ಸಾರಿಗೆ ಇಲಾಖೆಯಲ್ಲಿ ಇಸ್ರೋ ತಂತ್ರಜ್ಞಾನ ಬಳಕೆ!

Published : Apr 30, 2020, 03:25 PM IST
ಸಾರಿಗೆ ಇಲಾಖೆಯಲ್ಲಿ ಇಸ್ರೋ ತಂತ್ರಜ್ಞಾನ ಬಳಕೆ!

ಸಾರಾಂಶ

ಸಾರಿಗೆ ಇಲಾಖೆಯಲ್ಲಿ ಇಸ್ರೋ ತಂತ್ರಜ್ಞಾನ ಬಳಕೆ| ಈ ಮೂಲಕ ಇಲಾಖೆಗೆ ಕಾಯಕಲ್ಪ| ಇಸ್ರೋ ಜತೆ ಸವದಿ ಚರ್ಚೆ

 ಬೆಂಗಳೂರು(ಏ30): ಬಾಹ್ಯಾಕಾಶ ತಂತ್ರಜ್ಞಾನವನ್ನು ಬಳಸಿಕೊಂಡು ಸಾರಿಗೆ ಇಲಾಖೆಗೆ ಕಾಯಕಲ್ಪ ನೀಡುವ ಸಂಬಂಧ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಇಸ್ರೋ ಅಧ್ಯಕ್ಷ ಕೆ.ಶಿವನ್‌ ಅವರನ್ನು ಬುಧವಾರ ಭೇಟಿಯಾಗಿ ಚರ್ಚಿಸಿದ್ದಾರೆ.

ನಗರದ ಇಸ್ರೋ ಕೇಂದ್ರ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಸಚಿವರು, ಇಸ್ರೋ ತಂತ್ರಜ್ಞಾನದ ಮೂಲಕ ಸಾರಿಗೆ ಇಲಾಖೆಯ ಕಾರ್ಯ ನಿರ್ವಹಣೆಯ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸುವ ಬಗ್ಗೆ ಮತ್ತು ಸಾರಿಗೆ ಸಂಸ್ಥೆಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾಯವ್ಯ ಸಾರಿಗೆ ನಿಗಮ, ಈಶಾನ್ಯ ಸಾರಿಗೆ ನಿಗಮಗಳ ವೆಚ್ಚಗಳನ್ನು ಕಡಿಮೆ ಮಾಡಿ ಆದಾಯ ಹೆಚ್ಚಿಸುವ ಮಾರ್ಗೋಪಾಯದ ಬಗ್ಗೆಯೂ ಚರ್ಚಿಸಿದ್ದಾರೆ.

ರಾಜ್ಯದಲ್ಲಿ ಸಾರಿಗೆ ಸಂಸ್ಥೆಗಳ ಬಸ್ಸುಗಳ ಸೇವೆ ಹಾಗೂ ಸರಕು ಸಾಗಾಣಿಕೆಯ ವಾಹನಗಳ ಕಾರ್ಯಚಟುವಟಿಕೆಗಳು ಗಮನಾರ್ಹ ಪ್ರಮಾಣದಲ್ಲಿವೆ. ಈ ಸೇವೆಗಳ ಕಾರ್ಯದಕ್ಷತೆಯನ್ನು ಮತ್ತಷ್ಟುಹೆಚ್ಚಿಸಲು ಅನುಕೂಲವಾಗುವಂತಹ ವಿವಿಧ ತಂತ್ರಜ್ಞಾನಗಳನ್ನು ಅಳವಡಿಸುವ ಕುರಿತು ಇಸ್ರೋದಿಂದ ಅಗತ್ಯವಾದ ವೈಜ್ಞಾನಿಕ ಸೇವಾ ಸೌಲಭ್ಯಗಳನ್ನು ನೀಡಲು ಹಾಗೂ ಸಾರಿಗೆ ಸಂಸ್ಥೆಗಳಲ್ಲಿ ಹೆಚ್ಚಿನ ಪಾರದರ್ಶಕತೆ ಒದಗಿಸಲು ಮತ್ತು ಸೋರಿಕೆಯನ್ನು ತಡೆಗಟ್ಟಲು ಇಸ್ರೋದಿಂದ ಮಾರ್ಗದರ್ಶನ ಒದಗಿಸಿಕೊಡಬೇಕು ಇಸ್ರೋ ಮುಖ್ಯಸ್ಥ ಕೆ. ಶಿವನ್‌ ಅವರಿಗೆ ಮನವಿ ಮಾಡಿದ್ದಾರೆ. ಸಚಿವರು ಪ್ರಸ್ತಾಪಿಸಿದ ಅಂಶಗಳ ಬಗ್ಗೆ ಶಿವನ್‌ ಅವರು ಸಹಮತ ವ್ಯಕ್ತಪಡಿಸಿ, ಈ ಕುರಿತು ತಂತ್ರಜ್ಞಾನದ ನೆರವು ನೀಡುವ ಭರವಸೆ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಜ್ಯದಲ್ಲಿ ಅಂತರ್ಜಾತಿ ವಿವಾಹ ಹೆಚ್ಚಾಗಬೇಕು, ಆದ್ರೆ ಒಂದರಿಂದ 2 ಮಕ್ಕಳನ್ನ ಮಾಡಿಕೊಳ್ಳಿ; ಸಿಎಂ ಸಿದ್ದರಾಮಯ್ಯ
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