
ಬೆಂಗಳೂರು (ಜು.09): ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮಗಳ ಸಿಬ್ಬಂದಿ ಮತ್ತು ನೌಕರರಿಗೆ ಜೂನ್ ತಿಂಗಳ ವೇತನ ಪಾವತಿಸಲು 162.5 ಕೋಟಿ ರು.ಗಳನ್ನು ಸರ್ಕಾರ ಬಿಡುಗಡೆ ಮಾಡಿದೆ.
ಕೊರೋನಾ ಲಾಕ್ಡೌನ್ ಜಾರಿಯಿಂದ ಶೇ.50 ರಷ್ಟು ಪ್ರಯಾಣಿಕರೊಂದಿಗೆ ಸಂಚಾರ ನಡೆಸುತ್ತಿವೆ. ಇದರಿಂದ ಜೂನ್ ತಿಂಗಳಲ್ಲಿ ಬರುವ ಆದಾಯ ಡೀಸೆಲ್ ಖರೀದಿಗೆ ಸಾಕಾಗುತ್ತಿಲ್ಲ.. ಈಗಾಗಿ ನಾಲ್ಕು ನಿಗಮಗಳ ಸಿಬ್ಬಂದಿಗೆ ವೇತನ ಪಾವತಿಸಲು 325 ಕೋಟಿ ರು.ಗಳನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿತ್ತು. ಆದರೆ, ಶೇ.50 ರಷ್ಟುವೇತನ ಪಾವತಿಸಲು ಸರ್ಕಾರದಿಂದ ಹಣ ಬಿಡುಗಡೆ ಮಾಡಿದ್ದು, ಇನ್ನುಳಿದ ಶೇ.50 ರಷ್ಟುವೇತನವನ್ನು ನಿಗಮಗಳಿಂದಲೇ ಪಾವತಿಸಬೇಕಾಗಿದೆ.
ಕೆಎಸ್ಆರ್ಟಿಸಿಗೆ 4 ಸಾವಿರ ಕೋಟಿ ರು. ನಷ್ಟ ...
ಕೆಎಸ್ಆರ್ಟಿಸಿಗೆ 50.88 ಕೋಟಿ, ಬಿಎಂಟಿಸಿಗೆ 49.31, ಎನ್ಡಬ್ಲ್ಯೂಕೆಎಸ್ಆರ್ಟಿಸಿ 33.21 ಕೋಟಿ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆಗೆ 29.10 ಕೋಟಿ ರು.ಗಳ ಸೇರಿ ಒಟ್ಟು 162.50 ಬಿಡುಗಡೆ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