LIVE NOW
Published : Dec 15, 2025, 06:59 AM ISTUpdated : Dec 15, 2025, 09:48 PM IST

Karnataka News Live: ಪೊಲೀಸ್‌ ಚೆಕಿಂಗ್‌ ವೇಳೆ ಹೋಟೆಲ್‌ ಬಾಲ್ಕನಿಂದ ಹಾರಿದ ಬೆಂಗಳೂರು ಮಹಿಳೆ, ಸ್ಥಿತಿ ಗಂಭೀರ!

ಸಾರಾಂಶ

ಬೆಳಗಾವಿ: 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಸಿಬಿ ಪಾರ್ಟಿ ಮೂಲಕ ಚುನಾವಣೆಗೆ ಸ್ಪರ್ಧಿಸಿ 143 ಸ್ಥಾನಗಳ ಬಹುಮತದೊಂದಿಗೆ ನಾನೇ ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿ ಜಿಲ್ಲೆಯ ಅಥಣಿಯ ಭೋಜರಾಜ ಕ್ರೀಡಾಂಗಣದಲ್ಲಿ ಶಿವಾಜಿ ಮಹಾರಾಜರ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಮಾತನಾಡಿ, ಭಾರತ ಹಿಂದೂ ರಾಷ್ಟ್ರವಾಗಿ ಉಳಿಯಬೇಕಾದರೆ ಛತ್ರಪತಿ ಶಿವಾಜಿ ಮಹಾರಾಜ ಮತ್ತು ರಾಣಾ ಪ್ರತಾಪ್ ಸಿಂಹರಂತಹ ಆಡಳಿತ ಅನಿವಾರ್ಯವಾಗಿದೆ. ಇರುವ ಆಡಳಿತ ಪಕ್ಷವೇ ಇರಲಿ, ವಿರೋಧ ಪಕ್ಷವೇ ಇರಲಿ, ನಾನು ಇರುವ ಸತ್ಯ ಹೇಳುತ್ತೇನೆ. ಹೀಗಾಗಿ ನಾನು ವಿವಾದಾತ್ಮಕ ಹೇಳಿಕೆ ನೀಡುತ್ತೇನೆಂದು ಬಿಜೆಪಿಯವರು ಉಚ್ಛಾಟನೆ ಮಾಡಿದ್ದಾರೆ.

fall from hotel balcony Bengaluru

09:49 PM (IST) Dec 15

ಪೊಲೀಸ್‌ ಚೆಕಿಂಗ್‌ ವೇಳೆ ಹೋಟೆಲ್‌ ಬಾಲ್ಕನಿಂದ ಹಾರಿದ ಬೆಂಗಳೂರು ಮಹಿಳೆ, ಸ್ಥಿತಿ ಗಂಭೀರ!

ಬೆಂಗಳೂರಿನ ಹೋಟೆಲ್‌ನ ಬಾಲ್ಕನಿಯಿಂದ ಬಿದ್ದು 21 ವರ್ಷದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅತಿಯಾದ ಗಲಾಟೆಯ ದೂರಿನ ಮೇರೆಗೆ ಪೊಲೀಸರು ಕ್ರಮ ಕೈಗೊಳ್ಳುವ ವೇಳೆ ಈ ಘಟನೆ ನಡೆದಿದೆ.

 

Read Full Story

08:49 PM (IST) Dec 15

ಡಿ.16ರಂದು ಮಂಡ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ, ಜಿಲ್ಲಾಡಳಿತದಿಂದ ಭರದ ಸಿದ್ದತೆ, ಕಟ್ಟುನಿಟ್ಟಿನ ಭದ್ರತೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಡ್ಯ ಜಿಲ್ಲೆಯ ಮಳವಳ್ಳಿಗೆ ಆಗಮಿಸಿ, ಸುತ್ತೂರಿನ ಶಿವರಾತ್ರಿ ಶಿವಯೋಗಿಶ್ವರರ 1066ನೇ ಜಯಂತಿ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಡಳಿತವು  ಬಿಗಿ ಬಂದೋಬಸ್ತ್‌ಗೆ ಸೂಚನೆ ನೀಡಿದೆ.

Read Full Story

08:37 PM (IST) Dec 15

ತಂತ್ರಜ್ಞಾನದ ನೆರವಿನಿಂದ ಜೈಲುಗಳಲ್ಲಿ ಸುಧಾರಣೆ ತರಲು ಅಲೋಕ್ ಕುಮಾರ್ ನೇತೃತ್ವ

ಕರ್ನಾಟಕದ ಜೈಲುಗಳು ಅತಿಯಾದ ಜನಸಂದಣಿ ಮತ್ತು ಸಿಬ್ಬಂದಿ ಕೊರತೆಯಿಂದಾಗಿ ಅಕ್ರಮ ಚಟುವಟಿಕೆಗಳ ಕೇಂದ್ರಗಳಾಗಿವೆ. ಹೊಸ ಡಿಜಿಪಿ ಅಲೋಕ್ ಕುಮಾರ್ ಅವರ ನೇತೃತ್ವದಲ್ಲಿ, ತಂತ್ರಜ್ಞಾನದ ಬಳಕೆ ಮತ್ತು ಸಮಗ್ರ ಸುಧಾರಣೆಗಳ ಮೂಲಕ ಈ ವ್ಯವಸ್ಥೆಯನ್ನು ಬದಲಾಯಿಸುವ ಸಾಧ್ಯತೆಗಳನ್ನು ಈ ಲೇಖನ ಪರಿಶೀಲಿಸುತ್ತದೆ.
Read Full Story

07:29 PM (IST) Dec 15

ಅನುದಾನಿತ ಶಾಲೆಯಲ್ಲಿ 9ನೇ ಕ್ಲಾಸ್ ಹುಡ್ಗೀರ ಎಣ್ಣೆ ಪಾರ್ಟಿ; ವೈರಲ್ ವಿಡಿಯೋ ಆಧರಿಸಿ 6 ವಿದ್ಯಾರ್ಥಿನಿಯರು ಅಮಾನತು!

