LIVE NOW
Published : Sep 05, 2026, 05:39 AM ISTUpdated : Sep 05, 2026, 07:25 AM IST

State News Live: 2019ರಲ್ಲಿ 6 ಸಾವಿರಕ್ಕೆ ಕೆಲಸ, ಕೆಪಿಎಸ್ಸಿ ಸದಸ್ಯನಾದ ಬಳಿಕ 100 ಎಕರೆ ಜಮೀನು - ಇದು 'ನುಂಗಪ್ಪ' ಸಾಹುಕಾರ್‌ ಸ್ಟೋರಿ

ಸಾರಾಂಶ

ಬೆಂಗಳೂರು (ಸೆ.5): ಬಾಗಲಕೋಟೆ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬರಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ಬಳಿಕ ಬಾಗಲಕೋಟೆಯಲ್ಲಿ ರೈತರ ಜಮೀನಿಗೆ ತೆರಳಿ ಬೆಳೆ ವೀಕ್ಷಣೆ ಮಾಡಿದರು. ಸಮೀಕ್ಷೆಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರೈತರ ಐದು ಲಕ್ಷ ರು.ವರೆಗಿನ ಸಾಲ ಮನ್ನಾ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಡಿರುವ ಆಗ್ರಹಕ್ಕೆ ಪ್ರತಿಕ್ರಿಯೆ ನೀಡಿದರು. ಸಾಲಮನ್ನಾ ಬೇಡಿಕೆ ಸರಿಯಿದೆ. ರೈತರ ಸಾಲ ಮನ್ನಾಗೆ ನೆರವು ಕೋರಿ ದೆಹಲಿಗೆ ಸರ್ವ ಪಕ್ಷ ನಿಯೋಗ ಕರೆದೊಯ್ಯುತ್ತೇವೆ. ರಾಜ್ಯ ಬಿಜೆಪಿ ನಾಯಕರು ಕೇಂದ್ರ ಸರ್ಕಾರದಿಂದ ಸಾಲಮನ್ನಾ ಮಾಡಿಸುವ ಜವಾಬ್ದಾರಿ ಹೊರಬೇಕು. ಬರಗಾಲದ ಬಗ್ಗೆ ಪ್ರಧಾನಮಂತ್ರಿಗಳೇ ಹೇಳಿದ್ದು, ಕೇಂದ್ರ ಸರ್ಕಾರ ಸಾಲಮನ್ನಾ ಮಾಡಬೇಕು. ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಇತರೆ ನಾಯಕರು ನಮ್ಮೊಂದಿಗೆ ದೆಹಲಿಗೆ ಬಂದು ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆ ಹಾಗೂ ರೈತರ ಸಾಲ ಮನ್ನಾಕ್ಕೆ ಆಗ್ರಹಿಸಬೇಕು ಎಂದಿದ್ದಾರೆ. ಅದರೊಂದಿಗೆ ಇಂದಿನ ರಾಜ್ಯ ಸುದ್ದಿಗಳ ಅಪ್‌ಡೇಟ್‌ ಇಲ್ಲಿದೆ.

 

07:25 AM (IST) Sep 05

2019ರಲ್ಲಿ 6 ಸಾವಿರಕ್ಕೆ ಕೆಲಸ, ಕೆಪಿಎಸ್ಸಿ ಸದಸ್ಯನಾದ ಬಳಿಕ 100 ಎಕರೆ ಜಮೀನು - ಇದು 'ನುಂಗಪ್ಪ' ಸಾಹುಕಾರ್‌ ಸ್ಟೋರಿ

ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಪಶುವೈದ್ಯ ಹುದ್ದೆಗಳ ನೇಮಕಾತಿ ಅಕ್ರಮದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಕೆಪಿಎಸ್‌ಸಿ ಸದಸ್ಯರಾದ ನಂತರ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೂರಾರು ಎಕರೆ ಜಮೀನು ಖರೀದಿಸಿದ್ದಾರೆ.

Read Full Story

07:15 AM (IST) Sep 05

ಉಡುಪಿ ಕೃಷ್ಣಗೆ ಯಶೋಧಾ ಸ್ತನ್ಯಪಾನ ಅಲಂಕಾರ, ಇಂದು ರಥಬೀದಿಯಲ್ಲಿ ಶ್ರೀಕೃಷ್ಣ ಲೀಲೋತ್ಸವ

ಉಡುಪಿಯ ಕೃಷ್ಣಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಭಕ್ತಿ, ಶ್ರದ್ಧೆಯಿಂದ ಆಚರಿಸಲಾಯಿತು. ಪರ್ಯಾಯ ಶೀರೂರು ಶ್ರೀಗಳು ಕೃಷ್ಣನಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಿದ್ದು, ಮಧ್ಯರಾತ್ರಿ ಅರ್ಘ್ಯ ಪ್ರದಾನ ಮಾಡಲಾಯಿತು.

