
ಬೆಂಗಳೂರು (ಆ.29): ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಮುಂದಿನ 24 ಗಂಟೆಯಲ್ಲಿ ಕರಾವಳಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜಧಾನಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಬುಧವಾರದಿಂದ ಮಳೆ ಚುರುಕುಗೊಂಡಿದ್ದು, ಗುರುವಾರವೂ ವಿವಿಧೆಡೆ ಮುಂದುವರೆದಿದೆ. ಆ.29 ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಮುಂದುವರೆದು ಆ.30 ಮತ್ತು 31ಕ್ಕೆ ಆರೆಂಜ್ ಅಲರ್ಟ್, ಸೆ.1ರಿಂದ ಸೆ.4 ವರೆಗೆ ಯೆಲ್ಲೋ ಅಲರ್ಟ್ನ ಎಚ್ಚರಿಕೆ ನೀಡಿದೆ.
ಉಳಿದಂತೆ ಆ.29ಕ್ಕೆ ಬೆಳಗಾವಿ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಮತ್ತು ಹಾಸನ, ವಿಜಯಪುರ, ಯಾದಗಿರಿ ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ನ ಎಚ್ಚರಿಕೆ ನೀಡಲಾಗಿದೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಆ.31ರ ವರೆಗೆ ಸಾಧಾರಾಣ ಮಳೆ ಮುಂದುವರೆಯಲಿದೆ. ಆ ಬಳಿಕ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ವರದಿ ಪ್ರಕಾರ ಕಳೆದ 24 ಗಂಟೆಯಲ್ಲಿ ಕ್ಯಾಸಲ್ರಾಕ್ ನಲ್ಲಿ ಅತಿ ಹೆಚ್ಚು 20 ಸೆಂ.ಮೀ. ಮಳೆಯಾಗಿದೆ.
ಗೇರುಸೊಪ್ಪ 17, ಹೊನ್ನಾವರ 14, ಅಂಕೋಲಾ 13, ಮಂಗಳೂರು ವಿಮಾನ ನಿಲ್ದಾಣ, ಕದ್ರಾ ಹಾಗೂ ಕಾರವಾರದಲ್ಲಿ ತಲಾ 12, ಜೇವರ್ಗಿ, ಔರಾದ್ದಲ್ಲಿ ತಲಾ 11, ಜೋಯಿಡಾ 11, ಯಡ್ರಾಮಿ, ಸುಳ್ಯ, ಸಿದ್ದಾಪುರ, ಶಕ್ತಿನಗರ ಮಂಕಿ, ಮಣಿ, ಕುಮಟಾ, ಕಾರ್ಕಳ, ಬೀದರ್, ಬಂಟ್ವಾಳದಲ್ಲಿ ತಲಾ 9, ಉಡುಪಿ, ಕುಂದಾಪುರದಲ್ಲಿ ತಲಾ 8, ಉಪ್ಪಿನಂಗಡಿ, ನಾರಾಯಣಪುರ, ಗದಗ ಹಾಗೂ ಧರ್ಮಸ್ಥಳದಲ್ಲಿ ತಲಾ 7 ಸೆಂ.ಮೀ. ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