
ಬೆಂಗಳೂರು, (ಮೇ.18): ಕರ್ನಾಟಕದಲ್ಲಿ ಕೊರೋನಾ 2ನೇ ಅಲೆಯ ಆರ್ಭಟದ ನಡುವೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಒಂದು ಖುಷಿಯ ಸಂಗತಿಯೊಂದು ನೀಡಿದ್ದಾರೆ.
ರಾಜ್ಯದಲ್ಲಿ ಇಂದು (ಮಂಗಳವಾರ) 58,395 ಜನ ಗುಣಮುಖರಾಗಿದ್ದು ಈವರೆಗೂ ಒಂದೇ ದಿನದಲ್ಲಿ ಚೇತರಿಕೆಗೊಂಡ ಅತೀ ಹೆಚ್ಚು ಸಂಖ್ಯೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರ, ದೆಹಲಿಯಲ್ಲಿ ಸೋಂಕು ಇಳಿಕೆ!
ಈ ಬಗ್ಗೆ ಟ್ವೀಟ್ ಮಾಡಿರುವ ಡಾ.ಸುಧಾಕರ್, ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 30,309 ಪ್ರಕರಣಗಳು ಪತ್ತೆಯಾಗಿದ್ದು, ಗುಣಮುಖ ಹೊಂದಿದವರ ಸಂಖ್ಯೆ ಹೊಸ ಪ್ರಕರಣಗಳ ಸಂಖ್ಯೆಯನ್ನು ಮೀರಿಸಿದೆ.
ಬೆಂಗಳೂರಿನಲ್ಲಿ 8,676 ಪ್ರಕರಣಗಳು ಪತ್ತೆಯಾಗಿದ್ದು, 31,795 ಜನ ಗುಣಮುಖ ಹೊಂದಿದ್ದಾರೆ ಎಂದು ತಿಳಿಸಿದ್ದಾರೆ. ಇದು ಹೊಸ ಆಶಾಭಾವನೆಗೆ ಮೂಡಿಸಿದೆ.
ಇಂದಿನ ಈ ಅಂಕಿ-ಸಂಖ್ಯೆ ನೋಡಿದ್ರೆ ಕೊಂಚ ನೆಮ್ಮದಿ ತಂದಿದೆ. ಹಾಗಂತ ಮತ್ತೆ ಮೈಮರೆಯಬಾರದು. ಸರ್ಕಾರ ಹೊರಡಿಸಿರುವ ಕೊರೋನಾ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಈ ಮೂಲಕ ಕೊರೋನಾ ಮಹಾಮಾರಿಯನ್ನು ಕಟ್ಟಿಹಾಕಬೇಕು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