ದ ಪ್ರಕರಣವೂ ಬೆಳಕಿಗೆ ಬಂದಿದ್ದು, ಇದೊಂದು ಸಂಘಟಿತ ಜಾಲವಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
Read Full Story

02:40 PM (IST) May 01

Vasudeva Kutumba Serial - ತಿಂಗಳಾದರೂ ಸಂಭಾವನೆ ಕೊಡದ ಪ್ರೊಡಕ್ಷನ್‌ ಹೌಸ್; ತಿರುಗಿಬಿದ್ದ ಸೀರಿಯಲ್ ಕಲಾವಿದರು

Vasudeva Kutumba Serial Producer: ಕಲಾವಿದರು ಧಾರಾವಾಹಿ ಬಿಡ್ತಾರೆ ಎಂದು ಕೆಲವರು ಆರೋಪ ಮಾಡೋದುಂಟು. ಆದರೆ ಇದಕ್ಕೆಲ್ಲ ಕಾರಣ ಬೇರೆ ಇರುತ್ತದೆ. ವಸುದೇವ ಕುಟುಂಬ ಸೀರಿಯಲ್‌ ಪ್ರೊಡಕ್ಷನ್‌ ಹೌಸ್‌ ಸಂಭಾವನೆ ಕೊಡ್ತಿಲ್ಲ ಎಂದು ಕಲಾವಿದರು ಆರೋಪ ಮಾಡಿದ್ದಾರೆ.

 

Read Full Story

02:13 PM (IST) May 01

ಎಚ್ಎಎಲ್ ನೇತೃತ್ವ ವಹಿಸಿದ ಹೆಮ್ಮೆಯ ಕನ್ನಡಿಗ, ಎಲ್‌ಸಿಎ ಮ್ಯಾನ್ - ಕೋಟ ರವಿ

ಉಡುಪಿ ಮೂಲದ ಕನ್ನಡಿಗ ಕೋಟ ರವಿ ಅವರು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ (ಎಚ್ಎಎಲ್) ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. 'ಎಲ್‌ಸಿಎ ಮ್ಯಾನ್' ಎಂದೇ ಖ್ಯಾತರಾದ ಅವರು, ತೇಜಸ್ ಯುದ್ಧ ವಿಮಾನ ಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 

Read Full Story

01:55 PM (IST) May 01

ಪೋಕ್ಸೋ, ಕೊ*ಲೆ ಪ್ರಕರಣದ ಅಪರಾಧಿಯ ಮರಣದಂಡನೆ ರದ್ದು ಮಾಡಿ ಜೀವಾವಧಿಗೆ ಇಳಿಸಿದ ಧಾರವಾಡ ಹೈಕೋರ್ಟ್ ಪೀಠ

ಅಪ್ರಾಪ್ತೆಯ ಅತ್ಯಾ*ಚಾರ ಮತ್ತು ಕೊಲೆ ಪ್ರಕರಣದಲ್ಲಿ ಬೆಳಗಾವಿ ಸೆಷನ್ ಕೋರ್ಟ್ ವಿಧಿಸಿದ್ದ ಮರಣದಂಡನೆಯನ್ನು ಧಾರವಾಡ ಹೈಕೋರ್ಟ್ ಪೀಠವು ಜೀವಾವಧಿ ಶಿಕ್ಷೆಗೆ ಪರಿವರ್ತಿಸಿ ಮಹತ್ವದ ತೀರ್ಪು ನೀಡಿದೆ. ಅಲ್ಲದೆ, ಸಂತ್ರಸ್ತೆಯ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶಿಸಿದೆ.

Read Full Story

01:27 PM (IST) May 01

ಮೊದಲ ಭೇಟಿಗೆ ಸ್ಮಶಾನಕ್ಕೆ ಕರೆದೊಯ್ಯುವ ಸಾಹಸ; ಇದು 'ಗ್ರೇವ್‌ಯಾರ್ಡ್' ಎಂಬ ಲೇಟೆಸ್ಟ್ ಡೇಟಿಂಗ್ ಟ್ರೆಂಡ್!

