ಕೇಂದ್ರದ ಸೂಚನೆ ನಂತ್ರ ಶಾಲೆ ಆರಂಭದ ಬಗ್ಗೆ ನಿರ್ಧಾರ: ಸಚಿವ ಸುರೇಶ್

Kannadaprabha News   | Asianet News
Published : May 23, 2020, 08:07 AM ISTUpdated : May 23, 2020, 08:45 AM IST
ಕೇಂದ್ರದ ಸೂಚನೆ ನಂತ್ರ ಶಾಲೆ ಆರಂಭದ ಬಗ್ಗೆ ನಿರ್ಧಾರ: ಸಚಿವ ಸುರೇಶ್

ಸಾರಾಂಶ

ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ತರಗತಿಗಳ ಪ್ರಾರಂಭದ ದಿನಾಂಕವನ್ನು ಮುಂದಿನ ವಾರದಲ್ಲಿ ನಿರ್ಧರಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರು(ಮೇ 23): ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ತರಗತಿಗಳ ಪ್ರಾರಂಭದ ದಿನಾಂಕವನ್ನು ಮುಂದಿನ ವಾರದಲ್ಲಿ ನಿರ್ಧರಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರು ಆಕಾಶವಾಣಿ ಸಂದರ್ಶನದಲ್ಲಿ ಶುಕ್ರವಾರ ಮಾತನಾಡಿದ ಅವರು, ಲಾಕ್‌ಡೌನ್‌ ಜಾರಿಯಲ್ಲಿರುವಾಗಲೇ ತರಗತಿಗಳನ್ನು ಆರಂಭಿಸಬಾರದು ಎಂದು ಪೋಷಕರ ಒತ್ತಡವಿದೆ. ಹೀಗಾಗಿ ಎಲ್ಲಾ ಆಯಾಮಗಳಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಕೇಂದ್ರದ ಮಾರ್ಗಸೂಚಿ ಪ್ರಕಟವಾದ ಬಳಿಕ ರಾಜ್ಯದಲ್ಲಿ ಶಾಲೆ ಪುನಾರಂಭಿಸುವ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದರು.

ಕಂಟೈನ್ಮೆಂಟ್‌ ವಲಯಗಳಲ್ಲಿ ಪರೀಕ್ಷೆ ಇಲ್ಲ:

ಜೂ.25ರಿಂದ ಆರಂಭವಾಗುತ್ತಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಕಂಟೈನ್ಮೆಂಟ್‌ ವಲಯಗಳಲ್ಲಿ ನಡೆಸುವುದಿಲ್ಲ. ಪರೀಕ್ಷೆ ನಡೆಯುವ ದಿನದ ಆಸುಪಾಸಿನಲ್ಲಿ ಕಂಟೈನ್ಮೆಂಟ್‌ ವಲಯವೆಂದು ಘೋಷಣೆಯಾದರೆ ಆಗ ಆ ಭಾಗದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

ಅಂಫಾನ್‌ಗೆ ನಲುಗಿದ ಬಂಗಾಳ, ಒಡಿಶಾಕ್ಕೆ ಮೋದಿ 1500 ಕೋಟಿ ಪ್ಯಾಕೇಜ್‌

ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ (ಎಂಎಚ್‌ಆರ್‌ಡಿ) ಮಾರ್ಗಸೂಚಿ ಆಧಾರದಲ್ಲಿ ಶಾಲೆಗಳನ್ನು ಪುನಾರಂಭಿಸಬೇಕಾಗುತ್ತದೆ. ಹೀಗಾಗಿ ಸಾಮಾನ್ಯವಾಗಿ ಪೂರಕ ಪರೀಕ್ಷೆಗಳ ವಿದ್ಯಾರ್ಥಿಗಳನ್ನು ಪುನರಾವರ್ತಿತ ವಿದ್ಯಾರ್ಥಿಗಳೆಂದು ಪರಿಗಣಿಸಲಾಗುತ್ತದೆ. ಆದರೆ, ಕಂಟೈನ್ಮೆಂಟ್‌ ವಲಯದ ವಿದ್ಯಾರ್ಥಿಗಳನ್ನು ಹೊಸ ವಿದ್ಯಾರ್ಥಿಗಳೆಂದೇ ಪರಿಗಣಿಸಿ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು ಎಂದರು.

ಕೆಪಿಸಿಸಿ ಅಧ್ಯಕ್ಷರಾಗಿ ಜೂ.7ರಂದು ಡಿಕೆಶಿ ಅಧಿಕಾರ ಸ್ವೀಕಾರ..?

ರಾಜ್ಯದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದೆಯೇ ಹೊರತು ಅದು ಯಾರೊಬ್ಬರ ಪ್ರತಿಷ್ಠೆಯಾಗಿಲ್ಲ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮುಂದಿನ ವ್ಯಾಸಂಗಕ್ಕೆ ಪ್ರಮುಖ ತಿರುವಾಗಿದೆ ಮತ್ತು ಪ್ರಮುಖ ಮಾನದಂಡವಾಗಿರುವುದರಿಂದ ಪರೀಕ್ಷೆ ನಡೆಸಬೇಕಾಗಿದೆ. ರಾಜ್ಯದ ಬಹುಪಾಲು ವಿದ್ಯಾರ್ಥಿಗಳ ಅಭಿಪ್ರಾಯ ಕೂಡ ಪರೀಕ್ಷೆ ನಡೆಸಬೇಕು ಎಂದಿದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!