LIVE NOW
Published : Aug 20, 2026, 07:25 AM ISTUpdated : Aug 20, 2026, 09:35 AM IST

Karnataka News Live: ಶರಣ್ ಪಂಪ್‌ವೆಲ್ ಶಿವಮೊಗ್ಗ ಪ್ರವೇಶಕ್ಕೆ 10 ದಿನ ಬ್ಯಾನ್; ಶಿಕಾರಿಪುರ ಬಂದ್ ಭಾಷಣಕ್ಕೆ ಮುನ್ನವೇ ಗಡಿಪಾರು!

ಸಾರಾಂಶ

ಮಹರ್ಷಿ ವಾಲ್ಮೀಕಿ ನಿಗಮದಡಿ ಪರಿಶಿಷ್ಟ ಪಂಗಡದ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣದಲ್ಲಿ ಸಚಿವ ನಾಗೇಂದ್ರ ಅವರು ₹187 ಕೋಟಿ ಹಗರಣ ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿದ್ದಾರೆ. ಇಂತಹ ಪ್ರಕರಣದ ಆರೋಪಿಯನ್ನು ಮತ್ತೆ ಸಚಿವರನ್ನಾಗಿ ಮಾಡಿರುವುದು ಕಾಂಗ್ರೆಸ್ ಸರ್ಕಾರದ ಧೋರಣೆಗೆ ಸಾಕ್ಷಿಯಾಗಿದೆ. ಸಚಿವ ಬಿ.ನಾಗೇಂದ್ರ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಆಗ್ರಹಿಸಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಡೆಯುತ್ತಿರುವ ಬಿಜೆಪಿ ಧರಣಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ರಾಜೀನಾಮೆ ಕೊಡುವವರೆಗೂ ಧರಣಿ ಮುಂದುವರೆಸುವುದಾಗಿ ವಿಪಕ್ಷ ನಾಯಕರು ಎಚ್ಚರಿಕೆ ನೀಡಿದ್ದಾರೆ.

ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಸಂಬಂಧಿಸಿ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ಅಮಾನತುಗೊಂಡಿರುವ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ನಿವಾಸ ಸೇರಿ ರಾಜ್ಯಾದ್ಯಂತ 21ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ಮಾಡಿದ್ದಾರೆ. ಇದೀಗ ಶಿವಶಂಕರಪ್ಪನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಹಲವು ಸತ್ಯಾಂಶಗಳು ಹೊರಬೀಳುವ ಸಾಧ್ಯತೆಗಳಿವೆ.

09:35 AM (IST) Aug 20

ಶರಣ್ ಪಂಪ್‌ವೆಲ್ ಶಿವಮೊಗ್ಗ ಪ್ರವೇಶಕ್ಕೆ 10 ದಿನ ಬ್ಯಾನ್; ಶಿಕಾರಿಪುರ ಬಂದ್ ಭಾಷಣಕ್ಕೆ ಮುನ್ನವೇ ಗಡಿಪಾರು!

ಶಿವಮೊಗ್ಗ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್ ಅವರಿಗೆ 10 ದಿನಗಳ ಕಾಲ ಜಿಲ್ಲಾ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಶಿಕಾರಿಪುರದಲ್ಲಿ ಗೋ ಕಳ್ಳತನ ವಿರೋಧಿ ಪ್ರತಿಭಟನೆಗೆ ಆಗಮಿಸುತ್ತಿದ್ದ ಅವರನ್ನು ಪೊಲೀಸರು ತಡೆದು, ಜಿಲ್ಲಾ ಗಡಿಯಿಂದ ವಾಪಸ್ ಕಳುಹಿಸಿದ್ದಾರೆ. ಈ ಕ್ರಮವನ್ನು ಖಂಡಿಸಿರುವ ಪಂಪ್‌ವೆಲ್, ಇದು ಸರ್ಕಾರದ ಹಿಂದೂ ವಿರೋಧಿ ನೀತಿ ಎಂದು ಆರೋಪಿಸಿದ್ದಾರೆ.
Read Full Story

