NCERT ಕನ್ನಡವನ್ನು 3ನೇ ಭಾಷೆಯಾಗಿಸುವ ಆದೇಶಕ್ಕೆ ಕರವೇ ಕೆಂಡಾಮಂಡಲ!

Kannadaprabha News   | Kannada Prabha
Published : Jul 03, 2026, 10:56 AM IST
Karnataka rakshana vedike furious over NCERT order making Kannada a third language rav

ಸಾರಾಂಶ

ರಾಜ್ಯದಲ್ಲಿ ಕನ್ನಡವನ್ನು ಮೂರನೇ ಭಾಷೆಯಾಗಿ ಜಾರಿಗೊಳಿಸಲು ಎನ್‌ಸಿಇಆರ್‌ಟಿ ಹೊರಡಿಸಿರುವ ಆದೇಶಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಇದು ರಾಜ್ಯದ ಭಾಷಾ ಕಾನೂನಿನ ಉಲ್ಲಂಘನೆ ಮತ್ತು ಒಕ್ಕೂಟ ವ್ಯವಸ್ಥೆಯ ಮೇಲಿನ ದಾಳಿ. ಆದೇಶ ಹಿಂಪಡೆಯದಿದ್ದರೆ ರಕ್ತಕ್ರಾಂತಿ ಎಂದು ಎಚ್ಚರಿಸಿದೆ.

ಬೆಂಗಳೂರು (ಜು.3): ರಾಜ್ಯದಲ್ಲಿ ಕನ್ನಡವನ್ನು ಮೂರನೇ ಭಾಷೆಯಾಗಿ ಜಾರಿಗೊಳಿಸಬೇಕೆಂದು ಎನ್‌ಸಿಇಆರ್‌ಟಿ ಹೊರಡಿಸಿರುವ ಆದೇಶ ಕೂಡಲೇ ಹಿಂಪಡೆಯುವಂತೆ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಆಗ್ರಹಿಸಿದೆ.

ಗುರುವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ(TA Narayanagowda), ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಪರಿಷತ್ತು (NCERT) ಹೊರಡಿಸಿರುವ ಸೂಚನೆ ರಾಜ್ಯದ ಭಾಷಾ ಕಾನೂನು, ಸಂವಿಧಾನದ ಒಕ್ಕೂಟ ವ್ಯವಸ್ಥೆ ಹಾಗೂ ಕರ್ನಾಟಕದ ಸ್ವಾಭಿಮಾನದ ಮೇಲಿನ ನೇರ ದಾಳಿ. ಈ ಆದೇಶ ಹೊರಡಿಸಿದ ಅಧಿಕಾರಿಗಳ ವಿರುದ್ಧ ದೇಶದ್ರೋಹದ ಕಾಯ್ದೆಯಡಿ ಮೊಕದ್ದಮೆ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ.

ಕಾನೂನು ಉಲ್ಲಂಘಿಸುವ ದುಸ್ಸಾಹಸ:

ಕರ್ನಾಟಕ ಕನ್ನಡ ಭಾಷಾ ಕಲಿಕಾ ಅಧಿನಿಯಮ, 2015 ಹಾಗೂ ಅದರಡಿ ರೂಪಿಸಲಾದ ನಿಯಮಗಳ ಪ್ರಕಾರ ರಾಜ್ಯದ ಪ್ರತಿಯೊಂದು ಶಾಲೆಯಲ್ಲೂ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಬೋಧಿಸುವುದು ಕಡ್ಡಾಯ. ಈ ಕಾನೂನು ಸಿಬಿಎಸ್‌ಇ, ಐಸಿಎಸ್‌ಇ ಸೇರಿ ಎಲ್ಲ ಶಾಲೆಗಳಿಗೂ ಅನ್ವಯಿಸುತ್ತದೆ. ಹೀಗಿರುವಾಗ ಕನ್ನಡವನ್ನು ಮೂರನೇ ಭಾಷೆಯಾಗಿ ಪರಿಗಣಿಸುವ ಎನ್‌ಸಿಇಆರ್‌ಟಿ ನಿರ್ಧಾರವು ರಾಜ್ಯದ ಕಾನೂನನ್ನು ಉಲ್ಲಂಘಿಸುವ ದುಸ್ಸಾಹಸವಾಗಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಭಾಷಾ ನೀತಿ ಕಾನೂನು ಸ್ಪಷ್ಟವಾಗಿದ್ದರೂ ಅದನ್ನು ನಿರ್ಲಕ್ಷಿಸಿ ಏಕಪಕ್ಷೀಯವಾಗಿ ಆದೇಶ ಹೊರಡಿಸಿರುವುದು ಒಕ್ಕೂಟ ವ್ಯವಸ್ಥೆಯ ಮೇಲಿನ ದಾಳಿ. ಇದು ನೇರವಾಗಿ ದೇಶ ಒಡೆಯುವ ಸಂಚು ಎಂದೇ ನಾವು ಭಾವಿಸಬೇಕಾಗುತ್ತದೆ. ಕರ್ನಾಟಕದ ಭಾಷಾ ಕಾನೂನು ದುರ್ಬಲಗೊಳಿಸುವ ಯಾವುದೇ ಪ್ರಯತ್ನ ಸಹಿಸುವುದಿಲ್ಲ. ಕನ್ನಡವನ್ನು ಮೂರನೇ ಭಾಷೆಗೆ ಇಳಿಸುವ ಯಾವುದೇ ಆದೇಶವನ್ನು ತಕ್ಷಣ ಹಿಂಪಡೆಯಬೇಕು. ಕರ್ನಾಟಕದ ಕಾನೂನು ಹಾಗೂ ರಾಜ್ಯದ ಭಾಷಾ ಹಕ್ಕುಗಳಿಗೆ ಗೌರವ ನೀಡಬೇಕು. ಒಂದು ವೇಳೆ ಎನ್‌ಸಿಇಆರ್‌ಟಿ ಬಲವಂತವಾಗಿ ಈ ಆದೇಶ ಜಾರಿಗೊಳಿಸಲು ಯತ್ನಿಸಿದರೆ ರಾಜ್ಯದಲ್ಲಿ ರಕ್ತಕ್ರಾಂತಿಯೇ ನಡೆಯುತ್ತದೆ. ಅದನ್ನು ತಡೆಯಲು ಸಾಧ್ಯವಿಲ್ಲ ಎಂದು ಎಚ್ಚರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಂತ್ರಾಲಯದಲ್ಲಿ 100 ಎಕರೆಯಲ್ಲಿ ಜಲಾಶಯ, ಯೋಜನೆಗೆ ಕೈಜೋಡಿಸಿದ HAL
ಸಂಪುಟ ವಿಸ್ತರಣೆ: 5ಕ್ಕೆ ಸಿಎಂ ಡಿಕೆ ಶಿವಕುಮಾರ್‌, ಸಿದ್ದರಾಮಯ್ಯ ದೆಹಲಿಗೆ