ಹಾಸನ ಸೆಕ್ಸ್‌ ವಿಡಿಯೋಗಳ ಬಗ್ಗೆ ತನಿಖೆಗೆ ಮಹಿಳಾ ಆಯೋಗ ಪತ್ರ

Published : Apr 26, 2024, 02:17 PM IST
ಹಾಸನ ಸೆಕ್ಸ್‌ ವಿಡಿಯೋಗಳ ಬಗ್ಗೆ ತನಿಖೆಗೆ ಮಹಿಳಾ ಆಯೋಗ ಪತ್ರ

ಸಾರಾಂಶ

ಮಹಿಳೆಯರ ಮಾನಹಾನಿ ಉಂಟು ಮಾಡಿರುವವರನ್ನು ಶೀಘ್ರವಾಗಿ ಪತ್ತೆ ಹಚ್ಚಲು ವಿಶೇಷ ತನಿಖಾ ತಂಡವನ್ನು ರಚಿಸಬೇಕು. ಮಹಿಳೆಯರ ಮೇಲೆ ನೀಚ ಕೃತ್ಯವೆಸಗಿ ವಿಡಿಯೋ ಚಿತ್ರೀಕರಿಸಿರುವವರು ಹಾಗೂ ಅದನ್ನು ಸಾರ್ವಜನಿಕಗೊಳಿಸಿರುವವರು ಇಬ್ಬರ ಮೇಲೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ

ಬೆಂಗಳೂರು(ಏ.25):  ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಲೈಂಗಿಕ ಹಿಂಸೆಯ ವಿಡಿಯೋಗಳ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಮಹಿಳೆಯರ ಮಾನಹಾನಿ ಉಂಟು ಮಾಡಿರುವವರನ್ನು ಶೀಘ್ರವಾಗಿ ಪತ್ತೆ ಹಚ್ಚಲು ವಿಶೇಷ ತನಿಖಾ ತಂಡವನ್ನು ರಚಿಸಬೇಕು. ಮಹಿಳೆಯರ ಮೇಲೆ ನೀಚ ಕೃತ್ಯವೆಸಗಿ ವಿಡಿಯೋ ಚಿತ್ರೀಕರಿಸಿರುವವರು ಹಾಗೂ ಅದನ್ನು ಸಾರ್ವಜನಿಕಗೊಳಿಸಿರುವವರು ಇಬ್ಬರ ಮೇಲೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಲೋಕಸಭಾ ಚುನಾವಣೆ 2024: ಹಾಸನ ಅಭ್ಯರ್ಥಿ ರಾಸಲೀಲೆ ಪೆನ್‌ಡ್ರೈವ್ ಸದ್ದು..!

ಈ ಕುರಿತು ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟವು ಮಹಿಳಾ ಆಯೋಗಕ್ಕೆ ದೂರು ನೀಡಿದ್ದು, ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಮಹಿಳೆಯರ ಮೇಲೆ ನಡೆಸಲಾದ ಲೈಂಗಿಕ ಹಿಂಸೆಯ ಪೆನ್ ಡ್ರೈವ್‌ಗಳ ಕುರಿತು ತಿಳಿಸಿರುತ್ತಾರೆ. ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ, ಕೆಲವರ ಮೇಲೆ ಅತ್ಯಾಚಾರ ಸಹ ಮಾಡುತ್ತಿರುವ ತುಣುಕುಗಳಿರುವ ಪೆನ್‌ಡ್ರೈವ್‌ಗಳು ಜನ ಸಾಮಾನ್ಯರ ಕೈಗೆ ಸಿಕ್ಕಿವೆ. ಇದರಿಂದ ಇಡೀ ಸಮಾಜ ತಲೆ ತಗ್ಗಿಸುವ ಸ್ಥಿತಿ ಏರ್ಪಟ್ಟಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ. ಮಹಿಳೆಯರ ಬದುಕು ಹಾಗೂ ಘನತೆಯನ್ನು ನಾಶ ಮಾಡುವಂತಹ ಈ ಕೃತ್ಯಕ್ಕೆ ಕಾರಣವಾಗಿರು ವವರ ವಿರುದ್ಧ ಸೂಕ್ತ ಪೊಲೀಸ್ ತನಿಖೆ ನಡೆಸಬೇಕು ಎಂದು ಕೋರಿದ್ದಾರೆ.

ಜತೆಗೆ ಹಾಸನದಲ್ಲಿ ಪೆನ್‌ಡ್ರೈವ್ ಸುದ್ದಿಯು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಹಲವು ಪತ್ರಿಕಾ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಹಲವು ಮಹಿಳೆಯರನ್ನು ಬಲವಂತದಿಂದ ಲೈಂಗಿಕ ಕ್ರಿಯೆಗೆ ಒತ್ತಾಯ ಪಡಿಸುವುದಲ್ಲದೇ ಅದನ್ನು ಚಿತ್ರೀಕರಿಸಲಾ ಗಿದೆ. ಹೀಗಾಗಿ ಮಹಿಳೆಯರ ಮಾನಹಾನಿ ಉಂಟು ಮಾಡಿರುವವರನ್ನು ಶೀಘ್ರ ಪತ್ತೆ ಹಚ್ಚಲು ವಿಶೇಷ ತನಿಖಾ ತಂಡವನ್ನು ರಚಿಸ ಬೇಕು ಮತ್ತು ಮಹಿಳೆಯರ ಮೇಲೆ ನೀಚ ಕೃತ್ಯವೆಸಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಾಗಲಕ್ಷ್ಮೀ ಸಿಎಂ, ಪೊಲೀಸ್ ಮಹಾ ನಿರ್ದೇಶಕರಿಗೆ ಬರೆದಿರುವ ಪತ್ರದಲ್ಲಿ ಕೋರಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡೆಲಿವರಿ ಬಾಯ್ಸ್‌ಗೆ ಲಿಫ್ಟ್ ಬಳಸಬೇಡಿ ಎಂದ ಮೇಘನಾ ಫುಡ್ಸ್; ಪೋಸ್ಟರ್ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ
ದರ್ಶನ್ ಗ್ಯಾಂಗ್‌ನಿಂದ ಕೊಲೆಗೀಡಾದ ರೇಣುಕಾಸ್ವಾಮಿಗೆ ಸತ್ತಮೇಲೂ ನೆಮ್ಮದಿಯಿಲ್ಲ! ಸಮಾಧಿ ಧ್ವಂಸಗೈದ ಡೆವಿಲ್ ಗ್ಯಾಂಗ್‌!