
ಬೆಂಗಳೂರು (ನ.17): ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಅಮಾನತು ಮಾಡಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡ ಅವರು ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ಚಿಂತನ ಮಂಥನ ಸಭೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದ ಸಿಎಂ ಇಬ್ರಾಹಿಂ, ನಮ್ಮದೇ ಒರಿಜಿನಲ್ ಜೆಡಿಎಸ್ ಪಕ್ಷವಾಗಿದೆ. ನಾನು ಒರಿಜಿನಲ್ ಜೆಡಿಎಸ್ ನ ರಾಜ್ಯ ಅಧ್ಯಕ್ಷನಾಗಿದ್ದೇನೆ. ನನ್ನನ್ನು ಯಾರು ಪಕ್ಷದಿಂದ ತೆಗೆಯಲು ಸಾಧ್ಯವಿಲ್ಲ. ನನ್ನನ್ನು ತೆಗೆಯಬೇಕಾದ್ರೆ 2/3 ನಲ್ಲಿ ಸಭೆ ಮಾಡಿ ತೆಗೆಯಬೇಕು. ಬಿಜೆಪಿ ಜೊತೆ ಮೈತ್ರಿಗೆ ಒರಿಜಿನಲ್ ಜೆಡಿಎಸ್ ಬೆಂಬಲ ಇಲ್ಲ. ಎನ್ಡಿಎ ಸೋಲಿಸಲು ಇಂಡಿ ಮೈತ್ರಿಕೂಟಕ್ಕೆ ಬೆಂಬಲ ನೀಡಲಾಗುವುದು ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಬಳಿಕ ಬಹಿರಂಗವಾಗಿ ಪಕ್ಷದ ವಿರುದ್ಧ ಹೇಳಿಕೆ ನೀಡುತ್ತಾ ಬಂದಿದ್ದ ಸಿಎಂ ಇಬ್ರಾಹಿಂ. ಹಲವು ಬಾರಿ ಎಚ್ಚರಿಸಿದ್ದ ದೇವೇಗೌಡರು. ಮೈತ್ರಿ ಸರ್ಕಾರಕ್ಕೆ ಒಪ್ಪಿಸಿ ಪಕ್ಷದಲ್ಲೇ ಉಳಿಸಿಕೊಳ್ಳಲು ಯೋಚಿಸಿದ್ದ ದೇವೇಗೌಡರು. ಆದರೆ ಶತಾಯಗತಾಯ ಬಿಜೆಪಿಯೊಂದಿಗೆ ಮೈತ್ರಿ ಸಾಧ್ಯವೇ ಇಲ್ಲ ಎನ್ನುತ್ತಾ ಬಹಿರಂಗವಾಗಿ ಇಂಡಿ ಒಕ್ಕೂಟಕ್ಕೆ ನೀಡುತ್ತೇವೆ ಎಂದು ಸಭೆಯಲ್ಲಿ ಹೇಳಿದ್ದ ಇಬ್ರಾಹಿಂ.
ಸಿಎಂ ಇಬ್ರಾಹಿಂ ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿದ್ದ ಹಿನ್ನೆಲೆ ಪಕ್ಷದ ಪದಾಧಿಕಾರಿಗಳ ಸಭೆ ಕರೆದು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಇಬ್ರಾಹಿಂರನ್ನು ಉಚ್ಛಾಟಿಸಿದ್ದ ಎಚ್ಡಿ ದೇವೇಗೌಡರು ಇದೀಗ ಜೆಡಿಎಸ್ ಪಕ್ಷದಿಂದಲೇ ಅಮಾನತ್ತು ಮಾಡಿ ಆದೇಶ ಹೊರಡಿಸಲಾಗಿದೆ.
'3 ಸೀಟಿಗಾಗಿ ಅಮಿತ್ ಶಾ ಮುಂದೆ ನಿಮ್ಮ ಮಗ ನಿಮ್ಮನ್ನ ಅಡ ಇಡ್ತಿದ್ದಾರೆ..' ದೇವೇಗೌಡರಿಗೆ ಇಬ್ರಾಹಿಂ ಎಚ್ಚರಿಕೆ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