ಬೆಳಗಾವಿ: 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಸಿಬಿ ಪಾರ್ಟಿ ಮೂಲಕ ಚುನಾವಣೆಗೆ ಸ್ಪರ್ಧಿಸಿ 143 ಸ್ಥಾನಗಳ ಬಹುಮತದೊಂದಿಗೆ ನಾನೇ ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿ ಜಿಲ್ಲೆಯ ಅಥಣಿಯ ಭೋಜರಾಜ ಕ್ರೀಡಾಂಗಣದಲ್ಲಿ ಶಿವಾಜಿ ಮಹಾರಾಜರ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಮಾತನಾಡಿ, ಭಾರತ ಹಿಂದೂ ರಾಷ್ಟ್ರವಾಗಿ ಉಳಿಯಬೇಕಾದರೆ ಛತ್ರಪತಿ ಶಿವಾಜಿ ಮಹಾರಾಜ ಮತ್ತು ರಾಣಾ ಪ್ರತಾಪ್ ಸಿಂಹರಂತಹ ಆಡಳಿತ ಅನಿವಾರ್ಯವಾಗಿದೆ. ಇರುವ ಆಡಳಿತ ಪಕ್ಷವೇ ಇರಲಿ, ವಿರೋಧ ಪಕ್ಷವೇ ಇರಲಿ, ನಾನು ಇರುವ ಸತ್ಯ ಹೇಳುತ್ತೇನೆ. ಹೀಗಾಗಿ ನಾನು ವಿವಾದಾತ್ಮಕ ಹೇಳಿಕೆ ನೀಡುತ್ತೇನೆಂದು ಬಿಜೆಪಿಯವರು ಉಚ್ಛಾಟನೆ ಮಾಡಿದ್ದಾರೆ.

09:49 PM (IST) Dec 15
ಬೆಂಗಳೂರಿನ ಹೋಟೆಲ್ನ ಬಾಲ್ಕನಿಯಿಂದ ಬಿದ್ದು 21 ವರ್ಷದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅತಿಯಾದ ಗಲಾಟೆಯ ದೂರಿನ ಮೇರೆಗೆ ಪೊಲೀಸರು ಕ್ರಮ ಕೈಗೊಳ್ಳುವ ವೇಳೆ ಈ ಘಟನೆ ನಡೆದಿದೆ.
08:49 PM (IST) Dec 15
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಡ್ಯ ಜಿಲ್ಲೆಯ ಮಳವಳ್ಳಿಗೆ ಆಗಮಿಸಿ, ಸುತ್ತೂರಿನ ಶಿವರಾತ್ರಿ ಶಿವಯೋಗಿಶ್ವರರ 1066ನೇ ಜಯಂತಿ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಡಳಿತವು ಬಿಗಿ ಬಂದೋಬಸ್ತ್ಗೆ ಸೂಚನೆ ನೀಡಿದೆ.
08:37 PM (IST) Dec 15
07:29 PM (IST) Dec 15
ಅನುದಾನಿತ ಶಾಲೆಯೊಂದರಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯರು ತರಗತಿಯಲ್ಲೇ ಮದ್ಯಪಾನ ಮಾಡಿದ್ದಾರೆ. ಈ ದೃಶ್ಯದ ವಿಡಿಯೋ ವೈರಲ್ ಆದ ನಂತರ, ಶಾಲಾ ಆಡಳಿತ ಮಂಡಳಿ ಆರು ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ತನಿಖೆ ಆರಂಭಿಸಿದೆ.
