
ಬೆಂಗಳೂರು, (ಆ.22): ಕರ್ನಾಟಕದಿಂದ ತಮಿಳುನಾಡಿಗೆ ಕೆಎಸ್ ಆರ್ ಟಿಸಿ ಬಸ್ ಸೇವೆ ಪುನರಾರಂಭಗೊಳ್ಳುತ್ತಿದೆ. ನಾಳೆ ಅಂದ್ರೆ ಆ.23ರಿಂದ ತಮಿಳುನಾಡಿಗೆ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಲಿದೆ.
ಕೊರೋನಾ ಸೋಂಕಿನಿಂದ ತಮಿಳುನಾಡಿಗೆ ಕರ್ನಾಟಕದಿಂದ ಕೆಎಸ್ ಆರ್ ಟಿಸಿ ಬಸ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಆದ್ರೆ, ಇದೀಗ ಮತ್ತೆ ಬಸ್ ಸಂಚಾರ ಪುನಾರಂಭವಾಗಲಿದ್ದು, ಮೊದಲ ಹಂತದಲ್ಲಿ 250 ಬಸ್ಸುಗಳು ಸಂಚಾರ ಮಾಡಲಿದೆ ಎಂದು ಕೆಎಸ್ಆರ್ಟಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ಉಡುಪಿಯ ಕಾಲೇಜಿನಲ್ಲಿ ಕೇರಳ ವಿದ್ಯಾರ್ಥಿಗಳಿಂದ ಮೋಜು ಮಸ್ತಿ: ವಿಡಿಯೋ ವೈರಲ್
ಹೊಸೂರು, ವೆಲ್ಲೂರು, ತಿರುವಣ್ಣಾಮಲೈ, ವಿಲ್ಲುಪುರಂ, ತಿರುಕೊಯಿಲೂರು, ಕೊಯಮತ್ತೂರು, ತಿರುನಲ್ಲಾರ್, ತಿರುಚ್ಚಿ, ಮಧುರೈ, ಕುಂಭಕೋಣಂ, ಕಾಂಚೀಪುರಂ, ಚೆನ್ನೈ, ಊಟಿ ಇತ್ಯಾದಿ ಸ್ಥಳಗಳಿಗೆ ಸುಮಾರು 250 ಬಸ್ ಗಳು ಸಂಚರಿಸಲಿದೆ.
ಕೊರೋನಾ ಹಿನ್ನೆಲೆಯಲ್ಲಿ ಏಪ್ರಿಲ್ 27 ರಿಂದ ಮಿಳುನಾಡಿಗೆ ಬಸ್ ಸೇವೆಗಳನ್ನು ನಿಲ್ಲಿಸಲಾಗಿತ್ತು.ಇದೀಗ ಸುಮಾರು ನಾಲ್ಕು ತಿಂಗಳ ನಂತರ ತಮಿಳುನಾಡು – ಕರ್ನಾಟಕ ನಡುವೆ ಸಂಚರಿಸಲಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