LIVE NOW
Published : Dec 15, 2025, 06:59 AM ISTUpdated : Dec 15, 2025, 10:01 AM IST

Karnataka News Live: ‘ಶಿಕ್ಷಣ ಹಬ್‌’ ಮಂಗಳೂರು ಈಗ ಡ್ರಗ್ಸ್‌ಗೂ ಕುಖ್ಯಾತ - ವಿದ್ಯಾರ್ಥಿಗಳೇ ಬಲಿಪಶು!

ಸಾರಾಂಶ

ಬೆಳಗಾವಿ: 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಸಿಬಿ ಪಾರ್ಟಿ ಮೂಲಕ ಚುನಾವಣೆಗೆ ಸ್ಪರ್ಧಿಸಿ 143 ಸ್ಥಾನಗಳ ಬಹುಮತದೊಂದಿಗೆ ನಾನೇ ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿ ಜಿಲ್ಲೆಯ ಅಥಣಿಯ ಭೋಜರಾಜ ಕ್ರೀಡಾಂಗಣದಲ್ಲಿ ಶಿವಾಜಿ ಮಹಾರಾಜರ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಮಾತನಾಡಿ, ಭಾರತ ಹಿಂದೂ ರಾಷ್ಟ್ರವಾಗಿ ಉಳಿಯಬೇಕಾದರೆ ಛತ್ರಪತಿ ಶಿವಾಜಿ ಮಹಾರಾಜ ಮತ್ತು ರಾಣಾ ಪ್ರತಾಪ್ ಸಿಂಹರಂತಹ ಆಡಳಿತ ಅನಿವಾರ್ಯವಾಗಿದೆ. ಇರುವ ಆಡಳಿತ ಪಕ್ಷವೇ ಇರಲಿ, ವಿರೋಧ ಪಕ್ಷವೇ ಇರಲಿ, ನಾನು ಇರುವ ಸತ್ಯ ಹೇಳುತ್ತೇನೆ. ಹೀಗಾಗಿ ನಾನು ವಿವಾದಾತ್ಮಕ ಹೇಳಿಕೆ ನೀಡುತ್ತೇನೆಂದು ಬಿಜೆಪಿಯವರು ಉಚ್ಛಾಟನೆ ಮಾಡಿದ್ದಾರೆ.

Mangaluru Drug Menace

10:01 AM (IST) Dec 15

‘ಶಿಕ್ಷಣ ಹಬ್‌’ ಮಂಗಳೂರು ಈಗ ಡ್ರಗ್ಸ್‌ಗೂ ಕುಖ್ಯಾತ - ವಿದ್ಯಾರ್ಥಿಗಳೇ ಬಲಿಪಶು!

ರಾಜ್ಯದಲ್ಲಿ ಬೆಂಗಳೂರಿನಿಂದಾಚೆಗೆ ಮಾದಕ ದ್ರವ್ಯದ ಮಾರಕ ಜಾಲ ದೊಡ್ಡಮಟ್ಟದಲ್ಲಿ ವಿಸ್ತರಿಸಿರುವುದು ಮಂಗಳೂರಿನಲ್ಲಿ. ಶಿಕ್ಷಣಕ್ಕೆ ಹೆಸರಾಗಿರುವ ಮಂಗಳೂರು, ಇನ್ನೊಂದು ಮಗ್ಗುಲಲ್ಲಿ ಡ್ರಗ್ಸ್‌ ಮಾರುಕಟ್ಟೆಯಾಗಿಯೂ ಕುಖ್ಯಾತಿ ಗಳಿಸಿದೆ!.

Read Full Story

09:54 AM (IST) Dec 15

COVID-19 Vaccine - ಯುವಕರ ಹೃದಯಾಘಾತಕ್ಕೆ ಕೊರೊನಾ ಲಸಿಕೆ ಕಾರಣನಾ? AIIMS ವರದಿ ಬಹಿರಂಗ

ಸಾಂಪ್ರದಾಯಿಕ ಶವ ಪರೀಕ್ಷೆ ಮತ್ತು ವಿವರವಾದ ಹಿಸ್ಟೋ ಪಾಥೋಲಾಜಿಕಲ್ ಪರೀಕ್ಷೆಗಳನ್ನು ಬಳಸಿಕೊಂಡು 18 ರಿಂದ 45 ವರ್ಷ ವಯಸ್ಸಿನ ಜನರ ಹಠಾತ್ ಸಾವಿನ ಪ್ರಕರಣಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದಾರೆ.

