ಸೋಮವಾರ ತ್ರಿಶತಕ ಬಾರಿಸಿದ ಕೊರೋನಾ, ಆದ್ರೂ ಗುಣಮುಖರ ಸಂಖ್ಯೆಯೇ ಹೆಚ್ಚು

Published : Jun 08, 2020, 06:33 PM ISTUpdated : Jun 08, 2020, 06:43 PM IST
ಸೋಮವಾರ ತ್ರಿಶತಕ ಬಾರಿಸಿದ ಕೊರೋನಾ, ಆದ್ರೂ ಗುಣಮುಖರ ಸಂಖ್ಯೆಯೇ ಹೆಚ್ಚು

ಸಾರಾಂಶ

ಕರ್ನಾಟಕದಲ್ಲಿ ಕೊರೋನಾ ಅಬ್ಬರ ಶುರುವಾಗಿನಿಂದಲೂ ಸೋಂಕಿತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಆದ್ರೆ, ರಾಜ್ಯದಲ್ಲಿಂದ ಸೋಂಕಿತರಿಗಿಂತೂ ಗುಣಮುಖರ ಸಂಖ್ಯೆಯೇ ಹೆಚ್ಚಾಗಿರುವುದು ಸಮಾಧಾನಕರ ಸಂಗತಿಯಾಗಿದೆ.

ಬೆಂಗಳೂರು, (ಜೂನ್.08): ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 308 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 5760 ಕ್ಕೆ ಏರಿಕೆಯಾಗಿದೆ.

ಆದ್ರೆ ಒಂದೇ ದಿನ ಸೋಂಕಿತರ ಸಂಖ್ಯೆಯನ್ನು ಗುಣಮುಖರಾದವರ ಸಂಖ್ಯೆ ಮೀರಿಸಿದೆ. ಇಂದು ಸ(ಸೋಮವಾರ) ಆರೋಗ್ಯ ಇಲಾಖೆ ರಿಲೀಸ್ ಮಾಡಿದ ಬುಲೆಟಿನಲ್ಲಿ ಸೋಂಕಿತರಿಗಿಂತ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆಯೇ ಹೆಚ್ಚಿದೆ.

ಪೆಟ್ರೋಲ್, ಡೀಸೆಲ್ ದುಬಾರಿ, ರಿವರ್ಸ್ ಕ್ವಾರಂಟೈನ್‌ಗೆ ತಯಾರಿ; ಜೂ.8ರ ಟಾಪ್ 10 ಸುದ್ದಿ!

ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 308 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅದೇ 24 ಗಂಟೆಗಳಲ್ಲಿ 387 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೊರೋನಾ ಸೋಂಕಿತರ ಸಂಖ್ಯೆ ಏರುತ್ತಿರುವುದರ ಮಧ್ಯೆ ಗುಣಮುಖರಾಗಿ ಆಸ್ಪತ್ರೆಯಿಮದ ಡಿಸ್ಚಾರ್ಜ್ ಆದವರ ಸಂಖ್ಯೆಯಲ್ಲೂ ಹೆಚ್ಚಾಗಿರುವುದು ಕೊಂಚ ಮಟ್ಟಿಗೆ ಸಮಧಾನದ ಸಂಗತಿಯಾಗಿದೆ.

ಸೋಮವಾರ 308 ಕೇಸ್

ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 308 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 5760 ಕ್ಕೆ ಏರಿಕೆಯಾಗಿದೆ.

ಕಲಬುರಗಿ ಜಿಲ್ಲೆಯಲ್ಲಿ ಅತೀ ಹೆಚ್ಚು ಅಂದರೆ 99 ಜನರಿಗೆ ಸೋಂಕು ಕಾಣಿಸಿಕೊಂಡರೆ, ಯಾದಗಿರಿ ಜಿಲ್ಲೆಯಲ್ಲಿ 66 ಜನರಿಗೆ ಕೋವಿಡ್ ಸೋಂಕು ದೃಢವಾಗಿದೆ.

ಇನ್ನು ಇವತ್ತು  (ಸೋಮವಾರ) ಒಂದೇ ದಿನ ಮೂವರು ಮೃತಪಟ್ಟಿದ್ದು ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 64 ಕ್ಕೆ ಏರಿಕೆಯಾಗಿದೆ. 14 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಸೋಮವಾರ ಪತ್ತೆಯಾದ ಪ್ರಕರಣಗಳಲ್ಲಿ 277 ಮಂದಿ ಅಂತರರಾಜ್ಯ ಪ್ರಯಾಣಿಕರಾಗಿದ್ದು, ಒಬ್ಬರು ಅಂತರರಾಷ್ಟ್ರೀಯ ಪ್ರಯಾಣಿಕರಾಗಿರುತ್ತಾರೆ.

387 ಮಂದಿ ಇವತ್ತು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ 2519 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ 45 ಜನರಿಗೆ ಸೋಂಕು ಕಾಣಿಸಿಕೊಂಡಿದ್ದು, ಬೀದರ್ ಜಿಲ್ಲೆಯಲ್ಲಿ 48 ಜನರಿಗೆ ಸೋಂಕು ತಾಗಿದೆ. ಬೆಂಗಳೂರು ನಗರದಲ್ಲಿ 18 ಮಂದಿಗೆ, ಬಳ್ಳಾರಿಯಲ್ಲಿ ಎಂಟು ಜನರಿಗೆ, ಗದಗದಲ್ಲಿ ಆರು, ಶಿವಮೊಗ್ಗ ಮತ್ತು ಧಾರವಾಡದಲ್ಲಿ ತಲಾ ನಾಲ್ವರಿಗೆ ಸೋಂಕು ತಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Video: ಚಲಿಸುವ BMTC ಬಸ್ಸಲ್ಲಿ ಸ್ಟೇರಿಂಗ್ ಹಿಡಿದು ಡ್ರೈವರ್‌ಗಳ ಕಿತ್ತಾಟ; ಪ್ರಯಾಣಿಕರಿಗೆ ಪ್ರಾಣ ಸಂಕಟ!
ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!