07:29 PM (IST) Dec 15
ಕೂಡ್ಲಿಗಿ ತಾಲೂಕಿನಲ್ಲಿ ಹೆಚ್ಚುತ್ತಿರುವ ವಿಂಡ್ ಫ್ಯಾನ್ಗಳ ಶಬ್ದದಿಂದಾಗಿ ಅಂಕಸಮುದ್ರದಂತಹ ಪಕ್ಷಿಧಾಮಗಳಿಗೆ ಬರುವ ವಲಸೆ ಪಕ್ಷಿಗಳು ದೂರ ಸರಿಯುತ್ತಿವೆ. ರೈತರು ಹಣದಾಸೆಗೆ ಜಮೀನು ಲೀಸ್ ನೀಡುತ್ತಿದ್ದು, ಇದರಿಂದ ಪಕ್ಷಿಗಳ ವಾಸಸ್ಥಾನಕ್ಕೆ ಕುತ್ತು ಬಂದಿದೆ.
07:18 PM (IST) Dec 15
7 ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿಯವರು ಜೋರ್ಡಾನ್ಗೆ ಭೇಟಿ ನೀಡಿದ್ದು,ಈ ಭೇಟಿಯು ಭಾರತ-ಜೋರ್ಡಾನ್ ಸಂಬಂಧವನ್ನು ಬಲಪಡಿಸುವುದಲ್ಲದೆ, ಸ್ಥಗಿತಗೊಂಡಿದ್ದ ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ (IMEC) ಯೋಜನೆಗೆ ಮರುಚಾಲನೆ ಸಿಗುವ ನಿರೀಕ್ಷೆಯಿದೆ.
06:57 PM (IST) Dec 15
'ವಿಶ್ವ ಕನ್ನಡ ಹಬ್ಬ' ಹೆಸರಿನಲ್ಲಿ ಸಿಂಗಾಪುರ, ದುಬೈ ಇವೆಂಟ್ಗಳಿಗಾಗಿ ಕನ್ನಡ ಅಭಿಮಾನಿ ಮಹಿಳೆಯರಿಂದ ಲಕ್ಷಾಂತರ ಹಣ ವಸೂಲಿ ಮಾಡಿ ವಂಚನೆ ಮಾಡಲಾಗಿದೆ. ಆರೋಪಿ ಶಿವಕುಮಾರ್ ನಗರ ನವಿಲೆ ವಿರುದ್ಧ ದೂರು ನೀಡಿರುವ ಮೀನಾಕ್ಷಿ ಮತ್ತು ರಂಜಿತಾ, ಸಿಎಂ ಫಂಡ್ನ 15 ಲಕ್ಷ ರೂ. ದುರುಪಯೋಗದ ಆರೋಪ ಮಾಡಿದ್ದಾರೆ.
06:44 PM (IST) Dec 15
ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯು ವೀರಶೈವ ಲಿಂಗಾಯತ ಸಂಪ್ರದಾಯದಂತೆ ವಿಶಿಷ್ಟವಾಗಿ ನೆರವೇರಿತು. ದಾವಣಗೆರೆಯನ್ನು ವಾಣಿಜ್ಯ ಹಾಗೂ ಶೈಕ್ಷಣಿಕ ನಗರಿಯಾಗಿದೆ.
06:26 PM (IST) Dec 15
ಸರ್ಕಾರದಿಂದ ಹಾರ್ಡ್ವೇರ್ ವ್ಯಾಪಾರಿಗೆ ಪಾವತಿಸಬೇಕಿದ್ದ ₹6 ಲಕ್ಷ ಬಾಕಿ ಉಳಿಸಿಕೊಂಡಿದ್ದಕ್ಕಾಗಿ ನ್ಯಾಯಾಲಯವು ತಾಲ್ಲೂಕು ಪಂಚಾಯತಿ ಕಚೇರಿಯ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಜಪ್ತಿ ಮಾಡಲು ಆದೇಶಿಸಿದೆ. ನ್ಯಾಯಾಲಯದ ಆದೇಶದಂತೆ, ಅಧಿಕಾರಿಗಳು ಕುರ್ಚಿ, ಕಂಪ್ಯೂಟರ್ ವಶಕ್ಕೆ ಪಡೆದಿದ್ದಾರೆ.