ಕೇಳಲು ವಿಚಿತ್ರ ಹಾಗೂ ಸ್ವಲ್ಪ ಮಟ್ಟಿಗೆ ಭಯಾನಕ ಎನಿಸಿದರೂ, 'ಗ್ರೇವ್‌ಯಾರ್ಡ್ ಡೇಟಿಂಗ್' ಈಗ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಆದರೆ, ಈ 'ಸತ್ತವರ ನಡುವಿನ ಸಮಾಲೋಚನೆ' ಎಲ್ಲರಿಗೂ ಇಷ್ಟವಾಗಲಿಕ್ಕಿಲ್ಲ. ನೀವು ನಿಮ್ಮ ಸಂಗಾತಿಯನ್ನು ಮೊದಲ ಭೇಟಿಗೆ ಸ್ಮಶಾನಕ್ಕೆ ಕರೆದೊಯ್ಯುವ ಸಾಹಸ ಮಾಡುತ್ತೀರಾ?

Read Full Story

01:20 PM (IST) May 01

ಬೆಂಗಳೂರು - ಕಾಮುಕ ನಕಲಿ ಅಧಿಕಾರಿಗೆ ವಿವಾಹಿತ ಮಹಿಳೆಯರೇ ಬೇಕು, ಬಲೆಗೆ ಬೀಳಿಸಿ ಅಶ್ಲೀಲ ವಿಡಿಯೋ ಮಾಡಿ ಹಣಕ್ಕೆ ಬೆದರಿಕೆ!

ಬೆಂಗಳೂರಿನಲ್ಲಿ ನಕಲಿ ಗುರುತುಗಳನ್ನು ಬಳಸಿ ವಿವಾಹಿತ ಮಹಿಳೆಯರನ್ನು ಬಲೆಗೆ ಬೀಳಿಸುತ್ತಿದ್ದ ಹನಿಯೂರು ಚಂದ್ರೇಗೌಡ ಎಂಬಾತನನ್ನು ಆರ್.ಆರ್.ನಗರ ಪೊಲೀಸರು ಬಂಧಿಸಿದ್ದಾರೆ. ಈತ ಮಹಿಳೆಯರ ಖಾಸಗಿ ವಿಡಿಯೋಗಳನ್ನು ಬಳಸಿ ಬ್ಲ್ಯಾಕ್‌ಮೇಲ್ ಮಾಡಿ ಲಕ್ಷಾಂತರ ರೂಪಾಯಿ ವಸೂಲಿ ಮಾಡುತ್ತಿದ್ದ. ತನಿಖೆಯ ವೇಳೆ 20ಕ್ಕೂ ಹೆಚ್ಚು ಮಹಿಳೆಯರನ್ನು ಇದೇ ರೀತಿ ವಂಚಿಸಿರುವುದು ಬೆಳಕಿಗೆ ಬಂದಿದೆ.
Read Full Story

12:35 PM (IST) May 01

ತುಮಕೂರಲ್ಲಿ ನವಿಲುಗಳ ಸರಣಿ ಸಾವಿನ ಸತ್ಯಾಂಶ ಬಹಿರಂಗ, ಸಾರ್ವಜನಿಕರಿಗೆ ಜಾಗೃತಿ, ಹೈ ಅಲರ್ಟ್

ತುಮಕೂರು ಜಿಲ್ಲೆಯಲ್ಲಿ ರಾಷ್ಟ್ರಪಕ್ಷಿ ನವಿಲುಗಳ ಸರಣಿ ಸಾವಿಗೆ ಹಕ್ಕಿಜ್ವರ (H5N1) ಕಾರಣವೆಂದು ಅಧಿಕೃತವಾಗಿ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ, ಪಶು ಸಂಗೋಪನಾ ಇಲಾಖೆಯು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರಿಗೆ ಸತ್ತ ಪಕ್ಷಿಗಳನ್ನು ಮುಟ್ಟದಂತೆ ಎಚ್ಚರಿಕೆ ನೀಡಿದೆ.
Read Full Story

12:34 PM (IST) May 01

ಬೆಂಗಳೂರಿನಲ್ಲಿ ಅಮೆರಿಕದ ಸೆಮಿಕಂಡಕ್ಟರ್ ದೈತ್ಯ - ಅಪ್ಲೈಡ್ ಮೆಟೀರಿಯಲ್ಸ್‌ಗೆ 140 ಎಕರೆ ಜಮೀನು ನೀಡಲು ರಾಜ್ಯ ಸರ್ಕಾರ ಅಸ್ತು!

