
ಬೆಂಗಳೂರು (ಏ.17) : ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ಮಳೆ ಅಬ್ಬರ ತೀವ್ರಗೊಂಡಿದ್ದು, ವಾಡಿಕೆಗಿಂತ ದುಪ್ಪಟ್ಟು ಮಳೆಯಾದ ವರದಿಯಾಗಿದೆ.
ಮಾರ್ಚ್ನಿಂದ ಆರಂಭಗೊಳ್ಳುವ ಪೂರ್ವ ಮುಂಗಾರು ಮಳೆ ಜೂನ್ ವರೆಗೂ ಮುಂದುವರಿಯಲಿದೆ. ಕಳೆದ ಒಂದೂವರೆ ತಿಂಗಳಲ್ಲಿ ರಾಜ್ಯದಲ್ಲಿ ವಾಡಿಕೆ ಪ್ರಕಾರ 25 ಸೆಂ.ಮೀ. ನಷ್ಟು ಮಳೆಯಾಗಬೇಕು. ಆದರೆ, 48.9 ಸೆಂ.ಮೀ. ನಷ್ಟು ಮಳೆ ಸುರಿದಿದೆ. ಈ ಮೂಲಕ ವಾಡಿಕೆಗಿಂತ ಶೇ.98ರಷ್ಟು ಹೆಚ್ಚಿನ ಮಳೆಯಾಗಿದೆ.
ಕರಾವಳಿಯ ಮೂರು ಜಿಲ್ಲೆಗಳಲ್ಲಿ ವಾಡಿಕೆಯಂತೆ ಈ ಅವಧಿಗೆ 22.7 ಸೆಂ.ಮೀ. ಮಳೆಯಾಗಬೇಕು. ಆದರೆ, 43.1 ಸೆಂ.ಮೀ. ಮಳೆಯಾಗಿದೆ. ಅಂದರೆ ಶೇ.90ರಷ್ಟು ಮಳೆ ಹೆಚ್ಚಾಗಿದೆ. ದಕ್ಷಿಣ ಒಳನಾಡಿನಲ್ಲಿ 30.5 ಸೆಂ.ಮೀ. ಮಳೆಯಾಗಬೇಕು. ಆದರೆ, 62.7 ಸೆಂ.ಮೀ. ನಷ್ಟು ಮಳೆ ಸುರಿಯುವ ಮೂಲಕ ಮಳೆ ಪ್ರಮಾಣ ಶೇ.106ರಷ್ಟು ಹೆಚ್ಚಾಗಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಇನ್ನೂ 1 ವಾರ ಮಳೆ ಸಾಧ್ಯತೆ; ಏಪ್ರಿಲ್ 17, 18ಕ್ಕೆ ಹೆಚ್ಚಿನ ಮಳೆಯ ನಿರೀಕ್ಷೆ
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ 19.2 ಸೆಂ.ಮೀ. ಮಳೆಯಾಗಬೇಕು. ಆದರೆ, ಈ ಬಾರಿ 33.8 ಸೆಂ.ಮೀ. ಮಳೆಯಾಗಿದ್ದು, ವಾಡಿಕೆಗಿಂತ ಶೇ.76ರಷ್ಟು ಹೆಚ್ಚು ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉಷ್ಣ ಅಲೆ, ಸೆಕೆ ಕಡಿಮೆ: ಬೇಸಿಗೆ ಅವಧಿಯಾಗಿರುವುದರಿಂದ ಭಾರೀ ಬಿಸಿಲಿಂದ ಸೆಕೆ ಹಾಗೂ ಉಷ್ಣ ಅಲೆ ಭೀತಿ ಉಂಟಾಗುತ್ತಿತ್ತು. ಈ ಬಾರಿ ಪೂರ್ವ ಮುಂಗಾರು ಅವಧಿಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಸೆಕೆ ಮತ್ತು ಉಷ್ಣ ಅಲೆ ಭೀತಿ ಕಡಿಮೆಯಾಗಿದೆ. ಮಳೆ ವಾತಾವರಣ ಇರುವುದರಿಂದ ಗರಿಷ್ಠ ಉಷ್ಣಾಂಶವೂ ಕಡಿಮೆಯಾಗಿದೆ.
ಪೂರ್ವ ಮುಂಗಾರು ಮಳೆಯೂ ರಾಜ್ಯದಲ್ಲಿ ಇನ್ನೂ ಒಂದು ವಾರ ಕಾಲ ಮುಂದುವರೆಯುವ ಸಾಧ್ಯತೆ ಇದೆ. ಏ.20ರಿಂದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸ್ವಲ್ಪಮಟ್ಟಿಗೆ ಹೆಚ್ಚಾಗುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