
ಬೆಂಗಳೂರು (ಮೇ.27): ಹಲವು ತಾಂತ್ರಿಕ ಕಾರಣಗಳಿಂದಾಗಿ ಸಿಐಡಿಯ ಅರಣ್ಯ ವಿಭಾಗವನ್ನು ಬಂದ್ ಮಾಡುವ ಕುರಿತು ರಾಜ್ಯಪೊಲೀಸ್ ಇಲಾಖೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ.
ಚಿರತೆ, ಹುಲಿ, ಹಂದಿ ಸೇರಿ ವನ್ಯಜೀವಿಗಳ ಅಕ್ರಮ ಬೇಟೆ, ಸಾಗಣೆಗೆ ಪ್ರಕರಣ ದಾಖಲಿಸುವ ಹಾಗೂ ತನಿಖೆ ನಡೆಸುವ ಕುರಿತು ಹಲವು ಅಧಿಕಾರಗಳನ್ನು ಅರಣ್ಯ ಇಲಾಖೆಯೇ ಹೊಂದಿರುವುದರಿಂದ ಸಿಐಡಿಯ ಅರಣ್ಯ ವಿಭಾಗದ ಪೊಲೀಸರಿಗೆ ಹೆಚ್ಚಿನ ಕೆಲಸ ಇರುವುದಿಲ್ಲ. ಇದರಿಂದಾಗಿ ಈ ವಿಭಾಗವನ್ನು ಬಂದ್ ಮಾಡುವುದು ಸೂಕ್ತ ಎಂಬ ಅಭಿಪ್ರಾಯಪಟ್ಟು ರಾಜ್ಯ ಪೊಲೀಸರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ, ಒಂದು ಕೋಮಿನ ಮಾಲೀಕರೇ ಹೆಚ್ಚಿರುವ ನಗರದ ಟಿಂಬರ್ ಮಾಫಿಯಾ ಪೊಲೀಸ್ ಇಲಾಖೆಯ ಮೇಲೆ ಒತ್ತಡ ತಂದು ಈ ಪ್ರಸ್ತಾವನೆ ಸಲ್ಲಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಕೆಲ ಟಿಂಬರ್ ವ್ಯಾಪಾರಿಗಳು ಲೈಸೆನ್ಸ್ ಇಲ್ಲದೆ, ವ್ಯವಹಾರ ನಡೆಸುತ್ತಿದ್ದು ಆಗಾಗ ಸಿಐಡಿ ಅರಣ್ಯ ವಿಭಾಗದ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸುವುದರಿಂದ ಅವರ ವ್ಯವಹಾರಕ್ಕೆ ಅಡ್ಡಿಯಾಗಿದೆ ಎನ್ನಲಾಗಿದೆ.
ಆದರೆ, ಸರ್ಕಾರದ ಮಟ್ಟದಲ್ಲಿ ಈ ಪ್ರಸ್ತಾವನೆ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರ ಹೊರಬಿದ್ದಿಲ್ಲ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