ಕರ್ನಾಟಕವನ್ನು ಸೆಮಿಕಂಡಕ್ಟರ್ ಹಬ್ ಆಗಿ ರೂಪಿಸಲು, ರಾಜ್ಯ ಸರ್ಕಾರವು ಅಮೆರಿಕದ 'ಅಪ್ಲೈಡ್ ಮೆಟೀರಿಯಲ್ಸ್ ಇಂಕ್' ಕಂಪನಿಗೆ ಬೆಂಗಳೂರಿನಲ್ಲಿ 140 ಎಕರೆ ಜಮೀನು ಹಂಚಿಕೆ ಮಾಡಲು ಅನುಮೋದನೆ ನೀಡಿದೆ. 

Read Full Story

11:42 AM (IST) May 01

ಸಿಎಂ ಬದಲಾವಣೆ ವಿಚಾರ - 'ಡೇಟ್ ಫಿಕ್ಸ್ ಆಗಿಲ್ಲ' ಎನ್ನುತ್ತಲೇ ಕುತೂಹಲ ಉಳಿಸಿದ ಮಲ್ಲಿಕಾರ್ಜುನ ಖರ್ಗೆ!

ಕಲಬುರಗಿಯಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯದಲ್ಲಿನ ನಾಯಕತ್ವ ಬದಲಾವಣೆಯ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಹೈಕಮಾಂಡ್ ಸೂಕ್ತ ಸಮಯದಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಿದ್ದು, ಅಲ್ಲಿಯವರೆಗೆ ಗೊಂದಲ ಸೃಷ್ಟಿಸಬಾರದು ಎಂದಿದ್ದಾರೆ.

Read Full Story

11:32 AM (IST) May 01

ಖರ್ಗೆ ಸಿಎಂ ಸ್ಥಾನಕ್ಕೇರಿದರೆ ಪಕ್ಷದ ಎಲ್ಲರಿಂದಲೂ ಸ್ವಾಗತಃ ಗೃಹ ಸಚಿವ ಪರಮೇಶ್ವರ್

ಗೃಹ ಸಚಿವ ಜಿ.ಪರಮೇಶ್ವರ್ ಅವರು, ಅನುಭವಿ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿಯಾದರೆ ಕಾಂಗ್ರೆಸ್ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ ಎಂದು ಹೇಳಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ಅವರ ದಲಿತ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ್ದೇನು?

Read Full Story

11:31 AM (IST) May 01

ಗ್ಯಾಸ್ ದರ ದಿಢೀರ್ 3102 ರೂಗೆ ಏರಿಕೆ! ಆಹಾರ ಉದ್ಯಮಕ್ಕೆ ಹೊಡೆತ, ಜಿಎಸ್‌ಟಿ ದರ ಇಳಿಕೆಗೆ ಬೇಡಿಕೆ ಇಟ್ಟ ಹೊಟೇಲ್ ಸಂಘ

ಬೆಂಗಳೂರಿನಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ದರದಲ್ಲಿ ಭಾರೀ ಏರಿಕೆಯಾಗಿದ್ದು, ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಈ ದರ ಏರಿಕೆಯಿಂದ ತಿಂಡಿ-ತಿನಿಸುಗಳ ಬೆಲೆ ಹೆಚ್ಚಿಸುವ ಅನಿವಾರ್ಯತೆ ಎದುರಾಗಿದ್ದರೂ, ಸದ್ಯಕ್ಕೆ ದರ ಹೆಚ್ಚಳ ಮಾಡದಿರಲು ಹೋಟೆಲ್ ಮಾಲೀಕರ ಸಂಘ ನಿರ್ಧರಿಸಿದೆ. ಸರ್ಕಾರವು ಗ್ಯಾಸ್ ದರ ಮತ್ತು ಜಿಎಸ್‌ಟಿ ಇಳಿಸಬೇಕೆಂದು ಸಂಘವು ಒತ್ತಾಯಿಸಿದೆ.
Read Full Story

11:27 AM (IST) May 01

ಲಿವಿಂಗ್ ರಿಲೇಷನ್‌ಶಿಪ್‌ನಲ್ಲಿ ಜಗಳ, ಬೆಂಗಳೂರಿನಲ್ಲಿ ಮೇಘಾಲಯ ಮೂಲದ ಯುವತಿ ಆ*ತ್ಮಹ*ತ್ಯೆ!

