ಶಿವಮೊಗ್ಗ: ಚಲಿಸುತ್ತಿದ್ದ ಸರ್ಕಾರಿ ಬಸ್ ಮೇಲೆ ಉರುಳಿಬಿದ್ದ ವಿದ್ಯುತ್ ಕಂಬ!

Published : Jul 26, 2024, 04:38 PM ISTUpdated : Jul 26, 2024, 05:16 PM IST
ಶಿವಮೊಗ್ಗ: ಚಲಿಸುತ್ತಿದ್ದ ಸರ್ಕಾರಿ ಬಸ್ ಮೇಲೆ ಉರುಳಿಬಿದ್ದ ವಿದ್ಯುತ್ ಕಂಬ!

ಸಾರಾಂಶ

ಚಲಿಸುತ್ತಿದ್ದ ಸರ್ಕಾರಿ ಬಸ್ ಮೇಲೆ ವಿದ್ಯುತ್ ಕಂಬ ಉರುಳಿಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪೆಕಟ್ಟೆ-ನಿಟ್ಟೂರು ಮಾರ್ಗದಲ್ಲಿ ನಡೆದಿದೆ. ಅದೃಷ್ಟವಶಾತ್ ವಿದ್ಯುತ್ ಕಂಬ ಬಿದ್ದ ವೇಳೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಶಿವಮೊಗ್ಗ (ಜು.26): ಚಲಿಸುತ್ತಿದ್ದ ಸರ್ಕಾರಿ ಬಸ್ ಮೇಲೆ ವಿದ್ಯುತ್ ಕಂಬ ಉರುಳಿಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಪೆಕಟ್ಟೆ-ನಿಟ್ಟೂರು ಮಾರ್ಗದಲ್ಲಿ ನಡೆದಿದೆ. ಅದೃಷ್ಟವಶಾತ್ ವಿದ್ಯುತ್ ಕಂಬ ಬಿದ್ದ ವೇಳೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಬೆಂಗಳೂರಿನಿಂದ ಹೊಸನಗರ - ನಗರ ಮಾರ್ಗವಾಗಿ ಕೊಲ್ಲೂರು ಕಡೆ ಚಲಿಸುತ್ತಿದ್ದ ಬಸ್. ಈ ವೇಳೆ ಹಠಾತ್ತನೇ ಉರುಳಿಬಿದ್ದ ವಿದ್ಯುತ್ ಕಂಬ. ಬಸ್‌ನ ಹಿಂಬದಿಯ ಒಂದು ಬದಿಗೆ ವಿದ್ಯುತ್ ತಂತಿ ಸಮೇತ ಬಿದ್ದಿದೆ. ಕ್ಷಣಕಾಲ ಆತಂಕಗೊಂಡ ಚಾಲಕ, ಕಾರ್ಯನಿರ್ವಾಹಕ ಹಾಗೂ ಪ್ರಯಾಣಿಕರು. ಆದರೆ ಹೊಸನಗರ ಸುತ್ತಮುತ್ತು ಭಾರೀ ಮಳೆ ಹಿನ್ನೆಲೆ ವಿದ್ಯುತ್ ಕಡಿತಗೊಂಡಿತ್ತು. 

ಮನೆ ಗೋಡೆ ಕುಸಿದುಇಡೀ ಕುಟುಂಬವೇ ಜೀವಂತ ಸಮಾಧಿಯಾಗುವುದು ಸ್ವಲ್ಪ ದರಲ್ಲೇ ತಪ್ಪಿತ್ತು!

ಬಳಿಕ ಮೆಸ್ಕಾಂ ಸಿಬ್ಬಂದಿಗೆ ಕರೆ ಮಾಡಿದ ಬಸ್ ಚಾಲಕ, ಕಾರ್ಯನಿರ್ವಾಹಕ ಸ್ಥಳಕ್ಕೆ ಆಗಮಿಸಿ ಮೆಸ್ಕಾಂ ಸಿಬ್ಬಂದಿ ವಿದ್ಯುತ್ ಕಂಬ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ತಾಲೂಕಿನಾದ್ಯಂತ ಕಳೆದೆರಡು ದಿನಗಳಿಂದ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದ ನೂರಾರು ಮರಗಳು ಧರೆಗುರುಳಿವೆ. ಮನೆಗಳು ಕುಸಿದುಬಿದ್ದು ಜನಜೀವನ ಅಸ್ತವ್ಯವಸ್ತವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