ಅನುದಾನಿತ ಶಾಲೆಯೊಂದರಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯರು ತರಗತಿಯಲ್ಲೇ ಮದ್ಯಪಾನ ಮಾಡಿದ್ದಾರೆ. ಈ ದೃಶ್ಯದ ವಿಡಿಯೋ ವೈರಲ್ ಆದ ನಂತರ, ಶಾಲಾ ಆಡಳಿತ ಮಂಡಳಿ ಆರು ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ತನಿಖೆ ಆರಂಭಿಸಿದೆ.

Read Full Story

07:29 PM (IST) Dec 15

ವಿಂಡ್ ಫ್ಯಾನ್‌ಗಳಿಂದ ಪಕ್ಷಿಗಳ ವಾಸಸ್ಥಾನಕ್ಕೆ ಕುತ್ತು, ಮರೆಯಾದ ಹಕ್ಕಿಗಳ ಕಲರವ!

ಕೂಡ್ಲಿಗಿ ತಾಲೂಕಿನಲ್ಲಿ ಹೆಚ್ಚುತ್ತಿರುವ ವಿಂಡ್ ಫ್ಯಾನ್‌ಗಳ ಶಬ್ದದಿಂದಾಗಿ ಅಂಕಸಮುದ್ರದಂತಹ ಪಕ್ಷಿಧಾಮಗಳಿಗೆ ಬರುವ ವಲಸೆ ಪಕ್ಷಿಗಳು ದೂರ ಸರಿಯುತ್ತಿವೆ. ರೈತರು ಹಣದಾಸೆಗೆ ಜಮೀನು ಲೀಸ್ ನೀಡುತ್ತಿದ್ದು, ಇದರಿಂದ ಪಕ್ಷಿಗಳ ವಾಸಸ್ಥಾನಕ್ಕೆ ಕುತ್ತು ಬಂದಿದೆ.

Read Full Story

07:18 PM (IST) Dec 15

ಪ್ರಧಾನಿಗೆ ಜೋರ್ಡಾನ್‌ನಲ್ಲಿ ಭವ್ಯ ಸ್ವಾಗತ - ಐಎಂಇಸಿ ಕಾರಿಡಾರ್ ಕುರಿತು ಚರ್ಚೆ ನಿರೀಕ್ಷೆ

7 ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿಯವರು ಜೋರ್ಡಾನ್‌ಗೆ ಭೇಟಿ ನೀಡಿದ್ದು,ಈ ಭೇಟಿಯು ಭಾರತ-ಜೋರ್ಡಾನ್ ಸಂಬಂಧವನ್ನು ಬಲಪಡಿಸುವುದಲ್ಲದೆ, ಸ್ಥಗಿತಗೊಂಡಿದ್ದ ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ (IMEC) ಯೋಜನೆಗೆ ಮರುಚಾಲನೆ ಸಿಗುವ ನಿರೀಕ್ಷೆಯಿದೆ.

Read Full Story

06:57 PM (IST) Dec 15

ವಿಶ್ವ ಕನ್ನಡ ಹಬ್ಬ' ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ಆರೋಪ - ಮಹಿಳೆಯರಿಗೆ ಪದವಿ ಆಮಿಷ; ಸರ್ಕಾರದ ₹40 ಲಕ್ಷ ದುರ್ಬಳಕೆ!

'ವಿಶ್ವ ಕನ್ನಡ ಹಬ್ಬ' ಹೆಸರಿನಲ್ಲಿ ಸಿಂಗಾಪುರ, ದುಬೈ ಇವೆಂಟ್‌ಗಳಿಗಾಗಿ ಕನ್ನಡ ಅಭಿಮಾನಿ ಮಹಿಳೆಯರಿಂದ ಲಕ್ಷಾಂತರ ಹಣ ವಸೂಲಿ ಮಾಡಿ ವಂಚನೆ ಮಾಡಲಾಗಿದೆ. ಆರೋಪಿ ಶಿವಕುಮಾರ್ ನಗರ ನವಿಲೆ ವಿರುದ್ಧ ದೂರು ನೀಡಿರುವ ಮೀನಾಕ್ಷಿ ಮತ್ತು ರಂಜಿತಾ, ಸಿಎಂ ಫಂಡ್‌ನ 15 ಲಕ್ಷ ರೂ. ದುರುಪಯೋಗದ ಆರೋಪ ಮಾಡಿದ್ದಾರೆ.

Read Full Story

06:44 PM (IST) Dec 15

ವಿಭೂತಿಗಳಲ್ಲೇ ಐಕ್ಯರಾದ ಭಾರತದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ! ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯು ವೀರಶೈವ ಲಿಂಗಾಯತ ಸಂಪ್ರದಾಯದಂತೆ ವಿಶಿಷ್ಟವಾಗಿ ನೆರವೇರಿತು. ದಾವಣಗೆರೆಯನ್ನು ವಾಣಿಜ್ಯ ಹಾಗೂ ಶೈಕ್ಷಣಿಕ ನಗರಿಯಾಗಿದೆ.

Read Full Story

06:26 PM (IST) Dec 15

ಬಿಲ್ ಪಾವತಿಸದ ಸರ್ಕಾರ; ತಾಲೂಕು ಆಫೀಸಿನ ಟೇಬಲ್, ಕುರ್ಚಿ, ಕಂಪ್ಯೂಟರ್ ಜಪ್ತಿ ಮಾಡಿದ ಕೋರ್ಟ್!

ಸರ್ಕಾರದಿಂದ ಹಾರ್ಡ್‌ವೇರ್ ವ್ಯಾಪಾರಿಗೆ ಪಾವತಿಸಬೇಕಿದ್ದ ₹6 ಲಕ್ಷ ಬಾಕಿ ಉಳಿಸಿಕೊಂಡಿದ್ದಕ್ಕಾಗಿ ನ್ಯಾಯಾಲಯವು ತಾಲ್ಲೂಕು ಪಂಚಾಯತಿ ಕಚೇರಿಯ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಜಪ್ತಿ ಮಾಡಲು ಆದೇಶಿಸಿದೆ. ನ್ಯಾಯಾಲಯದ ಆದೇಶದಂತೆ, ಅಧಿಕಾರಿಗಳು ಕುರ್ಚಿ, ಕಂಪ್ಯೂಟರ್‌ ವಶಕ್ಕೆ ಪಡೆದಿದ್ದಾರೆ.

