
ಬೆಂಗಳೂರು (ಜೂ.19) ಕರ್ನಾಟಕ ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿಗಳಲ್ಲಿ ಶಕ್ತಿ ಯೋಜನೆ ಕೂಡ ಒಂದು. ಮಹಿಳೆಯರಿಗೆ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಶಕ್ತಿ ಯೋಜನೆ ಮೂಲಕ ರಾಜ್ಯದ ಮಹಿಳೆಯರಿಗೆ ವಿಶೇಷ ಸೌಲಭ್ಯ ನೀಡಲಾಗಿತ್ತು. ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾದ ಬಳಿಕ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ಘೋಷಣೆ ಮಾಡಿದ್ದಾರೆ. ಇದೀಗ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಾರಿಗೆ ಸಭೆಯಲ್ಲಿ ಅಧಿಕಾರಿಗಳು ಮಹತ್ವದ ವರದಿ ನೀಡಿದ್ದಾರೆ. ಶಕ್ತಿ ಯೋಜನೆಯ ಶಾಕಿಂಗ್ ಸತ್ಯಗಳನ್ನು ಸಾರಿಗೆ ನಿಗಮದ ಅಧಿಕಾರಿಗಳು ತೆರೆದಿಟ್ಟಿದ್ದಾರೆ. ಈ ಪೈಕಿ ಪ್ರಮುಖವಾಗಿ ಪುರುಷ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿರುವುದು ಆತಂಕಕ್ಕೆ ಕಾರಣಾಗಿದೆ.
ಶಕ್ತಿ ಯೋಜನೆ ಜಾರಿಯಾದ ಬಳಿಕ ಪುರುಷ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಕುಸಿತವಾಗುತ್ತಿದೆ. ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗೆ ಏಕೈಕ ಆದಾಯ ಮೂಲ ಪುರುಷ ಪ್ರಯಾಣಿಕರಾಗಿದ್ದಾರೆ. ಯೋಜನೆ ಜಾರಿಯಾಗುವಾಗ ಶೇಕಡಾ 48ರಷ್ಟಿದ್ದ ಪುರುಷ ಪ್ರಯಾಣಿಕರ ಸಂಖ್ಯೆ ಇದೀಗ ಶೇಕಡಾ 36ಕ್ಕೆ ಇಳಿಕೆಯಾಗಿದೆ. ಪರಿಣಾಮ ಸಾರಿಗೆ ನಿಗಮಕ್ಕೆ ತೀವ್ರ ಆರ್ಥಿಕ ಕೊರತೆ ಎದುರಾಗುತ್ತಿದೆ ಎಂದು ಅಧಿಕಾರಿಗಳು ವರದಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