09:10 AM (IST) Aug 20

ಸಾರ್ವಜನಿಕರ ಗಮನಕ್ಕೆ; ಬೆಂಗಳೂರಿನ 3 ಖಾಸಗಿ ವೈದ್ಯಕೀಯ ಸಂಸ್ಥೆ ಲೈಸೆನ್ಸ್‌ ರದ್ದು, ದಂಡ

ಕರ್ನಾಟಕ ಖಾಸಗಿ ನರ್ಸಿಂಗ್ ನಿಯಂತ್ರಣ ಕಾಯಿದೆ (ಕೆಪಿಎಂಇ) ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಬೆಂಗಳೂರು ನಗರ ಜಿಲ್ಲಾಡಳಿತವು ನಾಲ್ಕು ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ದಂಡ ವಿಧಿಸಿದೆ. ಅಲ್ಲದೆ, ನಿಯಮ ಉಲ್ಲಂಘನೆ ತೀವ್ರವಾಗಿದ್ದ ಮೂರು ಸಂಸ್ಥೆಗಳ ಕೆಪಿಎಂಇ ಪರವಾನಗಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
Read Full Story

08:55 AM (IST) Aug 20

Bengaluru - ಎಚ್‌1 ಎನ್‌1 ಪತ್ತೆ - ಬೆಂಗಳೂರಿನ ಕ್ಲಾರೆನ್ಸ್ ಶಾಲೆ 122 ಮಕ್ಕಳ ತಪಾಸಣೆ

ಎಚ್‌1 ಎನ್‌1 ಸೋಂಕಿನ ಭೀತಿಯಿಂದ ಮುಚ್ಚಲಾಗಿದ್ದ ಬೆಂಗಳೂರಿನ ಕ್ಲಾರೆನ್ಸ್ ಶಾಲೆ ಪುನರಾರಂಭಗೊಂಡಿದೆ. ಪಾಲಿಕೆ ಆರೋಗ್ಯಾಧಿಕಾರಿಗಳು 122 ಮಕ್ಕಳನ್ನು ತಪಾಸಣೆ ನಡೆಸಿದ್ದು, ತೀವ್ರ ಲಕ್ಷಣಗಳಿದ್ದ ಮೂವರು ಮಕ್ಕಳ ಸ್ವಾಬ್ ಅನ್ನು ಪರೀಕ್ಷೆಗೆ ಕಳುಹಿಸಿದ್ದಾರೆ. ಸದ್ಯ ಶಾಲೆಯಲ್ಲಿ 15 ದಿನಗಳ ಕಾಲ ಸಕ್ರಿಯ ಆರೋಗ್ಯ ನಿಗಾ ವಹಿಸಲಾಗಿದೆ.
Read Full Story

08:52 AM (IST) Aug 20

ಬೆಂಗಳೂರಿಗೆ 28 ಕಿ.ಮೀ ಹೊಸ ಫ್ಲೈಓವರ್ - ಯಶವಂತಪುರ-ಕೆ.ಆರ್.ಪುರ 90 ನಿಮಿಷದ ಪ್ರಯಾಣ 28 ನಿಮಿಷಕ್ಕೆ ಇಳಿಕೆ!

ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡಲು, ತುಮಕೂರು ರಸ್ತೆಯಿಂದ ಹಳೇ ಮದ್ರಾಸ್ ರಸ್ತೆಗೆ 28 ಕಿ.ಮೀ ಉದ್ದದ ಶುಲ್ಕ ಸಹಿತ ಎಲಿವೇಟೆಡ್ ಕಾರಿಡಾರ್ ನಿರ್ಮಿಸಲು ಬಿ ಸ್ಮೈಲ್ ಯೋಜನೆ ರೂಪಿಸಿದೆ. ಈ ಯೋಜನೆಯು ಯಶವಂತಪುರದಿಂದ ಕೆ.ಆರ್. ಪುರದವರೆಗಿನ 90 ನಿಮಿಷಗಳ ಪ್ರಯಾಣದ ಸಮಯವನ್ನು ಕೇವಲ 28-30 ನಿಮಿಷಗಳಿಗೆ ಇಳಿಸಲಿದೆ.
Read Full Story

08:08 AM (IST) Aug 20

ಮೈಸೂರಲ್ಲಿ ಹಂಚಿಕೆಯಾಗಿದ್ದ 1100 ಮುಡಾ ಸೈಟ್‌ ರದ್ದು - ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?

ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರು, ಮುಡಾದಲ್ಲಿ ನಿಯಮ ಉಲ್ಲಂಘಿಸಿ ಹಂಚಲಾಗಿದ್ದ 50:50 ಬದಲಿ ನಿವೇಶನಗಳನ್ನು ರದ್ದುಪಡಿಸಿರುವುದಾಗಿ ತಿಳಿಸಿದ್ದಾರೆ. ವಿಚಾರಣಾ ಆಯೋಗದ ಶಿಫಾರಸಿನಂತೆ, ಸುಮಾರು ₹2000 ಕೋಟಿ ಮೌಲ್ಯದ 1100 ನಿವೇಶನಗಳ ಹಂಚಿಕೆಯನ್ನು ರದ್ದುಗೊಳಿಸಲಾಗಿದೆ.

Read Full Story

07:50 AM (IST) Aug 20

ಲೋಕಾಯುಕ್ತ ದಾಳಿ - ಭೂಸ್ವಾಧೀನಾಧಿಕಾರಿ ಬಳಿಯೇ 100 ಎಕರೆ ಕೃಷಿ ಜಮೀನು ಪತ್ತೆ!

ಬೆಂಗಳೂರಿನ ವಿಶೇಷ ಭೂಸ್ವಾಧೀನಾಧಿಕಾರಿ ಮಲ್ಲಿಕಾರ್ಜುನ ಬಿ. ಅವರ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಆದಾಯ ಮೀರಿ ಆಸ್ತಿ ಗಳಿಸಿದ ಆರೋಪ ಕೇಳಿಬಂದಿದೆ. ದಾಳಿಯ ವೇಳೆ 100 ಎಕರೆ ಕೃಷಿ ಭೂಮಿ, ₹2.53 ಕೋಟಿ ನಗದು ಸೇರಿದಂತೆ ಒಟ್ಟು ₹18 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ.

Read Full Story

07:29 AM (IST) Aug 20

ನಾಗೇಂದ್ರ ರಾಜೀನಾಮೆ ಪಡೆಯೋವರೆಗೆ ಹೋರಾಟ ನಿಲ್ಲಲ್ಲ: ಸತತ ಮೂರನೇ ದಿನವೂ ಬಿಜೆಪಿ ಪ್ರತಿಭಟನೆ, ಕಲಾಪದಲ್ಲೂ ಪ್ರತಿಪಕ್ಷ ಗದ್ದಲ

ವಿಧಾನಸಭೆ (ಆ.20): ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣದ ಆರೋಪ ಹಿನ್ನೆಲೆಯಲ್ಲಿ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬುಧವಾರವೂ ವಿಧಾನಸಭೆಯಲ್ಲಿ ಪ್ರತಿಪಕ್ಷಗಳಿಂದ ಗದ್ದಲ ಮುಂದುವರೆದಿದ್ದು, ಗಲಾಟೆಗೆ ಅರ್ಧ ದಿನದ ಕಲಾಪ ಬಲಿಯಾಯಿತು. ಗದ್ದಲದ ನಡುವೆಯೇ ಪ್ರಶ್ನೋತ್ತರ ನಡೆಸಿ, ವಿಧೇಯಕಗಳ ಮಂಡನೆ ಮಾಡಿ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಯಿತು.

ಬುಧವಾರ ಮಧ್ಯಾಹ್ನ ಮಾಜಿ ಸಚಿವ ಬಿ.ಸಿ.ನಾಗೇಶ್‌ ಅವರ ಕುರಿತ ಸಂತಾಪ ಸೂಚನೆ ನಿರ್ಣಯ ಅಂಗೀಕರಿಸಿದ ಬೆನ್ನಲ್ಲೇ ಪ್ರತಿಪಕ್ಷಗಳ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಲು ಶುರು ಮಾಡಿದರು. ಭ್ರಷ್ಟ ನಾಗೇಂದ್ರ ಅವರನ್ನು ವಜಾಗೊಳಿಸಬೇಕು. ಅಲ್ಲಿಯವರೆಗೆ ಸದನ ನಡೆಯಲು ಬಿಡುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಸ್ಪಷ್ಟಪಡಿಸಿದರು.

Read Full Story

More Trending News