ಕರ್ನಾಟಕಲ್ಲಿಂದು ಭಾರೀ ಮಳೆ ಸೂಚನೆ: 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Published : Jul 06, 2026, 10:45 AM IST
Karnataka Rain Updates

ಸಾರಾಂಶ

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಬಂಗಾಳಕೊಲ್ಲಿಯ ವಾಯುಭಾರ ಕುಸಿತದಿಂದಾಗಿ ವ್ಯಾಪಕ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು 11 ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಮತ್ತು 8 ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಿದ್ದು, ಮೀನುಗಾರರಿಗೆ ಕಡಲಿಗಿಳಿಯದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಇಂದು ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತ ಹಾಗೂ ಅರಬ್ಬೀ ಸಮುದ್ರದಲ್ಲಿ ಸೃಷ್ಟಿಯಾಗಿರುವ ಗಾಳಿಯ ಮೇಲ್ಮೈ ಸುಳಿ (ಟ್ರಫ್) ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ರಣಮಳೆಯಾಗುವ ಸಾಧ್ಯತೆಯಿದೆ. ಪರಿಸ್ಥಿತಿಯ ಗಾಂಭೀರ್ಯತೆಯನ್ನು ಅರಿತು ರಾಜ್ಯ ಹವಾಮಾನ ಇಲಾಖೆಯು ಒಟ್ಟು 11 ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಹಾಗೂ 8 ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಿದೆ.

11 ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್'

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ತೀವ್ರವಾಗಿರಲಿದ್ದು, ಈ ಕೆಳಗಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಗೊಳಿಸಲಾಗಿದೆ:

ಕರಾವಳಿ ಜಿಲ್ಲೆಗಳು: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ. 

ಮಲೆನಾಡು ಮತ್ತು ಒಳನಾಡು ಜಿಲ್ಲೆಗಳು: ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಧಾರವಾಡ, ವಿಜಯಪುರ ಮತ್ತು ರಾಯಚೂರು.

ಈ ಜಿಲ್ಲೆಗಳಲ್ಲಿ ಕೆಲವು ಕಡೆ ಗುಡುಗು, ಮಿಂಚು ಸಹಿತ ಮುರಳಿಡದಂತೆ ಧೋ ಎಂದು ಮಳೆ ಸುರಿಯುವ ಸಾಧ್ಯತೆ ಇದ್ದು, ಸಾರ್ವಜನಿಕರು ಮತ್ತು ಜಿಲ್ಲಾಡಳಿತಗಳು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

8 ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್'  

ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಇತರ ಕೆಲವು ಭಾಗಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಕೆಳಗಿನ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೈಸೂರು, ಮಂಡ್ಯ, ತುಮಕೂರು, ಹಾವೇರಿ, ದಾವಣಗೆರೆ, ಗದಗ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ.

ಮೀನುಗಾರರಿಗೆ ಕಡಲಿಗಿಳಿಯದಂತೆ ಎಚ್ಚರಿಕೆ

ಸಮುದ್ರದಲ್ಲಿ ವಾಯುಭಾರ ಕುಸಿತದ ತೀವ್ರತೆ ಹೆಚ್ಚಿರುವುದರಿಂದ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿಲೋಮೀಟರ್ ಇರಲಿದೆ. ಕಡಲು ಪ್ರಕ್ಷುಬ್ಧಗೊಳ್ಳುವ ಸಾಧ್ಯತೆ ಇರುವುದರಿಂದ ಯಾವುದೇ ಕಾರಣಕ್ಕೂ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ತೀರ ಪ್ರದೇಶದಲ್ಲಿ ವಾಸಿಸುವ ಜನರಿಗೂ ಜಾಗೃತರಾಗಿರಲು ತಿಳಿಸಲಾಗಿದೆ.

ಬೆಂಗಳೂರಿನಲ್ಲಿ ಹೇಗಿರಲಿದೆ ಹವಾಮಾನ?

ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಮುಂದುವರಿಯಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಳ್ಳುವ ಸಂಭವ ಇರುವುದರಿಂದ ವಾಹನ ಸವಾರರು ಜಾಗ್ರತೆ ವಹಿಸುವಂತೆ ಕೋರಲಾಗಿದೆ.

ಮಳೆ ಮತ್ತು ಗಾಳಿಯ ತೀವ್ರತೆ ಹೆಚ್ಚಾಗಲಿರುವುದರಿಂದ ಸಾರ್ವಜನಿಕರು ಹಳೆಯ ಕಟ್ಟಡಗಳು, ವಿದ್ಯುತ್ ಕಂಬಗಳು ಹಾಗೂ ಮರಗಳ ಕೆಳಗೆ ಆಶ್ರಯ ಪಡೆಯಬಾರದು ಎಂದು ವಿಪತ್ತು ನಿರ್ವಹಣಾ ಮಂಡಳಿ ಮನವಿ ಮಾಡಿದೆ. ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ನದಿ ತೀರ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳ ಕಡೆ ಗಮನಹರಿಸುವುದು ಸೂಕ್ತ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದೇಶದಲ್ಲೇ ಅತ್ಯಂತ ದೀರ್ಘಕಾಲ ಜೈಲು ವಾಸ ಅನುಭವಿಸಿ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾದ ಕಲಬುರಗಿಯ ಸಾಯಿಬಣ್ಣ ಕಥೆ!
ಜೆಡಿಎಸ್‌ ಜತೆ ಸೇರಿ ಎಸ್‌ಐಆರ್‌ ಅಕ್ರಮ ವಿರುದ್ಧ ಇಂದು ಚುನಾವಣಾ ಆಯೋಗಕ್ಕೆ BJP ದೂರು