Read Full Story

09:49 AM (IST) Dec 15

ಐಟಿಎಫ್‌ ಮೇಳಕ್ಕೆ ಬ್ರೇಕ್‌ - ಸಾವಯವ ಮತ್ತು ಸಿರಿಧಾನ್ಯ ಕೃಷಿಗೆ ರಾಜ್ಯ ಸರ್ಕಾರದ ಹೊಸ ಯೋಜನೆ

ಸಾವಯವ ಮತ್ತು ಸಿರಿಧಾನ್ಯ ಕೃಷಿಗೆ ಒತ್ತು ನೀಡುವುದು ಹಾಗೂ ರೈತರನ್ನು ಉತ್ತೇಜಿಸುವ ಉದ್ದೇಶದೊಂದಿಗೆ ಆರಂಭಿಸಲಾದ ಅಂತಾರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳ (ಐಟಿಎಫ್‌) ಆರೇ ವರ್ಷಕ್ಕೆ ಸ್ಥಗಿತಗೊಂಡಿದೆ.

Read Full Story

09:40 AM (IST) Dec 15

ಸಿಎಂ ಬದಲಾವಣೆ ಚರ್ಚೆ ತೀವ್ರ - ಹೈಕಮಾಂಡ್‌ ಜೊತೆ ಡಿ.ಕೆ.ಶಿವಕುಮಾರ್‌ ಮಾತುಕತೆ

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ದೆಹಲಿಯಲ್ಲಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ತೀವ್ರ ಕುತೂಹಲ ಮೂಡಿಸಿದೆ.

Read Full Story

09:11 AM (IST) Dec 15

Delhi Air Quality - ನಿಬಂಧನೆಗಳು ಜಾರಿಯಲ್ಲಿದ್ರೂ ಪಾತಾಳಕ್ಕೆ ಕುಸಿದ ದೆಹಲಿ ವಾಯುಗುಣಮಟ್ಟ

Delhi AQI: Delhi Pollution Update: ವಾಯುಗುಣಮಟ್ಟ ಸೂಚ್ಯಂಕವು 459ಕ್ಕೆ ಕುಸಿದಿದೆ. ದಿಲ್ಲಿಯ ವಿವಿಧ ಪ್ರದೇಶಗಳ ಪೈಕಿ ಬವಾನಾ ಎಂಬಲ್ಲಿ 497ಕ್ಕೆ ಕುಸಿತ ಕಂಡಿದೆ.ಬವಾನಾದಲ್ಲಿ ಗಾಳಿ ಗುಣಮಟ್ಟ ಸೂಚ್ಯಂಕವು 497ಕ್ಕೆ ಕುಸಿದು ಅತ್ಯಂತ ಗಂಭೀರ ಹಂತಕ್ಕೆ ತಲುಪಿತ್ತು

Read Full Story

09:01 AM (IST) Dec 15

ಕಾಂಗ್ರೆಸ್‌ನ ಕಟ್ಟಾಳು ಶಾಮನೂರು ಶಿವಶಂಕರಪ್ಪ - ದಾವಣಗೆರೆಯ ಅಜೇಯ ರಾಜಕೀಯ ದಂತಕಥೆ

ಕಾಂಗ್ರೆಸ್‌ನ ಕಟ್ಟಾಳು ಎನಿಸಿಕೊಂಡಿರುವ ದಕ್ಷಿಣದ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರು ಶಾಮನೂರು ಕಲ್ಲಪ್ಪ ಹಾಗೂ ಸಾವಿತ್ರಮ್ಮ ಕಲ್ಲಪ್ಪ ದಂಪತಿಯ ಪುತ್ರರಾಗಿ 1931ರ ಜೂ.16ರಂದು ದಾವಣಗೆರೆಯಲ್ಲಿ ಜನಿಸಿದರು.

Read Full Story

08:24 AM (IST) Dec 15

BBK 12 - ಎಲಿಮಿನೇಟ್ ಆಗಿಲ್ಲ ಅನ್ನೋ ಖುಷಿಗಿಂತ ರಕ್ಷಿತಾ ಶೆಟ್ಟಿಗೆ ಶುರುವಾಗಿದೆ ಹೊಸ ಚಿಂತೆ

ಬಿಗ್‌ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆಂದು ಭಾವಿಸಲಾದ ಧ್ರುವಂತ್ ಮತ್ತು ರಕ್ಷಿತಾ ಶೆಟ್ಟಿ ಸೀಕ್ರೆಟ್ ರೂಮ್ ಸೇರಿದ್ದಾರೆ. ಅಲ್ಲಿಂದಲೇ ಮನೆಯ ಸದಸ್ಯರ ಮಾತುಗಳನ್ನು ಕೇಳುತ್ತಿದ್ದು, ತಮ್ಮ ಬಗ್ಗೆ ಇತರರ ಅಭಿಪ್ರಾಯಗಳನ್ನು ತಿಳಿದುಕೊಂಡು ರಕ್ಷಿತಾ ಭಾವುಕರಾಗಿದ್ದಾರೆ.
Read Full Story

More Trending News