ಭೂಕುಸಿತಕ್ಕೆ ಅರಣ್ಯ ನಾಶವೇ ಕಾರಣ, ಅಕ್ರಮ ಹೋಂ ಸ್ಟೇ, ರೆಸಾರ್ಟ್‌, ಲೇಔಟ್ ತೆರವಿಗೆ ಖಂಡ್ರೆ ತಾಕೀತು

Published : Aug 03, 2024, 12:24 PM IST
ಭೂಕುಸಿತಕ್ಕೆ ಅರಣ್ಯ ನಾಶವೇ ಕಾರಣ, ಅಕ್ರಮ ಹೋಂ ಸ್ಟೇ, ರೆಸಾರ್ಟ್‌, ಲೇಔಟ್ ತೆರವಿಗೆ ಖಂಡ್ರೆ ತಾಕೀತು

ಸಾರಾಂಶ

ಅರಣ್ಯ ನಾಶದಿಂದ ಉಂಟಾಗುವ ಭೂ ಕುಸಿತವನ್ನು ತಡೆಯುವ ಸಲುವಾಗಿ ರಾಜ್ಯದ ಪಶ್ಚಿಮ ಘಟ್ಟದ ಗಿರಿ ಪ್ರದೇಶ ವ್ಯಾಪ್ತಿಯಲ್ಲಿ ಆಗಿರುವ ಅರಣ್ಯ ಒತ್ತುವರಿಯನ್ನು ಗುರುತಿಸಿ, ಶೀಘ್ರದಲ್ಲಿ ತೆರವು ಮಾಡುವಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು  ಸೂಚನೆ ನೀಡಿದ್ದಾರೆ.

ಬೆಂಗಳೂರು (ಆ.3): ಅರಣ್ಯ ನಾಶದಿಂದ ಉಂಟಾಗುವ ಭೂ ಕುಸಿತವನ್ನು ತಡೆಯುವ ಸಲುವಾಗಿ ರಾಜ್ಯದ ಪಶ್ಚಿಮ ಘಟ್ಟದ ಗಿರಿ ಪ್ರದೇಶ ವ್ಯಾಪ್ತಿಯಲ್ಲಿ 2015ರಿಂದೀಚೆಗೆ ಆಗಿರುವ ಅರಣ್ಯ ಒತ್ತುವರಿಯನ್ನು ಗುರುತಿಸಿ, ಶೀಘ್ರದಲ್ಲಿ ತೆರವು ಮಾಡುವಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ.

ವಯನಾಡು ದುರಂತಕ್ಕೆ ಎಚ್ಚೆತ್ತ ಕೇಂದ್ರ, ಕರ್ನಾಟಕ ಸೇರಿ 6 ರಾಜ್ಯದ ಪಶ್ಚಿಮಘಟ್ಟಗಳಲ್ಲಿ ಗಣಿಗಳ ನಿಷೇಧಕ್ಕೆ ಸಿದ್ಧತೆ

ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ 2015ರಿಂದೀಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ಗುರುತಿಸಬೇಕು. ಅರಣ್ಯ ಪ್ರದೇಶದಲ್ಲಿ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ಕೃಷಿ ಭೂಮಿ, ಹೋಂ ಸ್ಟೇ, ರೆಸಾರ್ಟ್‌ ಸೇರಿದಂತೆ ಎಲ್ಲ ರೀತಿಯ ಒತ್ತುವರಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಕೂಡಲೇ ಒತ್ತುವರಿ ತೆರವು ಮಾಡಬೇಕು ಹಾಗೂ 1 ತಿಂಗಳೊಳಗಾಗಿ ಅದಕ್ಕೆ ಕೈಗೊಂಡಿರುವ ಕ್ರಮದ ಕುರಿತಂತೆ ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿದ್ದಾರೆ.

ವಯನಾಡು ದುರಂತದಲ್ಲಿ ನಲುಗಿದ ಕುಟುಂಬಕ್ಕೆ ರಾತ್ರಿ ಇಡೀ ಆಶ್ರಯ ನೀಡಿ ಕಾಪಾಡಿದ ಕಾಡಾನೆ!

ರಾಜ್ಯದ ಶಿರೂರು ಮತ್ತು ಕೇರಳದ ವಯನಾಡಿನಲ್ಲಿ ಉಂಟಾದ ಭೂಕುಸಿತದಿಂದ ನೂರಾರು ಜನರು ಸಾವನ್ನಪ್ಪಿದ್ದಾರೆ. ಈ ದುರಂತಗಳು ನಮಗೆ ಎಚ್ಚರಿಕೆಯ ಗಂಟೆಯಾಗಿದ್ದು, ಅದಕ್ಕೆ ಈಗಲೇ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕಿದೆ. ಅದರಲ್ಲೂ ಪಶ್ಚಿಮಘಟ್ಟ ಪ್ರದೇಶದಲ್ಲಿ ಆಗಿರುವ ಒತ್ತುವರಿ ತೆರವು ಮಾಡಿ, ಅದರ ಉಳಿವಿಗೆ ಹಾಗೂ ಮುಂದಿನ ಅನಾಹುತ ತಡೆಗೆ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಸ್ವಾಭಾವಿಕ, ಪ್ರಕೃತಿ ದತ್ತವಾದ ಪಶ್ಚಿಮ ಘಟ್ಟದ ಗುಡ್ಡಗಳು ಮತ್ತು ಅರಣ್ಯಗಳನ್ನು ನಾಶ ಮಾಡಿ ಕಾಫಿತೋಟ, ಮನೆ, ಹೋಂಸ್ಟೇ, ರೆಸಾರ್ಟ್‌ಗಳನ್ನು ಅಕ್ರಮವಾಗಿ ನಿರ್ಮಿಸುವುದು ಹೆಚ್ಚಾಗಿದೆ. ಅಲ್ಲದೆ ಬೃಹತ್‌ ಮರಗಳ ಕಡಿತ, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿರುವುದರಿಂದ ಅರಣ್ಯ ಪ್ರದೇಶದ ಮಣ್ಣು ಸಡಿಲಗೊಂಡು ಭೂ-ಕುಸಿತದಂತಹ ಪ್ರಕರಣ ಸಂಭವಿಸುವ ಆತಂಕ ಎದುರಾಗಿದೆ. ಈ ಕುರಿತಂತೆ ತಜ್ಞರೂ ಅಭಿಪ್ರಾಯ ವ್ಯಕ್ತಪಡಿಸಿದ್ದು, ಅದಕ್ಕೆ ಈಗಲೇ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದ್ದಾರೆ. ಹೀಗಾಗಿ ಮುಂದಿನ ಒಂದು ತಿಂಗಳೊಳಗಾಗಿ ಪಶ್ಚಿಮಘಟ್ಟ ಪ್ರದೇಶದಲ್ಲಿನ ಒತ್ತುವರಿ ಗುರುತಿಸಿ, ಅದನ್ನು ತೆರವಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಣೆ ನೀಡುವಂತೆ ಆದೇಶಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: BBK 12 - ಕಿಚ್ಚ ಸುದೀಪ್‌ ಮುಂದೆ ರೇಷ್ಮೆ ಶಾಲಿನಲ್ಲಿ ಹೊಡೆದಂತೆ ಸತ್ಯದರ್ಶನ ಮಾಡಿಸಿದ ಗಿಲ್ಲಿ ನಟ