Karnataka rains: ಮುಂಗಾರುಪೂರ್ವ ಮಳೆಗೆ 10 ಜಿಲ್ಲೆಗಳಲ್ಲಿ ಅಪಾರ ಬೆಳೆ ಹಾನಿ!

Published : May 23, 2023, 06:48 AM IST
Karnataka rains: ಮುಂಗಾರುಪೂರ್ವ ಮಳೆಗೆ  10 ಜಿಲ್ಲೆಗಳಲ್ಲಿ ಅಪಾರ ಬೆಳೆ ಹಾನಿ!

ಸಾರಾಂಶ

ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮುಂಗಾರುಪೂರ್ವ ಮಳೆಯಬ್ಬರಕ್ಕೆ ದಾವಣಗೆರೆ ಸೇರಿ ರಾಜ್ಯದ ಹತ್ತಕ್ಕೂ ಹೆಚ್ಚು ಜಿಲ್ಲೆಗಳ 8 ಸಾವಿರಕ್ಕೂ ಹೆಚ್ಚು ಎಕರೆಗೂ ಹೆಚ್ಚಿನ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಕೋಲಾರವೊಂದರಲ್ಲಿ 7,100ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಹಾನಿಯಾಗಿದ್ದು, ರೈತರು ಕಂಗಾಲಾಗಿದ್ದಾರೆ.

ಬೆಂಗಳೂರು (ಮೇ.23) : ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮುಂಗಾರುಪೂರ್ವ ಮಳೆಯಬ್ಬರಕ್ಕೆ ದಾವಣಗೆರೆ ಸೇರಿ ರಾಜ್ಯದ ಹತ್ತಕ್ಕೂ ಹೆಚ್ಚು ಜಿಲ್ಲೆಗಳ 8 ಸಾವಿರಕ್ಕೂ ಹೆಚ್ಚು ಎಕರೆಗೂ ಹೆಚ್ಚಿನ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಕೋಲಾರವೊಂದರಲ್ಲಿ 7,100ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಹಾನಿಯಾಗಿದ್ದು, ರೈತರು ಕಂಗಾಲಾಗಿದ್ದಾರೆ.

ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ರಾಜ್ಯದ ಹಲವೆಡೆ ಎರಡ್ಮೂರು ದಿನಗಳಿಂದ ಬಿರುಗಾಳಿ, ಆಲಿಕಲ್ಲು ಸಹಿತ ಉತ್ತಮ ಮಳೆಯಾಗುತ್ತಿದ್ದು, ತಂಪಿನ ಅನುಭವ ನೀಡುತ್ತಿದೆ. ಈ ಅಕಾಲಿಕ ಮಳೆಯಿಂದಾಗಿ ಬಿಸಿಲಿನಿಂದ ಕಂಗೆಟ್ಟಿದ್ದ ಒಂದು ಕಡೆ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದರೆ, ಮತ್ತೊಂದೆಡೆ ರೈತರು ಮಾತ್ರ ಬೆಳೆ ನಷ್ಟದಿಂದಾಗಿ ತಲೆಮೇಲೆ ಕೈಹೊತ್ತು ಕೂರುವಂತಾಗಿದೆ.

ಕರ್ನಾಟಕದ 3 ಜಿಲ್ಲೆಗಳಲ್ಲಿ ಭಾರೀ ಮಳೆ: ಮಹಿಳೆ ಸಾವು

ಅಕಾಲಿಕ ಮಳೆಗೆ ರಾಜ್ಯದಲ್ಲೇ ಅತಿ ಹೆಚ್ಚು ಬೆಳೆ ನಷ್ಟ(7166 ಎಕರೆ) ಕೋಲಾರದಲ್ಲಿ ಆಗಿದೆ. ಕೊಪ್ಪಳದಲ್ಲಿ 618ಕ್ಕೂ ಹೆಚ್ಚು ಎಕರೆ, ದಾವಣಗೆರೆ​ 153 ಎಕರೆ, ಚಿಕ್ಕಬಳ್ಳಾಪುರ 100 ಎಕರೆ, ಬಳ್ಳಾರಿ 50 ಎಕರೆ, ಚಿತ್ರದುರ್ಗ 39 ಎಕರೆ, ಹಾವೇರಿಯಲ್ಲಿ 16 ಎಕರೆ ಸೇರಿ ರಾಜ್ಯದ ವಿವಿಧೆಡೆ ತೋಟಗಾರಿಕೆ ಮತ್ತು ಭತ್ತದ ಬೆಳೆಗೆ ಭಾರೀ ಹಾನಿಯಾಗಿದೆ.

