
ನಾಗಪುರ(ಡಿ.27): ಕರ್ನಾಟಕ ಗಡಿ ವಿಷಯದಲ್ಲಿ ಸದಾ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಶಿವಸೇನೆ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಗಡಿ ವಿವಾದದ ಕುರಿತು ಸೋಮವಾರ ವಿಧಾನಪರಿಷತ್ತಿನಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಉದ್ಧವ ಠಾಕ್ರೆ, ‘ಕರ್ನಾಟಕ ಆಕ್ರಮಿತ ಮಹಾರಾಷ್ಟ್ರ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವೆಂದು ಕೇಂದ್ರ ಸರ್ಕಾರ ಘೋಷಿಸಬೇಕು’ ಎಂದು ಆಗ್ರಹಿಸಿದರು.
ಗಡಿ ವಿವಾದ: ಪ್ರಧಾನಿ ಮಧ್ಯಸ್ಥಿಕೆಗೆ ಮಹಾರಾಷ್ಟ್ರ ಸಂಸದ ಮಾನೆ ಒತ್ತಾಯ
‘ಇದು ಕೇವಲ ಭಾಷೆ ಮತ್ತು ಗಡಿಯ ಪ್ರಕರಣವಲ್ಲ, ಆದರೆ ಮಾನವೀಯತೆಯ ವಿಚಾರ. ಮರಾಠಿ ಮಾತನಾಡುವ ಜನರು ತಲೆಮಾರುಗಳಿಂದ ಗಡಿ ಗ್ರಾಮಗಳಲ್ಲಿ ನೆಲೆಸಿದ್ದಾರೆ. ಅವರ ದೈನಂದಿನ ಜೀವನ, ಭಾಷೆ ಮತ್ತು ಜೀವನಶೈಲಿ ಮರಾಠಿ. ಈ ವಿಚಾರ ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವವರೆಗೂ ಕರ್ನಾಟಕ ಆಕ್ರಮಿತ ಮಹಾರಾಷ್ಟ್ರವನ್ನು ಕೇಂದ್ರ ಸರ್ಕಾರ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಬೇಕು’ ಎಂದರು.
‘ಈ ವಿಚಾರದಲ್ಲಿ ಸಿಎಂ ಮೌನ ತಾಳಿದ್ದಾರೆ? ರಾಜ ಸರ್ಕಾರದ ನಿಲುವೇನು?’ ಎಂದು ಪ್ರಶ್ನಿಸಿದ ಅವರು, ‘ಕರ್ನಾಟಕ ಸರ್ಕಾರವೇ ವಾತಾವರಣವನ್ನು ಹಾಳು ಮಾಡುತ್ತಿದೆ’ ಎಂದು ಆರೋಪಿಸಿದರು. ಈ ವಿಷಯದಲ್ಲಿ ಕೇಂದ್ರ ಸರ್ಕಾರದ ಪಾತ್ರನ್ನೂ ಪ್ರಶ್ನಿಸಿದರು. ‘ಎರಡೂ ಸದನಗಳ ಸದಸ್ಯರು ಗಡಿ ಕುರಿತ ‘ಕೇಸ್ ಫಾರ್ ಜಸ್ಟೀಸ್’ ಚಲನಚಿತ್ರವನ್ನು ವೀಕ್ಷಿಸಬೇಕು ಮತ್ತು ಮಹಾಜನ್ ಆಯೋಗದ ವರದಿ ಓದಬೇಕು’ ಎಂದು ಠಾಕ್ರೆ ಕೋರಿದರು.=
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