06:18 PM (IST) Dec 15
ಅಮೃತಧಾರೆ ಧಾರಾವಾಹಿಯಲ್ಲಿ, ಗೌತಮ್ ಮತ್ತು ಭೂಮಿಕಾರನ್ನು ಒಂದು ಮಾಡಲು ಅಜ್ಜಿ ಸಾಯುವ ನಾಟಕವಾಡಿದ್ದಾರೆ. ಅಜ್ಜಿಯ ಕೊನೆಯಾಸೆ ಈಡೇರಿಸಲು ಹೊರಟ ಈ ಜೋಡಿಗೆ, ಅವರ ಮಕ್ಕಳಾದ ಆಕಾಶ್ ಮತ್ತು ಮಿಂಚು ಕೂಡ ಆಟವಾಡಿಸಲು ಸಜ್ಜಾಗಿದ್ದಾರೆ.
05:45 PM (IST) Dec 15
ಅಂತರ್ಜಾತಿ ವಿವಾಹವಾದ ಮಗನ ಸುಳಿವು ಕೇಳುವ ನೆಪದಲ್ಲಿ, ಧಾರವಾಡದ ಕುಂದಗೋಳ ಪೊಲೀಸರು ಆತನ ತಾಯಿ ಲಕ್ಷ್ಮವ್ವ ಮೇಲೆ ಠಾಣೆಯಲ್ಲಿ ಹಲ್ಲೆ ನಡೆಸಿದ್ದಾರೆ. ಹಲ್ಲೆಯ ಜೊತೆಗೆ ಹಣ, ಚಿನ್ನಾಭರಣ ದೋಚಿದ್ದಾರೆ ಎಂದು ಆರೋಪಿಸಲಾಗಿದ್ದು, ಸಂತ್ರಸ್ತೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
05:35 PM (IST) Dec 15
05:09 PM (IST) Dec 15
Kiccha Sudeep Daughter Sanvi Song: ಇದೇ ತಿಂಗಳ 25ರಂದು ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ಮಾರ್ಕ್ ಸಿನಿಮಾ ತೆರೆಗೆ ಬರ್ತಿದೆ. ಪ್ರಚಾರ ಕಾರ್ಯ ಕೂಡ ಭರದಿಂದ ಸಾಗಿದೆ. ಇದರ ಭಾಗವಾಗಿ ಮಾರ್ಕ್ ಸಿನಿಮಾದ ಸ್ಪೆಷಲ್ ಹಾಡು ಬಿಡುಗಡೆ ಮಾಡಲಾಗಿದೆ.
04:49 PM (IST) Dec 15
04:10 PM (IST) Dec 15
Bigg Boss Kannada Season 12 Episode Update: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಧ್ರುವಂತ್, ರಕ್ಷಿತಾ ಶೆಟ್ಟಿ ಅವರು ದೊಡ್ಮನೆಯಲ್ಲಿಲ್ಲ, ಬದಲಾಗಿ ಸೀಕ್ರೇಟ್ ರೂಮ್ ಪ್ರವೇಶ ಮಾಡಿದ್ದಾರೆ. ಮನೆಯೊಳಗಡೆ ಏನು ನಡೆಯುತ್ತಿದೆ ಎಂದು ಅವರು ರೂಮ್ನಲ್ಲಿ ನೋಡುತ್ತಿದ್ದಾರೆ.
04:06 PM (IST) Dec 15
ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಚೊಚ್ಚಲ ನಿರ್ದೇಶನದ '45' ಚಿತ್ರದ ಟ್ರೈಲರ್ ಬಿಡುಗಡೆಗೆ ಸಜ್ಜಾಗಿದೆ. ನಟ ಉಪೇಂದ್ರ ಅವರು ಶಿವರಾಜ್ಕುಮಾರ್ ಮತ್ತು ರಾಜ್ ಬಿ. ಶೆಟ್ಟಿ ಅವರೊಡನೆ ತಾವೂ ಭಾಗವಹಿಸುವ ಟ್ರೈಲರ್ ಬಿಡುಗಡೆ ಸಮಾರಂಭಕ್ಕೆ ಅಭಿಮಾನಿಗಳನ್ನು ಆಹ್ವಾನಿಸಿದ್ದಾರೆ.