ಮಾವು ಬೆಳೆಗಾರ ತತ್ತರ: ಮಳೆಯಿಂದಾಗಿ ಕೋಲಾರ ಮತ್ತು ಕೊಪ್ಪಳದಲ್ಲಿ ಮಾವು ಬೆಳೆಗೆ ಹೆಚ್ಚಿನ ಹಾನಿಯಾಗಿದೆ. ಕೋಲಾರ ಜಿಲ್ಲೆಯಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿ ಕಟಾವಿಗೆ ಬರಬೇಕಿದ್ದ ಮಾವು ಬೆಳೆ ಆಲಿಕಲ್ಲು ಸಹಿತ ಸುರಿದ ಮಳೆಗೆ ನೆಲಸೇರಿದೆ. ಈ ಬಾರಿ ವಿಳಂಬವಾಗಿ ಮಾವು ಫಸಲು ಬಂದಿದ್ದರಿಂದ ರೈತರಿಗೆ ಕೊಂಚ ನಿರಾಸೆಯಾಗಿತ್ತು. ಇದರ ಬೆನ್ನಲ್ಲೇ ಇದೀಗ ಆಗಿರುವ ಬೆಳೆ ನಷ್ಟಅವರನ್ನು ಆತಂಕಕ್ಕೆ ಸಿಲುಕಿಸಿದೆ. ಮಾವು ಅಲ್ಲದೆ ದಾಳಿಂಬೆ, ನೇರಳೆ, ಹಿಪ್ಪು ನೇರಳೆ, ಹೂ ಸೇರಿ ಜಿಲ್ಲೆಯಲ್ಲಿ ಈ ಬಾರಿಯ ಮಳೆ ವ್ಯಾಪಕ ಹಾನಿ ಮಾಡಿದೆ. ಭಾನುವಾರ ರಾತ್ರಿ ಸುರಿದ ಮಳೆಯಿಂದ ಶಿಡ್ಲಘಟ್ಟತಾಲೂಕೊಂದರಲ್ಲೇ ಸುಮಾರು 2 ಕೋಟಿ ರುಪಾಯಿಗೂ ಅಧಿಕ ನಷ್ಟವಾಗಿದೆ ಎಂದು ಹೇಳಲಾಗಿದೆ.

ಚಾಮರಾಜನಗರ ಜಿಲ್ಲೆಯ ಚಾಮರಾಜನಗರ, ಯಳಂದೂರು, ಗುಂಡ್ಲುಪೇಟೆ ಹಾಗೂ ಹನೂರು ಭಾಗದಲ್ಲಿ ಸುಮಾರು 50 ಎಕರೆಗೂ ಹೆಚ್ಚಿನ ಪ್ರದೇಶದಲ್ಲಿ ಬಾಳೆ ಬೆಳೆ ಹಾನಿಯಾಗಿರುವ ಕುರಿತು ವರದಿಯಾಗಿದ್ದು, ದಾವಣಗೆರೆಯಲ್ಲಿ 150 ಎಕರೆ ಭತ್ತದ ಬೆಳೆ ಮತ್ತು ತೋಟಗಾರಿಕೆ ಬೆಳೆಗೆ ಹಾನಿ ಸಂಭವಿಸಿದೆ. ಚಿಕ್ಕಬಳ್ಳಾಪುರದಲ್ಲಿ ಅಕಾಲಿಕ ಮಳೆಯಿಂದಾಗಿ ನೂರಾರು ಎಕರೆ ದ್ರಾಕ್ಷಿ ಬೆಳೆ ಸೇರಿ ವಿವಿಧ ತರಕಾರಿ, ತೋಟಗಾರಿಕೆ ಬೆಳೆ ನೆಲಕಚ್ಚಿದೆ. ಹೂವಿನ ಕೃಷಿಗೂ ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ಮಳೆ ಭಾರೀ ಹಾನಿ ಮಾಡಿದೆ ಎಂದು ರೈತರು ಕಣ್ಣೀರು ಹಾಕುತ್ತಿದ್ದಾರೆ.

Bengaluru rains: ಗಾಳಿಗೆ ಕಬ್ಬನ್‌ ಪಾರ್ಕಲ್ಲಿ 25ಕ್ಕೂ ಹೆಚ್ಚು ಮರ ಧರೆಗೆ!

ಯಾವ್ಯಾವ ಜಿಲ್ಲೆಗಳಲ್ಲಿ ಹಾನಿ?

  • ಕೋಲಾರ- 7166 ಎಕರೆ
  • ಕೊಪ್ಪಳ- 618+ ಎಕರೆ
  • ದಾವಣಗೆರೆ​-153 ಎಕರೆ
  • ಚಿಕ್ಕಬಳ್ಳಾಪುರ-100+ ಎಕರೆ
  • ಬಳ್ಳಾರಿ- 50 ಎಕರೆ
  • ಚಾ.ನಗರ-50 ಎಕರೆ
  • ಚಿತ್ರದುರ್ಗ-39 ಎಕರೆ
  • ಹಾವೇರಿ- 16 ಎಕರೆ
  • ಮೈಸೂರು - 2+ ಎಕರೆ
  • ಚಿಕ್ಕಮಗಳೂರು- 2+ ಎಕರೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್