
ಬೆಂಗಳೂರು(ಸೆ.28): ರಾಜ್ಯದಲ್ಲಿ ಕಳೆದ 19 ತಿಂಗಳಿಂದ ಶಾಲಾ ಕಲಿಕೆಯಿಂದ ವಂಚಿತ ರಾಗಿರುವ 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಅಕ್ಟೋಬರ್ 21ರ ನಂತರ ಭೌತಿಕ ತರಗತಿಗಳನ್ನು ಆರಂಭಿಸಲು ಸರ್ಕಾರ(Karnataka Govt) ಚಿಂತನೆ ನಡೆಸಿದೆ.
ಹೇಗಿದ್ದರೂ ಸೆಪ್ಟಂಬರ್ ತಿಂಗಳು ಮುಗಿಯುತ್ತಾ ಬರುತ್ತಿದೆ. ಅಕ್ಟೋಬರ್ 10 ರಿಂದ ಮಧ್ಯಂತರ ಅಥವಾ ದಸರಾ ರಜೆ ಆರಂಭವಾಗಲಿದ್ದು ಅಕ್ಟೋಬರ್ 20ಕ್ಕೆ ಮುಗಿಯಲಿದೆ.
ಆನಂತರ ಕೂಡ ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ(Covid 19 Third Wave) ಆರಂಭದ ಯಾವುದೇ ಲಕ್ಷಣಗಳು ಕಂಡುಬರದಿದ್ದರೆ ರಜೆ ಮುಗಿದ ಕೂಡಲೇ 1ರಿಂದ 5ನೇ ತರಗತಿ ಆರಂಭಿ ಸುವುದು ಸರ್ಕಾರದ ಆಲೋಚನೆಯಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಈ ಮೂಲಗಳ ಪ್ರಕಾರ ಶಾಲೆ ಆರಂಭಕ್ಕೂ ಮುನ್ನ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿ ಗಳು ಶಿಕ್ಷಣ ತಜ್ಞರು, ಖಾಸಗಿ ಶಾಲಾ ಸಂಘಟನೆಗಳು, ಶಿಕ್ಷಕರು, ಪೋಷಕ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಅಭಿಪ್ರಾಯ ಪಡೆಯಲಿದ್ದಾರೆ. ಈಗಾಗಲೇ ಆ ಕಾರ್ಯವನ್ನು ಶಿಕ್ಷಣ ಇಲಾಖೆ ನೂತನ ಆಯುಕ್ತ ವಿಶಾಲ್ ಆರಂಭಿಸಿದ್ದಾರೆ.
ರುಪ್ಸಾ ಜತೆ ಆಯುಕ್ತರ ಸಭೆ:
ಈ ಮಧ್ಯೆ, 1ರಿಂದ 5ನೇ ತರಗತಿಗಳನ್ನು ಆರಂಭಿಸುವ ವಿಚಾರವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ನೂತನ ಆಯುಕ್ತ ವಿಶಾಲ್ ಖಾಸಗಿ ಶಾಲಾ ಸಂಘಟನೆಗಳು, ಶಿಕ್ಷಣ ತಜ್ಞರು ಹಾಗೂ ಪೋಷಕ ಸಂಘಟನೆಗಳ ಅಭಿಪ್ರಾಯ, ಸಲಹೆ ಪಡೆಯು ಪ್ರಕ್ರಿಯೆ ಆರಂಭಿಸಿದ್ದಾರೆ. ಈ ನಿಟ್ಟಿನಲ್ಲಿ ಸೋಮವಾರ ಸೋಮವಾರ ನೋಂದಾಯಿತ ಅನುದಾನರಹಿತ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ (ರುಪ್ಸಾ) ಪದಾಧಿಕಾರಿಗಳ ಸಭೆ ನಡೆಸಿದರು.
ಕೋವಿಡ್ ತಹಬದಿಯಲ್ಲಿರುವುದರಿಂದ ಬೇರೆ ಬೇರೆ ರಾಜ್ಯಗಳಲ್ಲಿ ಆರಂಭಿಸಿರುವಂತೆ ನಮ್ಮ ರಾಜ್ಯದಲ್ಲೂ ಆದಷ್ಟು ಬೇಗ 1ರಿಂದ 5ನೇ ತರಗತಿಗಳನ್ನು ಆರಂಭಿಸಬೇಕೆಂದು ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಮತ್ತಿತರ ಪದಾಧಿಕಾರಿಗಳು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಆಯುಕ್ತರು, ಅ.20ಕ್ಕೆ ಮಧ್ಯಂತರ ರಜೆ ಮುಗಿಯ ಲಿದ್ದು ಆ ಬಳಿಕ 1ರಿಂದ 5ನೇ ತರಗತಿ ಆರಂಭಿಸಲು ಕ್ರಮ ವಹಿಸಲಾಗುತ್ತದೆ. ಈ ಸಂಬಂಧ ಸರ್ಕಾರದೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದರು ಎಂದು ಸಭೆ ಬಳಿಕ ಸುದ್ದಿಗಾರರಿಗೆ ತಾಳಿಕಟ್ಟೆ ತಿಳಿಸಿದರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