04:05 PM (IST) Dec 15
03:43 PM (IST) Dec 15
03:32 PM (IST) Dec 15
Bigg Boss Kannada Season 12 Episode Update: ಬಿಗ್ ಬಾಸ್ ಮನೆಯಲ್ಲಿ ಹೊಸ ಟಾಸ್ಕ್ ನೀಡಲಾಗಿದೆ. ಈ ಟಾಸ್ಕ್ ಸೋತವರು ಮನೆಯಿಂದ ಹೊರಗಡೆ ಹೋಗಲು ನಾಮಿನೇಟ್ ಆಗುತ್ತಾರೆ. ಈಗ ಈ ಟಾಸ್ಕ್ ವಿಚಾರವಾಗಿ ದೊಡ್ಡ ಜಗಳವೇ ಆಗಿದೆ. ಸದ್ಯ ಪ್ರೋಮೋ ರಿಲೀಸ್ ಆಗಿದೆ.
03:23 PM (IST) Dec 15
02:57 PM (IST) Dec 15
Bigg Boss Kannada Season 12 Episode: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಕಾವ್ಯ ಶೈವ ಹಾಗೂ ಗಿಲ್ಲಿ ನಟನ ಸ್ನೇಹ, ತಮಾಷೆ, ಜಗಳ, ಮುನಿಸು ಕೂಡ ಹೈಲೈಟ್ ಆಗಿದೆ. ಯಾವಾಗ ನೋಡಿದರೂ ಕಾವು ಕಾವು ಎಂದು ಹೇಳಿಕೊಂಡು ಓಡಾಡುತ್ತಿದ್ದ ಗಿಲ್ಲಿ ನಟನಿಗೆ ಭಯ ಶುರುವಾಗಿದೆ.
01:46 PM (IST) Dec 15
01:22 PM (IST) Dec 15
01:22 PM (IST) Dec 15
ಅಯೋಧ್ಯೆ ರಾಮ ಮಂದಿರಕ್ಕೆ ದೇಣಿಗೆ ನೀಡಿದ್ದ ಬೆಂಗಳೂರಿನ ಉದ್ಯಮಿ ರಾಜೇಂದ್ರ ನಾಯ್ಡು ಸೈಬರ್ ವಂಚನೆಗೆ ಒಳಗಾಗಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಅಧಿಕ ಲಾಭದ ಆಮಿಷವೊಡ್ಡಿದ ವಂಚಕರು, ನಕಲಿ 'RARCllpro' ಆ್ಯಪ್ ಮೂಲಕ ಅವರಿಂದ ₹8.03 ಕೋಟಿ ಹಣ ದೋಚಿದ್ದಾರೆ.
01:12 PM (IST) Dec 15
Bigg Boss Kannada Season 12 Episode: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ರಕ್ಷಿತಾ ಶೆಟ್ಟಿ ಎಲಿಮಿನೇಟ್ ಆಗಿದ್ದಾರೆ. ಆ ವೇಳೆ ಅಶ್ವಿನಿ ಗೌಡ ಅವರು ಕೂಡ ಕಣ್ಣೀರು ಹಾಕಿದ್ದಾರೆ. ಆ ವೇಳೆ ಇನ್ನುಳಿದ ಇಬ್ಬರು ಆರಾಮಾಗಿರೋದು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ.
12:59 PM (IST) Dec 15
ಸೌಂದರ್ಯ ಅವರ ಒಂದು ಸಿನಿಮಾದಿಂದಾಗಿ ಚಿರಂಜೀವಿ ತಮ್ಮ ವೃತ್ತಿಜೀವನದಲ್ಲಿ ದೊಡ್ಡ ಫ್ಲಾಪ್ ಎದುರಿಸಬೇಕಾಯ್ತು. ಆ ಸಿನಿಮಾ ಬೇಡ ಅಂತ ನಿರ್ದೇಶಕರು ಎಷ್ಟು ಹೇಳಿದ್ರೂ ಚಿರಂಜೀವಿ ಕೇಳಲಿಲ್ಲವಂತೆ. ಅಷ್ಟಕ್ಕೂ ಆ ಸಿನಿಮಾ ಯಾವುದು ಅಂತ ಈ ಸ್ಟೋರಿ ಓದಿ.
