50000 ಕೋಟಿ ರು. ಪ್ಯಾಕೇಜ್‌ಗೆ ಬೇಡಿಕೆ: ಸಿಎಂ ಭೇಟಿಯಾದ ಪ್ರತಿಪಕ್ಷಗಳ ನಿಯೋಗ!

Published : May 09, 2020, 07:21 AM ISTUpdated : May 09, 2020, 02:09 PM IST
50000 ಕೋಟಿ ರು. ಪ್ಯಾಕೇಜ್‌ಗೆ ಬೇಡಿಕೆ: ಸಿಎಂ ಭೇಟಿಯಾದ ಪ್ರತಿಪಕ್ಷಗಳ ನಿಯೋಗ!

ಸಾರಾಂಶ

50000 ಕೋಟಿ ರು. ಪ್ಯಾಕೇಜ್‌ಗೆ ಬೇಡಿಕೆ| ಸಿಎಂ ಭೇಟಿಯಾದ ಪ್ರತಿಪಕ್ಷಗಳ ನಿಯೋಗ| ಕೇಂದ್ರದಿಂದ ನೆರವು ಕೇಳುವಂತೆ ಒತ್ತಾಯ

ಬೆಂಗಳೂರು(ಮೇ.09): ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದ ಪ್ರತಿಪಕ್ಷ ನಾಯಕರ ನಿಯೋಗವು ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿತು. ಕೊರೋನಾ ಬಿಕ್ಕಟ್ಟನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ, ರಾಜ್ಯಕ್ಕೆ 50 ಸಾವಿರ ಕೋಟಿ ರು. ವಿಶೇಷ ಪ್ಯಾಕೇಜ್‌ ನೀಡಲು ಕೇಂದ್ರ ಸರ್ಕಾರವನ್ನು ಕೋರುವಂತೆ ಒತ್ತಾಯಿಸಿತು. ಅಲ್ಲದೆ, ಅನೇಕ ಬೇಡಿಕೆಗಳನ್ನು ಮಂಡಿಸಿತು. ಅವುಗಳ ವಿವರ ಇಂತಿದೆ.

ವಿಪಕ್ಷಗಳ ಬೇಡಿಕೆ

1. ರಾಷ್ಟ್ರೀಯ ವಿಪತ್ತು ಘೋಷಿಸಿ .50000 ಕೋಟಿ ನೀಡಲು ಕೇಂದ್ರವನ್ನು ಒತ್ತಾಯಿಸಿ

2. ತೆಲಂಗಾಣ, ಕೇರಳ ಮಾದರಿಯಲ್ಲಿ .50000 ಕೋಟಿ ವಿಶೇಷ ಪ್ಯಾಕೇಜನ್ನು ನೀಡಿ

3. ಸೂಕ್ಷ್ಮ, ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ .10000 ಕೋಟಿ ವಿಶೇಷ ಪ್ಯಾಕೇಜ್‌ ಕೊಡಿ

4. ಕಲಾವಿದರು, ವಿವಿಧ ಮಾಧ್ಯಮಗಳ ನೌಕರರು, ಬೀದಿಬದಿ ವ್ಯಾಪಾರಿಗಳು, ಮಂಗಳಮುಖಿಯರು, ಅಂಗವಿಕಲರು, ಹಮಾಲಿಗಳು, ಅರ್ಚಕರಿಗೆ ಪ್ರತಿ ತಿಂಗಳು .10000 ನೀಡಿ

5. ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡಲು .5000 ಕೋಟಿ ಆವರ್ತ ನಿಧಿ ಸ್ಥಾಪಿಸಿ

6. ವೈಜ್ಞಾನಿಕ ಸಮೀಕ್ಷೆ ನಡೆಸಿ ಕೋಳಿ ಸಾಕಣೆದಾರರು, ರೇಷ್ಮೆ ಕೃಷಿಕರಿಗೆ ಶೇ.50 ಪರಿಹಾರ ನೀಡಿ

7. ಕೊರೋನಾ ನಿಯಂತ್ರಣಕ್ಕಾಗಿ ಸಿಎಂ ಪರಿಹಾರ ನಿಧಿಯ ಕುರಿತು ಶ್ವೇತ ಪತ್ರ ಹೊರಡಿಸಿ

8. ಮೂರು ತಿಂಗಳು ಕೈಗಾರಿಕೆಗಳಿಗೆ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಬೇಕು

9. ನರೇಗಾ ಕಾರ್ಮಿಕರಿಗೆ ಒಂದು ತಿಂಗಳ ಹಣವನ್ನು ಉಚಿತವಾಗಿ ನೀಡಬೇಕು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!