ಬೆಂಗಳೂರಿನಲ್ಲಿ, ಮೇಘಾಲಯ ಮೂಲದ 36 ವರ್ಷದ ಮಹಿಳೆಯೊಬ್ಬರು ತನ್ನ 20 ವರ್ಷದ ಲಿವಿಂಗ್ ರಿಲೇಷನ್‌ಶಿಪ್ ಸಂಗಾತಿಯ ಮೇಲೆ ಸಂಶಯಗೊಂಡು ಜಗಳವಾಡಿದ ನಂತರ ಮನನೊಂದು ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಕೊಡಿಗೇಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read Full Story

11:01 AM (IST) May 01

ದೇವಸ್ಥಾನದಲ್ಲಿ ಕೆಎಸ್ ಈಶ್ವರಪ್ಪ ರಾಜಕೀಯ ಸಭೆ ನಡೆಸಿದ ಆರೋಪ; ಪ್ರಕರಣ ರದ್ದುಗೊಳಿಸಲು ನಿರಾಕರಿಸಿದ ಹೈಕೋರ್ಟ್ ಹೇಳಿದ್ದೇನು?

ಲೋಕಸಭಾ ಚುನಾವಣೆ ವೇಳೆ ಶಿವಮೊಗ್ಗದ ದೇವಸ್ಥಾನದಲ್ಲಿ ರಾಜಕೀಯ ಸಭೆ ನಡೆಸಿದ ಆರೋಪದ ಮೇಲೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಮತ್ತು ಇತರರ ವಿರುದ್ಧ ದಾಖಲಾದ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ರಾಜಕೀಯ ಉದ್ದೇಶಗಳಿಗೆ ಧಾರ್ಮಿಕ ಸ್ಥಳಗಳನ್ನು ಬಳಸಬಾರದು ಎಂದು ನ್ಯಾಯಾಲಯ ಅಭಿಪ್ರಾಯ

Read Full Story

10:37 AM (IST) May 01

ಯುವತಿಗೆ ವಂಚನೆ - ಕಾಂಗ್ರೆಸ್‌ ಮುಖಂಡ, ಪುರಸಭೆ ಮಾಜಿ ಅಧ್ಯಕ್ಷ ಮದನ್ ರಾಜ್ ವಿರುದ್ಧ ಅ*ತ್ಯಾಚಾರ ದೂರು!

ಕಾಂಗ್ರೆಸ್ ಮುಖಂಡ ಮದನ್ ರಾಜ್ ಮದುವೆ ಆಮಿಷವೊಡ್ಡಿ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ನಂತರ ಬೇರೊಬ್ಬರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡು ವಂಚಿಸಿದ್ದಾರೆ. ಯುವತಿ ಪ್ರಶ್ನಿಸಿದಾಗ ವಿಷ ಕುಡಿಸಿ ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಸಂತ್ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

Read Full Story

10:37 AM (IST) May 01

ಕೇಂದ್ರದಿಂದ ರಾಜ್ಯಕ್ಕೆ ಸಾವಿರಾರು ಕೋಟಿ ರೂಪಾಯಿ ಅನುದಾನ ಕೈತಪ್ಪಿದ್ದೇಕೆ? ಕೇಂದ್ರ ಸಚಿವ ವಿ ಸೋಮಣ್ಣ ಸ್ಫೋಟಕ ಹೇಳಿಕೆ!