12:53 PM (IST) Dec 15
ಕಿಚ್ಚ ಸುದೀಪ್ ಅಭಿನಯದ 'ಮಾರ್ಕ್' ಚಿತ್ರದ ಟ್ರೈಲರ್ ದಾಖಲೆ ಬರೆದಿದೆ. ಈ ಚಿತ್ರದ ಯಶಸ್ಸಿನ ನಡುವೆ, ಸುದೀಪ್ ತಮ್ಮ ಬದುಕಿನ ಅತ್ಯಂತ ಮಹತ್ವದ ದಿನ ಬಹಿರಂಗಪಡಿಸಿದ್ದಾರೆ, ಏಕೆಂದರೆ ಆ ದಿನದಿಂದಲೇ ತಮ್ಮ ಜೀವನದ ಪಯಣ ಆರಂಭವಾಯಿತು ಎಂದು ಅವರು ಹೇಳಿದ್ದಾರೆ.
12:36 PM (IST) Dec 15
12:33 PM (IST) Dec 15
Aase Kannada Serial Episode: ಡೈಲಾಗ್, ನಟನೆ, ಕಥೆಯಿಂದಲೇ ಆಸೆ ಧಾರಾವಾಹಿ ದೊಡ್ಡ ಮಟ್ಟದಲ್ಲಿ ಹಿಟ್ ಆಗಿದೆ. ಒಂದಕ್ಕಿಂತ ಒಂದು ವಿಭಿನ್ನ ಪಾತ್ರಗಳಿರುವ ಈ ಸೀರಿಯಲ್ಗೆ ದೊಡ್ಡ ಮಟ್ಟದ ಅಭಿಮಾನಿ ಬಳಗವಿದೆ. ಈಗ ಈ ಸೀರಿಯಲ್ನಿಂದ ಓರ್ವ ನಟಿ ಹೊರಬಂದಿದ್ದಾರೆ.
12:31 PM (IST) Dec 15
ನಂದಮೂರಿ ಬಾಲಕೃಷ್ಣ ನಟನೆಯ ಅಖಂಡ 2 ಸಿನಿಮಾ ಡಿಸೆಂಬರ್ 12 ರಂದು ಬಿಡುಗಡೆಯಾಗಿದೆ. ಇತ್ತೀಚೆಗೆ ಈ ಚಿತ್ರದ ಯಶಸ್ಸಿನ ಸಂಭ್ರಮಾಚರಣೆ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಬಾಲಕೃಷ್ಣ ಆವೇಶದಿಂದ ಮಾಡಿದ ಮಾತುಗಳು ವೈರಲ್ ಆಗುತ್ತಿವೆ.
12:16 PM (IST) Dec 15
11:55 AM (IST) Dec 15
ಪ್ಯಾನ್ ಇಂಡಿಯಾ ಚಿತ್ರಗಳ ಮೂಲಕ ಈ ವರ್ಷ ಬೇಡಿಕೆಯ ನಟಿ ಎನಿಸಿಕೊಂಡವರು. ‘ಕಾಂತಾರ 1’ ಚಿತ್ರದಲ್ಲಿ ಕನಕವತಿಯಾಗಿ 2025ರಲ್ಲಿ ಬೆಂಚ್ ಮಾರ್ಕ್ ಹಾಕಿಕೊಂಡವರು. ಸದ್ಯ ದಕ್ಷಿಣ ಭಾರತೀಯ ಚಿತ್ರರಂಗದ ಕಣ್ಮಣಿ ರುಕ್ಮಿಣಿ ವಸಂತ್.
