
ಬೆಂಗಳೂರು(ಜೂ.07): ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಏರುಗತಿ ಮುಂದುವರಿದಿದೆ. ಮಂಗಳವಾರ 348 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ.2.11ಕ್ಕೆ ಜಿಗಿದಿದೆ. ತನ್ಮೂಲಕ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಮೂರು ತಿಂಗಳ ನಂತರ ಮುನ್ನೂರರ ಗಡಿ ದಾಟಿದಂತಾಗಿದೆ.
ಮೂರನೇ ಅಲೆ ನಿಸ್ತೇಜಗೊಳ್ಳುತ್ತ ಬಂದ ಅವಧಿಯಾದ ಮಾಚ್ರ್ 3ರಂದು 382 ಮಂದಿಯಲ್ಲಿ ಸೋಂಕು ಪತ್ತೆಯಾದ ಮೂರು ತಿಂಗಳ ಬಳಿಕ ಒಂದೇ ದಿನದ ಸೋಂಕು ಗರಿಷ್ಠ 350ರ ಸಂಖ್ಯೆ ಸಮೀಪಿಸಿದೆ. ಮಂಗಳವಾರ 311 ಮಂದಿ ಚೇತರಿಸಿಕೊಂಡಿದ್ದಾರೆ. ಕೋವಿಡ್ ಸಾವು ವರದಿಯಾಗಿಲ್ಲ. 16,474 ಮಂದಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದಾರೆ. ಏಪ್ರಿಲ್, ಮೇನಲ್ಲಿ ಶೇ.0.23ರ ತನಕ ಕುಸಿದಿದ್ದ ಪಾಸಿಟಿವಿಟಿ ದರ ಈಗ ಶೇ. 2ರ ಗಡಿ ದಾಟಿದೆ.
ಬೆಂಗಳೂರು ನಗರದಲ್ಲಿ 339 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಉಳಿದಂತೆ ಉಡುಪಿ 3, ಉತ್ತರಕನ್ನಡ, ಉಡುಪಿ, ಮೈಸೂರು, ರಾಯಚೂರು, ಕೋಲಾರ ಮತ್ತು ಹಾಸನ ಜಿಲ್ಲೆಯಲ್ಲಿ ತಲಾ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ.
ರಾಜ್ಯದಲ್ಲಿ ಈವರೆಗೆ 39.53 ಲಕ್ಷ ಮಂದಿಯಲ್ಲಿ ಕೋವಿಡ್ ಪತ್ತೆಯಾಗಿದ್ದು, 39.11 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,478ಕ್ಕೆ ಏರಿದೆ. 40,066 ಮಂದಿ ಮರಣವನ್ನಪ್ಪಿದ್ದಾರೆ.
ಲಸಿಕೆ ಅಭಿಯಾನ:
ರಾಜ್ಯದಲ್ಲಿ ಮಂಗಳವಾರ 45,809 ಮಂದಿ ಕೋವಿಡ್-19 ಲಸಿಕೆ ಪಡೆದಿದ್ದಾರೆ. 9,118 ಮಂದಿ ಮೊದಲ ಡೋಸ್, 23,975 ಮಂದಿ ಎರಡನೇ ಡೋಸ್ ಮತ್ತು 15,350 ಮಂದಿ ಮುನ್ನೆಚ್ಚರಿಕೆ ಡೋಸ್ ಸ್ವೀಕರಿಸಿದ್ದಾರೆ. ಈವರೆಗೆ 10.94 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