Read Full Story

06:57 AM (IST) Sep 05

3700 ಸರ್ಕಾರಿ ಶಾಲೆ, ಕಾಲೇಜಲ್ಲಿ ಸದ್ಯದಲ್ಲೇ ಸ್ಮಾರ್ಟ್‌ ಕ್ಲಾಸ್‌ ಶುರು, ಖಾಸಗಿ ಶಾಲೆಗಳ ಮಾದರಿ ಡಿಜಿಟಲ್‌ ಶಿಕ್ಷಣಕ್ಕೆ ಸರ್ಕಾರ ಸಿದ್ಧತೆ

ಕರ್ನಾಟಕ 2026-27ನೇ ಸಾಲಿನಲ್ಲಿ 3,767 ಸರ್ಕಾರಿ ಶಾಲೆ ಮತ್ತು ಪಿಯು ಕಾಲೇಜುಗಳಲ್ಲಿ 'ಸ್ಮಾರ್ಟ್‌ ಕ್ಲಾಸ್‌'ಗಳನ್ನು ಆರಂಭಿಸಲು ಮುಂದಾಗಿದೆ. 88.52 ಕೋಟಿ ರೂ. ವೆಚ್ಚದ ಈ ಯೋಜನೆಯು, ಡಿಜಿಟಲ್ ಶಿಕ್ಷಣ ನೀಡಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಆಧಾರಿತ ಕಲಿಕೆಯನ್ನು ಒದಗಿಸುವ ಗುರಿ ಹೊಂದಿದೆ.

Read Full Story

06:41 AM (IST) Sep 05

ಕಾಲಿಗೆ ಚಿಪ್‌ ಅಳವಡಿಸಿ ಪೊಲೀಸ್‌ ಪೇದೆ ಹುದ್ದೆಗಳ ದೈಹಿಕ ಪರೀಕ್ಷೆಗೆ ಸಿದ್ಧತೆ, ಓಟ ಮುಗಿಸ್ತಿದ್ದಂತೆ ಮೊಬೈಲ್‌ಗೆ ಬರಲಿದೆ ರಿಸಲ್ಟ್‌

ಪೊಲೀಸ್ ಕಾನ್‌ಸ್ಟೇಬಲ್‌ ನೇಮಕಾತಿಯಲ್ಲಿ ಪಾರದರ್ಶಕತೆ ತರಲು, ದೈಹಿಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಕಾಲಿಗೆ ಚಿಪ್ ಅಳವಡಿಕೆ ಸೇರಿದಂತೆ ನಾಲ್ಕು ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ.

Read Full Story

06:24 AM (IST) Sep 05

14 ಹಿಂದಿಯೇತರ ರಾಜ್ಯಗಳಿಂದ ಹೋರಾಟಕ್ಕಾಗಿ ಒಕ್ಕೂಟ, ಕರ್ನಾಟಕದಿಂದ ಕರವೇ ಭಾಗಿ

ಹಿಂದಿಯೇತರ ರಾಜ್ಯಗಳಿಗೆ ಆಗುತ್ತಿರುವ ಉದ್ಯೋಗ ಸಂಬಂಧಿತ ಅನ್ಯಾಯದ ವಿರುದ್ಧ ಹೋರಾಡಲು ಕರ್ನಾಟಕ ಸೇರಿದಂತೆ 14 ರಾಜ್ಯಗಳು 'ಅಖಿಲ ಭಾರತ ಮಾತೃ ಭಾಷಾ ವೇದಿಕೆ'ಯನ್ನು ರಚಿಸಿವೆ.

Read Full Story

05:58 AM (IST) Sep 05

ಸಾಲ ಮನ್ನಾಕ್ಕೆ ನೆರವು ಕೇಳಿ ಕೇಂದ್ರಕ್ಕೆ ರಾಜ್ಯದಿಂದ ಸರ್ವಪಕ್ಷ ನಿಯೋಗ - ಸಿಎಂ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಾಗಲಕೋಟೆಯ ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿ, ಬೆಳೆ ಹಾನಿ ವೀಕ್ಷಿಸಿದರು. ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿದ ಬಿಜೆಪಿಗೆ, ಕೇಂದ್ರದಿಂದಲೇ ಸಾಲ ಮನ್ನಾ ಮಾಡಿಸಲು ದೆಹಲಿಗೆ ಬರುವಂತೆ ಸವಾಲು ಹಾಕಿದರು.

Read Full Story

More Trending News