Read Full Story

06:18 PM (IST) Dec 15

Amruthadhaare - ಜೊತೆಯಲ್ಲಿ ಗೌತಮ್​-ಭೂಮಿ! ಮಕ್ಕಳು ಶಾಕ್​ - ಅಪ್ಪ-ಅಮ್ಮನ್ನೇ ಹೇಗೆ ಆಡಿಸ್ತಿದ್ದಾರೆ ನೋಡಿ!

ಅಮೃತಧಾರೆ ಧಾರಾವಾಹಿಯಲ್ಲಿ, ಗೌತಮ್ ಮತ್ತು ಭೂಮಿಕಾರನ್ನು ಒಂದು ಮಾಡಲು ಅಜ್ಜಿ ಸಾಯುವ ನಾಟಕವಾಡಿದ್ದಾರೆ. ಅಜ್ಜಿಯ ಕೊನೆಯಾಸೆ ಈಡೇರಿಸಲು ಹೊರಟ ಈ ಜೋಡಿಗೆ, ಅವರ ಮಕ್ಕಳಾದ ಆಕಾಶ್ ಮತ್ತು ಮಿಂಚು ಕೂಡ ಆಟವಾಡಿಸಲು ಸಜ್ಜಾಗಿದ್ದಾರೆ.  

Read Full Story

06:01 PM (IST) Dec 15

ಜರ್ಮನಿಗೆ ತೆರಳಿದ ರಾಹುಲ್ ಗಾಂಧಿ - 6 ತಿಂಗಳಲ್ಲಿ ವಿರೋಧ ಪಕ್ಷದ ನಾಯಕನ 5ನೇ ವಿದೇಶಿ ಪ್ರವಾಸ

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ 5 ದಿನಗಳ ಜರ್ಮನಿ ಪ್ರವಾಸದಲ್ಲಿದ್ದಾರೆ. ಕಳೆದ ಆರು ತಿಂಗಳಲ್ಲಿ ಇದು ಅವರ ಐದನೇ ವಿದೇಶಿ ಪ್ರವಾಸವಾಗಿದ್ದು, ಸಂಸತ್ ಅಧಿವೇಶನದ ನಡುವೆ ಈ ಪ್ರವಾಸ ಕೈಗೊಂಡಿರುವುದು ಟೀಕೆಗೆ ಕಾರಣವಾಗಿದೆ. 

Read Full Story

05:45 PM (IST) Dec 15

ಎದುರುಮನೆ ಹುಡುಗಿಯೊಂದಿಗೆ ಓಡಿಹೋದ ಮಗ; ತಾಯಿಗೆ ಮನಬಂದಂತೆ ಥಳಿಸಿದ ಲೋಕಲ್ ಪೊಲೀಸ್!

ಅಂತರ್ಜಾತಿ ವಿವಾಹವಾದ ಮಗನ ಸುಳಿವು ಕೇಳುವ ನೆಪದಲ್ಲಿ, ಧಾರವಾಡದ ಕುಂದಗೋಳ ಪೊಲೀಸರು ಆತನ ತಾಯಿ ಲಕ್ಷ್ಮವ್ವ ಮೇಲೆ ಠಾಣೆಯಲ್ಲಿ ಹಲ್ಲೆ ನಡೆಸಿದ್ದಾರೆ. ಹಲ್ಲೆಯ ಜೊತೆಗೆ ಹಣ, ಚಿನ್ನಾಭರಣ ದೋಚಿದ್ದಾರೆ ಎಂದು ಆರೋಪಿಸಲಾಗಿದ್ದು, ಸಂತ್ರಸ್ತೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Read Full Story

05:35 PM (IST) Dec 15

Brahmagantu - ಚಾಲೆಂಜ್​ ಸೋತು ಮನೆಬಿಟ್ಟ ದೀಪಾ- ಖುಷಿ ಬದ್ಲು ಅಡಕತ್ತರಿಯಲ್ಲಿ ಒದ್ದಾಡಿದ ಸೌಂದರ್ಯ! ಏನಾಯ್ತು?

ಬೆಸ್ಟ್ ಸೊಸೆ ಚಾಲೆಂಜ್‌ನಲ್ಲಿ ಸೋತ ದೀಪಾ, ಕೊಟ್ಟ ಮಾತಿನಂತೆ ಮನೆಯಿಂದ ಹೊರನಡೆಯಲು ಸಿದ್ಧಳಾಗುತ್ತಾಳೆ. ಆದರೆ, ಕೊನೆಯ ಕ್ಷಣದಲ್ಲಿ ಗೌರಿ ಅಜ್ಜಿ ಅವಳನ್ನು ತಡೆದು, ದೀಪಾ ಮನೆಯಲ್ಲೇ ಉಳಿಯುವಂತೆ ಮಾಡುತ್ತಾರೆ. ಈ ಅನಿರೀಕ್ಷಿತ ತಿರುವು ಸೌಂದರ್ಯಳ ಕನಸನ್ನು ಭಗ್ನಗೊಳಿಸುತ್ತದೆ.
Read Full Story

05:09 PM (IST) Dec 15

ಕುಟುಂಬವೇ ಹೆಮ್ಮೆಪಡುವಂತೆ ಮಾಡಿದ Kiccha Sudeep ಮಗಳು ಸಾನ್ವಿ! ಇದಪ್ಪಾ..ಸಾಧನೆ ಅಂದ್ರೆ..!

Kiccha Sudeep Daughter Sanvi Song: ಇದೇ ತಿಂಗಳ‌ 25ರಂದು ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ಮಾರ್ಕ್ ಸಿನಿಮಾ ತೆರೆಗೆ ಬರ್ತಿದೆ. ಪ್ರಚಾರ ಕಾರ್ಯ ಕೂಡ ಭರದಿಂದ ಸಾಗಿದೆ. ಇದರ ಭಾಗವಾಗಿ ಮಾರ್ಕ್ ಸಿನಿಮಾದ ಸ್ಪೆಷಲ್ ಹಾಡು ಬಿಡುಗಡೆ ಮಾಡಲಾಗಿದೆ.