ಕೇಂದ್ರ ಸಚಿವ ವಿ. ಸೋಮಣ್ಣ ಅವರ ಪ್ರಕಾರ, ನಿಧಾನಗತಿಯ ಕಾಮಗಾರಿ ಮತ್ತು ದಾಖಲೆಗಳ ಕೊರತೆಯಿಂದಾಗಿ ಜಲ್ ಜೀವನ್ ಮಿಷನ್ ಅಡಿಯಲ್ಲಿ ಕರ್ನಾಟಕ ಸರ್ಕಾರವು ₹16,863.86 ಕೋಟಿ ಅನುದಾನವನ್ನು ಕಳೆದುಕೊಂಡಿದೆ. ಇದು ಕೇಂದ್ರದ ತಾರತಮ್ಯವಲ್ಲ ಎಂದು ಮಾಹಿತಿ ನೀಡಿದ್ದಾರೆ.

Read Full Story

10:14 AM (IST) May 01

ಬೆಸ್ಕಾಂ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್ - ಇಂದಿನಿಂದಲೇ ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ!

ಮೇ 1 ರಿಂದ, ಬೆಸ್ಕಾಂ ಗೃಹಬಳಕೆಯ ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಿಸಿದೆ. ಕಳೆದ ವರ್ಷದ 2,068 ಕೋಟಿ ರೂ. ಆದಾಯ ಕೊರತೆಯನ್ನು ಸರಿದೂಗಿಸಲು ಕೆಇಆರ್‌ಸಿ ಅನುಮೋದನೆಯೊಂದಿಗೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. 

Read Full Story

10:06 AM (IST) May 01

ಶೃಂಗೇರಿ ವಿಧಾನಸಭಾ ಕ್ಷೇತ್ರದ 2023ರ ಅಂಚೆ ಮತ ಮರು ಎಣಿಕೆಗೆ ಹೈಕೋರ್ಟ್ ಆದೇಶ, ಮೇ 2ರಂದು ಭದ್ರತೆಯಲ್ಲಿ ಆರಂಭ!

ಶೃಂಗೇರಿ ವಿಧಾನಸಭಾ ಕ್ಷೇತ್ರದ 2023ರ ಚುನಾವಣೆಯ ಅಂಚೆ ಮತಗಳ ಮರು ಎಣಿಕೆಗೆ ಹೈಕೋರ್ಟ್ ನಿರ್ದೇಶನದಂತೆ ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಮೇ 2ರಂದು ಅಭ್ಯರ್ಥಿಗಳ ಸಮ್ಮುಖದಲ್ಲಿ ನಡೆಯಲಿರುವ ಈ ಪ್ರಕ್ರಿಯೆಯಲ್ಲಿ, ತಿರಸ್ಕೃತ ಮತಪತ್ರಗಳ ಮರುಪರಿಶೀಲನೆ ಮತ್ತು ಅಂತಿಮ ಎಣಿಕೆ ನಡೆಯಲಿದೆ.
Read Full Story

09:30 AM (IST) May 01

ಆದಾಯ ಕೊರತೆ - ಕರ್ನಾಟಕ ಸೇರಿದಂತೆ 9 ರಾಜ್ಯಗಳಿಗೆ ಕೇಂದ್ರ ಹಣಕಾಸು ಇಲಾಖೆ ಎಚ್ಚರಿಕೆ!

ಕೇಂದ್ರ ಹಣಕಾಸು ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ಆದಾಯ ಕೊರತೆ ಮತ್ತು ಹೆಚ್ಚುತ್ತಿರುವ ಸಾಲದ ಹೊರೆಯಿಂದಾಗಿ ಕರ್ನಾಟಕ ಸೇರಿದಂತೆ ಒಂಬತ್ತು ಪ್ರಮುಖ ರಾಜ್ಯಗಳು ಶೀಘ್ರದಲ್ಲೇ ತೀವ್ರ ಆರ್ಥಿಕ ಒತ್ತಡಕ್ಕೆ ಸಿಲುಕಲಿವೆ.

Read Full Story

09:22 AM (IST) May 01

Green Chutney Recipe - ಹೋಟೆಲ್ ಗ್ರೀನ್ ಚಟ್ನಿ ರಹಸ್ಯ ಬಯಲು - ಸ್ಯಾಂಡ್‌ವಿಚ್, ಪಕೋಡಕ್ಕೆ ಬೆಸ್ಟ್ ಕಾಂಬಿನೇಷನ್!

