ಇಂದಿನಿಂದ ಮೂರು ದಿನ ರಾಜ್ಯದಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್; ನಾಳೆ ಉತ್ತರ ಕರ್ನಾಟಕದ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

Published : May 17, 2025, 07:38 AM ISTUpdated : May 17, 2025, 07:46 AM IST
ಇಂದಿನಿಂದ ಮೂರು ದಿನ ರಾಜ್ಯದಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್; ನಾಳೆ ಉತ್ತರ ಕರ್ನಾಟಕದ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

ಸಾರಾಂಶ

ರಾಜ್ಯದಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯ ಮುನ್ಸೂಚನೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಜಾರಿಗೊಳಿಸಿದೆ.

ಬೆಂಗಳೂರು (ಮೇ.17): ರಾಜ್ಯದಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯ ಮುನ್ಸೂಚನೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಜಾರಿಗೊಳಿಸಿದೆ.

ನಾಳೆ (ಮೇ 18) ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಾದ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಗದಗ, ಬೆಳಗಾವಿ, ಧಾರವಾಡ, ಹಾವೇರಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 

 ಇದೇ ವೇಳೆ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಮುಂದಿನ ಎರಡು ದಿನಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Karnataka weather update: ಪೂರ್ವ ಮುಂಗಾರು, ಮಳೆ ಅಬ್ಬರಕ್ಕೆ ಮತ್ತೆರಡು ಬಲಿ!

ಜನರು ಮುಂಜಾಗ್ರತೆ ವಹಿಸಿ, ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.  ಮುಂದಿನ ಅಪ್‌ಡೇಟ್‌ಗಾಗಿ ಸಂಪರ್ಕದಲ್ಲಿರಿ! 

ರಾಯಚೂರು ಅತಿ ಹೆಚ್ಚು ಉಷ್ಣಾಂಶ:

ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಿರುವ ಹವಾಮಾನ ಇಲಾಖೆ ವರದಿ ಪ್ರಕಾರ, ರಾಯಚೂರಿನಲ್ಲಿ ಅತಿ ಹೆಚ್ಚು 38 ಡಿ.ಸೆ. ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಜಗಳೂರು ಹಾಗೂ ಹರಪನಹಳ್ಳಿಯಲ್ಲಿ ಅತಿ ಹೆಚ್ಚು 11 ಸೆಂ.ಮೀ ಮಳೆಯಾಗಿದೆ. ಉಳಿದಂತೆ ಬೇಗೂರು 6, ಕೊಣನೂರು ಹಾಗೂ ಚಿಂತಾಮಣಿಯಲ್ಲಿ ತಲಾ 5, ಚಿತ್ತಾಪುರ, ಹುಣಸೂರಿನಲ್ಲಿ ತಲಾ 4, ಹೊಸಕೋಟೆ, ಕೋಲಾರ, ಚಾಮರಾಜನಗರ, ಲಕ್ಷ್ಮೇಶ್ವರ, ಬೀದರ್‌ ಹಾಗೂ ನಾಯಕನಹಟ್ಟಿಯಲ್ಲಿ ತಲಾ 3, ರಾಮನಗರ, ಹಿರಿಯೂರು, ಅರಕಲಗೂಡು, ಸೋಮವಾರಪೇಟೆಯಲ್ಲಿ ತಲಾ 2, ಕಳಸ ಮತ್ತಿತರ ಕಡೆ 1 ಸೆಂ.ಮೀ ಮಳೆಯಾಗಿದೆ.

ಶೇ.56 ರಷ್ಟು ಹೆಚ್ಚಿನ ಮಳೆ:

ರಾಜ್ಯದಲ್ಲಿ ಮಾರ್ಚ್‌ನಿಂದ ಈವರೆಗೆ ಸಾಮಾನ್ಯವಾಗಿ ವಾಡಿಕೆ ಪ್ರಕಾರ 69 ಮಿ.ಮೀ ಮಳೆಯಾಗಬೇಕು. ಆದರೆ, ಈ ಬಾರಿ 108 ಮಿ.ಮೀ ಮಳೆಯಾಗಿದೆ. ಒಟ್ಟಾರೆ ಶೇ.56ರಷ್ಟು ಹೆಚ್ಚಿನ ಮಳೆಯಾಗಿದೆ. ಕರಾವಳಿಯಲ್ಲಿ 89.8 ಮಿ.ಮೀ. ಮಳೆಯಾಗುವ ಮೂಲಕ ಶೇ.34ರಷ್ಟು ಹೆಚ್ಚಿನ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ 89.3 ಮಿ.ಮೀ ಮಳೆಯಾಗಿದ್ದು, ಶೇ.89ರಷ್ಟು ಹೆಚ್ಚಿನ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ 128 ಮಿ.ಮೀ ಮಳೆಯಾಗಿದ್ದು, ಶೇ.44 ರಷ್ಟು ಹೆಚ್ಚಿನ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಳ್ಳಾರಿ ಶೂಟೌಟ್ ಪ್ರಕರಣ: ಪೊಲೀಸರೇ ಆರೋಪಿಗಳಿಗೆ ಬಾಡಿಗಾರ್ಡ್ಸ್! ಗೃಹಸಚಿವರೇ ಅಸಮರ್ಥ, ಜನಾರ್ದನ ರೆಡ್ಡಿ ಕೆಂಡಾಮಂಡಲ
ನಾನು ಚಾಮರಾಜ ಕ್ಷೇತ್ರದ ಆಕಾಂಕ್ಷಿ, ಪಕ್ಷದಲ್ಲಿ ಬ್ಯಾನರ್ ಕಟ್ಟುವ ಕಾರ್ಯಕರ್ತನಿಗೂ ಈ ಹಕ್ಕಿದೆ: ನಾಗೇಂದ್ರಗೆ ಸಿಂಹ ತಿರುಗೇಟು