Read Full Story

04:49 PM (IST) Dec 15

Karna - ಹಿಂದೆ ಯಮರಾಯ ನಿಂತಿರೋದು ಗೊತ್ತಿಲ್ದೇ ಹಾಯಾಗಿದ್ದಾನೆ ಪಾಪಿ ಸಂಜಯ್​! ಮುಂದಿದೆ ಮಾರಿಹಬ್ಬ

ಸಂಜಯ್‌ನ ಮೋಸದಿಂದ ಜೈಲು ಸೇರಿದ್ದ ನಿಧಿಯನ್ನು ಕರ್ಣ ರಕ್ಷಿಸಿದ್ದಾನೆ. ಆಘಾತದಲ್ಲಿರುವ ನಿಧಿಗೆ ಸಮಾಧಾನ ಹೇಳಿ, ಇದಕ್ಕೆ ಕಾರಣನಾದ ಸಂಜಯ್‌ಗೆ ತಕ್ಕ ಪಾಠ ಕಲಿಸಲು ಕರ್ಣ ಜಿಮ್‌ಗೆ ತೆರಳಿದ್ದಾನೆ, ಅಲ್ಲಿ ಅವನಿಗೆ ಯಮರೂಪಿಯಾಗಿ ದರ್ಶನ ನೀಡಿದ್ದಾನೆ.
Read Full Story

04:10 PM (IST) Dec 15

BBK 12 - ಧ್ರುವಂತ್‌ ಹೆದರಬೇಕು- ಸೀಕ್ರೆಟ್‌ ರೂಮಲ್ಲಿ ಸಣ್ಣ ಪ್ರಶ್ನೆಗೆ ರಣಚಂಡಿಯಾದ ರಕ್ಷಿತಾ ಶೆಟ್ಟಿ

Bigg Boss Kannada Season 12 Episode Update: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಧ್ರುವಂತ್‌, ರಕ್ಷಿತಾ ಶೆಟ್ಟಿ ಅವರು ದೊಡ್ಮನೆಯಲ್ಲಿಲ್ಲ, ಬದಲಾಗಿ ಸೀಕ್ರೇಟ್‌ ರೂಮ್‌ ಪ್ರವೇಶ ಮಾಡಿದ್ದಾರೆ. ಮನೆಯೊಳಗಡೆ ಏನು ನಡೆಯುತ್ತಿದೆ ಎಂದು ಅವರು ರೂಮ್‌ನಲ್ಲಿ ನೋಡುತ್ತಿದ್ದಾರೆ.

 

Read Full Story

04:06 PM (IST) Dec 15

ದಿಢೀರ್​ ಲೈವ್​ಗೆ ಬಂದ ಉಪೇಂದ್ರ, ಫ್ಯಾನ್ಸ್​ಗೆ ಕೊಟ್ಟರೊಂದು ಗುಡ್​​ನ್ಯೂಸ್​ - ಇಂಥ ಛಾನ್ಸ್ ಮತ್ತೆ ಸಿಗಲ್ಲ ನೋಡಿ

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಚೊಚ್ಚಲ ನಿರ್ದೇಶನದ '45' ಚಿತ್ರದ ಟ್ರೈಲರ್ ಬಿಡುಗಡೆಗೆ ಸಜ್ಜಾಗಿದೆ. ನಟ ಉಪೇಂದ್ರ ಅವರು  ಶಿವರಾಜ್​ಕುಮಾರ್ ಮತ್ತು ರಾಜ್ ಬಿ. ಶೆಟ್ಟಿ ಅವರೊಡನೆ ತಾವೂ ಭಾಗವಹಿಸುವ ಟ್ರೈಲರ್ ಬಿಡುಗಡೆ ಸಮಾರಂಭಕ್ಕೆ ಅಭಿಮಾನಿಗಳನ್ನು ಆಹ್ವಾನಿಸಿದ್ದಾರೆ.

Read Full Story

04:05 PM (IST) Dec 15

ಭಾರತದ ಈ ರೈಲಿನಲ್ಲಿ ಊಟಕ್ಕೆ ದುಡ್ಡೇ ಬೇಡ! ಇದು ಉಚಿತ ಊಟ ನೀಡುವ ದೇಶದ ಏಕೈಕ ರೈಲು, ನೀವು ಪ್ರಯಾಣಿಸಿದ್ದೀರಾ?

ಸಚ್ಖಂಡ್ ಎಕ್ಸ್‌ಪ್ರೆಸ್, ನಾಂದೇಡ್ ಮತ್ತು ಅಮೃತಸರ ನಡುವೆ ಸಂಚರಿಸುವ ಒಂದು ವಿಶಿಷ್ಟ ರೈಲು. ಇದರಲ್ಲಿ ಸಿಖ್ ಧರ್ಮದ ಲಂಗರ್ ಸಂಪ್ರದಾಯದಂತೆ, ಗುರುದ್ವಾರಗಳ ಸ್ವಯಂಸೇವಕರು ಎಲ್ಲ ಪ್ರಯಾಣಿಕರಿಗೂ ಉಚಿತವಾಗಿ ಬಿಸಿ ಊಟವನ್ನು ವಿತರಿಸುತ್ತಾರೆ. ಈ ಸೇವೆ ಸುಮಾರು ಮೂರು ದಶಕಗಳಿಂದ ನಿರಂತರವಾಗಿ ನಡೆಯುತ್ತಿದೆ.
Read Full Story

03:43 PM (IST) Dec 15

ಬೆಂಗಳೂರು ಅತ್ತಿಗುಪ್ಪೆ ಮೆಟ್ರೋ ಸ್ಟೇಷನ್ ರಸ್ತೆಯಲ್ಲಿ ಅಗ್ನಿ ಅವಘಡ - ನಡುರಸ್ತೆಯಲ್ಲೇ ಭಸ್ಮವಾದ ಕಾರು

ಬೆಂಗಳೂರಿನ ವಿಜಯನಗರ ಮುಖ್ಯ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರೊಂದು ಏಕಾಏಕಿ ಹೊತ್ತಿ ಉರಿದಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಬರುವಷ್ಟರಲ್ಲಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಗೆ ತಾಂತ್ರಿಕ ದೋಷ ಕಾರಣವಿರಬಹುದೆಂದು ಶಂಕಿಸಲಾಗಿದೆ.
Read Full Story