Simple green chutney recipe: ಕಬಾಬ್‌ ಅಥವಾ ವಡಾಪಾವ್‌, ಸ್ಯಾಂಡ್‌ವಿಚ್‌ಗಳಿಗೆ ಹಾಕುವ ಗ್ರೀನ್‌ ಚಟ್ನಿಯನ್ನು ಹೇಗೆ ಮಾಡೋದು ಎಂದು ಅನೇಕರಿಗೆ ಡೌಟ್‌ ಇರಬಹುದು. ಹೌದು, ಹೋಟೆಲ್ ಶೈಲಿಯಲ್ಲಿ ಗ್ರೀನ್ ಚಟ್ನಿ (Green Chutney) ಮಾಡುವುದು ಹೇಗೆ ಎಂದು ನೋಡೋಣ

Read Full Story

09:21 AM (IST) May 01

ಮುಸ್ಲಿಂ ಕಾಲೋನಿಗಳಿಗೆ ₹600 ಕೋಟಿ ಬಂಪರ್‌ - ಅಭಿವೃದ್ಧಿ ಯೋಜನೆಗೆ ಸಂಪುಟ ಅಸ್ತು!

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅಲ್ಪಸಂಖ್ಯಾತರು ವಾಸಿಸುವ ಕಾಲೋನಿಗಳ ಅಭಿವೃದ್ಧಿಗಾಗಿ 600 ಕೋಟಿ ರು. ವೆಚ್ಚದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ. ಸಚಿವ ಎಚ್.ಕೆ. ಪಾಟೀಲ್ ಈ ಮಾಹಿತಿ ನೀಡಿದ್ದು, ಈ ನಿರ್ಧಾರಕ್ಕೂ ದಾವಣಗೆರೆ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Read Full Story

08:47 AM (IST) May 01

Buddha Jayanti 2026 - ಜಗತ್ತಿಗೆ ಕರುಣೆಯ ಸಾಕ್ಷಾತ್ಕಾರಗೊಳಿಸಿದ ಬುದ್ಧ!

ಈ ಲೇಖನವು ಬುದ್ಧ ಪೂರ್ಣಿಮೆಯ ಮಹತ್ವವನ್ನು ವಿವರಿಸುತ್ತಾ, ಸಿದ್ಧಾರ್ಥನಿಂದ ಬುದ್ಧನಾದ ಜ್ಞಾನೋದಯದ ಪಯಣವನ್ನು ಕಟ್ಟಿಕೊಡುತ್ತದೆ. ಬುದ್ಧನ ನಾಲ್ಕು ಉದಾತ್ತ ಸತ್ಯಗಳು, ಪಂಚಶೀಲ ತತ್ವಗಳು ಮತ್ತು ಅಹಿಂಸೆಯ ಸಂದೇಶವು ಇಂದಿನ ಜಗತ್ತಿಗೆ ಹೇಗೆ ಪ್ರಸ್ತುತ ಎಂಬುದನ್ನು ಇದು ಸಾದರಪಡಿಸುತ್ತದೆ.
Read Full Story

08:45 AM (IST) May 01

ಬೆಂಗಳೂರಿಂದ ಹೈಸ್ಪೀಡ್‌ ರೈಲಿಗೆ ರಾಜ್ಯ ಅಸ್ತು - ಹೈದರಾಬಾದ್ ಮತ್ತು ಚೆನ್ನೈಗೆ ಇನ್ನು ಬುಲೆಟ್ ವೇಗದಲ್ಲಿ ಪ್ರಯಾಣ!

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹೈದರಾಬಾದ್-ಬೆಂಗಳೂರು ಮತ್ತು ಬೆಂಗಳೂರು-ಚೆನ್ನೈ ಹೈಸ್ಪೀಡ್ ರೈಲು ಯೋಜನೆಗಳಿಗೆ ಆಡಳಿತಾತ್ಮಕ ಅಂಗೀಕಾರ ನೀಡಲಾಗಿದೆ. ಇದರೊಂದಿಗೆ, ನವಜಾತ ಶಿಶುಗಳ ತಪಾಸಣಾ ಯೋಜನೆ, ಸೆಮಿಕಂಡಕ್ಟರ್ ಕಂಪನಿಗೆ ಜಮೀನು ಹಂಚಿಕೆಗೂ ಸಂಪುಟ ಒಪ್ಪಿಗೆ ನೀಡಿದೆ.

