ದ್ವಿತೀಯ ಪಿಯುಸಿ ರಿಸಲ್ಟ್ ಇಂದು ಪ್ರಕಟಣೆ ಆಗಲ್ಲ, ಉಪಚುನಾವಣೆ ಕಾರಣವೇ? ಫಲಿತಾಂಶದ ಹೊಸ ದಿನಾಂಕ ಯಾವಾಗ? ಇಲ್ಲಿದೆ ಮಾಹಿತಿ

Kannadaprabha News   | Kannada Prabha
Published : Apr 07, 2026, 05:11 AM IST
karnataka Second PUC 1 result announcement postponed

ಸಾರಾಂಶ

PUC result postponed ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಣೆಯನ್ನು ಮುಂದೂಡಲಾಗಿದೆ. ಉಪಚುನಾವಣೆ ನೀತಿ ಸಂಹಿತೆಯ ಕಾರಣ ನೀಡಿ ಚುನಾವಣಾ ಆಯೋಗದ ಅನುಮತಿಗಾಗಿ ಕಾಯುತ್ತಿರುವುದಾಗಿ ಮಂಡಳಿ ತಿಳಿಸಿದ್ದು, ಫಲಿತಾಂಶದ ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು.

ಬೆಂಗಳೂರು (ಏ.7): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಂಗಳವಾರ(ಏ.7) ಪ್ರಕಟಿಸಬೇಕಿದ್ದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶವನ್ನು ಮುಂದೂಡಿದೆ. ಫಲಿತಾಂಶ ಪ್ರಕಟಣೆ ಯಾವಾಗ ಎಂಬುದನ್ನು ಶೀಘ್ರ ಪ್ರಕಟಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಉಪಚುನಾವಣೆ ಕಾರಣವೇ?

ಇದೇ ಮೊದಲ ಬಾರಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಆರಂಭಕ್ಕೂ ಮೊದಲೇ ಫಲಿತಾಂಶ ಪ್ರಕಟಣೆಗೆ ಸಂಭಾವ್ಯ ದಿನಾಂಕವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರೇ ಪ್ರಕಟಿಸಿದ್ದರು. ಆದರೆ, ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ಫಲಿತಾಂಶ ಪ್ರಕಟಣೆ ಸಾಧ್ಯವಾಗುತ್ತಿಲ್ಲ ಎಂದು ತಿಳಿದು ಬಂದಿದೆ.

ಯಾವಾಗ ಫಲಿತಾಂಶ?

ಮಂಡಳಿ ಅಧಿಕಾರಿಗಳು ಹೇಳುತ್ತಿರುವ ಪ್ರಕಾರ, ಉಪಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಫಲಿತಾಂಶ ಪ್ರಕಟಣೆಗೆ ಅನುಮತಿ ಕೋರಿ ಚುನಾವಣಾ ಯೋಗಕ್ಕೆ ಪತ್ರ ಬರೆಯಲಾಗಿದೆ. ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ. ಹಾಗಾಗಿ ಏ.7ರಂದು ಫಲಿತಾಂಶ ಪ್ರಕಟಣೆ ಆಗುವುದಿಲ್ಲ. ಆದರೆ, ಮಂಗಳವಾರ ಆಯೋಗದಿಂದ ಪ್ರತಿಕ್ರಿಯೆ ಬಂದರೆ ಏ.8 ಬುಧವಾರ ಪ್ರಕಟಿಸಲಾಗುವುದೇ ಅಥವಾ ಇನ್ನೂ ವಿಳಂಬ ಆಗಲಿದೆಯೇ ಎನ್ನುವ ಬಗ್ಗೆ ಮಂಗಳವಾರ ಸಂಜೆ ಅಧಿಕೃತ ಮಾಹಿತಿ ನೀಡಲಾಗುವುದು ಎಂದು ಹೇಳಿದ್ದಾರೆ. 

ಆದರೆ ಆಯೋಗದ ಉನ್ನತ ಮೂಲಗಳ ಪ್ರಕಾರ ಫಲಿತಾಂಶ ಪ್ರಕಟಣೆಗೆ ಅಭ್ಯಂತರವಿಲ್ಲ ಎಂದು ಮಂಡಳಿ ಪತ್ರಕ್ಕೆ ಈಗಾಗಲೇ ಹಿಂಬರಹದ ಪ್ರತಿಕ್ರಿಯೆ ನೀಡಲಾಗಿದೆ. ಉಪಚುನಾವಣೆ ಮತದಾನ ಮುಗಿಯುವವರೆಗೂ ಸಚಿವರು ಲಭ್ಯವಾಗದ ಕಾರಣ ಫಲಿತಾಂಶ ಪ್ರಕಟಣೆ ಮುಂದೂಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಗಣತಿಗೆ 2.5 ಲಕ್ಷ ಸರ್ಕಾರಿ ನೌಕರರು: ಸೇವೆ ವ್ಯತ್ಯಯ, ಸಿಬ್ಬಂದಿ ಕೊರತೆಯಿಂದ ಸರ್ಕಾರಿ ಸೇವೆಗಳಿಗೆ ಅಡ್ಡಿ, ಮನೆಗಣತಿ ಪ್ರಕ್ರಿಯೆ ಯಾವಾಗ?
ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಹೇಳೋದು ಹಾಸ್ಯಾಸ್ಪದ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