11:43 AM (IST) Dec 15
11:24 AM (IST) Dec 15
ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ನಿಮಿತ್ತ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ಬೆಂಗಳೂರು ನಗರ ದಕ್ಷಿಣ ವಲಯ ಮಟ್ಟದ ಚಿತ್ರಕಲಾ ಸ್ಪರ್ಧೆ ನಡೆಸುತ್ತಿದೆ.
11:03 AM (IST) Dec 15
ಪ್ರಯಾಣಿಕರ ಕಾಯುವಿಕೆಗೆ, ಟಿಕೆಟ್ ಖರೀದಿ ಹಾಗೂ ವಾಣಿಜ್ಯ ಉದ್ದೇಶಕ್ಕಾಗಿ ನಗರದ ಬೈಯಪ್ಪನಹಳ್ಳಿಯಲ್ಲಿರುವ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್ಎಂವಿಟಿ) ರೈಲು ನಿಲ್ದಾಣ ಕಟ್ಟಡವನ್ನು ವಿಸ್ತರಿಸುವ ಕೆಲಸ ಪ್ರಾರಂಭವಾಗಿದೆ.
10:59 AM (IST) Dec 15
Gowri Kannada Serial Episode Update: ಕಿರುತೆರೆಯ ಖ್ಯಾತ ನಟಿ ಕಾವ್ಯಶ್ರೀ ಗೌಡ ಹಾಗೂ ಸುಷ್ಮಿತ್ ಜೈನ್, ಕರಣ್, ಸುಷ್ಮಿತಾ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಗೌರಿ ಧಾರಾವಾಹಿ ತನ್ನ ವಿಭಿನ್ನ ಕಥಾ ಹಂದರದಿಂದ ಈಗಾಗಲೇ ಕನ್ನಡಿಗರ ಮನೆ ತಲುಪಿದೆ.
10:48 AM (IST) Dec 15
ವ್ಯಾಜ್ಯವೊಂದರ ಸಂಬಂಧ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುತ್ತಿದ್ದ ವಕೀಲರ ಸಹಿ ಫೋರ್ಜರಿ ಮಾಡಿ ಆಕ್ಷೇಪಣೆ ಪ್ರತಿ ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ವ್ಯಕ್ತಿಗೆ ನ್ಯಾಯಾಂಗ ನಿಂದನೆ ಆಪರಾಧದಡಿ ನಾಲ್ಕು ತಿಂಗಳ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶಿಸಿದೆ.
10:39 AM (IST) Dec 15
ಅಕ್ರಮ ಚಟುವಟಿಕೆ ಆರೋಪ ಹೊರಿಸಿ ಖಾಸಗಿ ಕಂಪನಿ ಉದ್ಯೋಗಿ ಮನೆಗೆ ನುಗ್ಗಿ ತಪಾಸಣೆ ನೆಪದಲ್ಲಿ ದರೋಡೆ ಮಾಡಿದ್ದ ನಕಲಿ ಸಬ್ ಇನ್ಸ್ಪೆಕ್ಟರ್ ಹಾಗೂ ಆತನ ಮೂವರು ಸಹಚರರನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
10:33 AM (IST) Dec 15
ತುಮಕೂರು ರಸ್ತೆಯ ಪೀಣ್ಯ ಮೇಲ್ಸೇತುವೆಗೆ ಕಳೆದ ನಾಲ್ಕು ವರ್ಷದಿಂದ ಹಿಡಿದಿದ್ದ ‘ಗ್ರಹಣ’ಕ್ಕೆ ಕೊನೆಗೂ ಮುಕ್ತಿ ಸಿಗುವ ಕಾಲ ಬಂದಿದೆ. 1200 ಕೇಬಲ್ ಬದಲಾವಣೆಯ ಪೈಕಿ ಕೇವಲ 30 ಕೇಬಲ್ ಅಳವಡಿಕೆಯಷ್ಟೇ ಬಾಕಿ ಇದೆ.