03:32 PM (IST) Dec 15

BBK 12 - ಕರ್ಮ ರಿಟರ್ನ್ಸ್..‌ ಬಂದು ಹೊಡೆಯತ್ತೆ - ದೊಡ್ಮನೆಯಲ್ಲಿ ಶಾಪ ಹಾಕಿದ ಚೈತ್ರಾ ಕುಂದಾಪುರ

Bigg Boss Kannada Season 12 Episode Update: ಬಿಗ್‌ ಬಾಸ್‌ ಮನೆಯಲ್ಲಿ ಹೊಸ ಟಾಸ್ಕ್‌ ನೀಡಲಾಗಿದೆ. ಈ ಟಾಸ್ಕ್‌ ಸೋತವರು ಮನೆಯಿಂದ ಹೊರಗಡೆ ಹೋಗಲು ನಾಮಿನೇಟ್‌ ಆಗುತ್ತಾರೆ. ಈಗ ಈ ಟಾಸ್ಕ್‌ ವಿಚಾರವಾಗಿ ದೊಡ್ಡ ಜಗಳವೇ ಆಗಿದೆ. ಸದ್ಯ ಪ್ರೋಮೋ ರಿಲೀಸ್‌ ಆಗಿದೆ. 

Read Full Story

03:23 PM (IST) Dec 15

ಬೆಂಗಳೂರು ಹೋಟೆಲ್‌ನಲ್ಲಿ ಭರ್ಜರಿ ಪಾರ್ಟಿ, ಪೊಲೀಸ್ ಬಂದಾಕ್ಷಣ ಬಾಲ್ಕನಿಯಿಂದ ಜಿಗಿದ ಯುವತಿ!

ಬೆಂಗಳೂರಿನಲ್ಲಿ ಪೊಲೀಸ್ ಕಿರುಕುಳಕ್ಕೆ ಹೆದರಿ ಹೋಟೆಲ್ ಬಾಲ್ಕನಿಯಿಂದ ಇಳಿಯಲು ಯತ್ನಿಸಿದ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಈ ಘಟನೆಯಲ್ಲಿ ತಮ್ಮ ಲೋಪ ಮುಚ್ಚಿಕೊಳ್ಳಲು ಪೊಲೀಸರು ಹೋಟೆಲ್ ಮಾಲೀಕರ ಮೇಲೆ ನಿರ್ಲಕ್ಷ್ಯದ ಆರೋಪ ಹೊರಿಸಿ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
Read Full Story

02:57 PM (IST) Dec 15

BBK 12 ಮನೆಯಲ್ಲಿ ಕಾವ್ಯ ಶೈವ ಪಾಲಕರು; ಆ ಕಾರಣಕ್ಕೆ ಭಯ ಬಿದ್ದು ಕಾಲ್ಕೀಳಲಿರೋ ಗಿಲ್ಲಿ ನಟ

Bigg Boss Kannada Season 12 Episode: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಕಾವ್ಯ ಶೈವ ಹಾಗೂ ಗಿಲ್ಲಿ ನಟನ ಸ್ನೇಹ, ತಮಾಷೆ, ಜಗಳ, ಮುನಿಸು ಕೂಡ ಹೈಲೈಟ್‌ ಆಗಿದೆ. ಯಾವಾಗ ನೋಡಿದರೂ ಕಾವು ಕಾವು ಎಂದು ಹೇಳಿಕೊಂಡು ಓಡಾಡುತ್ತಿದ್ದ ಗಿಲ್ಲಿ ನಟನಿಗೆ ಭಯ ಶುರುವಾಗಿದೆ. 

Read Full Story

01:46 PM (IST) Dec 15

Bhagyalakshmi - ಆ ಪ್ರಶ್ನೆಯನ್ನು ಆದಿಗೆ ಕೇಳಿ ಬಿರುಗಾಳಿ ಎಬ್ಬಿಸಿದ ಕುಸುಮಾ! ಫ್ಯಾನ್ಸ್​ ಬೇಸರ

ಭಾಗ್ಯಲಕ್ಷ್ಮಿ ಸೀರಿಯಲ್‌ನಲ್ಲಿ, ಭಾಗ್ಯಳ ಸರಳ ಜೀವನದಿಂದ ಪ್ರೇರಿತನಾದ ಆದಿ ತನ್ನೆಲ್ಲಾ ಆಸ್ತಿ ತ್ಯಜಿಸಿ ಹೊಸ ಬದುಕು ಆರಂಭಿಸಿದ್ದಾನೆ. ಈ ನಡುವೆ, ಅತ್ತೆ ಕುಸುಮಾ ಇವರಿಬ್ಬರ ಮದುವೆಯ ಪ್ರಸ್ತಾಪವನ್ನು ಆದಿಯ ಮುಂದಿಟ್ಟಿದ್ದು, ಇದು ಆತನಿಗೆ ಆಘಾತ ನೀಡಿದೆ ಮತ್ತು ವೀಕ್ಷಕರಲ್ಲಿಯೂ ಚರ್ಚೆ ಹುಟ್ಟುಹಾಕಿದೆ.
Read Full Story

01:22 PM (IST) Dec 15

ರಾಜ್ಯದಲ್ಲಿ ಕಳೆದ 10 ವರ್ಷಗಳಲ್ಲೇ ದಾಖಲೆಯ ಚಳಿ, ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೆಂಗಳೂರಿನಲ್ಲಿ ಮುಂದಿನ 1 ವಾರ ಹೇಗಿರಲಿದೆ?

ರಾಜ್ಯಾದ್ಯಂತ ಚಳಿಯ ತೀವ್ರತೆ ಹೆಚ್ಚಾಗಿದ್ದು, ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ವಾರ ಬಿಸಿಲು, ಮೋಡ ಹಾಗೂ ಮಳೆಯ ಮಿಶ್ರ ವಾತಾವರಣ ಇರಲಿದ್ದು, ವಾಯು ಗುಣಮಟ್ಟದಲ್ಲಿ ಸ್ವಲ್ಪ ಸುಧಾರಣೆ ನಿರೀಕ್ಷಿಸಲಾಗಿದೆ.
Read Full Story

01:22 PM (IST) Dec 15

Share Market - ರಿಲಯನ್ಸ್ ಷೇರಿನ ಹೆಸರಲ್ಲಿ ಬೆಂಗಳೂರು ಉದ್ಯಮಿಗೆ ₹8 ಕೋಟಿ ವಂಚನೆ!