Read Full Story

08:11 AM (IST) May 01

KD Movie Collection - ಅಬ್ಬಬ್ಬಾ... ಧ್ರುವ ಸರ್ಜಾ, ಜೋಗಿ ಪ್ರೇಮ್‌ ಸಿನಿಮಾ ಫಸ್ಟ್‌ ಡೇ ಕಲೆಕ್ಷನ್‌ ಎಷ್ಟು?

KD Kannada Movie Box Office Collection Report: ಜೋಗಿ ಪ್ರೇಮ್‌ ನಿರ್ದೇಶನದ ಕೆಡಿ ಸಿನಿಮಾ ರಿಲೀಸ್‌ ಆಗಿದೆ. ಈ ಸಿನಿಮಾದಲ್ಲಿ ಧ್ರುವ ಸರ್ಜಾ, ಕಿಚ್ಚ ಸುದೀಪ್‌, ಶಿಲ್ಪಾ ಶೆಟ್ಟಿ, ರೀಷ್ಮಾ ನಾಣಯ್ಯ, ಸೂರಜ್‌, ರವಿಶಂಕರ್‌ ಅವರು ನಟಿಸಿದ್ದಾರೆ. ಈ ಸಿನಿಮಾ ಮೊದಲ ದಿನ ಎಷ್ಟು ಕಲೆಕ್ಷನ್‌ ಮಾಡಿದೆ?

 

Read Full Story

07:17 AM (IST) May 01

ಕನ್ನಡದಲ್ಲಿ ಫೇಲ್‌ಗೆ ಕಾರಣ ಹುಡುಕಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರ

ಎಸ್‌ಎಸ್‌ಎಲ್‌ಸಿ ಕನ್ನಡ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅನುತ್ತೀರ್ಣರಾಗುತ್ತಿರುವ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಶಿಕ್ಷಣ ಸಚಿವರಿಗೆ ಸಂಶೋಧನಾ ವರದಿಯೊಂದನ್ನು ಸಲ್ಲಿಸಿದೆ.

 

Read Full Story

07:17 AM (IST) May 01

56432 ಸರ್ಕಾರಿ ಹುದ್ದೆ ಭರ್ತಿಗೆ ಸಂಪುಟ ಅಸ್ತು, 100ರ ಬದಲು 400 ರೋಸ್ಟರ್‌ ಬಿಂದು ಪಾಲನೆ

ರಾಜ್ಯದಲ್ಲಿ 56,432 ಸರ್ಕಾರಿ ಹುದ್ದೆಗಳ ನೇಮಕಾತಿಗೆ, 100ರ ಬದಲು 400 ರೋಸ್ಟರ್ ಬಿಂದುಗಳನ್ನು ಅಳವಡಿಸಲು ಸಚಿವ ಸಂಪುಟ ನಿರ್ಧರಿಸಿದೆ. ಈ ಬದಲಾವಣೆಯು ಪರಿಶಿಷ್ಟ ಜಾತಿಯ ಒಳ ಮೀಸಲಾತಿಯನ್ನು ಸಮರ್ಪಕವಾಗಿ ಜಾರಿಗೊಳಿಸುವ ಗುರಿ ಹೊಂದಿದ್ದು, ಹಳೆಯ ಅಧಿಸೂಚನೆಗಳನ್ನು ಹಿಂಪಡೆಯಲಾಗಿದೆ.

 

Read Full Story

07:16 AM (IST) May 01

ಕರ್ನಾಟಕದಲ್ಲಿ ಸದ್ಯ ಸಿಎಂ ಬದಲಾವಣೆ ಇಲ್ಲ ಎಂದ ಖರ್ಗೆ, ಎಐಸಿಸಿ ಅಧ್ಯಕ್ಷರ ಹೇಳಿಕೆಯಿಂದ ಭಾರಿ ಸಂಚಲನ

ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ. ನಾಯಕತ್ವ ಬದಲಾವಣೆಯ ಗೊಂದಲವನ್ನು ಶೀಘ್ರದಲ್ಲೇ ಬಗೆಹರಿಸಲಾಗುವುದು ಮತ್ತು ಸಮಯ ಬಂದಾಗ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

 

Read Full Story

More Trending News