ಅಯೋಧ್ಯೆ ರಾಮ ಮಂದಿರಕ್ಕೆ ದೇಣಿಗೆ ನೀಡಿದ್ದ ಬೆಂಗಳೂರಿನ ಉದ್ಯಮಿ ರಾಜೇಂದ್ರ ನಾಯ್ಡು ಸೈಬರ್ ವಂಚನೆಗೆ ಒಳಗಾಗಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಅಧಿಕ ಲಾಭದ ಆಮಿಷವೊಡ್ಡಿದ ವಂಚಕರು, ನಕಲಿ 'RARCllpro' ಆ್ಯಪ್ ಮೂಲಕ ಅವರಿಂದ ₹8.03 ಕೋಟಿ ಹಣ ದೋಚಿದ್ದಾರೆ.

Read Full Story

01:12 PM (IST) Dec 15

BBK 12 - ಅಜ್ಜಿ ಸಾವಿನಲ್ಲೂ ಗಟ್ಟಿಯಾಗಿ ನಿಂತಿದ್ದ ಗಿಲ್ಲಿ ನಟನಿಗೆ ಕಣ್ಣೀರು ಹಾಕಿಸಿದ ರಕ್ಷಿತಾ ಶೆಟ್ಟಿ!

Bigg Boss Kannada Season 12 Episode: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ರಕ್ಷಿತಾ ಶೆಟ್ಟಿ ಎಲಿಮಿನೇಟ್‌ ಆಗಿದ್ದಾರೆ. ಆ ವೇಳೆ ಅಶ್ವಿನಿ ಗೌಡ ಅವರು ಕೂಡ ಕಣ್ಣೀರು ಹಾಕಿದ್ದಾರೆ. ಆ ವೇಳೆ ಇನ್ನುಳಿದ ಇಬ್ಬರು ಆರಾಮಾಗಿರೋದು ಸದ್ಯ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗ್ತಿದೆ.

Read Full Story

12:59 PM (IST) Dec 15

ಸೌಂದರ್ಯ ಸಿನಿಮಾ ನೋಡಿ ಕೈ ಸುಟ್ಟುಕೊಂಡ ಚಿರಂಜೀವಿ, ತಲೆಕೆಡಿಸಿಕೊಂಡ ಆ ನಿರ್ದೇಶಕ - ಆಗಿದ್ದೇನು?

ಸೌಂದರ್ಯ ಅವರ ಒಂದು ಸಿನಿಮಾದಿಂದಾಗಿ ಚಿರಂಜೀವಿ ತಮ್ಮ ವೃತ್ತಿಜೀವನದಲ್ಲಿ ದೊಡ್ಡ ಫ್ಲಾಪ್ ಎದುರಿಸಬೇಕಾಯ್ತು. ಆ ಸಿನಿಮಾ ಬೇಡ ಅಂತ ನಿರ್ದೇಶಕರು ಎಷ್ಟು ಹೇಳಿದ್ರೂ ಚಿರಂಜೀವಿ ಕೇಳಲಿಲ್ಲವಂತೆ. ಅಷ್ಟಕ್ಕೂ ಆ ಸಿನಿಮಾ ಯಾವುದು ಅಂತ ಈ ಸ್ಟೋರಿ ಓದಿ.

Read Full Story

12:53 PM (IST) Dec 15

ಜೀವನದಲ್ಲಿ ಮರೆಯಲಾರದ ಫೆವರೆಟ್​ ದಿನದ ಗುಟ್ಟು ರಿವೀಲ್​ ಮಾಡಿದ ಸುದೀಪ್​ - ಯಾರೂ ಊಹಿಸದೇ ಇರುವ ದಿನವಿದು!

ಕಿಚ್ಚ ಸುದೀಪ್ ಅಭಿನಯದ 'ಮಾರ್ಕ್' ಚಿತ್ರದ ಟ್ರೈಲರ್ ದಾಖಲೆ ಬರೆದಿದೆ. ಈ ಚಿತ್ರದ ಯಶಸ್ಸಿನ ನಡುವೆ, ಸುದೀಪ್ ತಮ್ಮ ಬದುಕಿನ ಅತ್ಯಂತ ಮಹತ್ವದ ದಿನ   ಬಹಿರಂಗಪಡಿಸಿದ್ದಾರೆ, ಏಕೆಂದರೆ ಆ ದಿನದಿಂದಲೇ ತಮ್ಮ ಜೀವನದ ಪಯಣ ಆರಂಭವಾಯಿತು ಎಂದು ಅವರು ಹೇಳಿದ್ದಾರೆ.

Read Full Story

12:36 PM (IST) Dec 15

BBK 12 - ರಕ್ಷಿತಾ ಶೆಟ್ಟಿ ಮನೆಯಿಂದ ಹೋಗುವಾಗ ದೊಡ್ಡತನ ಮೆರೆದ ಅಶ್ವಿನಿ ಗೌಡ - ಭಾವುಕರಾದ ವೀಕ್ಷಕರು

ಈ ವಾರ ಬಿಗ್‌ಬಾಸ್ ಮನೆಯಲ್ಲಿ ಯಾವುದೇ ಎಲಿಮಿನೇಷನ್ ನಡೆದಿಲ್ಲ. ಧ್ರುವಂತ್ ಮತ್ತು ರಕ್ಷಿತಾ ಶೆಟ್ಟಿ ಎಲಿಮಿನೇಟ್ ಆಗಿದ್ದಾರೆಂದು ಭಾವಿಸಿದ ಸದಸ್ಯರು ಭಾವುಕರಾದರು, ಅದರಲ್ಲೂ ಅಶ್ವಿನಿ ಗೌಡ ಕಣ್ಣೀರಿಟ್ಟರು. ಆದರೆ, ಇಬ್ಬರೂ ಸ್ಪರ್ಧಿಗಳು ಸೀಕ್ರೆಟ್ ರೂಮ್‌ನಿಂದ ಎಲ್ಲವನ್ನೂ ಗಮನಿಸುತ್ತಿದ್ದಾರೆ.
Read Full Story

12:33 PM (IST) Dec 15

ಡೈಲಾಗ್‌, ಪಾತ್ರಗಳಿಂದ ಜನ ಮೆಚ್ಚುಗೆ ಗಳಿಸಿದ್ದ ಆಸೆ ಧಾರಾವಾಹಿಯಿಂದ ಏಕಾಏಕಿ ಹೊರಬಂದ ನಟಿ! ಯಾರದು?

Aase Kannada Serial Episode: ಡೈಲಾಗ್‌, ನಟನೆ, ಕಥೆಯಿಂದಲೇ ಆಸೆ ಧಾರಾವಾಹಿ ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿದೆ. ಒಂದಕ್ಕಿಂತ ಒಂದು ವಿಭಿನ್ನ ಪಾತ್ರಗಳಿರುವ ಈ ಸೀರಿಯಲ್‌ಗೆ ದೊಡ್ಡ ಮಟ್ಟದ ಅಭಿಮಾನಿ ಬಳಗವಿದೆ. ಈಗ ಈ ಸೀರಿಯಲ್‌ನಿಂದ ಓರ್ವ ನಟಿ ಹೊರಬಂದಿದ್ದಾರೆ.

Read Full Story

12:31 PM (IST) Dec 15

ನನ್ನನ್ನು ನೋಡಿ ಬೆಚ್ಚಿಬಿದ್ದು ಸಾಯ್ತಾರೆ.. ಅಖಂಡ 2 ಸಕ್ಸಸ್‌ ಮೀಟ್‌ನಲ್ಲಿ ಬಾಲಯ್ಯ ಆವೇಶ!

ನಂದಮೂರಿ ಬಾಲಕೃಷ್ಣ ನಟನೆಯ ಅಖಂಡ 2 ಸಿನಿಮಾ ಡಿಸೆಂಬರ್ 12 ರಂದು ಬಿಡುಗಡೆಯಾಗಿದೆ. ಇತ್ತೀಚೆಗೆ ಈ ಚಿತ್ರದ ಯಶಸ್ಸಿನ ಸಂಭ್ರಮಾಚರಣೆ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಬಾಲಕೃಷ್ಣ ಆವೇಶದಿಂದ ಮಾಡಿದ ಮಾತುಗಳು ವೈರಲ್ ಆಗುತ್ತಿವೆ.

Read Full Story

12:16 PM (IST) Dec 15

ಖ್ಯಾತ ಚಿತ್ರನಟ, ರಾಜ್ಯಸಭಾ ಸಂಸದ, ಕೋಟಿ ಕೋಟಿ ಕಾಸಿದ್ರೂ, ತಳ್ಳೋ ಗಾಡಿಯಲ್ಲಿ ರಾತ್ರಿ ಊಟ ಸವಿದ ನಟ ಜಗ್ಗೇಶ್!

ಖ್ಯಾತ ನಟ ಹಾಗೂ ಸಂಸದ ಜಗ್ಗೇಶ್ ಅವರು ತಡರಾತ್ರಿ ಬೆಂಗಳೂರಿನ ಬಸವನಗುಡಿಯಲ್ಲಿ ತಳ್ಳುಗಾಡಿಯ ತಿಂಡಿ ಸವಿದಿದ್ದಾರೆ. ಈ ಅನುಭವವನ್ನು 'ಅಮ್ಮನ ಕೈತುತ್ತು' ಎಂದು ಬಣ್ಣಿಸಿ ಅವರು ಹಂಚಿಕೊಂಡ ವಿಡಿಯೋ, ಅವರ ಸರಳತೆಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ.
Read Full Story

11:55 AM (IST) Dec 15

2025ರಲ್ಲಿ ಪ್ಯಾನ್ ಇಂಡಿಯಾ ಸಕ್ಸಸ್‌ಗಳೊಂದಿಗೆ ಮಿಂಚಿದ ಟಾಪ್ 5 ನಟಿಯರು - ಮೊದಲ ಸ್ಥಾನ ಯಾರಿಗೆ?

ಪ್ಯಾನ್‌ ಇಂಡಿಯಾ ಚಿತ್ರಗಳ ಮೂಲಕ ಈ ವರ್ಷ ಬೇಡಿಕೆಯ ನಟಿ ಎನಿಸಿಕೊಂಡವರು. ‘ಕಾಂತಾರ 1’ ಚಿತ್ರದಲ್ಲಿ ಕನಕವತಿಯಾಗಿ 2025ರಲ್ಲಿ ಬೆಂಚ್‌ ಮಾರ್ಕ್‌ ಹಾಕಿಕೊಂಡವರು. ಸದ್ಯ ದಕ್ಷಿಣ ಭಾರತೀಯ ಚಿತ್ರರಂಗದ ಕಣ್ಮಣಿ ರುಕ್ಮಿಣಿ ವಸಂತ್‌.
 

Read Full Story

11:43 AM (IST) Dec 15

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ; 200ಕ್ಕೂ ಹೆಚ್ಚು ಸ್ಯಾಂಪಲ್ ಪರೀಕ್ಷೆಗೆ ರವಾನೆ- ಸಚಿವ ಗುಂಡೂರಾವ್

ಮೊಟ್ಟೆಗಳಲ್ಲಿ ಕ್ಯಾನ್ಸರ್-ಕಾರಕ ಅಂಶವಿದೆ ಎಂಬ ವೈರಲ್ ವಿಡಿಯೋ ಹಿನ್ನೆಲೆಯಲ್ಲಿ, ರಾಜ್ಯ ಆರೋಗ್ಯ ಇಲಾಖೆಯು 200ಕ್ಕೂ ಹೆಚ್ಚು ಮೊಟ್ಟೆ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದೆ. ಸಚಿವ ದಿನೇಶ್ ಗುಂಡೂರಾವ್ ಅವರು ವರದಿ ಬರುವವರೆಗೆ ಸಾರ್ವಜನಿಕರು ಆತಂಕಪಡಬೇಕಾಗಿಲ್ಲ ಎಂದು ಭರವಸೆ ನೀಡಿದ್ದಾರೆ.
Read Full Story

11:24 AM (IST) Dec 15

ಕನ್ನಡಪ್ರಭ-ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ಡಿ.20ಕ್ಕೆ ಚಿತ್ರಕಲಾ ಸ್ಪರ್ಧೆ - ಎಲ್ಲಿ?

ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ನಿಮಿತ್ತ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ಬೆಂಗಳೂರು ನಗರ ದಕ್ಷಿಣ ವಲಯ ಮಟ್ಟದ ಚಿತ್ರಕಲಾ ಸ್ಪರ್ಧೆ ನಡೆಸುತ್ತಿದೆ.

Read Full Story

11:03 AM (IST) Dec 15

ವಿಶ್ವೇಶ್ವರಯ್ಯ ಟರ್ಮಿನಲ್‌ ರೈಲು ನಿಲ್ದಾಣ ವಿಸ್ತರಣೆ ಕಾರ್ಯ ಆರಂಭ - ಪ್ರಯಾಣಿಕರು ಕಾಯುವ ದುಸ್ಥಿತಿ

ಪ್ರಯಾಣಿಕರ ಕಾಯುವಿಕೆಗೆ, ಟಿಕೆಟ್‌ ಖರೀದಿ ಹಾಗೂ ವಾಣಿಜ್ಯ ಉದ್ದೇಶಕ್ಕಾಗಿ ನಗರದ ಬೈಯಪ್ಪನಹಳ್ಳಿಯಲ್ಲಿರುವ ಸರ್‌ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ (ಎಸ್‌ಎಂವಿಟಿ) ರೈಲು ನಿಲ್ದಾಣ ಕಟ್ಟಡವನ್ನು ವಿಸ್ತರಿಸುವ ಕೆಲಸ ಪ್ರಾರಂಭವಾಗಿದೆ.

Read Full Story

10:59 AM (IST) Dec 15

Gowri Serial - ಪ್ರೀತಿಸಿ, ವಿಮಾನದಲ್ಲಿಯೇ ಮದುವೆಯಾದ್ರು; ಫಸ್ಟ್‌ನೈಟ್‌ನಲ್ಲಿ ಮಹಾಸತ್ಯ ಬಯಲು!

Gowri Kannada Serial Episode Update: ಕಿರುತೆರೆಯ ಖ್ಯಾತ ನಟಿ ಕಾವ್ಯಶ್ರೀ ಗೌಡ ಹಾಗೂ ಸುಷ್ಮಿತ್ ಜೈನ್, ಕರಣ್, ಸುಷ್ಮಿತಾ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಗೌರಿ ಧಾರಾವಾಹಿ ತನ್ನ ವಿಭಿನ್ನ ಕಥಾ ಹಂದರದಿಂದ ಈಗಾಗಲೇ ಕನ್ನಡಿಗರ ಮನೆ ತಲುಪಿದೆ.

 

Read Full Story

10:48 AM (IST) Dec 15

ಕೇಂದ್ರ ಸರ್ಕಾರದ ವಕೀಲರ ನಕಲಿ ಮಾಡಿದವನಿಗೆ ಜೈಲು ಶಿಕ್ಷೆ - ಹೈಕೋರ್ಟ್‌ ಆದೇಶ

ವ್ಯಾಜ್ಯವೊಂದರ ಸಂಬಂಧ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುತ್ತಿದ್ದ ವಕೀಲರ ಸಹಿ ಫೋರ್ಜರಿ ಮಾಡಿ ಆಕ್ಷೇಪಣೆ ಪ್ರತಿ ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ವ್ಯಕ್ತಿಗೆ ನ್ಯಾಯಾಂಗ ನಿಂದನೆ ಆಪರಾಧದಡಿ ನಾಲ್ಕು ತಿಂಗಳ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್‌ ಆದೇಶಿಸಿದೆ.

Read Full Story

10:39 AM (IST) Dec 15

ಹಣ ಸುಲಿಗೆ ಮಾಡ್ತಿದ್ದ ನಕಲಿ ಪಿಎಸ್ಐ ಬಂಧನ - ಪೊಲೀಸ್‌ ಕನಸು ಈಡೇರದಾಗ ಸುಲಿಗೆ ಕೃತ್ಯ

ಅಕ್ರಮ ಚಟುವಟಿಕೆ ಆರೋಪ ಹೊರಿಸಿ ಖಾಸಗಿ ಕಂಪನಿ ಉದ್ಯೋಗಿ ಮನೆಗೆ ನುಗ್ಗಿ ತಪಾಸಣೆ ನೆಪದಲ್ಲಿ ದರೋಡೆ ಮಾಡಿದ್ದ ನಕಲಿ ಸಬ್ ಇನ್ಸ್‌ಪೆಕ್ಟರ್ ಹಾಗೂ ಆತನ ಮೂವರು ಸಹಚರರನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

Read Full Story

10:33 AM (IST) Dec 15

ತುಮಕೂರು ರಸ್ತೆಯ ಪೀಣ್ಯ ಮೇಲ್ಸೇತುವೆ ಶೀಘ್ರ ಸಂಚಾರಕ್ಕೆ ಮುಕ್ತ - 30 ಕೇಬಲ್‌ ಅಳವಡಿಕೆ ಮಾತ್ರ ಬಾಕಿ

ತುಮಕೂರು ರಸ್ತೆಯ ಪೀಣ್ಯ ಮೇಲ್ಸೇತುವೆಗೆ ಕಳೆದ ನಾಲ್ಕು ವರ್ಷದಿಂದ ಹಿಡಿದಿದ್ದ ‘ಗ್ರಹಣ’ಕ್ಕೆ ಕೊನೆಗೂ ಮುಕ್ತಿ ಸಿಗುವ ಕಾಲ ಬಂದಿದೆ. 1200 ಕೇಬಲ್‌ ಬದಲಾವಣೆಯ ಪೈಕಿ ಕೇವಲ 30 ಕೇಬಲ್‌ ಅಳವಡಿಕೆಯಷ್ಟೇ ಬಾಕಿ ಇದೆ.

Read Full Story

More Trending News